ಇತಿಹಾಸ ರಚನೆಗೆ ರಾಜಕೀಯ ಇಚ್ಛಾ ಶಕ್ತಿ ಮುಖ್ಯ

ಆರು ಜಿಲ್ಲೆಗಳ ಸ್ಪಷ್ಟ-ನಿಷ್ಠರ ಇತಿಹಾಸ ರಚಿಸಿನಿಜಾಮ ವಿಚಾರದಲ್ಲಿವೆ ತಪ್ಪು ಸಂದೇಶಗಳು

Team Udayavani, Nov 6, 2019, 11:07 AM IST

6–November-2

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಇತಿಹಾಸ ರಚನೆಗೆ ರಾಜಕೀಯ ಇಚ್ಛಾಶಕ್ತಿಯೂ ಮುಖ್ಯವಾಗಿದೆ ಎಂದು ಹಿರಿಯ ಸಾಹಿತಿ ಪ್ರೊ| ವಸಂತ ಕುಷ್ಟಗಿ ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯ ಮತ್ತು ಹೈದ್ರಾಬಾದ ಕರ್ನಾಟಕ ಇತಿಹಾಸ ರಚನಾ ಸಮಿತಿ ಸಂಯುಕ್ತಾಶ್ರಯದಲ್ಲಿ ವಿಶ್ವವಿದ್ಯಾಲಯದಲ್ಲಿ ಸೋಮವಾರ ಮತ್ತು ಮಂಗಳವಾರ ನಡೆದ ಕಲ್ಯಾಣ ಕರ್ನಾಟಕ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆ ಕಾರ್ಯಾಗಾರದ ಸಮಾರೋಪ ಭಾಷಣದಲ್ಲಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಇತಿಹಾಸ ರಚನೆ ತುಂಬಾ ಕಷ್ಟದ ಕೆಲಸ. ಈ ಭಾಗದ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ಒಟ್ಟು 225 ವರ್ಷಗಳ ಕಾಲದಲ್ಲಿ ಬಿಟ್ಟು ಹೋದ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಹೊಣೆ ನಮ್ಮೆಲ್ಲರ ಮೇಲಿದೆ.

ಆದ್ದರಿಂದ ಆರೂ ಜಿಲ್ಲೆಗಳನ್ನು ಒಳಗೊಂಡ ಸ್ಪಷ್ಟ
, ನಿಷ್ಠರ ಮತ್ತು ಸ್ಫೂ ರ್ತಿದಾಯಕ ಇತಿಹಾಸ ರಚನೆ ಆಗಬೇಕು ಎಂದರು. ಇತಿಹಾಸ ಪರಿಚಯಿಸಲು, ಪಠ್ಯಪುಸ್ತಕದಲ್ಲಿ ಅಧಿಕೃತ ಸೇರ್ಪಡೆ ಮಾಡಲು ಮಕ್ಕಳಿಗೆ ತಿಳಿಯುವಂತೆ ಇತಿಹಾಸದ ಲೇಖನಗಳು ಸರಳ ಮತ್ತು ನಿಖರತೆಯಿಂದ ಕೂಡಿರಬೇಕು. ಸಂಸ್ಕೃತಿ-ಮತದ ಮೇಲಿನ ಅಭಿಮಾನದಿಂದ ಆಚೆ ನಿಂತು ರಚನೆ ಬರಬೇಕು. ಈ ಹಿಂದಿನ ಇತಿಹಾಸ ರಚನೆ ಸಮರ್ಪಕವಾಗಿಲ್ಲದ ಕಾರಣ ಮರುರಚನೆಗೆ ಸಮಿತಿ ಮಾಡಲಾಗಿದೆ.

ಹಿಂದಿನ ತಪ್ಪೇ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕೆಂದು ಸಲಹೆ ನೀಡಿದರು. ಹೈದ್ರಾಬಾದ ನಿಜಾಮರ ಬಗ್ಗೆ ಬಹಳಷ್ಟು ತಪ್ಪು ಸಂದೇಶಗಳು ಇದೆ. ಅಂದಿನ ಕಾಲದಲ್ಲಿ ನಿಜಾಮರು ಆಯಾ ಪ್ರದೇಶದ ಮಾತೃ ಭಾಷೆಗಳಾದ ಕನ್ನಡ, ತೆಲಗು, ಮರಾಠಿಯಲ್ಲಿ ಕಲಿಯಲು ಅವಕಾಶ ಮಾಡಿಕೊಟ್ಟಿದ್ದರು. ಹೈದ್ರಾಬಾದ್‌ನ ಉಸ್ಮಾನಿಯ ವಿಶ್ವವಿದ್ಯಾಲಯದಲ್ಲಿ ಕನ್ನಡ ಸ್ನಾತಕ್ಕೋತ್ತರ ಕೇಂದ್ರ ತೆರೆದು ಕನ್ನಡಕ್ಕೆ ಮಹತ್ವ ನೀಡಿದವರಾಗಿದ್ದಾರೆ. ಸ್ವಾತಂತ್ರ್ಯದ ನಂತರ ಕಾಸಿಂ ರಜ್ವಿಯ ದುರಾಡಳಿತ ಹೊರತುಪಡಿಸಿದರೆ ನಿಜಾಮರು ಈ ಪ್ರದೇಶಕ್ಕೆ ಕಲೆ, ಸಾಹಿತ್ಯ, ಸಾಮರಸ್ಯದ ಆಡಳಿತ, ಶಿಕ್ಷಣಕ್ಕೆ ನೀಡಿದ ಕೊಡುಗೆಯನ್ನು ಯಾರೂ ಮರೆಯಬಾರದು ಎಂದರು.

ಆರಂಭದಲ್ಲಿ ಮಾತೃ ಭಾಷೆಯಲ್ಲೇ ಮಾಧ್ಯಮಿಕ ಶಾಲೆಗಳು ನಡೆಯುತ್ತಿದ್ದು, ಪ್ರೌಢ ಶಾಲೆ ಆರಂಭಿಸಿದಾಗ ನಾನು ಮೊದಲ ಬ್ಯಾಚ್‌ನ ಮಾತೃಭಾಷಾ ವಿದ್ಯಾರ್ಥಿ ಆಗಿದ್ದೆ ಎಂದು ಸ್ಮರಿಸಿದ ಅವರು, ಇತಿಹಾಸವನ್ನು ಒಂದೇ ಮಗ್ಗುಲಲ್ಲಿ ನೋಡಬಾರದು ಎಂದು ಎಚ್ಚರಿಸಿದರು.

ಇತಿಹಾಸ ರಚನಾ ಸಮಿತಿ ಅಧ್ಯಕ್ಷರಾಗಿದ ಪ್ರಾದೇಶಿಕ ಆಯುಕ್ತ ಸುಬೋಧ ಯಾದವ, ಡೀನ್‌ ಲಕ್ಷ್ಮಣ ರಾಜನಾಳಕರ ಮಾತನಾಡಿದರು. ಸಮಿತಿ ಸಂಚಾಲಕ ಲಕ್ಷ್ಮಣ ದಸ್ತಿ, ನಿವೃತ್ತ ಪ್ರಾಧ್ಯಾಪಕ ಪ್ರೊ| ಡಿ.ಸಿ. ಮಹಾಬಲೇಶ್ವರಪ್ಪ ಇವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ| ಸಂಜೀವಕುಮಾರ, ವಿತ್ತಾಧಿಕಾರಿ ಡಿ.ವಿಜಯ ಹಾಗೂ ಆರು ಜಿಲ್ಲೆಗಳಿಂದ ಆಗಮಿಸಿದ ನೂರಾರು ಸಂಖ್ಯೆಯ ಇತಿಹಾಸ ತಜ್ಞರು ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.