ಕಲಬುರಗಿಯಲ್ಲೂತಲೆ ಎತ್ತಲಿದೆ ಕೃಷಿ ಭವನ


Team Udayavani, Oct 26, 2019, 10:56 AM IST

26-October-1

ಕಲಬುರಗಿ: ಸರ್ವ ವರ್ಗಗಳಿಗೆ ಬೇಕಾದ ಹಾಗೂ ಜಾತಿ ಧರ್ಮ ಇಲ್ಲದ ರೈತ ವರ್ಗದ ಕೃಷಿ ಭವನ ನಿರ್ಮಾಣಕ್ಕೆ ಶಾಸಕರು ತಮ್ಮ ಅನುದಾನದಿಂದ ನೀಡಲಾಗುವ ಅನುದಾನಕ್ಕಿಂತ 10 ಲಕ್ಷ ರೂ. ಹೆಚ್ಚಿಗೆ ಅನುದಾನ ನೀಡಿ, ಕೃಷಿ ಭವನ ನಿರ್ಮಾಣಕ್ಕೆ ಸಹಾಯ, ಸಹಕಾರ ನೀಡುವುದಾಗಿ ವಿಧಾನ ಪರಿಷತ್‌ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಪ್ರಕಟಿಸಿದರು.

ಜಿಲ್ಲಾ ಪಂಚಾಯಿತಿ ಹಳೆ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಕೃಷಿಕ ಸಮಾಜದ ವಿಶೇಷ ಕಾರ್ಯಕಾರಿ ಸಮಿತಿ, ಕೃಷಿ ಭವನ ಕಟ್ಟಡ ನಿರ್ಮಾಣ ಮತ್ತು ಜಿಲ್ಲೆಯ ರೈತರ ಸಮಸ್ಯೆಗಳ ಚಿಂತನಾ ಸಭೆಯಲ್ಲಿ ಅವರು ಮಾತನಾಡಿದರು.

ಎಲ್ಲ ವರ್ಗ ಸಮುದಾಯಗಳ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಹತ್ತರಿಂದ ಹದಿನೈದು ಲಕ್ಷ ರೂ. ಅನುದಾನ ನೀಡುತ್ತೇವೆ. ಆದರೆ ರೈತನಿಗೆ ನಿರ್ದಿಷ್ಟ ಸಮುದಾಯವಿಲ್ಲ. ರೈತರು ಎಲ್ಲ ಸಮುದಾಯಗಳ ಸಂಕಿರ್ಣ ಆಗಿರುವುದರಿಂದ ಐತಿಹಾಸಿಕ ಎನ್ನುವಂತೆ ತಮ್ಮ ಅನುದಾನದ ಜತೆಗೆ ವೈಯಕ್ತಿಕವಾಗಿಯೂ ಅನುದಾನ ನೀಡಲಾಗುವುದು. ಜತೆಗೆ ಇದಕ್ಕೆ ಸಂಬಂಧಿಸಿದಂತೆ ಎಲ್ಲಿ ಕರೆದರೂ ಬರುತ್ತೇನೆ ಎಂದು ಭರವಸೆ ನೀಡಿದರು.

ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ಧಂಗಾಪುರ ಭೂಗಳ್ಳರ ಬೆದರಿಕೆ, ಒತ್ತಾಯದ ನಡುವೆ ಜಿಲ್ಲಾ ನ್ಯಾಯಾಲಯದ ಹತ್ತಿರ ಬಹುಕೋಟಿ ಮೌಲ್ಯದ ಕೃಷಿಕ ಸಮಾಜದ ಜಮೀನನ್ನು ಉಳಿಸಿಕೊಂಡು ಬಂದಿದ್ದಾರೆ. ಹೀಗಾಗಿ ರಾಜ್ಯಕ್ಕೆ ಮಾದರಿ ಎನ್ನುವಂತೆ ಕೃಷಿ ಭವನ ನಿರ್ಮಾಣವಾಗುವುದು ಅಗತ್ಯವಾಗಿದೆ ಎಂದು ಹೇಳಿದರು.

ಕೃಷಿಕ ಸಮಾಜದ ರಾಜ್ಯ ಕಾರ್ಯಕಾರಿಣಿ ಸದಸ್ಯ, ರೈತರ ಮುಖಂಡ ಕೇದಾರಲಿಂಗಯ್ಯ ಹಿರೇಮಠ ಮಾತನಾಡಿ, ಕೃಷಿ ಸಮಾಜದ ಇಂತಹ ಕೃಷಿಕ ಭವನಗಳಿಗೆ ಅನುದಾನ ನೀಡಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಿಂದೆ ಬೀಳುವುದಿಲ್ಲ. ಹೀಗಾಗಿ ಬಿಜೆಪಿ ಮುಖಂಡರೊಂದಿಗೆ ನಿಯೋಗ ಹೋಗಿ ಬಂದಲ್ಲಿ ಸರ್ಕಾರದಿಂದ ಸೂಕ್ತ ಅನುದಾನ ದೊರಕಲು ಸಾಧ್ಯವಾಗುತ್ತದೆ ಎಂದರು.

ಖ್ಯಾತ ವಾಸ್ತುಶಿಲ್ಪಿ ಬಸವರಾಜ ಖಂಡೇರಾವ್‌ ಮಾತನಾಡಿ, ಜಿಲ್ಲಾ ನ್ಯಾಯಾಲಯ ಬಳಿ ಇರುವ 33 ಗುಂಟೆ ಜಾಗದಲ್ಲಿ ರಾಜ್ಯದಲ್ಲಿಯೇ ಮಾದರಿ ಎನ್ನಬಹುದಾದ ಬಹುಮಡಿ ಕೃಷಿ ಭವನ ನಿರ್ಮಾಣಕ್ಕೆ 15 ಕೋಟಿ ರೂ. ತಗುಲಬಹುದೆಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ಧಂಗಾಪುರ ಅಧ್ಯಕ್ಷತೆ ವಹಿಸಿ, ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಉತ್ತಮ ಕೃಷಿ ಭವನ ಇವೆ. ಕಲಬುರಗಿಯಲ್ಲೂ ಕೃಷಿ ನಿರ್ಮಾಣ ತಮ್ಮ ಕನಸಿನ ಕೂಸಾಗಿದೆ. ಈ ಜಾಗದ ಮೇಲೆ ಭೂಗಳ್ಳರ ಕಣ್ಣು ಬಿದ್ದಿತ್ತು. ತಮಗೆ ಬೆದರಿಕೆ ಕರೆಗಳು ಬಂದವು. ಇನ್ನೂ ಕೆಲವೊಮ್ಮೆ ಹಣದ ಆಮಿಷವನ್ನು ಒಡ್ಡಲಾಗಿತ್ತು. ಆದರೆ ಯಾವುದಕ್ಕೂ ಬಗ್ಗದ ಪರಿಣಾಮ ಭವನ ನಿರ್ಮಾಣಕ್ಕೆ ಬಂದು ನಿಂತಿದೆ. ಖ್ಯಾತ ವಾಸ್ತುಶಿಲ್ಪಿ ಬಸವರಾಜ ಖಂಡೇರಾವ್‌ ಯಾವುದೇ ಶುಲ್ಕ ಪಡೆಯದೇ ಉಚಿತವಾಗಿ ನೀಲನಕ್ಷೆ ರೂಪಿಸಿ ಕೊಟ್ಟಿದ್ದಾರೆ. ಅಲ್ಲದೇ ಪಾಲಿಕೆಯಿಂದ ಕಟ್ಟಡ ಅನುಮತಿಗೂ ಶ್ರಮಿಸಿದ್ದಾರೆ ಎಂದು ಹೇಳಿದರು.

ಜಂಟಿ ಕೃಷಿ ನಿರ್ದೇಶಕ ರಿತೇಂದ್ರನಾತ ಸುಗೂರ ಮಾತನಾಡಿ, ಕೃಷಿ ಭವನ ನಿರ್ಮಾಣಕ್ಕಾಗಿ ಇಲಾಖೆ ಬಳಿ 50 ಲಕ್ಷ ರೂ. ಇದೆ. ಕಟ್ಟಡ ನಿರ್ಮಾಣ ಕಾರ್ಯ ಶುರುವಾದಲ್ಲಿ ಬ್ಯಾಂಕ್‌ನಲ್ಲಿ ಇಡಲಾದ ಠೇವಣಿ ಮರಳಿ ಪಡೆಯಬಹುದಾಗಿದೆ ಎಂದರು.

ಜಿ.ಪಂ ಕೃಷಿ ಹಾಗೂ ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಮಾಜಿ ಶಾಸಕ ನಾಗರೆಡ್ಡಿ ಪಾಟೀಲ, ಬಸವರಾಜ ಪಾಟೀಲ ಉಡಗಿ, ಚಂದ್ರಶೇಖರ ಪರಸರೆಡ್ಡಿ, ಶರಣಪ್ಪ ತಳವಾರ, ಶಿವಶರಣಪ್ಪ ನಿಗ್ಗುಡಗಿ, ಶಿವಶರಣಪ್ಪ ತಳ್ಳಳ್ಳಿ, ಶಿವಕುಮಾರ ಘಂಟಿ, ಚಿತ್ರಶೇಖರ ತಾಡತೆಗನೂರ ಮುಂತಾದವರಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.