ಈ ವರ್ಷವೂ ರೈತನ ಬೆಳೆಗಿಲ್ಲ ವಿಮೆ ಭಾಗ್ಯ!

ರಾಜ್ಯಾದ್ಯಂತ 2.5 ಲಕ್ಷ ರೈತರಿಂದ ಮಾತ್ರ ವಿಮೆ ಪಾವತಿಗೆ ಜು. 31 ಕೊನೆ ದಿನ

Team Udayavani, Jul 29, 2019, 12:30 PM IST

29-July-23

ಹಣಮಂತರಾವ ಭೈರಾಮಡಗಿ
ಕಲಬುರಗಿ:
ಪ್ರಸಕ್ತ 2019-20ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳು ಹವಾಮಾನ ವೈಪರೀತ್ಯದಿಂದ ನಷ್ಟವಾದಲ್ಲಿ ಸೂಕ್ತ ಬೆಳೆ ವಿಮೆ ಪರಿಹಾರವಿಲ್ಲ!

ಸಂಪೂರ್ಣ ಸಾಲ ಮನ್ನಾ ಆಗದ ಹಾಗೂ ಹೊಸದಾಗಿ ಸಾಲ ಇರದೇ ಇರುವುದರಿಂದ ರೈತರ್ಯಾರೂ ಬೆಳೆವಿಮೆ ಮಾಡಿಸಲು ಆಗುತ್ತಿಲ್ಲ. ಹೀಗಾಗಿ ಈ ವರ್ಷ ಮುಂಗಾರು ಹಂಗಾಮಿನ ಬೆಳೆಗಳು ಹಾನಿಗೊಳಗಾಗಿದ್ದರೂ ರೈತನಿಗೆ ಬೆಳೆವಿಮೆ ಪರಿಹಾರ ಇಲ್ಲದಾಗಿದೆ.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಪ್ರಿಮಿಯಂ ತುಂಬಲು ಜು.31 ಕೊನೆ ದಿನಾಂಕವಾಗಿದ್ದರೂ ಕೆಲವೇ ರೈತರು ಮಾತ್ರ ಬೆಳೆವಿಮೆ ಮಾಡಿಸಿದ್ದರಿಂದ ಉಳಿದ ಶೇ.80ರಷ್ಟು ರೈತರು ಬೆಳೆ ವಿಮೆಯಿಂದ ವಂಚಿತರಾಗುವಂತಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಪ್ರತಿ ವರ್ಷ ಒಂದು ಲಕ್ಷ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆವಿಮೆ ಮಾಡಿಸುತ್ತಿದ್ದರು. 2017-18ನೇ ಸಾಲಿನಲ್ಲಿ 1.05 ಲಕ್ಷ ರೈತರು ಬೆಳೆವಿಮೆ ಮಾಡಿಸಿದ್ದರೆ, ಕಳೆದ 2018-19ನೇ ಸಾಲಿನಲ್ಲಿ 60 ಸಾವಿರ ರೈತರು ಬೆಳೆವಿಮೆ ಮಾಡಿಸಿದ್ದರು. ಪ್ರಸಕ್ತ ಕೇವಲ 8 ಸಾವಿರ ರೈತರು ಮಾತ್ರ ಬೆಳೆವಿಮೆ ಮಾಡಿಸಿದ್ದಾರೆ. ಸಾಲ ನವೀಕರಣವಾದ ರೈತರು ಮಾತ್ರ ಇದರಲ್ಲಿ ಸೇರಿದ್ದಾರೆ. ಬೆಳೆವಿಮೆಗೆ ಕೇವಲ ನಾಲ್ಕು ದಿನಗಳು ಮಾತ್ರ ಉಳಿದಿದ್ದು, ಅಬ್ಬಬ್ಟಾ ಎಂದರೆ 10ರಿಂದ 12 ಸಾವಿರ ಮಾತ್ರ ಆಗಬಹುದು. ಇದು ಕಲಬುರಗಿ ಜಿಲ್ಲೆಯ ಪರಿಸ್ಥಿತಿಯಲ್ಲ ರಾಜ್ಯದಾದ್ಯಂತ ಇದೆ ಸ್ಥಿತಿ ಇದೆ.

ರಾಜ್ಯದಾದ್ಯಂತ ಪ್ರತಿ ವರ್ಷ 22 ಲಕ್ಷ ರೈತರು ಬೆಳೆವಿಮೆ ಮಾಡಿಸುತ್ತಿದ್ದರು. ಆದರೆ ಪ್ರಸಕ್ತ 2.50 ಲಕ್ಷ ರೈತರು ಮಾತ್ರ ಬೆಳೆ ವಿಮೆ ಮಾಡಿಸಿದ್ದಾರೆ. ಇನ್ನೂ ನಾಲ್ಕೈದು ದಿನದೊಳಗೆ ಬಹಳವೆಂದರೆ ಒಂದುವರೆ ಲಕ್ಷ ಆಗಬಹುದು ಎನ್ನುತ್ತಾರೆ ಅಧಿಕಾರಿಗಳು.

ಕಾರಣ ಏನು?: ಎಚ್.ಡಿ.ಕುಮಾರಸ್ವಾಮಿ ಸರ್ಕಾರ ಸಹಕಾರಿ ಸಂಘಗಳಲ್ಲಿ ಮಾಡಿರುವ ಒಂದು ಲಕ್ಷ ರೂ. ವರೆಗಿನ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಎರಡು ಲಕ್ಷ ರೂ. ಸಾಲ ಸಂಪೂರ್ಣ ಮನ್ನಾ ಆಗಿರುವುದು ಜತೆಗೆ ಹೊಸದಾಗಿ ಒಬ್ಬನೇ ಒಬ್ಬ ರೈತನಿಗೆ ಸಾಲ ಸಿಗದೇ ಇರುವುದೇ ಬೆಳೆವಿಮೆಗಾಗಿ ಪ್ರಿಮಿಯಂ ತುಂಬದಿರುವುದಕ್ಕೆ ಪ್ರಮುಖ ಕಾರಣವಾಗಿದೆ.

ಪ್ರತಿವರ್ಷ ಬೆಳೆಸಾಲ ನವೀಕರಣ ಮಾಡುವಾಗ ಸಹಕಾರಿ ಸಂಘಗಳಲ್ಲಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಬೆಳೆವಿಮೆ ಪ್ರಿಮಿಯಂ ಹಣ ಮುರಿದುಕೊಂಡೇ ಸಾಲ ನೀಡಲಾಗುತ್ತಿತ್ತು. ಇಲ್ಲವೇ ಸಾಲ ನವೀಕರಿಸಲಾಗುತ್ತಿತ್ತು. ಇದೇ ಕಾರಣಕ್ಕೆ ಸಾಲ ಪಡೆದ ರೈತರೆಲ್ಲರೂ ಬೆಳೆವಿಮೆ ಮಾಡಿಸಿದಂತಾಗುತ್ತಿತ್ತು. ಆದರೆ ಪ್ರಸಕ್ತವಾಗಿ ರೈತರ ಸಂಪೂರ್ಣ ಸಾಲ ಮನ್ನಾ ಆಗಿಲ್ಲ. ಮನ್ನಾ ಆಗಿದ್ದರೂ ಹೊಸದಾಗಿ ಸಾಲ ಸಿಕ್ಕಿಲ್ಲ. ಹೀಗಾಗಿ ರೈತರ್ಯಾರು ಪ್ರಿಮಿಯಂ ಹಣ ತುಂಬಿ ಬೆಳೆವಿಮೆ ಮಾಡಿಸುತ್ತಿಲ್ಲ. ಇದೇ ಕಾರಣಕ್ಕೆ ಪ್ರಸಕ್ತವಾಗಿ ಶೇ.80ರಷ್ಟು ರೈತರು ಬೆಳೆವಿಮೆಯಿಂದ ಹೊರಗುಳಿಯುತ್ತಿದ್ದಾರೆ.

ರೈತರ ನಿರಾಸಕ್ತಿಗೆ ಕಾರಣ: ಮಳೆ ಕಡಿಮೆಯಾಗಿ ಇಲ್ಲವೇ ಹವಾಮಾನ ವೈಪರೀತ್ಯದಿಂದ ಬೆಳೆ ಹಾನಿಯಾದಾಗ ಸೂಕ್ತ ಪರಿಹಾರದ ನಿಟ್ಟಿನಲ್ಲಿ ಬರುವುದೇ ಬೆಳೆ ವಿಮೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಇದು ಕನ್ನಡಿಯೊಳಗಿನ ಗಂಟಾಗುತ್ತಿದೆ. ಬೆಳೆ ನಷ್ಟವಾದಾಗ ಪರಿಹಾರ ರೂಪದಲ್ಲಿ ಬೆಳೆವಿಮೆ ಬರುತ್ತದೆ ಎಂದು ಹೇಳಲಾಗುತ್ತದೆ. ಆದರೆ ಇದು ಕಾರ್ಯರೂಪಕ್ಕೆ ಬರುತ್ತಿಲ್ಲ.

ಕಳೆದ ವರ್ಷ ಹೈದ್ರಾಬಾದ್‌ ಕರ್ನಾಟಕ ಭಾಗದಾದ್ಯಂತ ಭೀಕರ ಬರಗಾಲ ಬಿದ್ದು, ಯಾವುದೇ ಬೆಳೆಗಳು ಕೈಗೆ ಬರಲಿಲ್ಲ. 2018-19ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಹಾನಿಗೆ ಕಲಬುರಗಿ ಜಿಲ್ಲೆಯಲ್ಲಿ ಕೇವಲ 10 ಕೋಟಿ ರೂ. ಮಾತ್ರ ಬೆಳೆವಿಮೆ ಮಂಜೂರಾಗಿದೆ. ಆದರೆ ಬೆಳೆಹಾನಿ ಅವಲೋಕಿಸಿದರೆ ಜಿಲ್ಲೆಗೆ ಕನಿಷ್ಟ 150 ಕೋಟಿ ರೂ. ಬೆಳೆವಿಮೆ ಮಂಜೂರಾಗಬೇಕಿತ್ತು. ಬೆಳೆವಿಮೆ ನೆಪದಲ್ಲಿ ವಿಮಾ ಕಂಪನಿಗೆ ಹಣ ಮಾಡಿಕೊಡುವ ದಂಧೆಯಾಗಿದೆ ಎನ್ನುವುದು ರೈತರ ಆರೋಪ.

ಸರ್ಕಾರ ಕೆಲವೊಂದಕ್ಕೆ ಅನಗತ್ಯವಾಗಿ ಸಬ್ಸಿಡಿಗೆಂದು ಕೋಟ್ಯಂತರ ರೂ. ಖರ್ಚು ಮಾಡುವುದು ಹಾಗೂ ಸಾಲ ಮನ್ನಾ ಮಾಡಿ ಗೊಂದಲಕ್ಕೆ ಒಳಗಾಗುವ ಬದಲು ಬೆಳೆ ಹಾನಿಯಾದಾಗ ಸೂಕ್ತ ಬೆಳೆವಿಮೆ ಪರಿಹಾರ ದೊರಕಲು ಹಾಗೂ ಸರ್ಕಾರವೇ ರೈತರ ಬೆಳೆವಿಮೆ ಪ್ರಿಮಿಯಂ ತುಂಬುವಂತಹ ಯೋಜನೆ ಕಾರ್ಯರೂಪಕ್ಕೆ ತರುವುದು ಹೆಚ್ಚು ಸೂಕ್ತ. ಹೀಗಾದಲ್ಲಿ ವಿಮಾ ಕಂಪನಿಗಳ ಹಗಲು ದರೋಡೆ ನಿಲ್ಲಲು ಸಾಧ್ಯವಾಗುತ್ತದೆ.
•ಜಗದೇವಪ್ಪ ಪಾಟೀಲ, ರೈತ

ಬೆಳೆವಿಮೆಗೆ ಕೇವಲ ನಾಲ್ಕು ದಿನಗಳು ಮಾತ್ರ ಇರುವುದರಿಂದ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬೆಳೆವಿಮೆ ಮಾಡಿಸಲು ಅನುಕೂಲವಾಗಲು ಆ.15ರವರೆಗೆ ವಿಸ್ತರಿಸುವಂತೆ ಸರ್ಕಾರಕ್ಕೆ ಹಾಗೂ ವಿಮಾ ಕಂಪನಿಗಳಿಗೆ ಪತ್ರ ಬರೆಯಲಾಗಿದೆ.
ರತೇಂದ್ರನಾಥ ಸುಗೂರ,
 ಜಂಟಿ ಕೃಷಿ ನಿರ್ದೇಶಕರು ಕಲಬುರಗಿ

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.