ಲಿಂಗಾಯತ ಮಾನ್ಯತೆ ಹೋರಾಟಕ್ಕೆ ಬದ್ಧ

ಕನ್ನಡ ನೆಲದಲ್ಲಿ ತಳಮಟ್ಟದಿಂದ ಕಟ್ಟಿದ ಧರ್ಮ•ಆರ್‌ಎಸ್‌ಎಸ್‌-ಪೇಜಾವರ ಶ್ರೀಗೆ ಸಂಬಂಧವಿಲ್ಲ

Team Udayavani, May 9, 2019, 12:08 PM IST

9-May-14

ಕಲಬುರಗಿ: ಬಸವ ಸಾಂಸ್ಕೃತಿಕ ವೇದಿಕೆ ಸ್ಥಳದಲ್ಲಿ ಹಮ್ಮಿಕೊಳ್ಳಲಾಗಿರುವ ಬಸವ ಜಯಂತ್ಯುತ್ಸವಕ್ಕೆ ಸಮಿತಿ ಗೌರವಾಧ್ಯಕ್ಷ ತಿಪ್ಪಣ್ಣಪ್ಪ ಕಮಕನೂರ ಚಾಲನೆ ನೀಡಿದರು. ಕೂಡಲ ಸಂಗಮ ಬಸವ ಧರ್ಮ ಪೀಠಾಧ್ಯಕ್ಷೆ ಗಂಗಾ ಮಾತಾಜಿ, ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಇದ್ದರು.

ಕಲಬುರಗಿ: ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕವಾಗಿ ಸ್ವತಂತ್ರ ಧರ್ಮದ ಮಾನ್ಯತೆ ಹೋರಾಟಕ್ಕೆ ಕೂಡಲ ಸಂಗಮ ಧರ್ಮ ಪೀಠ ಹಾಗೂ ಲಿಂಗಾಯತ ಸ್ವಾಭಿಮಾನಿಗಳೆಲ್ಲರೂ ಬದ್ಧರಾಗಿದ್ದಾರೆ ಎಂದು ಕೂಡಲ ಸಂಗಮ ಧರ್ಮ ಪೀಠಾಧ್ಯಕ್ಷೆ ಜಗದ್ಗುರು ಗಂಗಾ ಮಾತಾಜಿ ಹೇಳಿದರು.

ಜಾಗತಿಕ ಲಿಂಗಾಯತ ಮಹಾಸಭಾ, ಬಸವಪರ ಸಂಘಟನೆಗಳು, ಕಾಯಕ ಶರಣರ ಸಮಾಜಗಳ ಸಂಘಟನೆಗಳ ಆಶ್ರಯದಲ್ಲಿ ನಗರದ ಜಗತ್‌ ವೃತ್ತದ ಬಸವ ಸಾಂಸ್ಕೃತಿಕ ವೇದಿಕೆ ಸ್ಥಳದಲ್ಲಿ ಹಮ್ಮಿಕೊಳ್ಳಲಾಗಿದ್ದ ಆರು ದಿನಗಳ 886ನೇ ಬಸವ ಜಯಂತ್ಯುತ್ಸವಕ್ಕೆ ಚಾಲನೆ ನೀಡಿ, ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಲಿಂಗಾಯತ ಧರ್ಮ ಯಾರದ್ದೂ ಸ್ವತ್ತಲ್ಲ. ಹೀಗಾಗಿ ಯಾರು ಯಾರನ್ನು ಅವಲಂಬಿ ಸುವಂತಿಲ್ಲ. ಈಗಾಗಲೇ ಲಿಂಗಾಯತ ಧರ್ಮದ ವಿಷಯ ಕುರಿತು ರಾಷ್ಟ್ರದ ಗಮನ ಸೆಳೆಯಲಾಗಿದೆ. ಮುಂದೆಯೂ ಹೋರಾಟ ಮುಂದುವರಿಯಲಿದೆ ಎಂದು ಪುನರ್‌ ಪ್ರಕಟಿಸಿದರು.

ಮೂಗು ತೂರಿಸಬೇಡಿ: ವಿಶ್ವಗುರು ಬಸವಣ್ಣವರು ಸ್ಥಾಪಿಸಿದ ಲಿಂಗಾಯತ ಧರ್ಮವೇ ಬಸವ ಧರ್ಮವಾಗಿದೆ. ಇದು ಸ್ವತಂತ್ರ. ಹೀಗಾಗಿ ಯಾರ ಸೊತ್ತು ಅಲ್ಲ. ಕನ್ನಡ ನೆಲದಲ್ಲಿ ತಳಮಟ್ಟದಿಂದ ಕಟ್ಟಿದ ವಿಶ್ವದ ಮೊದಲ ಧರ್ಮವಾಗಿರುವುದರಿಂದ ಇದಕ್ಕೆ ಯಾರ ಒಪ್ಪಿಗೆ, ಅಪ್ಪಣೆಯೂ ಬೇಕಿಲ್ಲ. ಧರ್ಮದ ಬಗ್ಗೆ ಗೊತ್ತಿಲ್ಲದವರು ಮೂಗು ತೂರಿಸುವ ಕೆಲಸ ಮಾಡಬೇಡಿ ಎಂದು ಚಿಂತಕ ಹಾಗೂ ಸಾಹಿತಿ ಗಂಗಾವತಿಯ ಸಿ.ಎಸ್‌. ನಾರನಾಳ ಹೇಳಿದರು.

ವಿಶೇಷ ಉಪನ್ಯಾಸಕರಾಗಿ ಮಾತನಾಡಿ, ಲಿಂಗಾಯತರಿಗೆ ಮಾತ್ರ ಅವರ ಧರ್ಮದ ಬಗ್ಗೆ ಗೊತ್ತಿದೆ. ಆದರೆ, ಗೊತ್ತಿಲ್ಲದವರು ಮೂಗು ತೂರಿಸಲು ಬರಬೇಡಿ. ಮೊದಲು ನಿಮ್ಮದನ್ನು ನೀವು ನೋಡಿಕೊಳ್ಳಿರಿ. ಪೇಜಾವರ ಶ್ರೀಗಳು ಮತ್ತು ಆರ್‌ಎಸ್‌ಎನ್‌ ಮೋಹನ ಭಾಗವತ್‌ ಅವರು ಲಿಂಗಾಯತ ಧರ್ಮಕ್ಕೆ ಒಪ್ಪಿಗೆ ಕೊಡಲ್ಲ ಎಂದು ಹೇಳಲು ಅವರ್ಯಾರು ಎಂದು ಪ್ರಶ್ನಿಸಿದರು.

ಬಸವ ಜಯಂತಿ ಉತ್ಸವ ಸಮಿತಿ ಗೌರವಾಧ್ಯಕ್ಷ, ಕೋಲಿ ಸಮಾಜದ ಹಿರಿಯ ನಾಯಕ ತಿಪ್ಪಣ್ಣಪ್ಪ ಕಮಕನೂರ ಕಾರ್ಯಕ್ರಮ ಉದ್ಘಾಟಿಸಿ, ಈ ಸಲ ನಮ್ಮವರು ಪ್ರಧಾನಿಯಾದರೆ ಮೊದಲು ಲಿಂಗಾಯತ ಸ್ವತಂತ್ರ ಧರ್ಮವಾಗಿ, ಅದಕ್ಕೆ ಸಂವಿಧಾನಿಕ ಮಾನ್ಯತೆ ಕೊಡಿಸುವ ಕೆಲಸ ಮಾಡುತ್ತೇನೆ. ಮೇಲ್ಮನೆಗೆ ಹೋದರೆ ಮೊದಲು ಪ್ರಸ್ತಾಪಿಸಿ ಲಿಂಗಾಯತ ಧರ್ಮದ ಶಿಫಾರಸ್ಸು ಮಾಡಲು ಸರ್ಕಾರದ ಮೇಲೆ ಒತ್ತಡ ಹೇರುತ್ತೇನೆ ಎಂದು ಹೇಳಿದರು.

ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಮತ್ತು ಅಕ್ಕಮಹಾದೇವಿ ಆಶ್ರಮದ ಪ್ರಭುಶ್ರೀ ತಾಯಿ, ಬಸವ ಜಯಂತ್ಯುತ್ಸವ ಉತ್ಸವ ಸಮಿತಿ ಕಾರ್ಯಾಧ್ಯಕ್ಷ ಬಿ.ಬಿ. ರಾಂಪುರೆ, ಬಸವ ಸಮಿತಿ ಅಧ್ಯಕ್ಷೆ ಡಾ| ವಿಲಾಸವತಿ ಖೂಬಾ, ಲಿಂಗಾಯತ ಮಹಾಸಭಾ ಅಧ್ಕಕ್ಷ ಪ್ರಭುಲಿಂಗ ಮಹಾಗಾಂವಕರ್‌, ಉತ್ಸವ ಸಮಿತಿ ಪದಾಧಿಕಾರಿಗಳಾದ ಬಸವರಾಜ ಮೊರಬದ, ಶಿವಶರಣಪ್ಪ ಕಲಬುರ್ಗಿ, ಪ್ರಮುಖರಾದ ಸೋಮಣ್ಣ ನಡಕಟ್ಟಿ, ಮಲ್ಲಣ್ಣ ನಾಗರಾಳ, ಅಯ್ಯನಗೌಡ ಪಾಟೀಲ, ಮಹಾಂತೇಶ ಕಲಬುರ್ಗಿ, ರಾಜಶೇಖರ ಯಂಕಂಚಿ, ಅಶೋಕ ಘೂಳಿ, ಸಿದ್ಧರಾಮ ಯಳವಂತಗಿ,ಉದಯಕುಮಾರ ಸಾಲಿ, ಶಿವಶರಣ ಕೋಳಾರ, ಬಸವರಾಜ ಧೂಳಾಗುಂಡಿ, ಸತೀಶ ಸಜ್ಜನ, ಬಸವರಾಜ ಬಿರಾದಾರ ಹಾಗೂ ಮುಂತಾದವರಿದ್ದರು.

ಸಮಿತಿ ಕಾರ್ಯದರ್ಶಿ ರವೀಂದ್ರ ಶಾಬಾದಿ ಸ್ವಾಗತಿಸಿದರು. ಸಂಚಾಲಕರಾದ ಆರ್‌.ಜಿ.ಶಟಗಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜಯಕುಮಾರ ಪಾಟೀಲ್ ತೇಗಲತಿಪ್ಪಿ ನಿರೂಪಿಸಿದರು. ಗಿರಿಜಾದೇವಿ ನೃತ್ಯ ಕಲಾ ಕೇಂದ್ರ ಮಕ್ಕಳಿಂದ ವಚನ ನೃತ್ಯ ನಡೆಯಿತು. ಎಂ.ವೈ, ಸುರಪುರ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.

ಮಂಗಾಣೆ, ಮಾನ್ಪಡೆಗೆ ಕಾಯಕ ಪ್ರಶಸ್ತಿ
ಕಾರ್ಯಕ್ರಮದ ವೇದಿಕೆ ಮೇಲೆ ಹಿರಿಯ ನ್ಯಾಯವಾದಿ ಬಾಬುರಾವ ಮಂಗಾಣೆ, ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷ, ಹೋರಾಟಗಾರ ಮಾರುತಿ ಮಾನ್ಪಡೆ, ಹೊಟೇಲ್ ಉದ್ಯಮಿ ಶಂಕರ ಪಾಟೀಲ ಬಿಲಗುಂದಿ ಮತ್ತು ಗ್ರಂಥಾಪಾಲಕ ಡಾ| ಮಲ್ಲಿಕಾರ್ಜುನ ವಡ್ಡನಕೇರಾ ಅವರಿಗೆ ಕಾಯಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅದೇ ರೀತಿ ನ್ಯಾಯವಾದಿಗಳ ಸಂಘದ ನೂತನ ಅಧ್ಯಕ್ಷ ಅರುಣಕುಮಾರ ಕಿಣ್ಣಿ, ಕಾರ್ಯದರ್ಶಿ ಶರಣಬಸಪ್ಪ ಪಸ್ತಾಪುರ, ರಾಜಶೇಖರ ಡೊಂಗರಗಾಂವ, ಸಂತೋಷ ಕಟ್ಟಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.