ಪ್ಲಾಸ್ಟಿಕ್‌ ತ್ಯಜಿಸಿ ಬಟ್ಟೆ ಚೀಲ ಬಳಸಿ

ಮಹಿಳಾ ಸ್ವ-ಸಹಾಯ ಸಂಘಗಳಿಗೆ ವೇದಿಕೆ •ಮಾರುಕಟ್ಟೆಯಲ್ಲಿ ಹೇರಳವಾಗಿ ಲಭ್ಯ

Team Udayavani, Jul 21, 2019, 10:41 AM IST

21-July-10

ಕಲಬುರಗಿ: ಮನೆಯಲ್ಲಿ ತಯಾರಿಸಿದ ಬಟ್ಟೆ ಚೀಲಗಳನ್ನು ಪ್ರದರ್ಶಿಸಿದ ಮಹಿಳಾ ಸ್ವ-ಸಹಾಯ ಸಂಘಗಳ ಪ್ರತಿನಿಧಿಗಳು.

ಕಲಬುರಗಿ: ಪರಿಸರದ ಮೇಲೆ ತೀವ್ರ ದುಷ್ಪರಿಣಾಮ ಬೀರುವ ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ಬಟ್ಟೆ ಚೀಲ ಬಳಕೆಗೆ ಪ್ರೋತ್ಸಾಹ ಮತ್ತು ಪ್ರೇರಣೆ ನೀಡುವ ನಿಟ್ಟಿನಲ್ಲಿ ಕಲಬುರಗಿ ಮಹಾನಗರ ಪಾಲಿಕೆ ವಿನೂತನ ಮಾರ್ಗ ಕಂಡುಕೊಂಡಿದೆ. ಬಟ್ಟೆ ಚೀಲ ತಯಾರಿಕೆ ಮತ್ತು ಮಾರಾಟಕ್ಕೆ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಉತ್ತೇಜನ ನೀಡುತ್ತಿದೆ.

ಪ್ಲಾಸ್ಟಿಕ್‌ ಮೇಲಿನ ಜನರ ವ್ಯಾಮೋಹದಿಂದ ಎಷ್ಟೇ ಕಠಿಣ ಕ್ರಮ ಕೈಗೊಂಡರೂ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕುವುದು ಸವಾಲಾಗಿದೆ. ಹೀಗಾಗಿ ಪ್ಲಾಸ್ಟಿಕ್‌ ಬದಲಿಗೆ ಬಳಸಬಹುದಾದ ಪರ್ಯಾಯ ವಸ್ತುಗಳ ಬಗ್ಗೆ ಪಾಲಿಕೆಯೇ ಚಿತ್ತ ಹರಿಸಿದ್ದು, ಮಾರುಕಟ್ಟೆಯಲ್ಲಿ ಬಟ್ಟೆ ಚೀಲಗಳು ಯಥೇಚ್ಛ ಪ್ರಮಾಣದಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಲು ಮುಂದಾಗಿದೆ.

ದೀನ್‌ದಯಾಳ್‌ ಅಂತೋದಯ ರಾಷ್ಟ್ರೀಯ ನಗರ ಜೀವನೋಪಾಯ ಯೋಜನೆ (ಡೇ-ನಲ್ಮ)ಯಡಿ ನೋಂದಾಯಿತ ಮಹಿಳಾ ಸಂಘಗಳ ಮಹಿಳೆಯರಿಗೆ ಬಟ್ಟೆ ಚೀಲ ತಯಾರಿಕೆಗೆ ಪ್ರೋತ್ಸಾಹಿಸಲಾಗುತ್ತಿದೆ. ಅಷ್ಟೇ ಅಲ್ಲ, ಆರಂಭಿಕವಾಗಿ ಪಾಲಿಕೆ ಆವರಣದಲ್ಲಿ ಬಟ್ಟೆ ಚೀಲಗಳ ಮಾರಾಟಕ್ಕೆ ಮಹಿಳೆಯರಿಗೆ ಮಳಿಗೆ ಕಲ್ಪಿಸಲಾಗಿದೆ.

ಬಟ್ಟೆ ಚೀಲ ಬಳಸಿ: ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌ ಮತ್ತು ಉತ್ಪನ್ನಗಳು ಪರಿಸರಕ್ಕೆ ಮಾರಕವಾಗಿವೆ. ಜನರ ಆರೋಗ್ಯದ ಮೇಲೂ ಪ್ಲಾಸ್ಟಿಕ್‌ ಕೆಟ್ಟ ಪರಿಣಾಮ ಬೀರುತ್ತಿದೆ. ಕಸ ವಿಲೇವಾರಿ ಹಾಗೂ ಚರಂಡಿಯೊಳಗೆ ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌ಗಳು ಸೇರಿಕೊಳ್ಳುವುದರಿಂದ ನಗರದ ನೈರ್ಮಲ್ಯ ಕಾಪಾಡಲು ಸಮಸ್ಯೆಯಾಗುತ್ತಿದೆ. ಆದ್ದರಿಂದ ಪ್ಲಾಸ್ಟಿಕ್‌ ಬಳಕೆಯನ್ನು ಸಂಪೂರ್ಣ ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳುವುದರ ಜತೆಗೆ ಪ್ಲಾಸ್ಟಿಕ್‌ನ ಪರ್ಯಾಯ ವಸ್ತುಗಳ ಬಗ್ಗೆ ಸಾರ್ವಜನಿಕರು ಮತ್ತು ವರ್ತಕರಿಗೆ ಮನವರಿಕೆ ಮಾಡಿಸಲಾಗುವುದು ಎನ್ನುತ್ತಾರೆ ಪಾಲಿಕೆ ಆಯುಕ್ತೆ ಬಿ.ಫೌಜಿಯಾ ತರನ್ನುಮ್‌.

ಕಾನೂನು ಬಾಹಿರವಾಗಿ ಯಾರೂ ಪ್ಲಾಸ್ಟಿಕ್‌ ಬಳಸಬಾರದು. ಹೋಟೆಲ್, ಕಿರಾಣಿ ಅಂಗಡಿಯವರು ಮತ್ತು ಹಣ್ಣು, ತರಕಾರಿ ಮಾರಾಟಗಾರರು ಪ್ಲಾಸ್ಟಿಕ್‌ ಕ್ಯಾರಿ ಬ್ಯಾಗ್‌ನಲ್ಲಿ ಯಾವುದೇ ಆಹಾರ, ಸಾಮಗ್ರಿಗಳನ್ನು ನೀಡಬಾರದು. ಜನತೆ ಪ್ಲಾಸ್ಟಿಕ್‌ ಬಳಕೆಯಿಂದ ದೂರ ಇರಬೇಕು. ಬಟ್ಟೆ ಚೀಲ ಬಳಕೆ ಮಾಡಬೇಕು. ಎಲ್ಲರ ಸಹಕಾರದಿಂದ ಮಾತ್ರ ಪ್ಲಾಸ್ಟಿಕ್‌ ನಿಯಂತ್ರಣ ಸಾಧ್ಯವಾಗಲಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಬೇಡಿಕೆ ಅನುಸಾರ ಉತ್ಪನ್ನ: ಮಹಾನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡೇ-ನಲ್ಮ ಅಡಿಯ ಮಹಿಳಾ ಸ್ವ-ಸಹಾಯ ಸಂಘಗಳನ್ನು ಒಗ್ಗೂಡಿಸಿ ಬಟ್ಟೆ ಚೀಲ ಉತ್ಪನ್ನಕ್ಕೆ ಪ್ರೋತ್ಸಾಹಿಸಲಾಗುತ್ತಿದೆ. 8X12, 12X15, 12X18 ಇಂಚಿನ ಮೂರು ವಿವಿಧ ಬಟ್ಟೆ ಚೀಲಗಳನ್ನು ತಯಾರಿಸಲಾಗಿದೆ. ಸಾರ್ವಜನಿಕರು, ವ್ಯಾಪಾರಿಗಳ ಬೇಡಿಕೆ ಅನುಸಾರ ಚೀಲಗಳನ್ನು ಉತ್ಪಾದಿಸಲು ಪ್ರೋತ್ಸಾಹಿಸಲಾಗುವುದು ಎಂದು ಪಾಲಿಕೆ ಸಮುದಾಯ ವ್ಯವಹಾರಿಕ ಅಧಿಕಾರಿ ವಿಜಯಲಕ್ಷ್ಮೀ ಪಟ್ಟೇದಾರ ಹೇಳುತ್ತಾರೆ.

ಹೊಸ ಪ್ರಯತ್ನ: ನಗರದಲ್ಲಿ ಸುಮಾರು ಒಂದು ಸಾವಿರ ಮಹಿಳಾ ಸಂಘಗಳು ಕಾರ್ಯನಿವರ್ಹಿಸುತ್ತಿವೆ. ಅನೇಕ ಸಂಘಗಳ ಪ್ರತಿನಿಧಿಗಳು ಬ್ಯೂಟಿ ಪಾರ್ಲರ್‌ ಮತ್ತಿತರ ಸ್ವಾವಲಂಬಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿವೆ. ಇದೇ ಮೊದಲ ಬಾರಿಗೆ ಪಾಲಿಕೆ ಸಹಯೋಗದಲ್ಲಿ ಬಟ್ಟೆ ಚೀಲ ಉತ್ಪನ್ನ ಹಾಗೂ ಮಾರಾಟಕ್ಕೆ ಪ್ರೋತ್ಸಾಹ ನೀಡಿದೆ. ಇದೊಂದು ಹೊಸ ಪ್ರಯತ್ನ. ನಮ್ಮ ಮನೆಗಳಲ್ಲಿ ಬಟ್ಟೆ ಚೀಲ ತಯಾರಿಸುತ್ತೇವೆ. ಕಡಿಮೆ ದರದಲ್ಲಿ ಬಟ್ಟೆ ಚೀಲಗಳು ಲಭ್ಯ ಇರುತ್ತವೆ ಎಂದು ಜೈ ಕನ್ನಡಾಂಬೆ ಜಿಲ್ಲಾ ಮಟ್ಟದ ಕಲ್ಯಾಣಾಭಿವೃದ್ಧಿ ಸಂಘದ ಅಧ್ಯಕ್ಷೆ ಅರ್ಚನಾ ಟೆಂಗಳಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.