ನೀರಿನ ಸಮಸ್ಯೆಗಿದೆ ಪರಿಹಾರ

ನೀರು ಸಾಕ್ಷರತಾ ಆಂದೋಲನದಿಂದ ಬಿಕ್ಕಟ್ಟು ಪರಿಹಾರ: ರಾಜೇಂದ್ರಸಿಂಗ್‌

Team Udayavani, Dec 9, 2019, 10:55 AM IST

December-2

ಕಲಬುರಗಿ: ವಿಶ್ವ ಎದುರಿಸುತ್ತಿರುವ ನೀರಿನ ಸಮಸ್ಯೆಗೆ ಭಾರತ ಪರಿಹಾರ ಮಾರ್ಗ ಹೊಂದಿದೆಯಲ್ಲದೇ, ನೀರಿಗಾಗಿ ರಾಷ್ಟ್ರಗಳ ಮಧ್ಯೆ ಮುಂಬರುವ ಮೂರನೇ ಮಹಾಯುದ್ಧವನ್ನು ತಪ್ಪಿಸುತ್ತದೆ ಎಂದು ರಾಜಸ್ಥಾನದ ಜಲ ತಜ್ಞ ಮತ್ತು ಪ್ರತಿಷ್ಠಿತ ವಿಶ್ವ ಜಲ ಪ್ರಶಸ್ತಿ ವಿಜೇತ ರಾಜೇಂದ್ರಸಿಂಗ್‌ ಹೇಳಿದರು.

ನಗರದ ಶರಣಬಸವ ಶತಮಾನೋತ್ಸವ ಭವನದಲ್ಲಿ ಶರಣಬಸವ ವಿಶ್ವವಿದ್ಯಾಲಯ, ರಾಷ್ಟ್ರೀಯ ಸೇವಾ ಯೋಜನೆ ಕೋಶ, ಗುಲ್ಬರ್ಗಾ ವಿಶ್ವವಿದ್ಯಾಲಯ, ಜಲ ಸಮಿತಿಗಳ ಒಕ್ಕೂಟ, ಜಲಜಾಗೃತಿ ಅಭಿಯಾನ ವೇದಿಕೆ, ಥ್ರೀಜೆ ಕ್ಲಬ್‌ ಆಳಂದ, ಧಾರವಾಡ ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಜಂಟಿಯಾಗಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಜಲ ಜಾಗೃತಿ ಸಮಾವೇಶದಲ್ಲಿ ಜಲ ಸಂರಕ್ಷಣೆ ಕುರಿತು ಅವರು ವಿಶೇಷ ಉಪನ್ಯಾಸ ನೀಡಿದರು.

ನೀರಿನ ಬಿಕ್ಕಟ್ಟು ಜಾಗತಿಕವಾಗಿದ್ದರೂ, ಪರಿಹಾರ ಮಾತ್ರ ಸ್ಥಳೀಯವಾಗಿದೆ. ನೀರನ್ನು ಗೌರವಿಸುವ ಮತ್ತು ಅನಾದಿ ಕಾಲದಿಂದ ಮರುಬಳಕೆ ಮಾಡುವ ತತ್ವವನ್ನು ಅನುಸರಿಸುವ ಅಂತರ್ಗತ ಸಂಸ್ಕೃತಿ ಹೊಂದಿರುವ ದೇಶ ಭಾರತವಾಗಿದೆ ಎಂದು ಹೇಳಿದರು.

ಇತ್ತೀಚೆಯ ದಿನಗಳಲ್ಲಿ ದೇಶದ ಕೆಲವು ಪ್ರದೇಶಗಳಲ್ಲಿ ಈ ತತ್ವಗಳನ್ನು ಅಭ್ಯಾಸ ಮಾಡುವಲ್ಲಿ ಕೆಲವು ವಿರೂಪಗಳು ಕಂಡು ಬಂದಿವೆ. ಆದರೂ ನೀರಿನ ಸಂರಕ್ಷಣೆ ಮತ್ತು ನೀರಿನ ನಿರ್ವಹಣಾ ಪದ್ದತಿಗಳನ್ನು ನಮ್ಮ ಹಿರಿಯರು ಅಳವಡಿಸಿಕೊಂಡ ರೀತಿಯನ್ನು ದೇಶದ ಜನರು ಇನ್ನೂ ಅನುಸರಿಸುತ್ತಿದ್ದಾರೆ. ಇಂತಹ ತತ್ವಗಳನ್ನು
ವಿಶ್ವಾದ್ಯಂತ ಅಳವಡಿಸಿಕೊಂಡರೆ ನೀರಿನ ನಿರ್ವಹಣೆ ಮತ್ತು ಬಿಕ್ಕಟ್ಟನ್ನು ಸುಲಭವಾಗಿ ತಪ್ಪಿಸಬಹುದಾಗಿದೆ ಎಂದರು.

ರಾಜಸ್ಥಾನದ ಬರ ಪೀಡಿತ ಗ್ರಾಮಗಳ ಮುಖವನ್ನು ಬದಲಾಯಿಸಲು ಮತ್ತು ಅವುಗಳನ್ನು ನೀರಿನ ಸ್ವಾವಲಂಬಿಯನ್ನಾಗಿ ಮಾಡಲು ಮಾಡಿದ ಪ್ರಯತ್ನಗಳಿಗಾಗಿ ಪ್ರತಿಷ್ಠಿತ ಮ್ಯಾಗ್ಸೆಸ್ಸೆ ಪ್ರಶಸ್ತಿ ಪಡೆದಿರುವ ಡಾ| ಸಿಂಗ್‌, ನೀರಿನ ಸಾಕ್ಷರತಾ ಆಂದೋಲನ ಆರಂಭಿಸುವ ಮೂಲಕ ಬಿಕ್ಕಟ್ಟು ನಿವಾರಿಸಬಹುದು ಎಂದು ಹೇಳಿದರು.

ರಾಜಸ್ಥಾನದ ಬರ ಪೀಡಿತ ಹಳ್ಳಿಗಳಲ್ಲಿ ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಸರ್ಕಾರದ ಸಹಾಯವಿಲ್ಲದೇ ಮತ್ತು ಜನರ ಸಹಕಾರ ಪಡೆದು 12 ಬತ್ತಿ ಹೋದ ನದಿಗಳನ್ನು ಪುನರುಜ್ಜೀವಗೊಳಿಸಿದ ಕುರಿತು, ಲಕ್ಷಾಂತರ ಬತ್ತಿದ ಕೊಳವೆಬಾವಿಗಳ ಸುಧಾರಿತ ಅಂತರ್ಜಲ ಮಟ್ಟ ಭರ್ತಿ ಮಾಡಿದ ಕುರಿತು, ಬರ ಪೀಡಿತ ಪ್ರದೇಶಗಳಲ್ಲಿ ತರಕಾರಿ ಬೆಳೆದು ನವದೆಹಲಿ ಮತ್ತು ರಾಜಸ್ಥಾನದ ಜೈಪುರ ಮಾರುಕಟ್ಟೆಯಲ್ಲಿ ಮಾರಾಟವಾಗುವಂತೆ ಮಾಡಿದ ಕುರಿತು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಅಂತರ್ಜಲ ಸಂಪನ್ಮೂಲಗಳ ಪುನರುಜ್ಜೀವನದ ತುರ್ತು ಅವಶ್ಯಕತೆ ಇದೆ. ಈ ಮೂಲಗಳನ್ನು ರಕ್ಷಿಸುವ ಜವಾಬ್ದಾರಿ ಯುವಪೀಳಿಗೆ ಮೇಲಿದೆ ಎಂದು ಹೇಳಿದರು.

ಮಾಜಿ ಶಾಸಕ ಬಿ.ಆರ್‌. ಪಾಟೀಲ ಮಾತನಾಡಿದರು. ಶರಣಬಸವ ವಿಶ್ವವಿದ್ಯಾಲಯ ಕುಲಸಚಿವ ಡಾ| ಅನೀಲಕುಮಾರ ಬಿಡವೆ ಮಾತನಾಡಿ, ನೀರನ್ನು ಉಳಿಸಲು ಮತ್ತು ರಕ್ಷಿಸಲು ವಿದ್ಯಾರ್ಥಿಗಳಿಗೆ ಪ್ರತಿಜ್ಞಾನವಿಧಿ  ಬೋಧಿಸಿದರು.

ಗೌರವಾನ್ವಿತ ಅತಿಥಿಯಾಗಿದ್ದ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ತೆಲಂಗಾಣದ ಜಲಸಂಪನ್ಮೂಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಪ್ರಕಾಶ ರಾವ್‌, ಧಾರವಾಡ ಜಲ ಮತ್ತು ನೆಲ ನಿರ್ವಹಣಾ ಸಂಸ್ಥೆ ನಿರ್ದೇಶಕ ರಾಜೇಂದ್ರ ಪೋದ್ದಾರ ಇದ್ದರು.

ವಿವಿ ಮೌಲ್ಯಮಾಪನ ಕುಲಸಚಿವ ಲಿಂಗರಾಜ ಶಾಸ್ತ್ರೀ ನಿರೂಪಿಸಿದರು, ಕೆ. ನೀಲಾ ಸ್ವಾಗತಿಸಿದರು, ಡಾ| ಸಂಪತರಾವ್‌ ವಂದಿಸಿದರು.

ಸಮಾಜದ ಎಲ್ಲ ವರ್ಗದವರು ವಿಶೇಷವಾಗಿ ಯುವ ಪೀಳಿಗೆಗಳು ಮತ್ತು ವಿದ್ಯಾರ್ಥಿಗಳ ಸಹಯೋಗದ ಪ್ರಯತ್ನದಿಂದ ಜಲ-ಜಂಗಲ್‌-ಜಮೀನ್‌ ಸಂರಕ್ಷಣೆ ಚಳವಳಿ ಮತ್ತು ತತ್ವಗಳ ಆಧಾರದ ಮೇಲೆ ಪರಿಣಾಮಕಾರಿಯಾದ ನೀರಿನ ಸಾಕ್ಷರತಾ ಆಂದೋಲನವನ್ನು ಜನಸಮುದಾಯದಿಂದ ನಡೆಸಬಹುದಾಗಿದೆ.
ರಾಜೇಂದ್ರಸಿಂಗ್‌,
ಜಲತಜ್ಞ, ರಾಜಸ್ಥಾನ

ಟಾಪ್ ನ್ಯೂಸ್

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.