ಬೆಳೆವಿಮೆ ಮಂಜೂರಾತಿಯಲ್ಲಿ ಲೋಪದೋಷ ಸಾಬೀತು

ಎರಡು ಗ್ರಾಮಗಳಿಗೆ 4 ಕೋಟಿ, ಜಿಲ್ಲೆಯಾದ್ಯಂತ 8 ಕೋಟಿ •ಹಾನಿ ನಿಖರ ವರದಿ ದಾಖಲಿಸದವರ ವಿರುದ್ಧ ಕ್ರಮಕ್ಕೆ ಆಗ್ರಹ

Team Udayavani, Aug 7, 2019, 9:59 AM IST

Udayavani Kannada Newspaper

ಹಣಮಂತರಾವ ಭೈರಾಮಡಗಿ
ಕಲಬುರಗಿ:
ಕಳೆದ 2018-19ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ಮಂಜೂರಾತಿಯಲ್ಲಿ ಲೋಪದೋಷ ಸಾಬೀತಾದಂತಾಗಿದ್ದು, ಇದರಿಂದ ರೈತರು ಶೋಷಣೆಗೆ ಒಳಗಾದಂತಾಗಿದೆ.

ಕಳೆದ ವರ್ಷ ಭೀಕರ ಬರಗಾಲ ಎದುರಾಗಿ ಯಾವುದೇ ಬೆಳೆಗಳು ಕೈಗೆ ಬಾರದೇ ನಷ್ಟವಾಗಿರುವುದು ಸತ್ಯವಾಗಿದೆ. ಕಳೆದ ವರ್ಷದ ಬೆಳೆ ಹಾನಿ ಅವಲೋಕಿಸಿದರೆ ಕಲಬುರಗಿ ಜಿಲ್ಲೆಯಲ್ಲಿರುವ 220 ಗ್ರಾಪಂಗಳಲ್ಲಿ ಪ್ರತಿ ಗ್ರಾಪಂಗೆ ಕನಿಷ್ಠ ಒಂದು ಕೋಟಿ ರೂ.ದಂತೆ ಕನಿಷ್ಠ 200 ಕೋಟಿ ರೂ. ಬೆಳೆವಿಮೆ ಮಂಜೂರಾಗಬೇಕಿತ್ತು. ಆದರೆ ಕೇವಲ 12 ಕೋಟಿ ರೂ. ಬೆಳೆವಿಮೆ ಮಂಜೂರಾಗಿದೆ.

ಜಿಲ್ಲೆಗೆ ಮೊದಲು 10.35 ಕೋಟಿ ರೂ. ಬೆಳೆವಿಮೆ ಮಂಜೂರು ಮಾಡಿ ತದನಂತರ ಒಂದೆರಡು ದೋಷ ಸರಿಪಡಿಸಿ ಈಗ 12.21 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ ಎರಡು ಗ್ರಾಮಕ್ಕೆ 4 ಕೋಟಿ ರೂ. ಬೆಳೆ ವಿಮೆ ಮಂಜೂರಾದರೆ ಇಡೀ ಜಿಲ್ಲೆಗೆ ಉಳಿದ ಎಂಟು ಕೋಟಿ ರೂ. ಮಂಜೂರಾಗಿದೆ. ಇದು ಲೋಪದೋಷಕ್ಕೆ ಹಿಡಿದ ಕನ್ನಡಿಯಂತಿದೆ.

ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಹಾಗೂ ಫಿರೋಜಾಬಾದ್‌ ಗ್ರಾಮಕ್ಕೆ 4 ಕೋಟಿ ರೂ. ಸಮೀಪ ಬೆಳೆ ವಿಮೆ ಮಂಜೂರಾಗಿದೆ. ಫಿರೋಜಾಬಾದ್‌ ಗ್ರಾಮದ 263 ರೈತರಿಗೆ ಒಟ್ಟಾರೆ 1.11 ಕೋಟಿ ರೂ., ಹೊನ್ನಕಿರಣಗಿ ಗ್ರಾಮದ 313 ರೈತರಿಗೆ 2.85 ಕೋಟಿ ರೂ. ಬೆಳೆ ವಿಮೆ ಮಂಜೂರಾಗಿ ಅವರ ಖಾತೆಗಳಿಗೆ ಹಣ ಬಿಡುಗಡೆಯಾಗುತ್ತಿದೆ. ಕಳೆದ ವರ್ಷ ಭೀಕರ ಬರಗಾಲ ಎದುರಾಗಿ ಜಿಲ್ಲಾದ್ಯಂತ ಎಕರೆಗೆ ಎರಡು ಚೀಲ ಇಳುವರಿ ಬಂದಿಲ್ಲ. ಆಶ್ಚರ್ಯ ಎಂದರೆ ಹೊನ್ನಕಿರಣಗಿ, ಫಿರೋಜಾಬಾದ್‌ ಅಕ್ಕಪಕ್ಕದ ಗ್ರಾಮಗಳಿಗೆ ನಯಾ ಪೈಸೆ ಬೆಳೆ ವಿಮೆ ಮಂಜೂರಾಗಿಲ್ಲ. ಹೇರೂರ ಬಿ., ಹಾಗರಗುಂಡಗಿ, ನದಿಸಿನ್ನೂರ ಸೇರಿದಂತೆ ಇತರ ಗ್ರಾಮಗಳಿಗೆ ಅಷ್ಟೇ ಏಕೆ ಫ‌ರಹತಾಬಾದಕ್ಕೂ ಬೆಳೆ ವಿಮೆ ಮಂಜೂರಾಗಿಲ್ಲ. ಇದನ್ನು ಅವಲೋಕಿಸಿದರೆ ಬೆಳೆ ಇಳುವರಿ ಪ್ರಮಾಣ (ಕ್ರಾಪ್‌ ಕಟಿಂಗ್‌ ಎಕ್ಸ್‌ಪಿರಿಮೆಂಟ್) ನಿಖರವಾಗಿ ದಾಖಲಿಸುವಲ್ಲಿ ಸಂಪೂರ್ಣ ಲೋಪವಾಗಿರುವುದು ಸಾಬೀತುಪಡಿಸುತ್ತದೆ.

ಕಳೆದ ವರ್ಷ ಅಫ‌ಜಲಪುರ, ಜೇವರ್ಗಿ ಸೇರಿದಂತೆ ಮಳೆ ಕೊರತೆಯಾಗಿ ತೊಗರಿ ಸೇರಿದಂತೆ ಇತರ ಬೆಳೆ ಅತ್ಯಂತ ಕಡಿಮೆಯಾಗಿ ಇಳುವರಿ ಬಂದಿದೆ. ಒಂದು ವೇಳೆ ಬೆಳೆ ಇಳುವರಿ ಪ್ರಮಾಣ (ಕ್ರಾಪ್‌ ಕಟಿಂಗ್‌ ಎಕ್ಸಪಿರಮೆಂಟ್) ಅಳೆಯುವಲ್ಲಿ ಸರಿಯಾಗಿ ನಡೆದಿದ್ದರೆ ಎಲ್ಲ ಗ್ರಾಪಂಗಳಿಗೂ ಬೆಳೆ ವಿಮೆ ಮಂಜೂರಾಗುತ್ತಿತ್ತು. ಅದರೆ ವಾಸ್ತವ ವರದಿ ರೂಪಿಸುವಲ್ಲಿ ಜಿಲ್ಲಾಡಳಿತ ವಿಫ‌ಲವಾಗಿದ್ದರಿಂದ ರೈತರು ಬೆಳೆ ವಿಮೆಯಿಂದ ವಂಚಿರಾಗಿದ್ದಾರೆ.

ಲೋಪಕ್ಕೆ ಶಿಕ್ಷೆ ಏನು: ಕಳೆದ ವರ್ಷ ಬೆಳೆ ವಿಮೆ ಮಂಜೂರಾಗುವಲ್ಲಿ ಲೋಪದೋಷವಾಗಿದೆ. ಬೆಳೆ ಇಳುವರಿ ಪ್ರಮಾಣ (ಕ್ರಾಪ್‌ ಕಟಿಂಗ್‌ ಎಕ್ಸ್‌ಪಿರಿಮೆಂಟ್) ಸರಿಯಾಗಿ ಮಾಡದಿರುವ ಹಿನ್ನೆಲೆಯಲ್ಲಿ ರೈತರಿಗೆ ಅನ್ಯಾಯವಾಗಿದೆ. ಆದರೆ ಸರಿಯಾದ ವರದಿ ರೂಪಿಸುವಲ್ಲಿ ಸಂಪೂರ್ಣ ನಿರ್ಲಕ್ಷ್ಯ ತೋರಿದ, ಜಿಲ್ಲಾದ್ಯಂತ ನಡೆಸಲಾದ ಒಂದು ಸಾವಿರ ಕ್ಷೇತ್ರಗಳಲ್ಲಿನ ಬೆಳೆ ಇಳುವರಿ ಪ್ರಮಾಣ (ಕ್ರಾಪ್‌ ಕಟಿಂಗ್‌ ಎಕ್ಸ್‌ಪಿರಿಮೆಂಟ್) ನಿಗದಿಯಲ್ಲಿ ಸುಮಾರು 900 ಕ್ಷೇತ್ರಗಳ ವರದಿ ವಾಸ್ತವವಾಗಿ ಮಾಡದೇ ಬೇಕಾಬಿಟ್ಟಿ ಮಾಡಿರುವುದು ಸ್ಪಷ್ಟವಾಗಿ ಕಂಡು ಬರುತ್ತದೆ. ಹೀಗಾಗಿ ಸಂಬಂಧಪಟ್ಟ 900 ಕ್ಷೇತ್ರಗಳಲ್ಲಿನ ಬೆಳೆ ಇಳುವರಿ ಪ್ರಮಾಣ (ಕ್ರಾಪ್‌ ಕಟಿಂಗ್‌ ಎಕ್ಸ್‌ಪಿರಿಮೆಂಟ್) ನಿಖರವಾಗಿ ಅಳೆದು ಅದನ್ನು ವರದಿಯಲ್ಲಿ ಉಲ್ಲೇಖಸದ ಸಂಬಂಧಪಟ್ಟ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಂಡು ರೈತರಿಗೆ ನಷ್ಟವಾಗಿರುವ ಸುಮಾರು 200 ಕೋಟಿ ರೂ. ಇವರಿಂದ ವಸೂಲಾತಿ ಮಾಡಿದಾಗ ಮಾತ್ರ ಮುಂದೆ ಇಂತಹ ಶೋಷಣೆ -ಅನ್ಯಾಯ ತಪ್ಪಿಸಬಹುದಾಗಿದೆ.

ಬೆಳೆ ಇಳುವರಿ ಪ್ರಮಾಣ (ಕ್ರಾಪ್‌ ಕಟಿಂಗ್‌ ಎಕ್ಸ್‌ಪಿರಿಮೆಂಟ್)ವನ್ನು ಕಂದಾಯ, ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಗದಿಗೊಳಿಸಲಾದ ಕ್ಷೇತ್ರಗಳಿಗೆ ಹೋಗಿ ಇಳುವರಿ ವರದಿ ರೂಪಿಸಬೇಕು. ಆದರೆ ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸಿಬ್ಬಂದಿ ಮಾಡಿದ್ದು ಅವಾಂತರ ಹಾಗೂ ಕರ್ತವ್ಯಲೋಪಕ್ಕೆ ಕಾರಣವಾಗಿದೆ. ಒಟ್ಟಾರೆ ಬೆಳೆ ವಿಮೆ ಕಂಪನಿಗಳು ಹಾಗೂ ಅಧಿಕಾರಿಗಳ ಒಳ ಒಪ್ಪಂದಿಂದ ರೈತರಿಗೆ ಬೆಳೆ ವಿಮೆ ಎಂಬುದನ್ನು ಕನ್ನಡಿಯೊಳಗಿನ ಗಂಟಾಗಿ ಮಾಡಲಾಗುತ್ತಿದೆ. ಇದಕ್ಕೆಲ್ಲ ಕಡಿವಾಣ ಹಾಕುವುದು ಅತ್ಯವಶ್ಯಕವಾಗಿದೆ.

ಬೆಳೆ ವಿಮೆ ಮಂಜೂರಾತಿ ಸಮರ್ಪಕವಾಗಿಲ್ಲ. ಸಂಪೂರ್ಣ ಲೋಪವಾಗಿದೆ. ತಮ್ಮ ಕ್ಷೇತ್ರದ ಎರಡು ಹಳ್ಳಿಗಳಿಗೆ ಬೆಳೆ ಹಾನಿಗೆ ತಕ್ಕ ನಾಲ್ಕು ಕೋಟಿ ರೂ. ಬೆಳೆ ವಿಮೆ ಮಂಜೂರಾಗಿರುವುದು ಸಂತಸವಾಗಿದೆ. ಆದರೆ ಅದೇ ಗ್ರಾಮದ ಪಕ್ಕದ ಹಳ್ಳಿಗಳಿಗೆ ನಯಾಪೈಸೆ ಬಿಡುಗಡೆ ಆಗದಿರುವುದು ಶೋಷಣೆಗೆ ಹಿಡಿದ ಕನ್ನಡಿಯಾಗಿದೆ. ಎಲ್ಲ ರೈತರಿಗೂ ನ್ಯಾಯ ಸಿಗಲು ಮಗದೊಮ್ಮೆ ಸಮೀಕ್ಷೆ ರೂಪಿಸಿ ಬೆಳೆ ಹಾನಿಗೆ ತಕ್ಕ ಪರಿಹಾರ ಸಿಗಬೇಕು.
ಎಂ.ವೈ. ಪಾಟೀಲ,
 ಶಾಸಕ, ಅಫ‌ಜಲಪುರ

ಮುಖ್ಯಮಂತ್ರಿ ಗಮನಕ್ಕೆ ಕಲಬುರಗಿ ಜಿಲ್ಲೆಯಲ್ಲಿ ಕಳೆದ ವರ್ಷ ಮುಂಗಾರು ಹಂಗಾಮಿನ ಬೆಳೆ ವಿಮೆ ಮಂಜೂರಾತಿಯಲ್ಲಿ ಅನ್ಯಾಯ ಹಾಗೂ ಲೋಪದೋಷ ಆಗಿರುವುದನ್ನು ನೂತನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಗಮನಕ್ಕೆ ತರಲಾಗಿದೆ. ಅವರು ಮರು ಸಮೀಕ್ಷೆ ಬಗ್ಗೆ ಒಲವು ಹೊಂದಿದ್ದಾರೆ. ತಾವು ಮನವಿ ಸಲ್ಲಿಸುವ ಮುಂಚೆಯೇ ಕಲಬುರಗಿ ಜಿಲ್ಲೆಗೆ ಬೆಳೆ ವಿಮೆ ಮಂಜೂರಾತಿಯಲ್ಲಿ ಲೋಪವಾಗಿರುವುದು ಗಮನದಲ್ಲಿದೆ. ಹೀಗಾಗಿ ರೈತರಿಗೆ ನ್ಯಾಯ ದೊರಕುವ ವಿಶ್ವಾಸವಿದೆ.
ಸಿದ್ರಾಮಪ್ಪ ಪಾಟೀಲ ಧಂಗಾಪುರ,
 ಅಧ್ಯಕ್ಷರು ಜಿಲ್ಲಾ ಕೃಷಿಕ ಸಮಾಜ

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.