ಬಸವಕಲ್ಯಾಣದಲ್ಲಿ 11ರಿಂದ ಕಲ್ಯಾಣ ಪರ್ವ ಉತ್ಸವ 


Team Udayavani, Oct 10, 2019, 6:09 PM IST

Udayavani Kannada Newspaper

ಕಲಬುರಗಿ: ವಿಶ್ವಗುರು ಬಸವಣ್ಣನ ಕಾರ್ಯಕ್ಷೇತ್ರ ಬೀದರ ಜಿಲ್ಲೆಯ ಬಸವಕಲ್ಯಾಣ ಬಸವಧರ್ಮ ಪೀಠದ ಬಸವ ಮಹಾಮನೆ
ಆವರಣದಲ್ಲಿ ಅ. 11, 12 ಮತ್ತು 13ರಂದು 18ನೇ ಕಲ್ಯಾಣ ಪರ್ವ ಉತ್ಸವ ನಡೆಯಲಿದೆ ಎಂದು ಕಲ್ಯಾಣ ಪರ್ವ ಉತ್ಸವ ಸಮಿತಿ ಪ್ರಧಾನ ಸಂಘಟಕ ಬಸವ ಪ್ರಭು ಸ್ವಾಮೀಜಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಕಲ್ಯಾಣವು 12ನೇ ಶತಮಾನದಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿ, ಧಾರ್ಮಿಕತೆಗೆ ಹೆಚ್ಚು ಮಹತ್ವ ಪಡೆದುಕೊಂಡಿತ್ತು. ವಿಶ್ವಕ್ಕೆ ವಚನ ಸಾಹಿತ್ಯದ ಸಂದೇಶ ಸಾರಲು ಹಾಗೂ ಲಿಂಗಾಯತ ಧರ್ಮಕ್ಕೆ ಮಾನ್ಯತೆ ಪಡೆದುಕೊಳ್ಳಲು ಕಳೆದ 18 ವರ್ಷಗಳಿಂದ ಪ್ರತಿ ವರ್ಷವೂ ಕಲ್ಯಾಣ ಪರ್ವವನ್ನು ಆಯೋಜಿಸಲಾಗುತ್ತಿದೆ ಎಂದರು.

ಮೂರು ದಿನಗಳ ಕಾಲ ಮಾತೆ ಗಂಗಾದೇವಿ, ಬಸವಧರ್ಮ ಪೀಠದ ಜಗದ್ಗುರು ಜಂಗಮ ಮೂರ್ತಿಗಳ ದಿವ್ಯ ಸಾನ್ನಿಧ್ಯದಲ್ಲಿ ಸಾಮೂಹಿಕ ಪ್ರಾರ್ಥನೆ, ಶರಣ ವಂದನೆ, ಧರ್ಮ ಚಿಂತನ ಗೋಷ್ಠಿ, ಶರಣೆಯರ ಸಂಗಮ, ರಾಷ್ಟ್ರೀಯ ಬಸವದಳದ ಸಮಾವೇಶ, ಲಿಂಗಾತಯ ಧರ್ಮ ಮಾನ್ಯತೆ ಕುರಿತ ಮುಂದಿನ ರೂಪುರೇಷೆ, ಬಸವಧರ್ಮದ ವಿಜಯೋತ್ಸವ ಮೆರವಣಿಗೆ, ಅಲ್ಲಮಪ್ರಭು ಶೂನ್ಯ ಪೀಠಾರೋಹಣದ 17ನೇ ವಾರ್ಷಿಕೋತ್ಸವ ನಡೆಯಲಿದೆ ಎಂದರು.
ಅ.11ರಂದು ಸಚಿವ ಪ್ರಭು ಚವ್ಹಾಣ 18ನೇ ಕಲ್ಯಾಣ ಪರ್ವದ ಉದ್ಘಾಟನೆ ನೆರವೇರಿಸುವರು.

ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್‌ ಅಧ್ಯಕ್ಷತೆ ವಹಿಸುವರು. ಮಾತಾಜಿ ರಚಿಸಿದ ‘ದೇವರ ಮಕ್ಕಳು’, “ಶರಣ ವಂದನೆ’ ಪುಸ್ತಕಗಳನ್ನು ಕಲಬುರಗಿ ಸಂಸದ ಡಾ| ಉಮೇಶ ಜಾಧವ ಬಿಡುಗಡೆ ಮಾಡುವರು. ಹಿರಿಯ ಸಾಹಿತಿ ರಂಜಾನ ದರ್ಗಾ ಅವರಿಂದ ವಿಶೇಷ ಅನುಭಾವ ನಡೆಯಲಿದೆ ಎಂದು ತಿಳಿಸಿದರು. ಮಾತೆ ಗಂಗಾದೇವಿ, ಮುಂಡರಗಿಯ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ, ಸಿದ್ದರಾಮೇಶ್ವರ ಸ್ವಾಮೀಜಿ, ಚನ್ನಬಸವಾನಂದ ಸ್ವಾಮೀಜಿ, ಬಸವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದು ಹೇಳಿದರು. ಅ.12ರಂದು ಬೆಳಗ್ಗೆ ಶರಣ ವಂದನೆ-ಶರಣರಿಗೆ ಶರಣು ಶರಣಾರ್ಥಿ ಮತ್ತು ಸಿದ್ದರಾಮೇಶ್ವರ ಸ್ವಾಮೀಜಿ ಅವರಿಂದ ಶೂನ್ಯ ಪೀಠಾರೋಹಣ ವಿಶೇಷ ಕಾರ್ಯಕ್ರಮ ನಡೆಯಲಿದೆ. 11 ಗಂಟೆಗೆ ಧರ್ಮ ಚಿಂತನ ಗೋಷ್ಠಿ ನಡೆಯಲಿದ್ದು, ಶಾಸಕ ಎಂ.ಬಿ. ಪಾಟೀಲ ಉದ್ಘಾಟಿಸುವರು. ಬೀದರ ಸಂಸದ ಭಗವಂತ ಖೂಬಾ ಧ್ವಜಾರೋಹಣ ನೆರವೇರಿಸುವರು.

ಕಲಬುರಗಿಯ ಹಿರಿಯ ಸಾಹಿತಿ ಪ್ರೊ| ವಸಂತ ಕುಷ್ಟಗಿ ಅಧ್ಯಕ್ಷತೆ ವಹಿಸುವರು ಎಂದು ವಿವರಿಸಿದರು. ಅ.13ರಂದು ಬೆಳಗ್ಗೆ ಅಕ್ಕ ನಾಗಲಾಂಬಿಕಾ ಸಂಸ್ಕರಣೆ ನಿಮಿತ್ತ ಬಸವಧರ್ಮದ ವಿಜಯೋತ್ಸವ ನಡೆಯಲಿದೆ. ವಚನ ಸಾಹಿತ್ಯ ಮೆರವಣಿಗೆಯಲ್ಲಿ ಆನೆ, ಒಂಟೆ, ಜನಪದ ಡೊಳ್ಳು ಕುಣಿತ, ಜಾಂಗ್‌ ಕೋಲಾಟ ಪ್ರದರ್ಶನಗೊಳ್ಳಲಿವೆ. ಮಧ್ಯಾಹ್ನ 12 ಗಂಟೆಗೆ 18ನೇ ಕಲ್ಯಾಣ ಪರ್ವ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಕಲಬುರಗಿ ಬಸವದಳದ ಅಧ್ಯಕ್ಷ ಆರ್‌.ಜಿ. ಶೆಟಗಾರ, ಬಸವಂತರಾಯ ಏರಿ, ರೇವಣಪ್ಪ ಹೆಗ್ಗಣೆ, ನಾಗೇಂದ್ರಪ್ಪ ನಿಂಬರಗಿ, ಕಲ್ಯಾಣಕುಮಾರ ಸಲಗರ, ಬಸವರಾಜ ಮರಬದ, ಶ್ರೀಶೈಲ ಮಸೂತಿ ಇದ್ದರು.

ಟಾಪ್ ನ್ಯೂಸ್

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.