ಅರಮನೆ ನಗರಿಗೆ ವಿಮಾನಯಾನ ಸೇವೆ

ಕಲಬುರಗಿ ನಿಲ್ದಾಣದಲ್ಲಿ ವಾಟರ್‌ ಸಲ್ಯೂಟ್‌ಕೇವಲ ಎರಡು ಗಂಟೆಯಲ್ಲಿ ಮೈಸೂರಿಗೆ ಪಯಣ

Team Udayavani, Dec 28, 2019, 10:55 AM IST

28-December-1

ಕಲಬುರಗಿ: ಕಳೆದ ನವೆಂಬರ್‌ 22ರಂದು ಲೋಕಾರ್ಪಣೆಗೊಂಡು ಸ್ಟಾರ್‌ ಏರ್‌ ಸಂಸ್ಥೆ ಮೂಲಕ ನಾಗರಿಕ ವಿಮಾನಯಾನ ಸಂಚಾರ ಆರಂಭಿಸಿದ ಕಲಬುರಗಿ ವಿಮಾನ ನಿಲ್ದಾಣದಿಂದ ತಿಂಗಳು ಮುಗಿಯುತ್ತಿದಂತೆ ಅಲಯನ್ಸ್‌ ಏರ್‌ ಸಂಸ್ಥೆಯು ಶುಕ್ರವಾರದಿಂದ ತನ್ನ ನಾಗರಿಕ ವಿಮಾನ ಸೇವೆ ಅಧಿಕೃತವಾಗಿ ಆರಂಭಿಸಿದೆ.

ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗ್ಗೆ 10:54 ಗಂಟೆಗೆ ಹೊರಟ ಎಟಿಆರ್‌ ಮಾದರಿಯ 72 ಸೀಟುಳ್ಳ 91509 ಸಂಖ್ಯೆಯ ವಿಮಾನವು ಮಧ್ಯಾಹ್ನ 12:50ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಭೂಸ್ಪರ್ಶ ಮಾಡಿತು.

ಅಲಯನ್ಸ್‌ ಏರ್‌ ಸಂಸ್ಥೆಯ ವಿಮಾನ ಮೊದಲ ಬಾರಿಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರಿಂದ ವಿಮಾನಕ್ಕೆ ನೀರು ಚಿಮ್ಮುವ ಮೂಲಕ ವಾಟರ್‌ ಸಲ್ಯೂಟ್‌ ನೀಡಲಾಯಿತು. ಇದಕ್ಕೂ ಮುನ್ನ ರೈಲಿನಿಂದ ಮೈಸೂರಿಗೆ ಹೋಗಬೇಕೆಂದರೆ 15 ಗಂಟೆಗಳ ಕಾಲ ಸಂಚರಿಸಬೇಕಿತ್ತು. ಆದರೆ ಶುಕ್ರವಾರ ಆರಂಭವಾಗಿರುವ ಮೈಸೂರು-ಬೆಂಗಳೂರು-ಕಲಬುರಗಿ ವಿಮಾನವು ಶರಣರ ನಾಡಿನಿಂದ ಅರಮನೆ ನಗರಕ್ಕೆ ಕೇವಲ ಎರಡು ಗಂಟೆಯಲ್ಲಿ ಸಂಚರಿಸಬಹುದಾಗಿದೆ.

ಅಲಯನ್ಸ್‌ ಏರ್‌ನ ಈ ವಿಮಾನವು ಬೆಳಗ್ಗೆ 6ಗಂಟೆಗೆ ಹೈದ್ರಾಬಾದ್‌ನಿಂದ ಗೋವಾಕ್ಕೆ ಹೊರಟು ಅಲ್ಲಿಂದ ಮೈಸೂರಿಗೆ ಬಂದು, ಅಲ್ಲಿಂದ ಬೆಂಗಳೂರಿಗೆ ಆಗಮಿಸಿ, ಕಲಬುರಗಿಗೆ ಬರುತ್ತದೆ. ಅದೇ ರೀತಿ ಕಲಬುರಗಿಯಿಂದ ಬೆಂಗಳೂರು- ಮೈಸೂರು-ಗೋವಾ-ಹೈದ್ರಾಬಾದ್‌ಗೆ ಮರಳುತ್ತದೆ.

ಅಲಯನ್ಸ್‌ ಏರ್‌ ಸಂಸ್ಥೆ ಬೆಂಗಳೂರು ಮೂಲದ ಮುಖ್ಯ ಪೈಲಟ್‌ ಎ.ಮಾಕನ್‌, ದೆಹಲಿ ಮೂಲದ ಮಹಿಳಾ ಕೋ-ಪೈಲಟ್‌ ಶಾಲು ಸುರಕ್ಷತೆಯಿಂದ ವಿಮಾನವನ್ನು ಲ್ಯಾಂಡ್‌ ಮಾಡಿದರು. ಎಂಜಿನಿಯರ್‌ ಕ್ರಾಂತಿಕುಮಾರ ತಂಡ ಜೊತೆಯಲ್ಲಿತ್ತು. ಬೆಂಗಳೂರಿನಿಂದ ಶಾಸಕ ಬಸವರಾಜ ಮತ್ತಿಮಡು, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಸೇರಿದಂತೆ ವಿಮಾನದಲ್ಲಿ 56 ಪ್ರಯಾಣಿಕರು ಆಗಮಿಸಿದ್ದರು. ಅಷ್ಟೆ ಸಂಖ್ಯೆ ಪ್ರಯಾಣಿಕರು ಇಲ್ಲಿಂದ ಬೆಂಗಳೂರಿಗೆ ಗಗನ ಹಾರಾಟ ಆರಂಭಿಸಿದರು.

ಶಾಸಕ ದತ್ತಾತ್ರೇಯ ಪಾಟೀಲ ಸಿ. ರೇವೂರ, ಬಿ.ಜಿ. ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್‌, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ, ಕಲಬುರಗಿ ವಿಮಾನ ನಿಲ್ದಾಣದ ಎಎಏ ನಿರ್ದೇಶಕ ಜ್ಞಾನೇಶ್ವರ ರಾವ್‌, ಡಿಸಿಪಿ ಕಿಶೋರ ಬಾಬು, ಅಲಯನ್ಸ್‌ ಏರ್‌ ಸಂಸ್ಥೆಯ ವಾಣಿಜ್ಯ ವಿಭಾಗದ ಮುಖ್ಯಸ್ಥ ಮನು ಆನಂದ, ವಾಣಿಜ್ಯ ವಿಭಾಗದ ಮ್ಯಾನೇಜರ್‌ ಶಿವಾನಿ ವಿಜಾನಿ, ಕಲಬುರಗಿ ವಿಮಾನ ನಿಲ್ದಾಣದ ಮ್ಯಾನೇಜರ್‌ ಉಪೇಂದ್ರ ಸಿಂಗ್‌ ಶೇಖಾವತ್‌, ಸ್ಥಳೀಯ ಜನಪ್ರತಿನಿ ಧಿಗಳು, ಅಧಿಕಾರಿಗಳು ಹಾಗೂ ವಿಮಾನದ ಪೈಲಟ್‌ ಮತ್ತು ಯಾತ್ರಿಕರನ್ನು ಸ್ವಾಗತಿಸಿದರು.

ಪ್ರಸ್ತುತ ಸ್ಟಾರ್‌ ಏರ್‌ ಸಂಸ್ಥೆಯು ಕಳೆದ ನವೆಂಬರ್‌ 22ರಿಂದ ಸೋಮವಾರ, ಶುಕ್ರವಾರ ಮತ್ತು ಶನಿವಾರ ಹೀಗೆ ವಾರದಲ್ಲಿ ಮೂರು ದಿನ ಕಲಬುರಗಿ-ಬೆಂಗಳೂರು ಮಧ್ಯೆ ವಿಮಾನ ಸೇವೆ ನೀಡುತ್ತಿದೆ. ಇದೀಗ ಅಲಯನ್ಸ್‌ ಏರ್‌ ಸಂಸ್ಥೆಯು ಕಲಬುರಗಿ-ಬೆಂಗಳೂರು-ಮೈಸೂರು ಮಧ್ಯೆ ಸಂಚಾರ ಆರಂಭಿಸಿದೆ. ಇದು ಎರಡನೇ ವಿಮಾನ ಸೌಲಭ್ಯವಾಗಿದ್ದು, ಹೆಚ್ಚಿನ ಅನೂಕೂಲವಾಗಿದೆ.

ಶುಭ ಕೋರಿಕೆ: ಕಲಬುರಗಿ-ಬೆಂಗಳೂರು ಮಧ್ಯದ ಆರಂಭಿಕ ಹಾರಾಟದಲ್ಲಿ ಪ್ರಯಾಣಿಸಲು ಪ್ರಥಮವಾಗಿ ಟಿಕೆಟ್‌ ಬುಕ್‌ ಮಾಡಿದ ಕೋಮಲ ಪಾಟೀಲ ಅವರಿಗೆ ಗಣ್ಯರು ಬೋರ್ಡಿಂಗ್‌ ಪಾಸ್‌, ಹೂಗುತ್ಛ ನೀಡಿ ಶುಭ ಕೋರಿದರು.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.