ಉಕ್ಕಿನಮನುಷ್ಯನಜಯಂತಿ; ಏಕತಾಓಟ

ಗಣ್ಯರಿಂದ ಪಟೇಲ್‌ ಪುತ್ಥಳಿಗೆ ಗೌರವಾರ್ಪಣೆವಿದ್ಯಾರ್ಥಿಗಳು-ಸಂಸ್ಥೆಗಳಿಂದ ಶ್ರಮದಾನ

Team Udayavani, Nov 1, 2019, 10:45 AM IST

1-November-2

ಕಲಬುರಗಿ: ದೇಶದ ಮೊದಲ ಉಪ ಪ್ರಧಾನಿ ಹಾಗೂ ಗೃಹ ಸಚಿವ ಸರ್ದಾರ ವಲ್ಲಭಭಾಯಿ ಪಟೇಲ್‌ ಜನ್ಮ ದಿನದ ಅಂಗವಾಗಿ ಗುರುವಾರ ನಗರದಲ್ಲಿ ರಾಷ್ಟ್ರೀಯ ಏಕತಾ ದಿನ ಆಚರಿಸಲಾಯಿತು.

ನಗರದ ತಿಮ್ಮಾಪುರಿ ವೃತ್ತದಲ್ಲಿರುವ ಸರ್ದಾರ ವಲ್ಲಭಭಾಯಿ ಪಟೇಲ್‌ ಪುತ್ಥಳಿಗೆ ಜನಪ್ರತಿನಿಧಿಗಳು, ಅಧಿಕಾರಿಗಳು, ಹೋರಾಟಗಾರರು ನಮನ ಸಲ್ಲಿಸಿದರು. ವಿವಿಧ ಸಂಘ-ಸಂಸ್ಥೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಏಕತಾ ಓಟ ಹಾಗೂ ಶ್ರಮದಾನ ಕೈಗೊಂಡರು.

ಬೆಳಗ್ಗೆ 6 ಗಂಟೆಗೆ ನಗರ ಪೊಲೀಸ್‌ ಆಯುಕ್ತಾಲಯದ ವತಿಯಿಂದ ನಗರದ ತಿಮ್ಮಾಪುರಿ ವೃತ್ತದಿಂದ ಜಗತ್‌ ವೃತ್ತದ ವರೆಗೆ ಬಹೃತ್‌ ಏಕತಾ ಓಟ ನಡೆಯಿತು. ಜಿಲ್ಲಾಧಿಕಾರಿ ಬಿ. ಶರತ್‌, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಪಿ. ರಾಜಾ, ನಗರ ಪೊಲೀಸ್‌ ಆಯುಕ್ತ ಎಂ.ಎನ್‌. ನಾಗರಾಜು, ಉಪ ಆಯುಕ್ತ ಡಿ. ಕಿಶೋರ್‌ ಬಾಬು, ಹೆಚ್ಚುವರಿ ಎಸ್‌ಪಿ ಪ್ರಸನ್ನ ದೇಸಾಯಿ ಹಾಗೂ ಎಸಿಪಿಗಳು, ಇನ್ಸ್‌ಪೆಕ್ಟರ್‌ಗಳು, ಪೊಲೀಸ್‌ ಸಿಬ್ಬಂದಿ, ನಾಗನಹಳ್ಳಿ ಪೊಲೀಸ್‌ ತರಬೇತಿ ಕೇಂದ್ರದ ಪೊಲೀಸ್‌ ಪ್ರಶಿಕ್ಷಣಾರ್ಥಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ನಾಗರಿಕರು ಪಾಲ್ಗೊಂಡಿದ್ದರು.

ಬಿಜೆಪಿಯಿಂದ ಓಟ: ರಾಷ್ಟ್ರೀಯ ಏಕತಾ ದಿನದ ನಿಮಿತ್ತ ನಗರದ ಉತ್ತರ ಮಂಡಲದ ಬಿಜೆಪಿ ವತಿಯಿಂದ ಏಕತಾ ಓಟ ಏರ್ಪಡಿಸಲಾಗಿತ್ತು. ಸಂಸದ ಡಾ| ಉಮೇಶ ಜಾಧವ ಮತ್ತು ಯುವ ಮುಖಂಡ ಚಂದು ಪಾಟೀಲ ಸರ್ದಾರ ವಲ್ಲಭಭಾಯಿ ಪಟೇಲ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಉಕ್ಕಿನ ಮನುಷ್ಯನಿಗೆ ಗೌರವ ಸಲ್ಲಿಸಿದರು.

ನಂತರದ ಗಂಜ್‌ ಪ್ರದೇಶದ ನಗರೇಶ್ವರ ಶಾಲೆಯಲ್ಲಿ ಏಕತಾ ಓಟ ಸಂಸದರು ಚಾಲನೆ ನೀಡಿದರು. ಅಲ್ಲಿಂದ ಕಿರಾಣಾ ಬಜಾರ, ಸೂಪರ್‌ ಮಾರ್ಕೆಟ್‌, ಜಗತ್‌ ವೃತ್ತದ ಮಾರ್ಗವಾಗಿ ಸರ್ದಾರ ವಲ್ಲಭಭಾಯಿ ಪಟೇಲ್‌ ವೃತ್ತದವರೆಗೆ ಓಟ ನಡೆಯಿತು.

ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಉಮೇಶ ಪಾಟೀಲ, ಚನ್ನವೀರ ಲಿಂಗನವಾಡಿ, ಸಿದ್ದಾಜಿ ಪಾಟೀಲ, ರಮಾನಂದ ಉಪಾಧ್ಯಾಯ, ಅಶೋಕ ಮಾನಕರ, ಸಾವಿತ್ರಿ ಕುಳಗೇರಿ, ಸಂಗು ಮನ್ನಳ್ಳಿ, ಶರಣು ಟೆಂಗಳಿ ಹಾಗೂ ಉತ್ತರ ಮಂಡಲದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಮುಖಂಡರಿಂದ ನಮನ: ಹೈದ್ರಾಬಾದ ಕರ್ನಾಟಕ ವಿಮೋಚನಾ ಮತ್ತು ಅಭಿವೃದ್ಧಿ ಸಮಿತಿ ಮುಖಂಡರು ಹಾಗೂ ಹೋರಾಟಗಾರರು ಪಟೇಲ್‌ರ ಜನ್ಮದಿನ ಆಚರಿಸಿದರು. ವಿಧಾನ ಪರಿಷತ್‌ನ ಮಾಜಿ ಸದಸ್ಯ ಶಶೀಲ ನಮೋಶಿ, ಹೋರಾಟಗಾರರ ಲಕ್ಷ್ಮಣ ದಸ್ತಿ, ಮಾರುತಿರಾವ್‌ ಡಿ.ಮಾಲೆ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಮುಖಂಡರಾದ ಶಿವರಾಜ ಪಾಟೀಲ, ದತ್ತು ಭಾಸಗಿ, ಲಿಂಗರಾಜ ಸಿರಗಾಪುರ, ಶಿವಲಿಂಗಪ್ಪ ಬಂಡಕ, ಮನಿಷ ಜಾಜು, ಎಂ.ಎಸ್‌. ಪಾಟೀಲ ನರಿಬೋಳ, ಮಂಜುನಾಥ ನಾಲವಾರಕರ್‌ ಮತ್ತಿತರರು ಇದ್ದರು.

ಗಂಜ್‌ನಲ್ಲಿ ಶ್ರಮದಾನ: ನಗರದ ಕೃಷಿ ಉತ್ವನ್ನ ಮಾರುಕಟ್ಟೆ ಸಮಿತಿ ಕಚೇರಿ ಆವರಣದಲ್ಲಿ ಪಟೇಲರ ಜನ್ಮ ದಿನದ ಅಂಗವಾಗಿ ಪ್ಲಾಸ್ಟಿಕ್‌ ನಿಷೇಧ ಜಾಗೃತಿ ಮತ್ತು ಸ್ವಚ್ಛ ಭಾರತ ಅಭಿಯಾನ ಹಮ್ಮಿಕೊಂಡು ಶ್ರಮದಾನ ಮಾಡಲಾಯಿತು.

ಶ್ರಮದಾನಕ್ಕೆ ಎಪಿಎಂಸಿ ಅಧ್ಯಕ್ಷ ಗುರುಬಸಪ್ಪ ಎಸ್‌. ಕಣಕಿ ಚಾಲನೆ ನೀಡಿದರು. ಉಪಾಧ್ಯಕ್ಷ ರಾಜಕುಮಾರ ಕೋಟಿ, ಕಾರ್ಯದರ್ಶಿ ಎಂ.ವಿ.ಶೈಲಜಾ ಹಾಗೂ ವಿವಿಧ ಸಂಘ-ಸಂಘಟನೆಗಳ ಸದಸ್ಯರು ಹಾಗೂ ಎಪಿಎಂಸಿ ಕಚೇರಿಯ ಸಿಬ್ಬಂದಿ ಆವರಣ ಸ್ವಚ್ಛಗೊಳಿಸಿ, ಶ್ರಮದಾನ ಮಾಡಿದರು.

ಕಾಂಗ್ರೆಸ್‌ ಕಚೇರಿ: ನಗರದ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ಉಕ್ಕಿನ ಮನುಷ್ಯ ಸರ್ದಾರ ವಲ್ಲಭಭಾಯಿ ಪಟೇಲ ಜಯಂತಿ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿ  ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ, ಮಹಿಳಾ ಘಟಕದ ಅಧ್ಯಕ್ಷೆ ಲತಾ ರಾಠೊಡ, ವಾಣಿಶ್ರೀ ಸಗರಕರ್‌, ಭೀಮರಾವ ತೇಗಲತಿಪ್ಪಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.