ಉಪ ಕದನದಿಂದ ರತ್ನಪ್ರಭಾ ದೂರ

ಉಮೇಶ ಜಾಧವ್‌ ಪುತ್ರನಿಗೆ ಟಿಕೆಟ್ ನೀಡಿದ್ದರಿಂದ ಅಸಮಾಧಾನ?

Team Udayavani, May 17, 2019, 10:03 AM IST

17-MAY-1

ಕಲಬುರಗಿ: ಲೋಕಸಭಾ ಚುನಾವಣಾ ಸಮಯದಲ್ಲಿ ಬಿಜೆಪಿ ಸೇರಿ ಪ್ರಚಾರ ಕಾರ್ಯದಲ್ಲಿ ಸಕ್ರಿಯರಾಗಿದ್ದ ರಾಜ್ಯ ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಚಿಂಚೋಳಿ ಹಾಗೂ ಕುಂದಗೋಳ ಉಪಚುನಾವಣೆಯಿಂದ ದೂರವೇ ಉಳಿದಿದ್ದಾರೆ.

ರಾಜ್ಯದ ಉನ್ನತ ಹುದ್ದೆಯಲ್ಲಿದ್ದ ರತ್ನಪ್ರಭಾ ರಾಜಕೀಯ ಪ್ರವೇಶಿಸುವ ಮೂಲಕ ಗಮನ ಸೆಳೆದಿದ್ದರು. ವಿಶೇಷವೆಂದರೆ ಅವರು ರಾಜಕೀಯಕ್ಕೆ ಬರುವ ಮುನ್ನವೇ ಕಲಬುರಗಿ ಇಲ್ಲವೇ ಇತರ ಲೋಕಸಭಾ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಲಿದ್ದಾರೆ ಎಂಬ ಪುಕಾರು ಜೋರಾಗಿಯೇ ಎದ್ದಿತ್ತು. ಕೊನೆಗೆ ಕಲಬುರಗಿಯಲ್ಲಿ ಡಾ| ಉಮೇಶ ಜಾಧವ್‌ ನಾಮಪತ್ರ ಸಲ್ಲಿಕೆ ದಿನ ಮಾಜಿ ಸಿಎಂ ಯಡಿಯೂರಪ್ಪ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದ್ದರು.

ಅನಂತರದಲ್ಲಿ ಜಾಧವ್‌ ಪರ ಅಬ್ಬರದ ಪ್ರಚಾರದಲ್ಲಿ ರತ್ನಪ್ರಭಾ ತೊಡಗಿಸಿಕೊಂಡಿದ್ದರು. ದಲಿತ ಸಮುದಾಯಕ್ಕೆ ಸೇರಿದ್ದರಿಂದ ಕಾಂಗ್ರೆಸ್‌ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಜಾತಿ ಅಸ್ತ್ರವಾಗಿಯೂ ಅವರನ್ನು ಬಿಜೆಪಿ ಬಳಸಿಕೊಂಡಿತ್ತು. ಮೇಲಾಗಿ ರತ್ನಪ್ರಭಾ ಕೂಡ ಖರ್ಗೆ ಅವರನ್ನು ನೇರವಾಗಿ ಟೀಕಿಸುವ ಮೂಲಕ ಚುನಾವಣಾ ಕಾವು ಹೆಚ್ಚಿಸಿದ್ದರು.

ನಿವೃತ್ತಿ ನಂತರ ಖಾಲಿ ಇರುವ ಬದಲು ಜನ ಸೇವೆ ಮಾಡಬೇಕು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿ ಮೆಚ್ಚಿ ರಾಜಕೀಯಕ್ಕೆ ಬಂದಿರುವುದಾಗಿ ಸ್ವತಃ ಅವರೇ ಹೇಳಿಕೊಂಡಿದ್ದರು. ಆದರೆ, ಲೋಕಸಭಾ ಚುನಾವಣೆ ಬೆನ್ನಲ್ಲೇ ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿದ್ದರೂ ಇದುವರೆಗೆ ಅವರು ಎಲ್ಲೂ ಕಾಣಿಸಿಕೊಂಡಿಲ್ಲ.

ಈ ನಡುವೆ ಚಿಂಚೋಳಿ ಮೀಸಲು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲೂ ಕೆ.ರತ್ನಪ್ರಭಾ ಅವರ ಹೆಸರು ಕೇಳಿ ಬಂದಿತ್ತು. ನಾನೂ ಚಿಂಚೋಳಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂಬುದಾಗಿ ಹೇಳಿಕೊಂಡಿದ್ದರು. ಆದರೆ ಡಾ| ಉಮೇಶ ಜಾಧವ್‌ ಪುತ್ರನಿಗೆ ಟಿಕೆಟ್ ನೀಡಿದ್ದರಿಂದ ಅಸಮಾಧಾನದಿಂದ ದೂರ ಉಳಿದರೋ? ಇಲ್ಲವೇ ಬಿಜೆಪಿ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಎಂಬುದು ಸ್ಪಷ್ಟವಾಗಬೇಕಿದೆ.

ಜಿದ್ದಿಗೆ ಬಿದ್ದವರಂತೆ ಪ್ರಚಾರ: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರದ ಅಳಿವು-ಉಳಿವು ಮೇ 19ರಂದು ನಡೆಯುವ ಚಿಂಚೋಳಿ ಮತ್ತು ಕುಂದಗೋಳ ಉಪಚುನಾವಣೆ ಫಲಿತಾಂಶದ ಮೇಲೆ ನಿರ್ಣಯವಾಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಹೀಗಾಗಿ ಎರಡು ಕ್ಷೇತ್ರಗಳ ಗೆಲುವಿಗೆ ಬಿಜೆಪಿ ಮತ್ತು ಮೈತ್ರಿ ಪಕ್ಷದ ನಾಯಕರು ಇನ್ನಿಲ್ಲದ ತಂತ್ರ, ಪ್ರತಿತಂತ್ರ ರೂಪಿಸುತ್ತಿದ್ದಾರೆ.

ಚಿಂಚೋಳಿಯಲ್ಲಿ ವೀರಶೈವ-ಲಿಂಗಾಯತರ ನಂತರ ಪರಿಶಿಷ್ಟ ಮತದಾರರ ಪಾತ್ರವೇ ನಿರ್ಣಾಯಕವಾಗಿದೆ. ಶೋಷಿತ ಸಮುದಾಯದ ಎಸ್‌ಟಿ, ಎಸ್‌ಟಿ ಹಾಗೂ ಲಂಬಾಣಿ ಜನರು ಅಧಿಕ ಸಂಖ್ಯೆಯಲ್ಲಿದ್ದಾರೆ. ಜತೆಗೆ ತೆಲಂಗಾಣ ಗಡಿ ಭಾಗಕ್ಕೆ ಚಿಂಚೋಳಿ ಹೊಂದಿಕೊಂಡಿದ್ದರಿಂದ ಕ್ಷೇತ್ರದಲ್ಲಿ ತೆಲುಗು ಭಾಷಿಕರ ಮತಗಳು ಸಹ ಪ್ರಮುಖ ಪಾತ್ರ ವಹಿಸುತ್ತವೆ. ಚಿಂಚೋಳಿ ತಾಲೂಕಿನ ಪೂರ್ವ ಮತ್ತು ಈಶಾನ್ಯ ದಿಕ್ಕಿನಲ್ಲಿ ತೆಲಂಗಾಣದ ವಿಕಾರಬಾದ್‌ ಹಾಗೂ ಸಂಗಾರೆಡ್ಡಿ ಜಿಲ್ಲೆಗಳಿದ್ದು, ಅಲ್ಲಿ ಚಿಂಚೋಳಿ ಮತಕ್ಷೇತ್ರದ ಜನತೆ ನೆಲೆಸಿದ್ದಾರೆ.

ವಿಕಾರಬಾದ್‌ನ ತಾಂಡೂರು ಒಂದರಲ್ಲೇ ಮೂರು ಸಾವಿರಕ್ಕೂ ಅಧಿಕ ಜನ ಚಿಂಚೋಳಿ ಕ್ಷೇತ್ರದ ಮತದಾರರಿದ್ದಾರೆ. ಅಲ್ಲದೇ, ಚಿಂಚೋಳಿಯ ಕೊಂಚವರಂ ವ್ಯಾಪ್ತಿಯಲ್ಲಿ ತೆಲುಗು ಭಾಷಿಕರೇ ಅಧಿಕ ಸಂಖ್ಯೆಯಲ್ಲಿದ್ದಾರೆ. ಚಿಂಚೋಳಿ ಮತಕ್ಷೇತ್ರದಲ್ಲಿ ಸುಮಾರು 15 ಸಾವಿರದಷ್ಟು ಮತದಾರರು ತೆಲುಗು ಭಾಷಿಕರಿದ್ದಾರೆ ಎಂದು ಅಂದಾಜಿಸಲಾಗಿದೆ. ಹೀಗಾಗಿ ಇಲ್ಲಿ ಜಾತಿ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ತೆಲುಗು ಭಾಷಿಕರನ್ನು ಸೆಳೆಯುವ ಯತ್ನ ಎರಡೂ ಪಕ್ಷಗಳಿಂದಲೂ ನಡೆಯುತ್ತಿದೆ.

ಗಡಿಯಾಚೆ ಬಿಜೆಪಿ ಸಮಾವೇಶ: ತೆಲುಗು ಭಾಷಿಕರ ಮೇಲೆ ದೃಷ್ಟಿ ನೆಟ್ಟು ಬಿಜೆಪಿ ಬುಧವಾರ ಗಡಿಯಾಚೆಯ ತಾಂಡೂರಿನಲ್ಲಿ ಬೃಹತ್‌ ಸಮಾವೇಶ ಹಮ್ಮಿಕೊಂಡಿತ್ತು. ಬಿಜೆಪಿ ರಾಜಾಧ್ಯಕ್ಷ ಯಡಿಯೂರಪ್ಪ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಅಲ್ಲದೇ, ಜನತೆಯನ್ನು ಸೆಳೆಯಲೆಂದು ಹೈದ್ರಾಬಾದ್‌ನಿಂದ ತೆಲುಗು ಹಾಸ್ಯ ನಟ ಬಾಬು ಮೋಹನ್‌ ಅವರನ್ನು ಕರೆಸಲಾಗಿತ್ತು.

ಆದರೆ, ಅದೇ ಹೈದ್ರಾಬಾದ್‌ನವರೇ ಆದ ತೆಲುಗು ಭಾಷಿಕರೂ ಆದ ಕೆ. ರತ್ನಪ್ರಭಾ ತಾಂಡೂರು ಸಮಾವೇಶದಿಂದಲೂ ದೂರ ಉಳಿದಿದ್ದರು. ಹೀಗಾಗಿ ಖರ್ಗೆ ವಿರುದ್ಧದ ಹೋರಾಟಕ್ಕೆ ಮಾತ್ರ ರತ್ನಪ್ರಭಾ ಸೀಮಿತವಾದರೋ ಅಥವಾ ಬಿಜೆಪಿ ನಾಯಕರು ಅವರನ್ನು ನಿರ್ಲಕ್ಷ್ಯಿಸುತ್ತಿದ್ದಾರೆಯೇ ಎಂಬುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಕರೆದಿಲ್ಲ.. ಬಂದಿಲ್ಲ…
ನಾನು ಕೇವಲ ಕಲಬುರಗಿಗೆ ಸೀಮಿತವಾಗಿ ಬಿಜೆಪಿ ಸೇರ್ಪಡೆ ಗೊಂಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಹೊರತಾಗಿಯೂ ಇತರೆಡೆ ಪ್ರಚಾರ ಮಾಡಿದ್ದೆ. ಚಿಂಚೋಳಿ ಹಾಗೂ ಕುಂದಗೋಳ ಉಪಚುನಾವಣೆಗೆ ಬಿಜೆಪಿ ನಾಯಕರ್ಯಾರು ಕರೆದಿಲ್ಲ. ನನಗೂ ಬರಲು ಆಗಿಲ್ಲ.
•ಕೆ.ರತ್ನಪ್ರಭಾ,
ಬಿಜೆಪಿ ನಾಯಕಿ

ರಂಗಪ್ಪ ಗಧಾರ

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.