ಧರ್ಮದ ವಿಜಯವೇ ದಸರಾ
ಜಿಲ್ಲಾದ್ಯಂತ ನಾಡದೇವಿ ಪ್ರತಿಷ್ಠಾಪನೆ-ವಿಶೇಷ ಪೂಜೆಪರಸ್ಪರ ಬನ್ನಿ ವಿನಿಮಯ-ಶುಭಾಶಯ ಕೋರಿಕೆ
Team Udayavani, Oct 9, 2019, 10:57 AM IST
ಕಲಬುರಗಿ: ಧರ್ಮದ ಮೇಲೆ ಅಧರ್ಮದ ವಿಜಯದ ಸಂಕೇತವೇ ವಿಜಯ ದಶಮಿ ಹಬ್ಬದ ಸಂಕೇತ ಎಂದು ಮಾಜಿ ಸಚಿವ ಡಾ| ಶರಣ ಪ್ರಕಾಶ ಪಾಟೀಲ ಹೇಳಿದರು.
ನಗರದ ರಾಮಮಂದಿರ ಬಳಿಯ ಸಾಯಿರಾಮ ನಗರದಲ್ಲಿ ಏರ್ಪಡಿಸಲಾಗಿದ್ದ ಮೂರು ದಿನಗಳ ದಾಂಡಿಯಾ ನೈಟ್, ನೃತ್ಯ ಸ್ಪರ್ಧೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಧರ್ಮ ರಕ್ಷಣೆಗೆ ನಡೆಸಿದ ಹೋರಾಟದ ನೆನಪಿಗಾಗಿ ಮಾಡುವ ಹಬ್ಬವೇ ದಸರಾ ಹಬ್ಬವಾಗಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮ ಪ್ರಭು ಪಾಟೀಲ ನೆಲೋಗಿ ಮಾತನಾಡಿ, ಧರ್ಮಕ್ಕೆ ಜಯ ಎನ್ನುವುದನ್ನು ಪ್ರತಿಪಾದಿಸುವುದೇ ದಸರಾ ಹಬ್ಬದ ವಿಶೇಷವಾಗಿದೆ. ಎಲ್ಲರೂ ಧರ್ಮ ಮಾರ್ಗದಲ್ಲಿ ಸಾಗುವ ಮೂಲಕ ಧರ್ಮ, ಸಂಸ್ಕೃತಿ ರಕ್ಷಣೆಗೆ ಮುಂದಾಗಬೇಕಿದೆ
ಎಂದರು. ಪತ್ರಕರ್ತ ವೈಜನಾಥ ಹಿರೇಮಠ ಮಾತನಾಡಿ, ಹಬ್ಬ ಹರಿದಿನಗಳಲ್ಲಿ ಎಲ್ಲರೂ ಒಗ್ಗೂಡಲು ಇರುವ ವೇದಿಕೆಗಳಲ್ಲಿ ಪಾಲ್ಗೊಂಡು ಹೊಸ ಶಕ್ತಿ, ಹುಮ್ಮಸ್ಸು ಪಡೆದುಕೊಳ್ಳಬೇಕು ಎಂದು ಹೇಳಿದರು.
ಸಾಯಿರಾಮ ನಗರದ ವಾರ್ಡ್ ನಂ: 55ರ ಪಾಲಿಕೆ ಸದಸ್ಯ ಮಹೇಶ ಹೊಸೂರ್ಕರ್ ಅಧ್ಯಕ್ಷತೆ ವಹಿಸಿದ್ದರು. ಪವನ ಗುತ್ತೇದಾರ, ಸಂಜೋಗ ರಾಠಿ, ಮಹೇಶ ದೊಶೇಟ್ಟಿ, ಗುರುರಾಜ ಇಟಗಿ, ರಾಘವೇಂದ್ರ ದೇಸಾಯಿ ಇದ್ದರು. ನಂತರ ದಾಂಡಿಯಾ, ನೃತ್ಯ ಪ್ರದರ್ಶನಗಳು ನಡೆದವು.
ಬಹುಮಾನ ವಿತರಣೆ: ಮೂರನೇ ದಿನ ಪಾಲ್ಗೊಂಡಿದ್ದ ಸ್ಪರ್ಧಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಜರುಗಿತು. ಮಹಾನಗರ ಪಾಲಿಕೆ ಸದಸ್ಯ ಮಹೇಶ ಹೊಸೂರ್ಕರ್ ಬಹುಮಾನ ವಿತರಿಸಿದರು. ನಾರಾಯಣ ರಾಠೊಡ, ಅರುಣಾ ಹಿರೇಮಠ, ಅಶ್ವಿನಿ ದೇಸಾಯಿ, ಜ್ಯೋತಿ ಪಾಟೀಲ, ನೀಲಂ, ಪ್ರಿಯಾಂಕ, ಮಾಲಾಶ್ರೀ, ಸುಶೀಲಾ, ಲಲಿತಾ, ಲಕ್ಷ್ಮೀ, ಸಾಕ್ಷಿ, ಮೇದಿನಿ, ವೈಷ್ಣವಿ ಹಾಗೂ ಬಡಾವಣೆ ನಿವಾಸಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್