ಜೈವಿಕ ಇಂಧನ ಆಡಳಿತಾತ್ಮಕ ಕಚೇರಿಗಿಲ್ಲ ಉದ್ಘಾಟನೆ ಭಾಗ್ಯ

1 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣ

Team Udayavani, Jul 4, 2019, 10:57 AM IST

04-July-11

ಕಕ್ಕೇರಾ: ತಿಂಥಣಿ ಜೈವಿಕ ಪಾರ್ಕ್‌ನೊಳಗೆ ಉದ್ಘಾಟನೆಗೊಳ್ಳದ ಆಡಳಿತ ಕಟ್ಟಡ

ಬಾಲಪ್ಪ ಎಂ. ಕುಪ್ಪಿ
ಕಕ್ಕೇರಾ:
ಕಾಮಗಾರಿ ಪೂರ್ಣಗೊಂಡು ವರ್ಷ ಕಳೆದರೂ ಜೈವಿಕ ಇಂಧನ ಆಡಳಿತಾತ್ಮಕ ಕಚೇರಿ ಇನ್ನೂ ಉದ್ಘಾಟನೆಗೊಂಡಿಲ್ಲ. ಆದರೂ ಅಧಿಕಾರಿಗಳು ರೈತರಿಗೆ ಕಣ್ತಪಿಸಿ ಕಚೇರಿಯೊಳಗೆ ಎಲ್ಲಾ ಕಾರ್ಯಗಳು ಸದ್ದಿಲ್ಲದೆ ನಡೆಸಿಕೊಂಡು ಬರಲಾಗುತ್ತಿದೆ.

ತಿಂಥಣಿ ಗ್ರಾಮದ ಬಳಿ ಇರುವ ರಾಜ್ಯದ ಎರಡನೇ ಜೈವಿಕ ಇಂಧನ ಪಾರ್ಕ್‌ನಲ್ಲಿ ಸ್ಥಾಪಿಸಲಾಗಿರುವ ಆಡಳಿತ ಕಚೇರಿ ಕಟ್ಟಡದ ಸ್ಥಿತಿ ಇದು.

ಹೌದು, 2016-17ನೇ ಸಾಲಿನಲ್ಲಿ ಸುಮಾರು 1 ಕೋಟಿ ರೂ. ವೆಚ್ಚದ ಅನುದಾನದಲ್ಲಿ ನಿರ್ಮಿಸಲಾಗಿದ್ದು. ಬಹುತೇಕ ಕಟ್ಟಡ ಕಾಮಗಾರಿ ಮುಗಿದು ವರ್ಷಗಳೇ ಕಳೆದಿದೆ. ಆದರೆ ಕಟ್ಟಡ ಉದ್ಘಾಟನೆ ಮಾಡದೆ ಅಧಿಕಾರಿಗಳು ಕಾಲಹರಣ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.

ಯಾಕಿದು ಕಚೇರಿ?: ಜೈವಿಕ ಇಂಧನ ಪಾರ್ಕ್‌ ಸಲುವಾಗಿ ಉಸ್ತುವಾರಿ ವಹಿಸಿಕೊಂಡು ಪಾರ್ಕ್‌ ಅಭಿವೃದ್ಧಿಗೊಳಿಸಲು ಹಾಗೂ ಪಾರ್ಕ್‌ನಲ್ಲಿ ಇರುವ ವಿವಿಧ ಜಾತಿ ಮರಗಳನ್ನು ನಾಶವಾಗದಂತೆ ನೋಡಿಕೊಳ್ಳುವುದು. ಅಲ್ಲದೇ ಈ ಭಾಗದ ರಾಯಚೂರು ಜಿಲ್ಲಾ ಮತ್ತು ಯಾದಗಿರಿ ಜಿಲ್ಲಾ ಪ್ರದೇಶವನ್ನೊಳಗೊಂಡು ಈ ಭಾಗದ ಎಲ್ಲಾ ರೈತರಿಗೆ ಜೈವಿಕ ಇಂಧನದ ಬಗ್ಗೆ ರೈತರಿಗೆ ತರಬೇತಿ ನೀಡಿ ಪ್ರೋತ್ಸಾಯಿಸು ಉದ್ದೇಶದಿಂದ ಕಚೇರಿ ನಿರ್ಮಿಸಲಾಗಿದೆ.

ಕಟ್ಟಡದೊಳಗೆ ಜೈವಿಕ ಸಸ್ಯಗಳ ಬಗ್ಗೆ ಆಗಾಗ ರೈತರಿಗೆ ತರಬೇತಿ ನೀಡಲು ದೊಡ್ಡ ಹಾಲ್ ಕೂಡ ಮಾಡಲಾಗಿದೆ. ಇದರ ಉದ್ದೇಶ ಪ್ರತಿಯೊಬ್ಬ ರೈತರಿಗೆ ತರಬೇತಿ ನೀಡುವುದರ ಜತೆಗೆ ಪ್ರೋತ್ಸಾಯಿಸಿ ಜೈವಿಕ ಸಸಿಗಳ ನೆಡುವಂತೆ ಪ್ರೇರಿಪಿಸುವುದಾಗಿದೆ. ಆದರೆ ಇನ್ನೂ ಉದ್ಘಾಟನೆ ಆಗದೇ ಯಾರೊಬ್ಬರಿಗೆ ಇದರ ಬಗ್ಗೆ ಮಾಹಿತಿಯೇ ಗೊತ್ತಿಲ್ಲದಿರುವುದು ರೈತರ ದೌರ್ಭಾಗ್ಯವೇ ಸರಿ ಎನ್ನಲಾಗುತ್ತಿದೆ.

ಶಾಲಾ ಮಕ್ಕಳಿಗೂ ಜೈವಿಕ ಅರಿವು: ಈ ಭಾಗದ ಬಹುತೇಕ ಶಾಲಾ ವಿದ್ಯಾರ್ಥಿಗಳಿಗೂ ಜೈವಿಕ್‌ ಇಂಧನದ ಬಗ್ಗೆ ಹಾಗೂ ಸಸ್ಯಗಳ ಕುರಿತು ಅರಿವು ಮೂಡಿಸಬೇಕಿರುತ್ತದೆ. ಜೈವಿಕ್‌ ಇಂಧನ ಪಾರ್ಕ್‌ಗೆ ಭೇಟಿ ನೀಡಿದಾಗ ಆಡಳಿತಾತ್ಮಕ ಅಧಿಕಾರಿಗಳು ಶಾಲಾ ಮಕ್ಕಳಿಗೆ ಸಂಪೂರ್ಣ ಮಾಹಿತಿಯು ನೀಡಬೇಕಿದ್ದು, ಕಚೇರಿಯಲ್ಲಿ ಅಧಿಕಾರಿಗಳು ತಮಗೆ ತಿಳಿದಾಗ ಬರುವುದರಿಂದ ವಿದ್ಯಾರ್ಥಿಗಳಿಗೆ ಮಾಹಿತಿ ಸಿಗುತ್ತಿಲ್ಲ ಎಂಬ ಇಲ್ಲಿನ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೈತರಿಗೆ ಪ್ರಯೋಜನಗಳೇನು?: ಕಚೇರಿ ಉದ್ಘಾಟನೆ ನಂತರ ಇಲ್ಲಿ ರೈತರಿಗೆ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆದ ರೈತರು ತಮ್ಮ ಪಾಳು ಬಿದ್ದ ಜಮೀನು ಅಥವಾ ಜಮೀನುಗಳ ಬದುವಿನಲ್ಲಿ ಜೈವಿಕ ಇಂಧನ ಸಸಿಗಳು ಬೆಳೆಯಬಹುದಾಗಿದೆ. ರೈತರ ಬೆಳೆ ಜೈವಿಕ ಬೀಜಗಳನ್ನು ನೇರವಾಗಿ ಕಚೇರಿಯಲ್ಲಿನ ಅಧಿಕಾರಿಗಳು ಅವುಗಳ ಖರೀದಿ ಮಾಡಿಕೊಳ್ಳಬೇಕಿರುತ್ತದೆ. ರೈತರ ಅಭಿವೃದ್ಧಿ ಜತೆಗೆ ಈ ಭಾಗದ ನಿರುದ್ಯೋಗವನ್ನು ಹೋಗಲಾಡಿಸಬಹುದಾಗಿದೆ. ಪರಿಸರ ಸ್ನೇಹಿ ಜೈವಿಕ ಇಂಧನ ಪಾರ್ಕ್‌ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಸಿದ್ಧಗೊಂಡಿರುವ ಆಡಳಿತ ಕಚೇರಿಯನ್ನು ಆದಷ್ಟು ಬೇಗ ಉದ್ಘಾಟಿಸಿ ಈ ಭಾಗದ ರೈತರಿಗೆ ತರಬೇತಿ ಸಿಕ್ಕು ಅಗತ್ಯ ಮಾಹಿತಿ ಅಧಿಕಾರಿಗಳಿಂದ ದೊರಕುವಂತಾಗಲಿ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

ಈ ಹಿಂದೇ ಉದ್ಘಾಟನೆ ಆಗಬೇಕಿತ್ತು. ಕೆಲ ಕಾರಣಾಂತರದಿಂದ ಹಾಗೇ ಮುಂದೂಡಬೇಕಾಯಿತು. ಅಗಸ್ಟ್‌ 10ರಂದು ಅಂತಾರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆ ಇರುವುದರಿಂದ ಅಂದೇ ಈ ಆಡಳಿತ ಕಚೇರಿ ಉದ್ಘಾಟಿಸಲಾಗುವುದು.
•ಶ್ಯಾಮರಾವ್‌ ಕುಲಕರ್ಣಿ,
ಉಪ ಪ್ರಧಾನ ಅನ್ವೇಷಕರು,
ಜೈವಿಕ ಇಂಧನ ಪಾರ್ಕ್‌ ತಿಂಥಣಿ

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.