ಯುವಜನತೆಯೇ ಬಿಜೆಪಿ ಶಕ್ತಿ: ಹಿರೇಮನಿ


Team Udayavani, Jul 7, 2019, 12:57 PM IST

07-July-29

ಕಲಬುರಗಿ: ಸರ್ದಾರ್‌ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನಕ್ಕೆ ಬಿಜೆಪಿ ಸದಸ್ಯತ್ವ ಅಭಿಯಾನ ರಾಜ್ಯ ಘಟಕದ ಸಹ ಸಂಚಾಲಕ ಜಗದೀಶ ಹಿರೇಮನಿ ಸಸಿಗೆ ನೀರುಣಿಸಿ ಚಾಲನೆ ನೀಡಿದರು.

ಕಲಬುರಗಿ: ದೇಶದ ಯುವ ಜನತೆಯೇ ಭಾರತೀಯ ಜನತಾ ಪಕ್ಷದ ಶಕ್ತಿಯಾಗಿದ್ದು, ಪಕ್ಷವು ದೇಶವ್ಯಾಪ್ತಿ ವ್ಯಾಪಿಸಲು ಮತ್ತು ಬಲಿಷ್ಠವಾಗಿ ಬೆಳೆಯಲು ಯುವ ಜನಾಂಗವೇ ಕಾರಣವೆಂದು ಬಿಜೆಪಿ ಸದಸ್ಯತ್ವ ಅಭಿಯಾನದ ರಾಜ್ಯ ಘಟಕದ ಸಹ ಸಂಚಾಲಕ ಜಗದೀಶ ಹಿರೇಮನಿ ಹೇಳಿದರು.

ನಗರದ ಸರ್ದಾರ್‌ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಶನಿವಾರ ಬಿಜೆಪಿಯ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಬಾರಿಯ ಸದಸ್ಯತ್ವ ಅಭಿಯಾನದಲ್ಲೂ ಯುವಕರನ್ನೇ ಸೆಳೆದು ಪಕ್ಷವನ್ನು ಮತ್ತಷ್ಟು ಬಲ ಪಡಿಸಬೇಕೆಂದು ಕೆರ ನೀಡಿದರು.

ಬಿಜೆಪಿ ದೇಶ, ಜಗತ್ತಿನಲ್ಲೇ ಅತಿ ಹೆಚ್ಚು ಸದಸ್ಯರನ್ನು ಹೊಂದಿದ ಪಕ್ಷ ಎಂಬ ಹೆಗ್ಗಳಿಕೆ ಹೊಂದಿದೆ. ಹಲವು ಯುವಕರಿಗೆ ಪ್ರಧಾನಿ ಮೋದಿ ಸ್ಫೂರ್ತಿಯಾಗಿದ್ದಾರೆ. ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಬಿಜೆಪಿ ಸದಸ್ಯತ್ವ ಹೊಂದಿದವರ ಸಂಖ್ಯೆ ಬೆಳೆಯಬೇಕಿದೆ. ಸದ್ಯ ಇರುವ ಸದಸ್ಯತ್ವಕ್ಕಿಂತ ಶೇ.20ರಷ್ಟು ಹೆಚ್ಚು ಜನರನ್ನು ಬಿಜೆಪಿಯೊಂದಿಗೆ ನೋಂದಾಯಿಸಲು ಕಾರ್ಯಕರ್ತರು ಶ್ರಮಿಸಬೇಕೆಂದು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಬಿಜೆಪಿ ಸದಸ್ಯತ್ವದ ಆಧಾರದ ಮೇಲೆ ಎ, ಬಿ ಮತ್ತು ಸಿ ಗ್ರೇಡ್‌ ಬೂತ್‌ಗಳೆಂದು ಗುರುತಿಸಲಾಗಿದೆ. ಬಿ ಹಾಗೂ ಸಿ ಗ್ರೇಡ್‌ ಬೂತ್‌ಗಳನ್ನು ಎ ಗ್ರೇಡ್‌ ಬೂತ್‌ಗಳನ್ನಾಗಿ ಪರಿವರ್ತಿಸಲು ಹೆಚ್ಚಿನ ಸದಸ್ಯತ್ವ ನೋಂದಣಿ ಮಾಡಿಸಬೇಕು. ಯಾರೂ ನಿರ್ಲಕ್ಷ್ಯ ಮತ್ತು ಮೈಗಳ್ಳತನ ಮಾಡುವಂತಿಲ್ಲ ಎಂದು ಹೇಳಿದರು.

ಶಾಸಕರಾದ ಬಸವರಾಜ ಪಾಟೀಲ ತೇಲ್ಕೂರ, ಬಸವರಾಜ ಮತ್ತಿಮಡು, ದತ್ತಾತ್ರೇಯ ಪಾಟೀಲ ರೇವೂರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಎಚ್. ಮಲಾಜಿ, ವಿದ್ಯಾ ಹಾಗರಗಿ, ಯುವ ಮುಖಂಡರಾದ ಚಂದು ಪಾಟೀಲ, ರವಿ ಬಿರಾದಾರ, ರಾಜು ನೀಲಂಗೆ, ಮಹಾದೇವ ಬೆಳಮಗಿ, ಶರಣು ಮಡಿವಾಳ ಹಾಗೂ ಹಲವು ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ನಗರದ ಖಾದ್ರಿ ಚೌಕ್‌ನಲ್ಲಿ ಬಿಜೆಪಿ ಯುವ ಮುಖಂಡ ಚಂದು ಪಾಟೀಲ್ ನೇತೃತ್ವದಲ್ಲಿ ಉತ್ತರ ಮತಕ್ಷೇತ್ರ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನವನ್ನು ಬಿಜೆಪಿ ಸದಸ್ಯರಾಗೋಣ ಕಾರ್ಯಕ್ರಮಕ್ಕೆ ಕಡಗಂಚಿ ಮಠದ ವೀರಭದ್ರ ಶಿವಾಚಾರ್ಯರು ಉದ್ಘಾಟಿಸಿದರು. ಬಿಜೆಪಿ ಸದಸ್ಯ ಅಭಿಯಾನದ ರಾಜ್ಯ ಸಹ ಸಚಾಲಕ ಜಗದೀಶ ಹೀರೆಮನಿ, ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಗಂಗಾ ಭೋಷಣ ಸೋಮಾಣಿ, ಅಂಬಾರಾಯ ಅಷ್ಟಗಿ, ಶಿವಾನಂದ ಭಂಡಕಿ, ಚನ್ನವೀರ ಲಿಂಗನವಾಡಿ, ಸಾವಿತ್ರಿ ಕುಳಗೇರಿ, ಮಹೇಶ ಪಟ್ಟಣ, ವಿದ್ಯಾಸಾಗರ ಕುಲಕರ್ಣಿ, ವರ್ದಶಂಕರ್‌ ಶೆಟ್ಟಿ, ಶರಣು ಮಡಿವಾಳ, ಅನಿಲ ಜಾಧವ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.