ಕಲಬುರಗಿ ಜನರ ವಿಮಾನಯಾನ ಕನಸು ವಾರದಲ್ಲಿ ಸಾಕಾರ


Team Udayavani, Nov 14, 2019, 10:58 AM IST

14-November-1

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರುತ್ತಿದೆ. ವಿಮಾನಯಾನದ ಕನಸು ಇನ್ನೊಂದು ವಾರದೊಳಗೆ ಸಾಕಾರಗೊಳ್ಳುತ್ತಿದೆ. ಕೊಲ್ಲಾಪುರದ ಪ್ರಖ್ಯಾತ ಸಂಜಯ್‌ ಘೋಡಾವತ್‌ ಸಮೂಹ ಸಂಸ್ಥೆಯ “ಸ್ಟಾರ್‌ ಏರ್‌’ ಇದೇ ನ.22ರಿಂದ ಕಲಬುರಗಿಯನ್ನು ರಾಜಧಾನಿ ಬೆಂಗಳೂರು ಜತೆ ಬೆಸೆಯಲಿದೆ.

“ಉಡಾನ್‌’ ಯೋಜನೆಯಡಿ ಈಶಾನ್ಯ ಕರ್ನಾಟಕದೊಂದಿಗೆ ದೇಶವನ್ನು ಸಂಪರ್ಕಿಸುವ ಕಾರ್ಯಕ್ಕೆ “ಸ್ಟಾರ್‌ ಏರ್‌’ ಮುಂದಾಗಿದೆ. ಈ ನಿಟ್ಟಿನಲ್ಲಿ ಮೊದಲ ಹಂತದಲ್ಲಿ ರಾಜ್ಯದ ರಾಜಧಾನಿಗೆ ವಿಮಾನ ಹಾರಾಟ ಆರಂಭಿಸುತ್ತಿದ್ದು, ಕಲಬುರಗಿಯಿಂದ ಸೇವೆ ಆರಂಭಿಸಿದ ಮೊದಲ ಏರ್‌ ಲೈನ್‌ ಎಂಬ ಶ್ರೇಯಕ್ಕೆ ಪಾತ್ರವಾಗಿದೆ.

ಸಾಮಾಜಿಕ, ರಾಜಕೀಯ, ಉದ್ಯಮ ಕ್ಷೇತ್ರಗಳ ದಿಗ್ಗಜರು ನೂತನ ವಿಮಾನಯಾನ ಸೇವೆ ಆರಂಭಕ್ಕೆ ಸಾಕ್ಷಿಯಾಗುವರು. “ಸಂಪರ್ಕ ಇಲ್ಲದೆಡೆ ಸಂಪರ್ಕ ಕಲ್ಪಿಸುವ ಹಾಗೂ ವಿಶ್ವದರ್ಜೆಯ ಸೇವೆ ಒದಗಿಸುವ ಬಯಕೆಯಿಂದ ನಾವು ವಾಯುಯಾನ ಸೇವೆ ಒದಗಿಸುತ್ತಿದ್ದೇವೆ. “ಸ್ಟಾರ್‌ ಏರ್‌’ ಸೇವೆಯನ್ನು ವಿಸ್ತರಿಸುತ್ತಿದ್ದು, ಹೊಸ ಹೊಸ ತಾಣಗಳಿಗೆ ಸೇವೆ ನೀಡುತ್ತ ಸರಿಯಾದ ಪಥದಲ್ಲಿ ಸಾಗುತ್ತಿದ್ದೇವೆ. ಪ್ರಯಾಣಿಕರ ಸುರಕ್ಷತೆ, ಸುಖಪ್ರಯಾಣಕ್ಕೆ ಪ್ರಾಶಸ್ತ್ಯ ನೀಡುವುದರಿಂದ ಗ್ರಾಹಕರು “ಸ್ಟಾರ್‌ ಏರ್‌’ ವಿಮಾನಗಳಲ್ಲಿಯೇ ಪ್ರಯಾಣ ಮಾಡಲು ಇಷ್ಟಪಡುತ್ತಾರೆ’ ಎಂದು “ಸಂಜಯ ಘೋಡಾವತ್‌’ ಗ್ರೂಪ್‌ ಚೇರ¾ನ್‌ ಸಂಜಯ ಘೋಡಾವತ್‌ ಅಭಿಪ್ರಾಯಪಡುತ್ತಾರೆ. “ಸ್ಟಾರ್‌ ಏರ್‌’ ಕಲಬುರಗಿ ಹಾಗೂ ಬೆಂಗಳೂರು ಮಧ್ಯೆ ವಿಮಾನಯಾನ ಸೇವೆ ಒದಗಿಸಲು ಉತ್ಸುಕವಾಗಿದೆ.

ಈ ಸೇವೆಯಿಂದ ವಿಜಯಪುರ, ರಾಯಚೂರು, ಬೀದರ್‌ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಬೆಂಗಳೂರಿಗೆ ತ್ವರಿತವಾಗಿ ಹಾಗೂ ಅಡತಡೆಯಿಲ್ಲದೇ ಪ್ರಯಾಣಿಸಲು ಅನುಕೂಲವಾಗಲಿದೆ ಎಂದು “ಸ್ಟಾರ್‌ ಏರ್‌’ ಸಿಇಒ ಸಿಮ್ರನ್‌ ಸಿಂಗ್‌ ತಿವಾನ ಹೇಳುತ್ತಾರೆ.

“ಸ್ಟಾರ್‌ ಏರ್‌’ ವಾಣಿಜ್ಯ ವಾಯುಯಾನಕ್ಕಾಗಿ “ಎಂಬ್ರಾರ್‌’ ಸಂಸ್ಥೆ ತಯಾರಿಸಿದ “ರೋಲ್ಸ್‌ ರಾಯ್ಸ’ ಎರಡು ಜೆಟ್‌ ಎಂಜಿನ್‌ ಹೊಂದಿರುವ 50 ಸೀಟುಗಳ ಸುಧಾರಿತ ಏರ್‌ ಕ್ರಾಫ್ಟ್‌ಗಳನ್ನು ಬಳಕೆ ಮಾಡುತ್ತದೆ. “ಸ್ಟಾರ್‌ ಏರ್‌’ ಉಡಾನ್‌ ಯೋಜನೆಯಡಿ ಕಾರ್ಯನಿರ್ವಹಿಸುತ್ತಿದ್ದು, ವಿಮಾನಗಳ ಶೇ.50ರಷ್ಟು ಸೀಟ್‌ಗಳು ಅಗ್ಗದ ದರದಲ್ಲಿ ಲಭ್ಯವಾಗಲಿವೆ.

ಇದರಿಂದ ಜನಸಾಮಾನ್ಯರು ಕಡಿಮೆ ಖರ್ಚಿನಲ್ಲಿ ವಿಮಾನದಲ್ಲಿ ಪ್ರಯಾಣ ಮಾಡಬಹುದಾಗಿದೆ. ಬೆಂಗಳೂರು-ಕಲಬುರಗಿ ಮಧ್ಯೆ ಪ್ರತಿ ಟಿಕೆಟ್‌ಗೆ ಆರಂಭಿಕ ದರವಾಗಿ ರೂ. 2850 ನಿಗದಿಪಡಿಸಲಾಗಿದೆ. ಪ್ರಸ್ತುತ ಸ್ಟಾರ್‌ ಏರ್‌ ದೇಶದ ಮುಂಬೈ, ಬೆಂಗಳೂರು, ಅಹ್ಮದಾಬಾದ್‌, ತಿರುಪತಿ, ಹುಬ್ಬಳ್ಳಿ, ದೆಹಲಿ (ಹಿಂಡನ್‌) ಹಾಗೂ ಬೆಳಗಾವಿ ನಗರಗಳಿಗೆ ಸೇವೆ ಒದಗಿಸುತ್ತಿದೆ.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.