ಮಹಿಳೆಗೆ ಸಮಾಜದ ಚಿಂತೆಯೂ ಅವಶ್ಯ

ನಿಮ್ಮ ಮುಖಂಡರ ಬಗ್ಗೆ ತಿಳಿದುಕೊಳ್ಳಿಸ್ವಾವಲಂಬನೆ ಜೀವನ ಸಾಗಿಸಲು ಸಿದ್ಧರಾಗಿ

Team Udayavani, Apr 12, 2019, 12:38 PM IST

12-April-12

ಕಲಬುರಗಿ: ಎಚ್‌ಕೆಸಿಸಿಐ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಸಂವಾದದಲ್ಲಿ ಕೆ.ರತ್ನಪ್ರಭಾ ಮತ್ತು ಮಹಿಳೆಯರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ನಟಿ ಸುಮಲತಾ ಅವರೊಂದಿಗೆ ವಿಡಿಯೋ ಕಾಲ್‌ ಮೂಲಕ ಮಾತನಾಡಿದರು.

ಕಲಬುರಗಿ: ಮಹಿಳೆಗೆ ಮನೆ ಬಗ್ಗೆ ಹೆಚ್ಚು ಯೋಚನೆ, ಚಿಂತೆ ಇರುತ್ತದೆ. ಮನೆ ಜತೆಗೆ ಸಮಾಜದ ಚಿಂತೆಯೂ ಇರಬೇಕೆಂದು ರಾಜ್ಯ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ, ಬಿಜೆಪಿ ನಾಯಕಿ ಕೆ.ರತ್ನಪ್ರಭಾ ಹೇಳಿದರು.

ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ‘ಹೈ.ಕ ಭಾಗದ  ಭಿವೃದ್ಧಿಯಲ್ಲಿ
ಮಹಿಳೆಯರ ಪಾತ್ರ’ ಎನ್ನುವ ಮಹಿಳಾ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಹಿಳೆಯಿಂದಲೇ ಮನೆ ಕೆಲಸ, ಕಾರ್ಯಗಳು ಸುಸೂತ್ರವಾಗಿ ನಡೆಯಲು ಸಾಧ್ಯ. ಮಹಿಳೆ ಇಲ್ಲದೆ ಇದ್ದರೆ ಇಡೀ ಮನೆ ಅಸ್ತವ್ಯಸ್ತವಾಗುತ್ತದೆ ಎಂದರು.

ಮಹಿಳೆ ಮನೆಗೆ ಮಾತ್ರವೇ ಸೀಮಿತಗೊಳ್ಳದೇ ಸಮಾಜದ ಆಗು-ಹೋಗುಗಳ ಬಗ್ಗೆ ಯೋಚಿಸಬೇಕು. ಶಾಲೆಯಲ್ಲಿ ಶಿಕ್ಷಕರಿಲ್ಲ, ನೀರು ಪೂರೈಕೆ ಆಗುತ್ತಿಲ್ಲ. ರಸ್ತೆ ಸರಿ ಇಲ್ಲವೆಂದು ಮನೆಯಲ್ಲಿ ಕುಳಿತು ಮಾತನಾಡಿಕೊಳ್ಳುತ್ತೇವೆ. ಆದರೆ, ಇದಕ್ಕೆ ಕಾರಣಿಕರ್ತರು ಯಾರೆಂದು ಆಲೋಚಿಸಬೇಕು. ನಮ್ಮ ಲೀಡರ್‌ ಯಾರು ಎಂದು ತಿಳಿದುಕೊಳ್ಳಬೇಕು ಎಂದರು.

ಮನೆಯೇ ನಮ್ಮ ಜೀವನ ಬದಲಾವಣೆ ಮೊದಲ ಮೆಟ್ಟಿಲು. ಹೆಣ್ಣು ಮತ್ತು ಗಂಡು ಇಬ್ಬರನ್ನೂ ಸಮವಾಗಿ ನೋಡುವ ಕೆಲಸ ಮನೆಯಿಂದ ಆರಂಭವಾಗಬೇಕು. ಮಹಿಳೆಯೊಂದಿಗೆ ಪುರುಷನ ವರ್ತನೆಯೂ ಬದಲಾಗಬೇಕು. ಚುನಾವಣೆಯಲ್ಲಿ ಮಹಿಳಾ ಮೀಸಲಾತಿ ಸಿಕ್ಕಾಗ ಯಾವ ಮಹಿಳೆ ಕೂಡ ಸ್ಪರ್ಧೆಗೆ ಮುಂದೆ ಬರಲಿಲ್ಲ. ಆಗ ರಾಜಕಾರಣಿಗಳು ತಮ್ಮ
ಪತ್ನಿಯರನ್ನು ಚುನಾವಣೆಗೆ ನಿಲ್ಲಿಸಿದರು. ಗೆದ್ದ ನಂತರ ಪತ್ನಿಯರು ಪತಿಯೊಂದಿಗೆ ಕಚೇರಿಗೆ ಬರುತ್ತಿದ್ದರು. ದಿನ ಕಳೆದಂತೆ ಸ್ವತಂತ್ರ್ಯವಾಗಿ
ಮಹಿಳೆ ಬರತೊಡಗಿದಳು. ಹೀಗೆ ಮಹಿಳೆಗೆ ಪ್ರೋತ್ಸಾಹ ಸಿಕ್ಕರೆ ಮತ್ತಷ್ಟು ಮುಂದೆ ಬರಲು ಸಾಧ್ಯವಾಗುತ್ತದೆ ಎಂದರು.

ಹೈದ್ರಾಬಾದ ಕರ್ನಾಟಕ ಭಾಗದ ಬೀದರ್‌, ರಾಯಚೂರು ಜಿಲ್ಲಾಧಿಕಾರಿಯಾಗಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆಯಾಗಿ ನಾನು ಕಾರ್ಯ ನಿರ್ವಹಿಸಿದ್ದೇನೆ. ರಾಯಚೂರಿನಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾಗ
ಮಹಿಳೆಯರಿಗೆ ಆಟೋ ಚಾಲನೆ ಹೇಳಿಕೊಟ್ಟು ಅವರಿಗೆ ಆಟೋ ವಿತರಿಸಲಾಯಿತು. ಇಂದಿಗೂ ಅಲ್ಲಿನ ಮಹಿಳೆಯರು ಆಟೋ ಚಾಲನೆಯಿಂದ
ಸ್ವಾವಲಂಬನೆ ಜೀವನ ಸಾಗಿಸುತ್ತಿದ್ದಾರೆ ಎಂದು ಸ್ಮರಿಸಿದರು.

ಹುದ್ದೆ ಕೊಡಲು ಚರ್ಚೆ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆ ನನಗೆ ಕೊಡಲು ತುಂಬಾ ಚರ್ಚೆ ನಡೆದಿತ್ತು. ಇದುವರೆಗೂ ಈ ಹುದ್ದೆಯನ್ನು ಮಹಿಳೆ ನಿರ್ವಹಿಸಿಲ್ಲ ಎನ್ನುವ ಮಾತುಗಳು
ಕೇಳಿಬಂದವು. ಆದರೆ, ಹಠ ಮಾಡಿ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆ ವಹಿಸಿಕೊಂಡೆ. ಭಾರತದಲ್ಲಿ ಮೊದಲ ಬಾರಿಗೆ ಕಲಬುರಗಿಯಲ್ಲಿ ಮಹಿಳಾ ಕೈಗಾರಿಕಾ ಪಾರ್ಕ್‌ ಸ್ಥಾಪಿಸಲಾಯಿತು. ಆಗಲೇ ಮಹಿಳೆಯರಿಗೂ ಕೈಗಾರಿಕೆಯಲ್ಲಿ ಆಸಕ್ತಿ ಇರೋದು ಗೊತ್ತಾಯಿತು ಎಂದರು.

ಬಸಂತಿ ಘಂಟಿ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು. ಜಿಲ್ಲಾ ಬಿಜೆಪಿ ಮಹಿಳಾ ಅಧ್ಯಕ್ಷೆ ವಿದ್ಯಾ ಹಾಗರಗಿ ಸೇರಿದಂತೆ ಹಲವು ಮಹಿಳೆಯರು ಪಾಲ್ಗೊಂಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ಪ್ರಗತಿಯ ದೂರದೃಷ್ಟಿ ಇದೆ.
ದೇಶ ಸಾಕಷ್ಟು ಅಭಿವೃದ್ಧಿ ಹೊಂದಬೇಕು. ಜಗತ್ತಿನಲ್ಲಿ ದೇಶವನ್ನು ಮುಂದೆ ತರಬೇಕೆಂಬ ಅಭಿಲಾಷೆ ಹೊಂದಿದ್ದಾರೆ. ಮಹಿಳೆಯರ ಸಬಲೀಕರಣ ಕನಸನ್ನು ಮೋದಿ ಕಂಡಿದ್ದಾರೆ.
.ಕೆ.ರತ್ನಪ್ರಭಾ, ಬಿಜೆಪಿ ನಾಯಕಿ

ಟಾಪ್ ನ್ಯೂಸ್

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.