ನಾಳೆಯಿಂದ 886ನೇ ಬಸವ ಜಯಂತ್ಯುತ್ಸವ

ಉಪನ್ಯಾಸ ಮಾಲಿಕೆ-ಕಾಯಕ ಭೂಷಣ ಪ್ರಶಸ್ತಿ ಪ್ರದಾನ •ವಿಶ್ವಗುರು ಬಸವಣ್ಣ-ಶರಣರ ಭಾವಚಿತ್ರ ಮೆರವಣಿಗೆ

Team Udayavani, May 4, 2019, 1:34 PM IST

4-MAY-19

ಕಲಬುರಗಿ: 886ನೇ ಬಸವ ಜಯಂತ್ಯುತ್ಸವ ಕುರಿತಾಗಿ ಅರುಣಕುಮಾರ ಪಾಟೀಲ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಲಬುರಗಿ: ಜಗಜ್ಯೋತಿ ಬಸವಣ್ಣವರ 886ನೇ ಜಯಂತ್ಯುತ್ಸವ ಮೇ 5ರಿಂದ ಮೂರು ದಿನಗಳ ಕಾಲ ಜಗತ್‌ ವೃತ್ತದ ಬಸವೇಶ್ವರ ಮೂರ್ತಿ ಆವರಣದಲ್ಲಿ ನಡೆಯಲಿದೆ.

ಲಿಂ| ಡಾ| ಶಿವಕುಮಾರ ಮಹಾಸ್ವಾಮೀಜಿಗಳ ಸಿದ್ಧಗಂಗಾ ಮಠ ವೇದಿಕೆ, ಚಿತ್ತರಗಿ ಇಲಕಲ್ ಮಹಾಂತಸ್ವಾಮಿಗಳ ಹಾಗೂ ಗದಗ ತೊಂಟದಾರ್ಯ ಮಠದ ಸಿದ್ಧಲಿಂಗ ಮಹಾಸ್ವಾಮಿಗಳ ಮಹಾದ್ವಾರದಡಿ ಬಸವ ಜಯಂತಿ ಉತ್ಸವ ಸಮಿತಿ ಹಾಗೂ ಜಿಲ್ಲಾಡಳಿತ ಆಶ್ರಯದಲ್ಲಿ ಬಸವ ಜಯಂತಿ ಉತ್ಸವ ಆಯೋಜಿಸಲಾಗಿದೆ ಎಂದು ಉತ್ಸವ ಸಮಿತಿ ಗೌರವಾಧ್ಯಕ್ಷ, ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಅರುಣಕುಮಾರ ಪಾಟೀಲ ಕೊಡಲಹಂಗರಗಾ, ಬಸವ ಉತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ ಅಪ್ಪಣ್ಣ ಗುಡ್ಡಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮೂರು ದಿನಗಳ ಕಾಲ ವಿಶೇಷ ಉಪನ್ಯಾಸ, ಕಾಯಕ ಭೂಷಣ ಪ್ರಶಸ್ತಿ ಪ್ರದಾನ, ವಚನ ಸಂಗೀತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರ ಜರುಗಲಿದೆ. ವಿಶ್ವಗುರು ಬಸವಣ್ಣನವರ ಮತ್ತು ಶರಣರ ಭಾವಚಿತ್ರಗಳ ಭವ್ಯ ಮೆರವಣಿಗೆ ಜರುಗಲಿದೆ ಎಂದರು.

ಮೇ 5ರಂದು ಸಂಜೆ 6ಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಅಖೀಲ ಭಾರತ ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಜಯಂತ್ಯುತ್ಸವ ಉದ್ಘಾಟಿಸುವರು. ಸಚಿವ ಪ್ರಿಯಾಂಕ್‌ ಖರ್ಗೆ, ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಬಿ.ಜಿ. ಪಾಟೀಲ ಮುಖ್ಯ ಅತಿಥಿಗಳಾಗಿ, ಉಪನ್ಯಾಸಕರಾಗಿ ಸೊಲ್ಲಾಪುರದ ಕನ್ನಡ ಪ್ರಾಧ್ಯಾಪಕ ಪ್ರೊ| ಬಾಬುರಾವ ಪೂಜಾರ ಆಗಮಿಸುವರು.

ಸೊನ್ನದ ಡಾ| ಶಿವಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಗಣ್ಯರು ಅತಿಥಿಗಳಾಗಿ ಆಗಮಿಸುವರು. ಗೌರವ ಡಾಕ್ಟರೇಟ್‌ಗೆ ಪುರಸ್ಕೃತರಾದ ಡಾ| ಅರುಣಕುಮಾರ ಎಸ್‌. ಪಾಟೀಲ, ಮಾಜಿ ಮಹಾಪೌರ ಡಾ| ಶರಣಕುಮಾರ ಮೋದಿ ಅವರಿಗೆ ವಿಶೇಷ ಸನ್ಮಾನ ನೆರವೇರಲಿದೆ. ವೈದ್ಯರಾದ ಡಾ| ಮುರುಗೇಶ ಪಸ್ತಾಪುರ, ಡಾ| ಶಿವಶರಣ ಝಳಕಿ, ಪ್ರಕಾಶ ದೇಗಲಮಡಿ, ಲಕ್ಷ್ಮೀಕಾಂತ ಜೋಳದ, ಮಾಲಾ ಎಸ್‌.ಐ. ಅವರಿಗೆ ಕಾಯಕ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗುವದು ಎಂದರು.

ಮೇ 6ರಂದು ಪ್ರಾಧ್ಯಾಪಕ ಪ್ರೊ| ಟಿ. ಗುರುಬಸಪ್ಪಾ ಉಪನ್ಯಾಸ ನೀಡುವರು. ಸುರೇಶ ಪಾಟೀಲ ಜೋಗೂರ, ಅಪ್ಪಾರಾವ ಅಕ್ಕೋಣೆ ಅವರಿಗೆ ವಿಶೇಷ ಸನ್ಮಾನ, ಡಾ| ರಾಜಶೇಖರ ಪಾಟೀಲ, ಡಾ| ಮಂಜುನಾಥ ದೋಶೆಟ್ಟಿ, ಡಾ| ಸಂತೋಷ ಪಾಟೀಲ ಹೆಬ್ಟಾಳ, ಮಹೇಶ ಆರ್‌., ಡಾ| ಶಿವಶರಣ ಝಳಕಿ ಅವರಿಗೆ ಕಾಯಕ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಮೇ 7ರಂದು ಸಂಜೆ 6ಕ್ಕೆ ಅಕ್ಕಲಕೋಟೆಯ ಡಾ| ಗುರುಲಿಂಗಪ್ಪ ದಬಾಲೆ ವಿಶೇಷ ಉಪನ್ಯಾಸ ನೀಡುವರು. ಬೆಳಗ್ಗೆ 10ಕ್ಕೆ ರಕ್ತದಾನ ಶಿಬಿರವನ್ನು ಡಾ| ಶರಣಬಸಪ್ಪಾ ಬಿ. ಶಿವಶೆಟ್ಟಿ ಉದ್ಘಾಟಿಸುವರು. ಅದೇ ದಿನ ಸಂಜೆ 4ಕ್ಕೆ ನಗರೇಶ್ವರ ಶಾಲೆಯಿಂದ ಬಸವೇಶ್ವರ ಪ್ರತಿಮೆ ವರೆಗೆ ವಿಶ್ವಗುರು ಬಸವಣ್ಣನವರ ಮತ್ತು ಶರಣರ ಭಾವಚಿತ್ರಗಳ ಭವ್ಯ ಮೆರವಣಿಗೆ ಜರುಗಲಿದೆ. ಎಲ್ಲ ಕಾರ್ಯಕ್ರಮಗಳಿಗೆ ಹರ, ಗುರು, ಚರಮೂರ್ತಿಗಳು, ಜನಪ್ರತಿನಿಧಿಗಳು, ವಿವಿಧ ಕ್ಷೇತ್ರಗಳಲ್ಲಿನ ಗಣ್ಯರು ಆಗಮಿಸುವರು ಎಂದು ವಿವರಿಸಿದರು.

ಬಸವ ಜಯಂತಿ ಉತ್ಸವ ಸಮಿತಿ ಕಾರ್ಯಾಧ್ಯಕ್ಷ ಕಲ್ಯಾಣರಾವ ಮೂಲಗೆ ಕುಮಸಿ, ಪ್ರಧಾನ ಕಾರ್ಯದರ್ಶಿ ಸಿದ್ಧರಾಜ ಬಿರಾದಾರ ಮಹಾಗಾಂವ, ಮಾಜಿ ಮಹಾಪೌರ ಡಾ| ಶರಣಕುಮಾರ ಮೋದಿ, ಉಪಾಧ್ಯಕ್ಷ ಕಲ್ಯಾಣಪ್ಪ ಪಾಟೀಲ ಮಳಖೇಡ, ಶರಣು ಪಪ್ಪಾ, ಡಾ| ಶ್ರೀಶೈಲ ಘೂಳಿ ಹಾಗೂ ಮುಂತಾದವರು ಇದ್ದರು.

ಪ್ರತ್ಯೇಕ ಬಸವ ಜಯಂತ್ಯುತ್ಸವ
ಇಬ್ಬರೂ ಒಗ್ಗೂಡಿ ಬಸವೇಶ್ವರ ಜಯಂತ್ಯುತ್ಸವ ಆಚರಿಸೋಣ ಎಂಬುದಾಗಿ ಜಾಗತಿಕ ಲಿಂಗಾಯತ ಮಹಾಸಭಾದವರನ್ನು ಪೂರ್ವಬಾವಿ ಸಭೆಗೆ ಆಹ್ವಾನಿಸಲಾಗಿತ್ತು. ಆದರೆ ಸಭೆಗೆ ಬರಲಿಲ್ಲ. ಆದರೆ ಮೇ 8ರಿಂದ ಜಾಗತಿಕ ಮಹಾಸಭಾ ಹಾಗೂ ಬಸವ ಕಾಯಕ ಸಂಘಟನೆಗಳ ಆಶ್ರಯದಲ್ಲಿ ಏ. 8ರಿಂದ ಐದು ದಿನಗಳ ಕಾಲ ಬಸವೇಶ್ವರ ಮೂರ್ತಿ ಆವರಣದಲ್ಲಿ ಪ್ರತ್ಯೇಕವಾಗಿ ಬಸವ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಬಸವ ಜಯಂತಿ ಉತ್ಸವ ಸಮಿತಿ ಪದಾಧಿಕಾರಿಗಳು ತಿಳಿಸಿದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.