ಏಪ್ರಿಲ್ 30ರವರೆಗೂ ನೀರು ಕೊಡಿ
ಆಲಮಟ್ಟಿಯಲ್ಲಿ ನಡೆಯುವ ನೀರಾವರಿ ಸಲಹಾ ಸಮಿತಿ ಸಭೆಯತ್ತ ರೈತರ ಚಿತ್ತ
Team Udayavani, Nov 16, 2019, 12:04 PM IST
ಬಾಲಪ್ಪ ಎಂ. ಕುಪ್ಪಿ
ಕಕ್ಕೇರಾ: ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಭತ್ತದ ಬೆಳೆಗೆ ನೀರು ಹರಿಸುವ ಕುರಿತು ನ. 17ರಂದು ಆಲಮಟ್ಟಿಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಡೆಸಲು ಅಂತೂ ಸರಕಾರ ನಿರ್ಧರಿಸಿದ್ದು, ಈ ಭಾಗದ ರೈತರಿಗೆ ಖುಷಿ ಮೂಡಿಸಿದೆ.
ನೀರಾವರಿ ಸಲಹಾ ಸಮಿತಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಅಧ್ಯಕ್ಷತೆಯಲ್ಲಿ ಸಭೆಯಲ್ಲಿ ನಡೆಯಲಿದ್ದು, ಬಸವಸಾಗರ ಎಡದಂಡೆ ಹಾಗೂ ಬಲದಂಡೆ ಕಾಲುವೆ ನೀರು ನೆಚ್ಚಿಕೊಂಡ ಈ ಭಾಗದ ರೈತರು ಸಭೆ ನಿರ್ಧಾರಕ್ಕೆ ಕಾಯುತ್ತಿದ್ದಾರೆ. ನೀರಾವರಿ ಸಲಹಾ ಸಮಿತಿ ನಡೆಸಿ ರೈತರಿಗೆ ಸ್ಪಷ್ಟ ಮಾಹಿತಿ ನೀಡಬೇಕು ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪನಾಯಕ ಹಾಗೂ ಹಾಲಿ ಶಾಸಕ ನರಸಿಂಹನಾಯಕ(ರಾಜುಗೌಡ) ಕೆಲದಿನದ ಹಿಂದೆ ಸರಕಾರಕ್ಕೆ ಒತ್ತಾಯಿಸಿದ್ದರು. ಹಾಗೇ ಈ ಭಾಗದ ಹಲವಾರು ಸಂಘಟನೆಗಳು ಕೂಡ ಸಭೆ ನಡೆಸಿ ನೀರು ಹರಿಸುವ ಕುರಿತು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದವು ಎಂಬುದು ಇಲ್ಲಿ ಗಮನಾರ್ಹ ಸಂಗತಿ.
ಈಗ ಬಾಗಲಕೋಟೆ, ಯಾದಗಿರಿ, ವಿಜಯಪುರ, ರಾಯಚೂರು ಸೇರಿದಂತೆ ಅಚ್ಚುಕಟ್ಟು ಪ್ರದೇಶದ ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಹಾಗೂ ಸಂಸದರನ್ನೊಳಗೊಂಡು ನೀರಾವರಿ ಮಹತ್ವದ ಸಭೆ ನಡೆಸಲು ಸರಕಾರ ಆದೇಶ ಹೊರಡಿಸಿದ್ದು, ರೈತರಿಗೆ ಸಮಾಧಾನ ತಂದರೆ ಇನ್ನೂ ರೈತರೊಬ್ಬರನ್ನು ಸಲಹಾ ಸಮಿತಿಗೆ ಸೇರಿಸದೇ ಇರುವುದು ಅಷ್ಟೇ ಬೇಸರ ಮೂಡಿಸಿದೆ.
ಸದ್ಯ ಅಚ್ಚುಕಟ್ಟು ಪ್ರದೇಶ ರೈತರು ಹಿಂಗಾರು ಭತ್ತ ನಾಟಿಗಾಗಿ ಮುಂಗಾರು ಭತ್ತ ಕಟಾವು ನಡೆಸಿದ್ದಾರೆ. ಸಸಿ ಮಾಡಿ ಹಾಕುವುದು ಸೇರಿದಂತೆ ಕೃಷಿ ಚಟುವಟಿಕೆ ಜೋರಾಗಿಸಿದ್ದಾರೆ. ಈ ಭಾರಿ ಮಹಾರಾಷ್ಟ್ರದಲ್ಲಿ ನಿರೀಕ್ಷೆ ಮೀರಿ ಮಳೆಯಾದ ಕಾರಣ ಆಲಮಟ್ಟಿ ಮತ್ತು ಬಸವಸಾಗರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದು ಸಂಗ್ರಹವಾಗಿದೆ. ಹೆಚ್ಚುವರಿ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ.
2019ನೇ ಸಾಲಿನಲ್ಲಿ ನವೆಂಬರ್ನಲ್ಲಿ ಬಸವಸಾಗರ ಭರ್ತಿಯಾಗಿದ್ದು ಇದೇ ಮೊದಲ ಭಾರಿ ಎನ್ನಬಹುದು. ಈ ಹಿಂದೆ ಯಾವಾಗಲೂ ನವೆಂಬರ್ನಲ್ಲಿ ಜಲಾಶಯ ಭರ್ತಿಯಾಗಿರಲಿಲ್ಲ. ಈಗ ಅಚ್ಚುಕಟ್ಟು ಪ್ರದೇಶ ರೈತರಿಗೆ ಬಸವಸಾಗರ ಜಲಾಶಯ ವರದಾನವಾಗಿದಂತೂ ಸತ್ಯ ಎನ್ನುತ್ತಾರೆ ರೈತರು.
ಕಳೆದ ವರ್ಷ ಮುಂಗಾರು ಮಾತ್ರ ಬೆಳೆದ ಅನ್ನದಾತರು ಹಿಂಗಾರು ಭತ್ತ ಬೆಳೆಯದೇ ನಷ್ಟವೇ ಹೊಂದಬೇಕಾಯಿತು. ಇದರಿಂದಾಗಿ ಕೃಷಿ ಕೂಲಿಕಾರ್ಮಿಕರು ಹಾಗೂ ರೈತರು ಗುಳೆ ಹೋಗುವಂತಾಗಿತ್ತು. ಖುಷಿಯಿಂದಲೇ ಮುಂಗಾರು ಬೆಳೆದ ರೈತರಿಗೆ ಈಗ ಹಿಂಗಾರು ಭತ್ತದ ನೀರಿನ ಚಿಂತೆ ಮಾಡುವಂತಾಗಿ ಕೆಲವರು ಇನ್ನೂ ಕೂಡ ಸಸಿ ಹಾಕಿಲ್ಲ. ಕೆಲ ರೈತರು ದೇವರ ಮೇಲೆ ಬಾರ ಹಾಕಿ ಸಸಿ ಹಾಕಿದ್ದಾರೆ. ಸದ್ಯ ಕಾಲುವೆಗೆ ನೀರು ಹರಿಸುವ ಕುರಿತು ನಡೆಸುವ ಸಲಹಾ ಸಮಿತಿ ಸಭೆಯತ್ತ ರೈತರು ಚಿತ್ತ ಹರಿಸಿದ್ದಾರೆ.
ಪ್ರತಿ ಸಲ ನೀರಾವರಿ ಸಭೆಯಲ್ಲಿ ಕಾಲುವೆಗಳಿಗೆ ವಾರ ಬಂದಿ ಪದ್ಧತಿ ಪ್ರಕಾರ ನೀರು ಹರಿಸುವ ನಿರ್ಣಯ ಕೈಗೊಳ್ಳಲಾಗಿದೆ. ಇದರಿಂದಾಗಿ ಅಚ್ಚುಕಟ್ಟು ಪ್ರದೇಶದ ಕೊನೆಭಾಗದ ರೈತರ ಜಮೀನುಗಳಿಗೆ ಸಮರ್ಪಕ ನೀರು ತಲುಪದೆ ಗೋಳಾಡುವಂತಾಗಿದೆ. ಅಲ್ಲದೇ ಉತ್ತಮವಾಗಿ ಯಾವುದೇ ಬೆಳೆ ಬೆಳೆಯದೆ ಬಹುತೇಕ ರೈತರು ನಷ್ಟವೇ ಎದುರಿಸಬೇಕಾಯಿತು. 2019ನೇ ಸಾಲಿಗಾದರೂ ಸಲಹಾ ಸಮಿತಿ ವಾರಬಂದಿ ಪದ್ಧತಿ ಕೈಬಿಟ್ಟು ಏಪ್ರಿಲ್ 30 ವರೆಗೂ ನೀರು ಹರಿಸಿದರೆ ಮಾತ್ರ ಅನ್ನದಾತರಿಗೆ ಉಳಿಗಾಲವಿದೆ ಎಂಬ ಕೂಗು ರೈತರಿಂದ ಕೇಳಿ ಬರುತ್ತಿದೆ. ಅದಾಗ್ಯೂ ನೀರಾವರಿ ಸಲಹಾ ಸಮಿತಿ ಮೇಲೆ ರೈತರ ಭವಿಷ್ಯ ಅಡಗಿದೆ ಎಂದು ರೈತ ಸಂಘಟನೆ ಮುಖಂಡರ ಅಭಿಪ್ರಾಯವಾಗಿದೆ.
ಈಗಾಗಲೇ ಶಹಾಪುರ, ಜೇವರ್ಗಿ, ದೇವದುರ್ಗ ಹಾಗೂ ಸುರಪುರ ಪ್ರದೇಶದ ರೈತರು ಕಾಲುವೆಗಳ ನೀರು ನಂಬಿಕೊಂಡು ಹಿಂಗಾರು ಶೇಂಗಾ ಬಿತ್ತನೆ ಮಾಡಿದ್ದಾರೆ. ಸುರಪುರ ತಾಲೂಕಿನಲ್ಲಿ 3978 ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ ಬಿತ್ತನೆಯಾಗಿದೆ. 36620 ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ನಾಟಿ ಮಾಡಲಾಗಿದೆ. 54758 ಹೆಕ್ಟೇರ್ ಪ್ರದೇಶದಲ್ಲಿ ಹಿಂಗಾರು ಭತ್ತ ನಾಟಿ ಸಾಧ್ಯತೆ ಇದೆ ಎನ್ನಲಾಗಿದೆ. ಹತ್ತಿ ದೀರ್ಘ ಬೆಳೆಯಾಗಿದೆ. ಕಾಲುವೆಗೆ ಸಮರ್ಪಕವಾಗಿ ನೀರು ಹರಿಸುವ ಕುರಿತು ಜನಪ್ರತಿನಿಧಿಗಳು ಒಳ್ಳೆಯ ನಿರ್ಣಯ ಕೈಗೊಳ್ಳಬೇಕಾಗಿದೆ ಎಂಬುದು ರೈತರ ಆಗ್ರಹ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ