ಸಾಹಿತ್ಯ ಸಮ್ಮೇಳನ ರೂಪುರೇಷೆ ಸಲ್ಲಿಕೆಗೆ ಸೂಚನೆ


Team Udayavani, Dec 22, 2019, 4:12 PM IST

22-Decemebrer-22

ಕಲಬುರಗಿ: ನಗರದಲ್ಲಿ ನಡೆಯಲಿರುವ 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮೇಳನ ಸಿದ್ಧತೆಗಾಗಿ ರಚಿಸಿರುವ 16 ಸಮಿತಿಗಳು ಒಂದು ವಾರದೊಳಗೆ ಸಭೆ ನಡೆಸಿ, ಕಾರ್ಯಕ್ರಮಗಳ ರೂಪುರೇಷೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಬಿ. ಶರತ್‌ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಸಮ್ಮೇಳನ ದಿನಗಳಂದು ಯಾವುದೇ ಗೊಂದಲ-ಸಮಸ್ಯೆಯಾಗದಂತೆ ಈಗಿಂದಲೇ ಸಿದ್ಧತೆ ಮಾಡಿಕೊಳ್ಳಬೇಕೆಂದು ವಿವಿಧ ಸಮಿತಿಯಲ್ಲಿರುವ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.

ವೇದಿಕೆ ಸಮಿತಿ: ಸಮ್ಮೇಳನದ ಮುಖ್ಯ ವೇದಿಕೆಯಲ್ಲಿ 30 ಸಾವಿರ ಜನರು ಕುಳಿತುಕೊಳ್ಳುವಂತೆ ಗಣ್ಯರಿಗೆ ಮತ್ತು ಸಾರ್ವಜನಿಕರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಬೇಕು. ವೇದಿಕೆಯನ್ನು ಕಲಬುರಗಿ ಜಿಲ್ಲೆಯ ಐತಿಹಾಸಿಕ ಪ್ರೇಕ್ಷಣೇಯ ಸ್ಥಳಗಳ ಬಗ್ಗೆ ಮಾಹಿತಿ ನೀಡುವ ಹಾಗೆ ಸಿದ್ಧಪಡಿಸಬೇಕು ಎಂದರು.

ಮೆರವಣಿಗೆ ಸಮಿತಿ: ರಥದಲ್ಲಿ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ಅದ್ಧೂರಿಯಾಗಿ ನಡೆಸಬೇಕು. ಮೆರವಣಿ ಗೆಯಲ್ಲಿ ವಿವಿಧ ಕಲಾ-ತಂಡಗಳನ್ನು ವ್ಯವಸ್ಥೆ ಮಾಡಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಆಹಾರ ಸಮಿತಿ: ರಾಜ್ಯದ ಮೂಲೆ- ಮೂಲೆಯಿಂದ ಸಾಹಿತ್ಯಾಸಕ್ತರು, ಗಣ್ಯರು ಮತ್ತು ಸಾರ್ವಜನಿಕರು ಸಮ್ಮೆಳನಕ್ಕೆ ಆಗಮಿಸುವುದರಿಂದ ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟದ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಬೇಕು. ಗಣ್ಯರಿಗೆ, ಪ್ರತಿನಿಧಿಗಳಿಗೆ ಹಾಗೂ ಸಾರ್ವಜನಿಕರಿಗಾಗಿ ಪ್ರತ್ಯೇಕ ಕೌಂಟರ್‌ ತೆರೆಯಬೇಕು ಎಂದರು.

ಪ್ರಚಾರ ಸಮಿತಿ: ಒಂದು ಪ್ರಚಾರ ರಥ ಸಿದ್ಧಪಡಿಸಿಕೊಂಡು ಸಮ್ಮೇಳನ ದಿನಕ್ಕಿಂತ ಮುಂಚಿತವಾಗಿ ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿಗಳಿಗೆ ತೆರಳಿ ಅಲ್ಲಿ ಸಾರ್ವಜನಿಕರಿಗೆ ನುಡಿ ಸಮ್ಮೇಳನ ಕುರಿತು ಜಾಗೃತಿ ಮೂಡಿಸಬೇಕು. ಪತ್ರಿಕೆಗಳು, ಸ್ಥಳೀಯ ಕೇಬಲ್‌ ಟಿ.ವಿ., ರೇಡಿಯೋ, ಎಫ್‌.ಎಂ.ಗಳಲ್ಲಿ ಇದರ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು, ಪ್ರಮುಖ ವೃತ್ತಗಳಲ್ಲಿ ಬ್ಯಾನರ್‌ಗಳನ್ನು ಅಳವಡಿಸಬೇಕು ಎಂದರು.

ಮಹಿಳಾ ಸಮಿತಿ: ಸಮ್ಮೇಳನದ ಸ್ಥಳಗಳಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಬೇಕು, ಸಾರಿಗೆ ವ್ಯವಸ್ಥೆ, ವಸತಿ ವ್ಯವಸ್ಥೆ, ಊಟ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ಆಸನ ವ್ಯವಸ್ಥೆ, ಆಸ್ಪತ್ರೆ ಮುಂತಾದೆಡೆಗಳಲ್ಲಿ ಪ್ರತ್ಯೇಕ ವ್ಯವಸ್ಥೆ ಮಾಡಬೇಕು ಎಂದರು.

ಸ್ವಚ್ಛತೆ-ನಿರ್ವಹಣಾ ಸಮಿತಿ: ಸಮ್ಮೇಳನದ ವೇದಿಕೆ, ಸುತ್ತಮುತ್ತಲಿನ ಸ್ಥಳ, ಆಹಾರದ ಕೌಂಟರ್‌ ಮುಂತಾದೆಡೆ ನಿತ್ಯ ಸ್ವಚ್ಛತೆ ಕಾಪಾಡಬೇಕು. ಸ್ಥಳದಲ್ಲಿ ಕಸದ ಬುಟ್ಟಿಗಳನ್ನು ಇಟ್ಟಿರಬೇಕು. ಹಾಗೆ ಕಸ ವಿಲೇವಾರಿ ಮಾಡಬೇಕು ಎಂದರು.

ಆರೋಗ್ಯ ಸಮಿತಿ: ಸಮ್ಮೇಳನ ಆಗಮಿಸುವ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಎರಡು ಆರೋಗ್ಯ ಕೇಂದ್ರ ತೆರೆಯಬೇಕು. ಓರ್ವ ಡಾಕ್ಟರ್‌ ಮತ್ತು ಇಬ್ಬರು ಶೂಶ್ರುಷಕಿಗಳನ್ನು ಇಲ್ಲಿ ನಿಯೋಜಿಸಬೇಕು. ತುರ್ತು ಸಂದರ್ಭದಲ್ಲಿ ಎರಡು ಅಂಬುಲೆನ್ಸ್‌ ವ್ಯವಸ್ಥೆಗೊಳಿಸಿ ಎಂದರು.

ಚಿತ್ರಕಲಾ ಸಮಿತಿ: ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿರುವ 85 ಅಧ್ಯಕ್ಷರ ಭಾವಚಿತ್ರಗಳನ್ನು ಹಾಕಬೇಕು. ಇದರ ಜೊತೆಯಲ್ಲಿ ಕನ್ನಡ ಸಾಹಿತ್ಯ, ಕರ್ನಾಟಕ ಮತ್ತು ಕಲಬುರಗಿಯ ಹಿರಿಮೆಯನ್ನು ಸಾರಬೇಕು ಎಂದರು.

ವಸತಿ ಮತ್ತು ಸಾರಿಗೆ ಸಮಿತಿ: ಸಮ್ಮೇಳನ ಅಧ್ಯಕ್ಷರು, ಪರಿಷತ್‌ ರಾಜ್ಯಾಧ್ಯಕ್ಷರು, ಪ್ರತಿಯೊಂದು ಜಿಲ್ಲೆಯಿಂದ ಬರುವ ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು, ಕಾರ್ಯದರ್ಶಿಗಳಿಗೆ ಪ್ರತ್ಯೇಕವಾದ ವಸತಿ ವ್ಯವಸ್ಥೆಯನ್ನು ಮಾಡಬೇಕು ಎಂದು ಸೂಚಿಸಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.