ಸಿಇಟಿಯಲ್ಲೂ ಎಸ್‌ಬಿಆರ್‌ಗೆ ಉತ್ತಮ ರ್‍ಯಾಂಕ್‌

ಐದು ಸಾವಿರ ಒಳಗೆ ರ್‍ಯಾಂಕ್‌ ಪಡೆದ 47 ವಿದ್ಯಾರ್ಥಿಗಳು•ಉತ್ತಮ ಬೋಧನೆಯೇ ಸಾಧನೆಗೆ ಕಾರಣ

Team Udayavani, May 26, 2019, 11:52 AM IST

Udayavani Kannada Newspaper

ಕಲಬುರಗಿ: ಇಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಪ್ರಕಟವಾಗಿದ್ದು, ಈ ಭಾಗದ ಪ್ರತಿಷ್ಠಿತ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಶರಣಬಸವೇಶ್ವರ ವಸತಿ ಪಿಯು (ಎಸ್‌ಬಿಆರ್‌) ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಬಂದಿದೆ.

ಪ್ರಮುಖ ಇಂಜಿನಿಯರಿಂಗ್‌ ವಿಭಾಗದಲ್ಲಿ ಕಾಲೇಜಿನ 47 ವಿದ್ಯಾರ್ಥಿಗಳು ಐದು ಸಾವಿರ ಒಳಗಿನ ರ್‍ಯಾಂಕ್‌ ಪಡೆದಿದ್ದಾರೆ. ಇಂಜಿನಿಯರಿಂಗ್‌ ವಿಭಾಗದಲ್ಲಿ ವೀರಭದ್ರಪ್ಪ ಆರ್‌. 399ನೇ ರ್‍ಯಾಂಕ್‌ ಪಡೆದು ಕಾಲೇಜಿಗೆ ಹಾಗೂ ಈ ಭಾಗಕ್ಕೆ ಕೀರ್ತಿ ತಂದಿದ್ದಾರೆ. ಅದೇ ರೀತಿ ಸಂಗಮೇಶ್ವರ ಆರ್‌. 531, ಸಂದೇಶ 580, ಮೇಳಕುಂದಿ ಅನೀಶ 823, ರುಷಬ್‌ ಪ್ರಕಾಶ ಕುಲಕರ್ಣಿ 850ನೇ, ಪ್ರತೀಕ ಭಾಲ್ಕೆ 854ನೇ ರ್‍ಯಾಂಕ್‌ ಪಡೆದಿದ್ದಾರೆ.

ಅದೇ ರೀತಿ ಪಶು ಸಂಗೋಪನಾ ವಿಜ್ಞಾನ ವಿಭಾಗದಲ್ಲಿ 14 ವಿದ್ಯಾರ್ಥಿಗಳು ಸಾವಿರದೊಳಗೆ ರ್‍ಯಾಂಕ್‌ ಪಡೆದಿದ್ದಾರೆ. ಪ್ರತೀಕ ಭಾಲ್ಕೆ 31ನೇ ರ್‍ಯಾಂಕ್‌, ಸಂಗಮೇಶ್ವರ 60, ಸಂದೇಶ ಕೆ. 88, ಕುಶಾಲ್ 177 ಹಾಗೂ ಸೋನಾಲಿ ಬಿರಾದಾರ 186ನೇ ರ್‍ಯಾಂಕ್‌ ಪಡೆದಿದ್ದಾರೆ.

ನೈಸರ್ಗಿಕ ಯೋಗ ವಿಜ್ಞಾನ ವಿಭಾಗದಲ್ಲಿನ 14 ವಿದ್ಯಾರ್ಥಿಗಳು ಸಾವಿರದೊಳಗೆ ರ್‍ಯಾಂಕ್‌ ಪಡೆದಿದ್ದಾರೆ. ಪ್ರತೀಕ ಭಾಲ್ಕೆ 84, ಸಂದೇಶ ಕೆ. 95, ಕುಶಾಲ್ 104, ಸಂಗಮೇಶ್ವರ 117ನೇ ರ್‍ಯಾಂಕ್‌ ಪಡೆದಿದ್ದಾರೆ. ಕೃಷಿ ವಿಜ್ಷಾನ ವಿಭಾಗದಲ್ಲಿ 14 ವಿದ್ಯಾರ್ಥಿಗಳು ಸಾವಿರದೊಳಗೆ ರ್‍ಯಾಂಕ್‌ ಪಡೆದಿದ್ದಾರೆ. ಸಂಗಮೇಶ್ವರ 113ನೇ ರ್‍ಯಾಂಕ್‌, ಸಂದೇಶ 143, ಮೇಳಕುಂದಿ ಆನೀಶ್‌ 206, ಕಿರಣ ರೆಡ್ಡಿ 273, ಸೋನಾಲಿ ಬಿರಾದಾರ 274ನೇ ರ್‍ಯಾಂಕ್‌ ಪಡೆದಿದ್ದಾರೆ. ಅದೇ ರೀತಿ ಔಷಧೀಯ ವಿಜ್ಷಾನ ವಿಭಾಗದಲ್ಲಿ 11 ವಿದ್ಯಾರ್ಥಿಗಳು ಸಾವಿರದೊಳಗೆ ರ್‍ಯಾಂಕ್‌ ಪಡೆದಿದ್ದಾರೆ. ಪ್ರತೀಕ್‌ ಭಾಲ್ಕೆ 48, ಸಂಗಮೇಶ್ವರ 115, ಸಂದೇಶ ಕೆ 144, ಮೇಳಕುಂದಿ ಆನೀಶ್‌ 304, ಕುಶಾಲ್ 320 ರ್‍ಯಾಂಕ್‌ ಪಡೆದಿದ್ದಾರೆ.

ಇಂಜಿನಿಯರಿಂಗ್‌ ವಿಭಾಗದಲ್ಲಿ ಎರಡು ಸಾವಿರದೊಳಗೆ ಸೋನಾಲಿ ಬಿರಾದಾರ, ಸಾಯಿಕಿರಣರೆಡ್ಡಿ, ಜ್ಯೋತಿ ರೇವಶೆಟ್ಟಿ, ಅಭೀಷೆಕ್‌ ಸೋನೆ, ಶಶಿಕಿರಣ ಶ್ರೀನಿವಾಸ, ಶಿವಶರಣ ಎಸ್‌. ಪೊಲೀಸ್‌ ಪಾಟೀಲ, ಕುಶಾಲ ಬೋರೆ, ಮೂರು ಸಾವಿರ ರ್‍ಯಾಂಕ್‌ದೊಳಗೆ ಭವ್ಯ ಯಶರಾಜ್‌ ಚೌಡಾ, ನಿಖೀಲ್ ಮಿಶ್ರಾ, ಭವಾನಿ ಬವಸರಾಜ, ಭವಾನಿ ಇ.ಭಲ್ಕಲ್, ಪ್ರವೀಣ ನಾಗರಾಜ, ವೈಷ್ಣವಿ ಅಶೋಕ, ಪ್ರತೀಕ ತೆಲಗಾಣಿ, ಅಬ್ದುಲ್ ರಹೇಮಾನ್‌, ಅಶೀಶಕುಮಾರ ಮಠಪತಿ, ಭವಾನಿ ಭೀಮಪ್ಪ, ಪಲ್ಲವಿ ಹಳೆಮನಿ, ಜಯಂತಿ ಆರ್‌. ಲಾಹೋಟಿ ರ್‍ಯಾಂಕ್‌ ಪಡೆದಿದ್ದಾರೆ. ಕಾಲೇಜಿನಲ್ಲಿ ಅತ್ಯುತ್ತಮ ಬೋಧನೆ ಹಾಗೂ ಕಾಲಾನುಕಾಲ ಅವಶ್ಯಕ ಪರೀಕ್ಷೆಗಳನ್ನು ತೆಗೆದುಕೊಳ್ಳುತ್ತಾ ಸೂಕ್ತ ಮಾರ್ಗದರ್ಶನ ನೀಡಿದ್ದೇ ಟಾಪರ್‌ ಸ್ಥಾನ ಪಡೆಯಲು ಸಾಧ್ಯವಾಗಿದೆ ಎಂದು ಕಾಲೇಜಿನ ಪ್ರಾಚಾರ್ಯರಾದ ಪ್ರೊ| ಎನ್‌.ಎಸ್‌. ದೇವರಕಲ್ ಹಾಗೂ ಉತ್ತಮ ರ್‍ಯಾಂಕ್‌ಗಳನ್ನು ಪಡೆದ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಎಸ್‌ಬಿಆರ್‌ ಕಾಲೇಜಿನ ವಿದ್ಯಾರ್ಥಿಗಳು ಸಿಇಟಿಯಲ್ಲೂ ಅತ್ಯುತ್ತಮ ರ್‍ಯಾಂಕ್‌ಗಳನ್ನು ಪಡೆದಿರುವುದಕ್ಕೆ ಸಂಸ್ಥೆಯಲ್ಲಿ ಪರಿಣಾಮಕಾರಿ ಬೋಧನೆಯೇ ವಿದ್ಯಾರ್ಥಿಗಳು ಉತ್ತಮ ರ್‍ಯಾಂಕ್‌ಗಳನ್ನು ಪಡೆಯಲು ಕಾರಣವಾಗಿದೆ. ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳು ಆಸಕ್ತಿಗನುಸಾರ ಕೋರ್ಸ್‌ ಪಡೆದು ಸಾಧನೆ ಮೆರೆಯಲಿ ಎಂಬುದಾಗಿ ಶುಭಾಶಯ ಹಾರೈಸುವೆ.
ಡಾ| ಶರಣಬಸವಪ್ಪ ಅಪ್ಪ,
ಅಧ್ಯಕ್ಷರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.