ಹಿಂಗಾರು ಭತ್ತ ನಾಟಿಗೆ ಕಾಡುತ್ತಿದೆ ಚಿಂತೆ

ಮುಂಗಾರು ಭತ್ತ ಕಟಾವಿಗೆ ಸಿದ್ಧತೆಇನ್ನೂ ನಡೆದಿಲ್ಲ ನೀರಾವರಿ ಸಲಹಾ ಸಮಿತಿ ಸಭೆ

Team Udayavani, Nov 11, 2019, 1:43 PM IST

11-November-10

ಬಾಲಪ್ಪ ಎಂ. ಕುಪ್ಪಿ
ಕಕ್ಕೇರಾ: ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲೀಗ ಭತ್ತದ ಬೆಳೆ ಕಟಾವಿಗೆ ಬಂದಿದ್ದು, ಹಿಂಗಾರು ಹಂಗಾಮಿನ ಭತ್ತ ಬೆಳೆಯಲು ಎಲ್ಲಿಯವರೆಗೆ ನೀರು ಹರಿಸಲಾಗುತ್ತದೆ ಎಂಬುದು ನೀರಾವರಿ ಸಲಹಾ ಸಮಿತಿ ಸಭೆ ಕರೆದು ಇನ್ನೂ ಸ್ಪಷ್ಟನೆ ನೀಡದ ಕಾರಣ ಈ ಭಾಗದ ರೈತರು ಹಿಂಗಾರು ಭತ್ತ ನಾಟಿಗೆ ನೀರಿನ ಚಿಂತೆಯಾಗಿ ಕಣ್ಣೀರು ಇಡುವಂತಾಗಿದೆ.

ಮಹಾರಾಷ್ಟ್ರದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾದ ಕಾರಣ ಪ್ರಸಕ್ತ ಸಾಲಿನಲ್ಲಿ ಬಸವಸಾಗರ ಜಲಾಶಯಕ್ಕೆ ಲಕ್ಷಾಂತರ ಕ್ಯೂಸೆಕ್‌ ನೀರು ಹರಿದು ಬಂದಿದೆ. ಅಲ್ಲದೇ ಅಷ್ಟೇ ಪ್ರಮಾಣಕ್ಕಿಂತ ಹೆಚ್ಚು ನೀರನ್ನು ಕೃಷ್ಣಾ ನದಿಗೆಹರಿ ಬಿಡಲಾಗಿದೆ. ಭರ್ತಿಯಾದ ಜಲಾಶಯದಿಂದ ರೈತರಿಗೆ ತುಸು ಖಷಿ ತಂದರೂ ಎಡದಂಡೆ ಕಾಲುವೆ ಹಾಗೂ ಬಲದಂಡೆ ಕಾಲುವೆಗೆ ಎಷ್ಟುದಿನ ನೀರು ಹರಿಸಬಹುದು?

ಈ ಕುರಿತು ಸಲಹಾ ಸಮಿತಿ ಸಭೆ ನಡೆಸಿ ಮಾಹಿತಿ ನೀಡದ ಕಾರಣ ರೈತರು ಚಿಂತೆ ಮಾಡುವಂತಾಗಿದೆ. ಮುಂಗಾರು ಭತ್ತ ಈಗಾಗಲೇ ತೆನೆ ಹಿರಿದು ಕಟಾವಿಗೆ ಬಂದಿದೆ. ಕೆಲವೇ ದಿನಗಳಲ್ಲಿ ರೈತರು ರಾಶಿ ಮಾಡಲು ಸಿದ್ಧರಾಗುತ್ತಾರೆ. ಅಲ್ಲದೇ ಹಿಂಗಾರು ಭತ್ತ ನಾಟಿಗಾಗಿ ಕೆಲ ರೈತರು ಸಸಿ ಮಾಡಿ ಹಾಕಿದ್ದಾರೆ. ಇನ್ನು ಹಲವರು ಸಸಿ ಹಾಕಲು ಸಿದ್ಧತೆ ನಡೆಸಿದ್ದಾರೆ.

ಜಲಾಶಯದಲ್ಲಿ ನೀರು ಇದೆ. ಎಡದಂಡೆ ಕಾಲುವೆಗೆ ಪೂರ್ಣ ನೀರು ಹರಿಸುತ್ತಾರೆ ಎಂಬ ದೃಢವಾದ ನಂಬಿಕೆಯಿಂದ ಸಸಿ ಹಾಕಿದ್ದೇವೆ ಎನ್ನುತ್ತಾರೆ ರೈತರು. ಕಳೆದ ವರ್ಷ ಮುಂಗಾರು ಮಾತ್ರ ಬೆಳೆದ ಅನ್ನದಾತರು ಹಿಂಗಾರು ಭತ್ತ  ಳೆಯದೇ ಕೈ ಸುಟ್ಟುಕೊಂಡರು. ಬಹುತೇಕರು ಗುಳೆ ಹೋಗುವಂತಾಗಿತ್ತು. ಪ್ರಸಕ್ತ ಸಾಲಿನಲ್ಲಿ ನೀರಿಗೆ ಬರವಿಲ್ಲ. ಹಿಂಗಾರು ಭತ್ತ ರೈತರ ಕೈಗೆ ಬರುವವರೆಗೂ ಕಾಲುವೆಗೆ ನೀರು ಹರಿಸಬಹುದಾಗಿದೆ. ಈ ಕುರಿತು ನೀರಾವರಿ ಸಲಹಾ ಸಮಿತಿ ಕೈಗೊಳ್ಳುವ ನಿರ್ಧಾರದ ಮೇಲೆ ರೈತರ ಭವಿಷ್ಯ ಅಡಗಿದೆ ಎಂಬುದು ರೈತ ಪರ ಸಂಘಟನೆ ಮುಖಂಡರ ಅಭಿಪ್ರಾಯ.

ವಾರ ಬಂದಿ ಕೈಬಿಡಿ : ಬಸವಸಾಗರದಲ್ಲಿ ಸದ್ಯ ನೀರಿಗೆ ಬರವಿಲ್ಲ. ಮಳೆಯಿಂದಾಗಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಇನ್ನೂ ಕೂಡ ನದಿಗೆ ನೀರು ಹರಿಸಲಾಗುತ್ತಿದೆ. ವಾರಬಂದಿಯಿಂದ ಭತ್ತ ಹಾಗೂ ಶೇಂಗಾ ಬೆಳೆಗಳು ಒಣಗಲಿವೆ. ಶಹಾಪುರ ಮತ್ತು ಜೇವರ್ಗಿ ತಾಲೂಕಿನ ಕೆಲ ಪ್ರದೇಶದಲ್ಲಿ ಶೇಂಗಾ, ಹತ್ತಿ ಇನ್ನಿತರ ಬೆಳೆಗಳಿಗೆ ನೀರು ತಲುಪದೇ ನಷ್ಟವೇ ಹೊಂದಬೇಕಿದೆ. ಹೀಗಾಗಿ ಅವೈಜ್ಞಾನಿಕ ವಾರಬಂದಿ ಪದ್ಧತಿ ನೀರಾವರಿ ಸಲಹಾ ಸಮಿತಿ ಕೈಬಿಡಬೇಕೆಂಬುದು ರೈತಪರ ಸಂಘಟನೆಗಳ ಒತ್ತಾಸೆಯಾಗಿದೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.