ಅರ್ಧಕ್ಕೆ ನಿಂತ ರಾಜೀವಗಾಂಧಿ ಥೀಮ್ ಪಾರ್ಕ್
Team Udayavani, Nov 18, 2019, 10:45 AM IST
ಹಣಮಂತರಾವ ಭೈರಾಮಡಗಿ
ಕಲಬುರಗಿ: ವೇಗದಲ್ಲಿ ಬೆಳೆಯುತ್ತಿರುವ ಕಲಬುರಗಿ ಮಹಾನಗರದಲ್ಲಿ ಮನೋರಂಜನಾ (ಥೀಮ್) ಪಾರ್ಕ್ ಸ್ಥಾಪನೆ ಆಗಬೇಕೆಂಬ ನಿಟ್ಟಿನಲ್ಲಿ ನಗರದ ದರಿಯಾಪುರ-ಕೋಟನೂರ ಡಿ. ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಬಡಾವಣೆಯಲ್ಲಿ ನಿರ್ಮಿಸಲಾಗುತ್ತಿರುವ ರಾಜೀವಗಾಂಧಿ ಥೀಮ್ ಪಾರ್ಕ್ ಅರ್ಧಕ್ಕೆ ನಿಂತಿದ್ದು, ಸಂಪೂರ್ಣ ಹಾಳಾಗುತ್ತಿದೆ.
ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ ಬಡಾವಣೆ ಮಧ್ಯ ಭಾಗದಲ್ಲಿ ಮಹಾನಗರ ಜನತೆಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕಳೆದ ಐದು ವರ್ಷಗಳ ಹಿಂದೆ ವಿಶಾಲವಾದ 18 ಎಕರೆ ಪ್ರದೇಶದಲ್ಲಿ ಥೀಮ್ ಪಾರ್ಕ್ ಸ್ಥಾಪಿಸಲು ಮುಂದಾಗಲಾಗಿದೆ. 3.50 ಕೋಟಿ ರೂ. ಖರ್ಚು ಮಾಡಿ ಪೂರಕ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಆದರೆ ಅನುದಾನ ಸಿಗದೇ ಇರುವುದರಿಂದ ಅರ್ಧಕ್ಕೆ ನಿಲ್ಲಿಸಲಾಗಿದೆ. ಇದರಿಂದ ಈಗಾಗಲೇ ನಿರ್ಮಿಸಲಾದ ಕಟ್ಟಡಗಳು ಸಂಪೂರ್ಣ ಹಾಳಾಗುತ್ತಾ ಸಾಗಿದ್ದು, 3.50 ಕೋಟಿ ರೂ.ಗಳನ್ನು ನೀರಲ್ಲಿ ಹೋಮ ಮಾಡಿದಂತಾಗಿದೆ.
ಕೆಕೆಆರ್ಡಿಬಿಯು 3.50 ಕೋಟಿ ರೂ. ಅನುದಾನ ನೀಡಿದೆ. ಆದರೆ ಈಗ ಅಭಿವೃದ್ಧಿ ಕಾರ್ಯಗಳಿಗೆ ಮಾತ್ರ ಅನುದಾನ ನೀಡಲಾಗುವುದು. ಪಾರ್ಕ್ ಮುಂದುವರಿದ ಪ್ರದೇಶಗಳಲ್ಲಿ ಸ್ಥಾಪನೆ ಆಗುವಂತದ್ದು. ಹೀಗಾಗಿ ಅನುದಾನ ನೀಡುವುದಿಲ್ಲ ಎಂದು ಮಂಡಳಿ ಕಾರ್ಯದರ್ಶಿಗಳು ಹೇಳುತ್ತಿದ್ದಾರೆ.
ಹೀಗಾಗಿ ಕಾಮಗಾರಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ. ಪಾರ್ಕ್ ಅಕ್ಷರಶಃ ದನಗಳು ಮೇಯುವ ಹಾಗೂ ಅನೈತಿಕ ಚಟುವಟಿಕೆಗಳಿಗೆ ನಿರ್ಮಿಸಿದಂತ ಸ್ಥಳವಾಗಿ ಪರಿವರ್ತನೆಯಾಗಿದೆ. ಇಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ಹೈಮಾಸ್ಟ್ ದೀಪಗಳನ್ನು ಹಾಕಲಾಗಿದೆ. ಆದರೆ ಒಂದೂ ಬೆಳಕು ನೀಡುವುದಿಲ್ಲ. ಅದೇ ರೀತಿ ವಾಕಿಂಗ್ ಟ್ರ್ಯಾಕ್ನುದ್ದಕ್ಕೂ ದೀಪ ಅಳವಡಿಸಲಾಗಿದೆ.
ಅವುಗಳಲ್ಲಿಯೂ ಒಂದೂ ಸರಿಯಾಗಿಲ್ಲ. ಒಟ್ಟಾರೆ ನೀಡಲಾಗಿರುವ ಎತ್ತಿ ಹಾಕುವ ಕಾರ್ಯ ನಡೆದಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿ ಕಂಡು ಬರುತ್ತದೆ.
ಎಚ್ಕೆಆರ್ಡಿಬಿಯಿಂದ ಅನುದಾನ: ಈ ಮುಂಚಿನ ಎಚ್ಕೆಆರ್ಡಿಬಿ ಹಾಗೂ ಈಗಿನ ಕೆಕೆಆರ್ಡಿಬಿಯಿಂದ 3.50 ಕೋಟಿ ರೂ. ಅನುದಾನ ಥೀಮ್ ಪಾರ್ಕ್ ನಿರ್ಮಾಣಕ್ಕೆ ನೀಡಲಾಗಿದೆ. ಪಾರ್ಕ್ ಸಲುವಾಗಿ ಸುತ್ತಲೂ ರಕ್ಷಣಾ ಗೋಡೆ ನಿರ್ಮಿಸಲಾಗಿದೆ. ನಾಲ್ಕು ದಿಕ್ಕಿನಲ್ಲೂ ಗೇಟ್ಗಳನ್ನು ಅಳವಡಿಸಲಾಗಿದೆ. ನಡುವೆ ಕಾರಂಜಿ ದೀಪ ಹಾಗೂ ಮೂರು ಕಟ್ಟಡಗಳನ್ನು ಅರ್ಧಕ್ಕೆ ನಿರ್ಮಿಸಿ ಕೈ ಚೆಲ್ಲಲಾಗಿದೆ. ಥೀಮ್ ಸುತ್ತಲೂ ಟ್ರ್ಯಾಕ್ ಸಹ ಕಳಪೆಯಿಂದ ನಿರ್ಮಾಣವಾಗಿದೆ.
ಸುತ್ತಮುತ್ತಲಿನ ನೂರಾರು ಸಾರ್ವಜನಿಕರು ಬೆಳಗ್ಗೆ ಹಾಗೂ ಸಾಯಂಕಾಲ ವಾಕಿಂಗ್ ಮಾಡುತ್ತಿರುತ್ತಾರೆ. ಇಂದಲ್ಲ ನಾಳೆ ಕಾಮಗಾರಿ ಶುರುವಾಗಬಹುದೆಂದು ಸುತ್ತಮುತ್ತಲಿನ ವಾಸಿಗಳು ಬಲವಾಗಿ ನಂಬಿದ್ದರು. ಆದರೆ ಈಗ ಪಾರ್ಕ್ ಆಗುವುದಿಲ್ಲ ಎನ್ನುವುದನ್ನರಿತು ಹೋರಾಟಕ್ಕೆ ಇಳಿಯಲು ಮುಂದಾಗಿದ್ದಾರೆ. ಪಾರ್ಕ್ನ ದುಸ್ಥಿತಿ, ಕಳಪೆ ಕಾಮಗಾರಿ ಹಾಗೂ ಪೂರ್ಣಗೊಳ್ಳುವ ನಿಟ್ಟಿನಲ್ಲಿ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವರಿಕೆ ಮಾಡಲು ಸಂಘ ರಚಿಸಲಾಗಿದೆ. ಪಾರ್ಕ್ ಉಳಿಸಬೇಕೆಂಬ ಕೂಗು ಬಲವಾಗತೊಡಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್