ಶರಣರ ತತ್ವಾದರ್ಶದಿಂದ ಬದುಕು ಪಾವನ

ಜ್ಞಾನದಾಸೋಹ-ಅನ್ನದಾಸೋಹದಂತಹ ಧಾರ್ಮಿಕ ಕಾರ್ಯಗಳು ನಿರಂತರ ಸಾಗಲಿ

Team Udayavani, Sep 6, 2019, 7:56 PM IST

6-Septecember-36

ಕಕ್ಕೇರಾ: ಪುರಾಣ ಮಂಗಲೋತ್ಸವ ಹಾಗೂ ಧರ್ಮಸಭೆ ಕಾರ್ಯಕ್ರಮವನ್ನು ಪೂಜ್ಯ ಶಿವಯೋಗೇಶ್ವರ ಮಹಾಸ್ವಾಮೀಜಿ ಉದ್ಘಾಟಿಸಿದರು.

ಕಕ್ಕೇರಾ: ಶರಣರ ಜೀವನಾದರ್ಶ ಹಾಗೂ ತತ್ವಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡಾಗ ಬದುಕು ಪವನವಾಗುತ್ತದೆ ಎಂದು ಜಂಬಗಿ ಪ್ರಭುಲಿಂಗ ಬೆಟ್ಟದ ಪೂಜ್ಯ ಶಿವಯೋಗೇಶ್ವರ ಮಹಾಸ್ವಾಮಿ ಹೇಳಿದರು.

ಪಟ್ಟಣದ ಸಂಗಮೇಶ್ವರ ಮಠದಲ್ಲಿ ಶ್ರಾವಣ ಮಾಸದ ನಿಮಿತ್ತ ದಾನಮ್ಮದೇವಿ ಪುರಾಣ ಮಂಗಲೋತ್ಸವ ಮತ್ತು ಧರ್ಮಸಭೆ ಕಾರ್ಯಕ್ರಮದಲ್ಲಿ ತುಲಾಭಾರ ಸ್ವೀಕರಿಸಿ ಸ್ವಾಮೀಜಿ ಮಾತನಾಡಿದರು.

ಅನೇಕ ವರ್ಷಗಳಿಂದ ಈ ಭಾಗದಲ್ಲಿ ಪುರಾಣ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಹಾಗೇ ತುಲಾಭಾರ ನಡೆಸುವುದು ಈ ಭಾಗ ಪುಣ್ಯಕಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಶ್ರಾವಣ ಮಾಸದಲ್ಲಿ ಶರಣರ ಪುರಾಣ ಪುಣ್ಯಕಥೆಗಳನ್ನು ಆಲಿಸುವುದು, ಶರಣರ ಜೀವನ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಜತೆಗೆ ಶರಣರ ಸನ್ಮಾರ್ಗದಲ್ಲಿ ಜೀವನ ಸಾಗಿಸಬೇಕಾಗಿದೆ ಎಂದು ಹೇಳಿದರು.

ವೀರಗೋಟದ ಪೂಜ್ಯ ಅಡವಿಲಿಂಗ ಮಹಾರಾಜರು ಮಾತನಾಡಿ, ಶ್ರೀಮಠದ ಪೂಜ್ಯರಾಗಿದ್ದ ರಾಮಯ್ಯತಾತಾನವರ ಜೀವಿತಾವಧಿಯಲ್ಲಿಯೇ ಶ್ರಾವಣ ಮಾಸದಲ್ಲಿ ಸತತ 30 ವರ್ಷಗಳಿಂದ ತಿಂಗಳ ಪರ್ಯಾಂತ ನಾಡಿನ ಹಲವು ಶರಣರ ಪುರಾಣ ಮತ್ತು ತುಲಾಭಾರ ಏರ್ಪಡಿಸಿಕೊಂಡು ಬರಲಾಗಿದೆ. ಅಲ್ಲದೇ ನನ್ನ ಗುರುವಿಗೆ ವಿಭೂತಿಗಳಿಂದ ತುಲಾಭಾರ ಮಾಡಿರುವುದು ನನಗೆ ಹೆಮ್ಮೆಯಾಗಿದೆ ಎಂದು ಹೇಳಿದರು.

ಜ್ಞಾನದಾಸೋಹ, ಅನ್ನದಾಸೋಹದಂತಹ ಧಾರ್ಮಿಕ ಕಾರ್ಯಗಳು ನಿರಂತರ ಸಾಗಲಿ. ನಾಡಿನಲ್ಲಿ ಮಳೆ ಬಂದು ರೈತನ ಬಾಳು ಹಸನಾಗಲಿ. ಶರಣರ ತತ್ವ ನಂಬಿದ ಭಕ್ತರ ಜೀವನ ಸುಖಕರವಾಗಲಿ ಎಂದು ಹಾರೈಸಿದರು.

ಇದೇ ವೇಳೆ ಸಂಗಮೇಶ್ವರ ಮಠದ ಸದ್ಭಕ್ತರ ವತಿಯಿಂದ ಪೂಜ್ಯ ಶಿವಯೋಗೇಶ್ವರ ಮಹಾಸ್ವಾಮಿಗಳಿಗೆ(ಕಾಯಕ ಚೇತನ), ಪೂಜ್ಯ ಅಡವಿಲಿಂಗ ಮಹಾರಾಜರಿಗೆ (ಕರುನಾಡ ದಾಸೋಹ ಮೂರ್ತಿ), ಪೂಜ್ಯ ಬಸಯ್ಯಶಾಸ್ತ್ರಿ ಯಾಳಗಿ(ಪುರಾಣ ಭಾಸ್ಕರ), ಸೋಮನಾಥ ಗವಾಯಿ(ಜಾನಪದ ಜಾಣ) ಹಾಗೂ ತಬಲಾ ವಾದಕ ಪ್ರವೀಣಕುಮಾರ ಅವರಿಗೆ (ಮಧುರವಾಧ್ಯ ಭಾಸ್ಕರ) ಎಂಬ ಬಿರುದು ನೀಡಿ ಗೌರವಿಸಲಾಯಿತು.

ತುಲಾಭಾರ: ಜಂಬಗಿ ಶ್ರೀ ಪ್ರಭುಲಿಂಗೇಶ್ವರ ಬೆಟ್ಟದ ಪೂಜ್ಯ ಶಿವಯೋಗೇಶ್ವರ ಮಹಾಸ್ವಾಮಿಗಳಿಗೆ ಹಾಗೂ ಅಡವಿಲಿಂಗ ಮಹಾರಾಜ, ಶಿವಯೋಗೇಶ್ವರ ಮಹಾಸ್ವಾಮೀಜಿಗೆ ತುಲಾಭಾರ ನೆರವೇರಿಸಲಾಯಿತು.

ದೇವಾಪುರದ ಪೂಜ್ಯ ಶಿವಮೂರ್ತಿ ಶಿವಾಚಾರ್ಯರು, ಕಂಠಿಮಠದ ಸಿದ್ಧಚನ್ನಮಲ್ಲಿಕಾರ್ಜುನ ಶಿವಾಚಾರ್ಯರು ಸಾನ್ನಿಧ್ಯ ಮತ್ತು ಏಕದಂಡಿಗಿ ಮಠದ ಪೂಜ್ಯ ಕಾಳಹಸ್ತೇಂದ್ರ ಮಹಾಸ್ವಾಮಿ, ದುರುದುಂಡೇಶ್ವರ ಮಠದ ಪೂಜ್ಯ ಶಿವಕುಮಾರ ದೇವರು, ಪೂಜ್ಯ ರಾಜೇಂದ್ರ ಒಡೆಯರು, ಪೂಜ್ಯ ಅಭಿನವ ಹುಚ್ಚೇಶ್ವರ ಸ್ವಾಮೀಜಿ, ಪೂಜ್ಯ ನಂದಣ್ಣಪ್ಪ ಪೂಜಾರಿ ನೇತೃತ್ವ, ಮುಖಂಡ ಹಣಮಂತ್ರಾಯ ಜಹಾಗೀರದಾರ ಅಧ್ಯಕ್ಷತೆ ವಹಿಸಿದ್ದರು. ಅರ್ಚಕ ಮಾನಯ್ಯ ಪೂಜಾರಿ, ರಾಜು ಹವಾಲ್ದಾರ, ದಶರಥ ಆರೇಶಂಕರ, ಗುಂಡಪ್ಪ ಸೊಲ್ಲಾಪುರ, ದೇವಿಂದ್ರಪ್ಪ ಬಳಿಚಕ್ರ, ರಮೇಶ ಶೆಟ್ಟಿ, ಪರಮಣ್ಣ ತೇರಿನ, ಎಎಸ್‌ಐ ಬಸನಗೌಡ, ಪುರಸಭೆ ಸದಸ್ಯರು, ಗಣ್ಯಮಾನ್ಯರು, ವಿವಿಧ ಸಂಘ-ಸಂಸ್ಥೆ ಪದಾಧಿಕಾರಿಗಳು ಇದ್ದರು.

ಸೋಮಶೇಖರ ದೊರೆ ಸ್ವಾಗತಿಸಿದರು. ಬಸಯ್ಯಸ್ವಾಮಿ ನಿರೂಪಿಸಿದರು. ಸೋಮನಾಥ ಸಂಗೀತ ಪಾಠ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ನಿಂಗಣ್ಣ ಗುರಿಕಾರ ವಂದಿಸಿದರು.

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.