ಒತ್ತುವರಿ ಜಾಗ ವಶಪಡಿಸಿಕೊಳ್ಳಲು ಸನ್ನದ್ಧರಾಗಿ

ವಕ್ಫ್ ಮಂಡಳಿ ಅಧಿಕಾರಿಗಳ ಕಾರ್ಯವೈಖರಿಗೆ ಸಿಡಿಮಿಡಿ ನೋಟಿಸ್‌ಗೆ ಉತ್ತರ ನೀಡದವರ ವಿರುದ್ಧ ಕ್ರಮ ಕೈಗೊಳ್ಳಿ

Team Udayavani, Nov 13, 2019, 10:55 AM IST

13-November-02

ಕಲಬುರಗಿ: ಮಹಾನಗರದ ಹೃದಯ ಭಾಗದಲ್ಲಿರುವ ಸಾರ್ವಜನಿಕ ಉದ್ಯಾನವನ (ಗುಲ್ಶನ್‌ ಭಾಗ್‌) ಪ್ರದೇಶದಲ್ಲಿ ವಿವಿಧ 16 ಸಂಸ್ಥೆಗಳು ಅಕ್ರಮವಾಗಿ ಸರ್ವೇ ನಂ-2ರಲ್ಲಿ ಒತ್ತುವರಿ ಮಾಡಿಕೊಂಡಿರುವ 46 ಎಕರೆ 19ಗುಂಟೆ ಪ್ರದೇಶವನ್ನು ಸರ್ಕಾರದ ವಶಕ್ಕೆ ಪಡೆಯಲು ಸನ್ನದ್ಧರಾಗುವಂತೆ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ ಮಹಾನಗರ ಪಾಲಿಕೆ ಆಯುಕ್ತ ರಾಹುಲ್‌ ಪಾಂಡ್ವೆ ಅವರಿಗೆ ಖಡಕ್‌ ಸೂಚನೆ ನೀಡಿದರು.

ಪ್ರಾದೇಶಿಕ ಆಯುಕ್ತರ ಸಭಾಂಗಣದಲ್ಲಿ ಗುಲಶನ್‌ ಭಾಗ್‌ ಮತ್ತು ಬಡೇಪುರ್‌ ಪ್ರದೇಶದಲ್ಲಿ ಅಕ್ರಮ ಒತ್ತುವರಿ ತೆರವು ಕುರಿತಂತೆ ಪಾಲಿಕೆ ಹಾಗೂ ಜಮೀನು ಒತ್ತುವರಿ ಮಾಡಿಕೊಂಡಿರುವ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ ಅವರು, ಇದರಲ್ಲಿ ಕೆಲವು ಸರ್ಕಾರಿ ಸಂಸ್ಥೆಗಳು ಇದ್ದು, ಅವು ನಿಯಮಾನುಸಾರ ಲೀಜ್‌ ಅಥವಾ ಸರ್ಕಾರದ ಸೂಕ್ತ ಆದೇಶದೊಂದಿಗೆ ಜಮೀನು ಪಡೆದಿದ್ದಲ್ಲಿ ಕೂಡಲೇ ಪಾಲಿಕೆಗೆ ಅಗತ್ಯ ದಾಖಲಾತಿಗಳನ್ನು ಸಲ್ಲಿಸಬೇಕು ಎಂದು ತಿಳಿಸಿದರು.

ಗುಲ್ಶನ್‌ ಭಾಗ್‌ ಪ್ರದೇಶದಲ್ಲಿರುವ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ 16 ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳ ಮಾಲೀಕರಿಗೆ ತೆರವುಗೊಳಿಸುವಂತೆ ಪಾಲಿಕೆ ನೀಡಿರುವ ನೋಟಿಸ್‌ಗಳಿಗೆ ಕೆಲವರು ಇದುವರೆಗೂ ಉತ್ತರ ನೀಡದಿರುವುದಕ್ಕೆ ಅತೃಪ್ತಿ ವ್ಯಕ್ತಪಡಿಸಿದರು. ಅಲ್ಲದೇ ಉತ್ತರ ನೀಡದ ಒತ್ತುವರಿದಾರರ ಮೇಲೆ ಇದುವರೆಗೆ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪಾಲಿಕೆ ಅಧಿಕಾರಿಗಳನ್ನು ಪ್ರಶ್ನಿಸಿದರು.

ಇಂತಹ ಕಾರ್ಯನಿರ್ವಹಣೆ ಶೈಲಿ ಒಳ್ಳೆಯದಲ್ಲ. ಪಾಲಿಕೆಯಲ್ಲಿ ಬೇಜವಾಬ್ದಾರಿತನದಿಂದ ಕಾರ್ಯನಿರ್ವಹಿಸುವ ಅಧಿಕಾರಿ-ಸಿಬ್ಬಂದಿ ವಿರುದ್ಧ ಮೇಜರ್‌ ಸರ್ಜರಿ ಕೈಗೊಳ್ಳಿ ಎಂದು ಪಾಲಿಕೆ ಆಯುಕ್ತ ರಾಹುಲ್‌ ಪಾಂಡ್ವೆ ಅವರಿಗೆ ಆದೇಶಿಸಿದರು.

ವೀರಶೈವ ಕಲ್ಯಾಣ ಮಂಟಪ, ಜನತಾದಳ ಕಚೇರಿ, ದೋಬಿ ಘಾಟ್‌, ಯಲ್ಲಮ್ಮ ದೇವಸ್ಥಾನ, ಐಡಿಯಲ್‌ ಫೈನ್‌ ಆರ್ಟ್‌ ಸಂಸ್ಥೆ, ಗುಲಬರ್ಗಾ ಕ್ಲಬ್‌, ಹೋಟೆಲ್‌ ಬಹಮನಿ, ರೋಟರಿ ಕ್ಲಬ್‌, ಬಾಲ ಭವನ, ಡಾ| ಎಸ್‌.ಎಂ. ಪಂಡಿತ ರಂಗಮಂದಿರ ಕಟ್ಟಡಗಳಿಗೆ ಸಂಬಂಧಿಸಿದಂತೆ ಮಾಲೀಕತ್ವದ ಹಕ್ಕುಗಳಿದ್ದಲ್ಲಿ ಕೂಡಲೇ ಪಾಲಿಕೆ ಕಚೇರಿಗೆ ಮಾಹಿತಿ ಸಲ್ಲಿಸಬೇಕು ಎಂದು ಸೂಚಿಸಿದರು.

ಬುಧವಾರದೊಳಗೆ ಮಾಹಿತಿ ನೀಡಿ: ಬಡೇಪುರ ಗ್ರಾಮದ ಸರ್ವೇ ನಂಬರ್‌ 10, 13, 14, 15, 16, 17 ಮತ್ತು 40ರಲ್ಲಿನ ಜಮೀನು ಉತ್ತುವರಿ ಕುರಿತಂತೆ ವರದಿ ಸಲ್ಲಿಸುವಂತೆ ಹಲವಾರು ಬಾರಿ ಪತ್ರ ಬರೆದರೂ ಉತ್ತರ ನೀಡದಿರುವುದಕ್ಕೆ ವಕ್ಫ್  ಮಂಡಳಿ ಅಧಿಕಾರಿಗಳ ಮೇಲೆ ಸಿಡಿಮಿಡಿಗೊಂಡ ಸುಬೋಧ ಯಾದವ, ಬುಧವಾರ ಸಂಜೆಯೊಳಗೆ ಎಲ್ಲ ಒತ್ತುವರಿ ಜಮೀನುಗಳ ಸಮಗ್ರ ಮಾಹಿತಿ ಸಲ್ಲಿಸುವಂತೆ ತಾಕೀತು ಮಾಡಿದರು.

ಜಿಲ್ಲಾಧಿಕಾರಿ ಶರತ್‌.ಬಿ, ಮಹಾನಗರ ಪಾಲಿಕೆ ಆಯುಕ್ತ ರಾಹುಲ್‌ ತುಕಾರಾಂ ಪಾಂಡ್ವೆ, ಉಪ ಅರಣ್ಯ ಸಂರಕ್ಷಣಾ ಧಿಕಾರಿ ವನತಿ, ಕಲಬುರಗಿ ನಗರಾಭಿವೃದ್ಧಿ ಪ್ರಾ ಧಿಕಾರದ ಆಯುಕ್ತ ರಾಚಪ್ಪಾ, ಪಾಲಿಕೆ ವಲಯ ಆಯುಕ್ತರು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ಕಟ್ಟಡಗಳ ಮಾಲೀಕರು, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.