ಪೌರತ್ವ ತಿದ್ದುಪಡಿ ಮಸೂದೆಗೆ ಪರ-ವಿರೋಧ
ಗುವಿವಿ ವಿದ್ಯಾರ್ಥಿಗಳು-ಸಂಘಟನೆಗಳಿಂದ ಪ್ರತಿಭಟನೆಕೆಲವು ಸ್ವಾಮಿಗಳಿಂದ ಬೆಂಬಲ
Team Udayavani, Dec 19, 2019, 10:40 AM IST
ಕಲಬುರಗಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಮಸೂದೆ ಕಾಯ್ದೆ ವಿರೋಧಿಸಿ ಗುಲಬರ್ಗಾ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟ ನೇತೃತ್ವದಲ್ಲಿ ವಿವಿ ಕಾರ್ಯಸೌಧ ಎದುರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪ್ರತಿಭಟನಾಕಾರರು ಕುಲಪತಿಗಳ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿ, ಸಿಎಬಿ ಹಾಗೂ ಎನ್ಆರ್ಸಿ ಮಸೂದೆಗಳನ್ನು ಕೈಬಿಡಬೇಕು. ವಿದೇಶದಿಂದ ಬಂದ ನಿರಾಶ್ರಿತರ ಮತ್ತು ಕಾನೂನು ಬಾಹಿರ ವಿದೇಶಿ ನಿವಾಸಿಗಳ ಮೇಲೆ ಮಾತ್ರ ಈ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು, ದೇಶದ ಭದ್ರತೆ ನೆಪವೊಡ್ಡಿ ಎಫ್ಆರ್ಡಿಐ ಕಾಯ್ದೆ ಮೂಲಕ ಠೇವಣಿ ಆಗಿರಿಸಿದ ಹಣ ನಿರ್ಬಂಧಿಸುವುದನ್ನು ಕೈಬಿಡುವಂತೆ ಒತ್ತಾಯಿಸಿದರು.
ಕೇಂದ್ರ ಬಿಜೆಪಿ ಸರ್ಕಾರ ಎಲ್ಲ ಕ್ಷೇತ್ರದಲ್ಲೂ ವಿಫಲವಾಗಿದೆ. ರಾಷ್ಟ್ರೀಯ ಉತ್ಪನ್ನವು ಹಿಂದೆಂದೂ ಕಂಡರಿಯದ ರೀತಿಯಲ್ಲಿ ಕುಸಿದಿದೆ. ಷೇರು ಮಾರುಕಟ್ಟೆಯಲ್ಲಿ 13 ಲಕ್ಷ ಕೋಟಿ ರೂ. ಕರಗಿ ಹೋಗಿವೆ. ಕಾರ್ಖಾನೆಗಳು ಮುಚ್ಚಿಹೋಗಿವೆ. ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ.
ನಿರುದ್ಯೋಗ ಸಮಸ್ಯೆ ಉಲ್ಬಣಿಸಿದೆ. ಜನತೆ ಆದಾಯ ಕಡಿಮೆಯಾಗಿದೆ. ಡಾಲರ್ ಎದುರು ರೂಪಾಯಿ ಮೌಲ್ಯ 79ಕ್ಕೆ ಏರಿದೆ. ಈರುಳ್ಳಿ, ಪೆಟ್ರೋಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ. ನೋಟು ಅಮಾನ್ಯೀಕರಣ, ಜಿಎಸ್ಟಿ ದೇಶದ ಆರ್ಥಿಕತೆಗೆ ಪೆಟ್ಟುಕೊಟ್ಟಿದೆ. ಏಳುವರೆ ಲಕ್ಷ ಕೋಟಿ ರೂ.ಗಳ ಕೊರತೆ ಬಜೆಟ್ ಮಂಡನೆ ಮಾಡಲಾಗಿದೆ. ಬ್ಯಾಂಕ್ಗಳು ದಿವಾಳಿ ಅಂಚಿಗೆ ತಲುಪಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬ್ಯಾಂಕಿನಲ್ಲಿ ಕೂಡಿಟ್ಟ ಒಂದು ಲಕ್ಷ ಕೋಟಿ ರೂ.ಗಳನ್ನು ಬಿಜೆಪಿ ಬೆಂಬಲಿಗರು ಲೂಟಿ ಮಾಡಿದ್ದಾರೆ. ಇವೆಲ್ಲ ವೈಫಲ್ಯಗಳನ್ನು ಮರೆಮಾಚಲು ಪೌರತ್ವ ಮಸೂದೆ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ಆಪಾದಿಸಿದರು.
ಈಗಾಗಲೇ ಪೌರತ್ವ ಮಸೂದೆ ವಿರುದ್ಧ ರಾಷ್ಟ್ರವ್ಯಾಪಿ ಉಗ್ರ ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನೆಯಲ್ಲಿ ಆಸ್ಸಾಂನಲ್ಲಿ ಹಲವರು ಮೃತಪಟ್ಟಿದ್ದಾರೆ. ಜಾಮೀಯಾ ವಿವಿಯಲ್ಲಿ ಕುಲಪತಿಗಳ ಅನುಮತಿ ಪಡೆಯದೇ ಪೊಲೀಸರು ವಿವಿ ಒಳಗೆ ನುಗ್ಗಿ ಹಲ್ಲೆ ಮಾಡಿದ್ದಾರೆ. ಅಲಿಘಡ ವಿವಿಯಲ್ಲೂ ಹಲ್ಲೆಗಳು ನಡೆದಿವೆ. ಇವೆಲ್ಲ ಹಿಂಸಾಚಾರ ಬಿಟ್ಟು, ಕೂಡಲೇ ಮಸೂದೆ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಒಕ್ಕೂಟದ ಅಧ್ಯಕ್ಷ ಬಾಬುರಾವ್ ಎಸ್. ಬೀಳಗೆ, ಉಪಾಧ್ಯಕ್ಷ ಕೆ. ಮಹೇಶ, ಚಿರಂಜೀವಿ ಬಬಲಾದಕರ್, ಉಮೇಶ ಎಸ್. ವಾಲೀಕಾರ, ಸುಹಾಸ ಸೂರ್ಯನವರ್, ಆಕಾಶ ಮೇಟಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ