ಬುದ್ಧನ ಕಡೆ ನಮ್ಮ ನಡೆ ಸಾಗಲಿ

ಭಾರತೀಯ ನೆಲೆಯ ಧರ್ಮಬೌದ್ಧ ಧರ್ಮಕ್ಕೆ ಸೇರಿದ್ದರು ಅಶೋಕ, ಕನಿಷ್ಕ

Team Udayavani, Oct 9, 2019, 12:18 PM IST

09-October-8

ಕಲಬುರಗಿ: ಜಗತ್ತಿನ ಶಾಂತಿ, ನೆಮ್ಮದಿಗೆ ಗೌತಮ ಬುದ್ಧ ಹುಟ್ಟುಹಾಕಿರುವ ಬೌದ್ಧ ಧರ್ಮದ ತತ್ವ, ಸಂದೇಶಗಳನ್ನು ಪಾಲಿಸಬೇಕಿದ್ದು, ನಮ್ಮ ನಡೆ ಬುದ್ಧನ ಕಡೆಗೆ ಸಾಗಬೇಕೆಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ, ಮಾಜಿ ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.

ನಗರದ ಹೊರವಲಯದ ಬುದ್ಧ ವಿಹಾರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 63ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬುದ್ಧ ಮತ್ತು ಬೌದ್ಧ ಧರ್ಮದ ಬಗ್ಗೆ ಮಾತನಾಡುವುದಲ್ಲ. ಬುದ್ಧನ ವಿಚಾರ, ಆಚಾರ ಮತ್ತು ಪ್ರಚಾರ ಅಗತ್ಯ ಎಂದರು.

ಬುದ್ಧ, ಬಸವಣ್ಣ ಸಮಾನತೆಗಾಗಿ ಹೋರಾಟ ಮಾಡಿದರು. ಆಗ ಪ್ರಾಬಲ್ಯಯುತರ ಕೈಯಲ್ಲಿ ಅಧಿಕಾರ ಇತ್ತು. ಆದ್ದರಿಂದ ಸಮಾನತೆ ಸಾಧಿಸಲು ರಾಜ, ಮಹಾರಾಜರ ಮನವೊಲಿಸುವ ಪ್ರಯತ್ನ ಮಾಡಿದರು. ಬೌದ್ಧ ಧರ್ಮ ತಾತ್ವಿಕತೆಯಿಂದ ಕೂಡಿದ ಧರ್ಮವಲ್ಲ. ಪ್ರಾಯೋಗಿಕವಾದ ಧರ್ಮವಾಗಿದೆ. ನಾನು ಹೇಳಿದ ವಿಚಾರಗಳು ನಿಮಗೆ ಸರಿ ಎನ್ನಿಸದೇ ಇದ್ದರೆ, ಅವುಗಳನ್ನು ಪರೀಕ್ಷೆಗೆ ಒಳಪಡಿಸಿ ಎಂದು ಸ್ವತಃ ಗೌತಮ ಬುದ್ಧ ಹೇಳಿದ್ದರು.

ಬುದ್ಧನ ವೈಜ್ಞಾನಿಕ ತತ್ವಗಳನ್ನು ಅರಿತ ಅಶೋಕ, ಹರ್ಷ, ಕನಿಷ್ಕ ರಾಜರು ಬೌದ್ಧ ಧರ್ಮ ಸ್ವೀಕರಿಸಿದರು. ಗ್ರೀಕ್‌ನಲ್ಲಿ ಅಲೆಕ್ಸಾಂಡರ್‌ನ ಮೊಮ್ಮಗ ಕೂಡ ಬೌದ್ಧ ಧರ್ಮಕ್ಕೆ ಸೇರಿದರು ಎಂದು ಹೇಳಿದರು.

ಬೌದ್ಧ ಧರ್ಮ ಭಾರತೀಯ ನೆಲೆ ಹೊಂದಿದ ಧರ್ಮವಾಗಿದೆ. ಬುದ್ಧ ಮತ್ತು ಆತನ ಬೌದ್ಧ ಧರ್ಮದ ಬಗ್ಗೆ ಡಾ| ಬಿ.ಆರ್‌.ಅಂಬೇಡ್ಕರ್‌
ಆಳವಾಗಿ ಚಿಂತಿಸಿಯೇ ಬೌದ್ಧ ಧರ್ಮ ಸ್ವೀಕರಿಸಿದರು. ದೇಶದ ಏಕತೆ, ಒಗ್ಗಟ್ಟಿಗಾಗಿಯೇ ಅಂಬೇಡ್ಕರ್‌ ನಮ್ಮದೇ ನೆಲದ ಬೌದ್ಧ ಧರ್ಮವನ್ನು ಸ್ವೀಕರಿಸಿದರು. ಬೌದ್ಧ ಧರ್ಮ ಶಾಂತಿಯ ಪ್ರತೀಕ. ಶಾಂತಿ ಆಳವಡಿಸಿಕೊಂಡರೆ ಸುಖ, ಸಮೃದ್ಧಿ ಸಾಧಿಸಬಹುದಾಗಿದೆ ಎಂದರು.

ಧಮ್ಮ ಪ್ರವಚನ ನೀಡಿದ ಕವಿ ಲಕ್ಷ್ಮೀ ಪತಿ ಕೋಲಾರ, ಬೌದ್ಧ ಧರ್ಮ ಪ್ರವೇಶಕ್ಕೆ ಯಾವುದೇ ಬಾಗಿಲು ಇಲ್ಲ, ನೈತಿಕ ಜೀವನವೇ ಬೌದ್ಧ ಧರ್ಮ. ಒಂದು ಕಾಲದಲ್ಲಿ ಇಡೀ ಭಾರತವೇ ಬೌದ್ಧ ಧರ್ಮವಾಗಿತ್ತು. ಈ ನೆಲದ ಪದರುಗಳಲ್ಲಿ ಒಂದು ಪದರು ಬೌದ್ಧ ಅಡಗಿದೆ ಎಂದರು. ಭಾರತೀಯ ಮನಸ್ಸುಗಳು ಶ್ರೀಮಂತಿಕೆ, ಅಧಿಕಾರ, ಜಾತಿ, ಭಕ್ತಿ ಆಮಲಿನಲ್ಲಿ ಕೂಡಿವೆ. ಕಸ ತುಂಬಿಕೊಂಡಿರುವ ಮನಸ್ಸಿನಲ್ಲಿ ಹೊಸದು ತುಂಬಲು ಸಾಧ್ಯವಿಲ್ಲ. ಬೌದ್ಧ ಧರ್ಮ ದೇಹಕ್ಕಿಂತ ಮನಸ್ಸಿಗೆ ಸಂಬಂಧಿಸಿದ್ದಾಗಿದೆ. ಮನಸ್ಸಿನಲ್ಲಿ ತುಂಬಿದ ಕಸವನ್ನು ಹೊರಹಾಕಲು ಧ್ಯಾನ ಮಾಡಬೇಕೆಂದರು.

ಮಲ್ಲಿಕಾರ್ಜುನ ಖರ್ಗೆ ಪತ್ನಿ ರಾಧಾಬಾಯಿ ಖರ್ಗೆ, ಪುತ್ರ ರಾಹುಲ್‌ ಖರ್ಗೆ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ, ಮಾಜಿ ಸಚಿವ ಡಾ| ಶರಣ ಪ್ರಕಾಶ ಪಾಟೀಲ, ವಿಧಾನ ಪರಿಷತ್‌ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಅರವಿಂದ ಅರಳಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಎಚ್‌.ಟಿ. ಪೋತೆ ಪಾಲ್ಗೊಂಡಿದ್ದರು. ಜಾತ್ರೆ ವಾತಾವರಣ: ಸಂವಿಧಾನ ಶಿಲ್ಪಿ ಡಾ| ಬಿ.ಆರ್‌.ಅಂಬೇಡ್ಕರ್‌ ಅವರು ಬೌದ್ಧ ಧರ್ಮ ಸ್ವೀಕರಿಸಿದ ದಿನದ ಅಂಗವಾಗಿ ಧಮ್ಮ ಚಕ್ರಪ್ರವರ್ತನ ದಿನಾಚರಣೆ ಹಿನ್ನೆಲೆಯಲ್ಲಿ ಬುದ್ಧ ವಿಹಾರದಲ್ಲಿ
ಜಾತ್ರೆ ವಾತಾವರಣ ನಿರ್ಮಾಣವಾಗಿತ್ತು. ಕರ್ನಾಟಕ, ಮಹಾರಾಷ್ಟ್ರದಿಂದ ಸಾವಿರಾರು ಜನರು ಬದ್ಧ ವಿಹಾರಕ್ಕೆ ಭೇಟಿ ಕೊಟ್ಟು ಬುದ್ಧನ ದರ್ಶನ ಪಡೆದರು. ದೂರದ ಊರುಗಳಿಂದ
ವಾಹನಗಳಲ್ಲಿ ಮಕ್ಕಳು, ವೃದ್ಧರಾದಿ ಆಗಿ ಕುಟುಂಬ ಸಮೇತ ಬಂದಿದ್ದ ಬೌದ್ಧ ಉಪಾಸಕರು, ಅಲ್ಲಿ ತಂಡ-ತಂಡವಾಗಿ ಬುದ್ಧ, ಅಂಬೇಡ್ಕರ್‌ ಅವರು ಸಂದೇಶ ಗೀತೆಗಳ ಗಾಯನ ಮಾಡಿದರು.

ಜಾತ್ರೆ ಮಾದರಿಯಲ್ಲಿ ಅನೇಕ ಮಳಿಗೆಗಳನ್ನು ತೆರೆಯಲಾಗಿತ್ತು. ಹೆಚ್ಚಾಗಿ ಬುದ್ಧ, ಅಂಬೇಡ್ಕರ್‌ ಭಾವಚಿತ್ರಗಳನ್ನು ಖರೀದಿಸುತ್ತಿರುವ ದೃಶ್ಯ ಕಂಡು ಬಂತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.