ಲಾರಿ-ಟಿಪ್ಪರ್‌ ಪ್ರಯಾಣಕ್ಕೆ ಕಡಿವಾಣ ಹಾಕಿ

ಅಧಿಕ ಪ್ರಯಾಣಿಕರನ್ನು ಕರೆದೊಯ್ಯುವ ವಾಹನಗಳ ಪರವಾನಗಿ ರದ್ದತಿಗೆ ಸೂಚನೆ

Team Udayavani, May 17, 2019, 1:10 PM IST

17-MAY-18

ಕಲಬುರಗಿ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿಸಿ ಆರ್‌.ವೆಂಕಟೇಶಕುಮಾರ ಅಧ್ಯಕ್ಷತೆಯಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು.

ಕಲಬುರಗಿ: ಜಿಲ್ಲೆಯ ಕೆಲ ಭಾಗಗಳಲ್ಲಿ ಸರಕು ಸಾಗಣೆ ಪೂರೈಸುವ ಲಾರಿ-ಟಿಪ್ಪರ್‌ ಸೇರಿದಂತೆ ಇನ್ನಿತರ ಗೂಡ್ಸ್‌ ವಾಹನಗಳಲ್ಲಿ ಸಾರ್ವಜನಿಕರನ್ನು ಕರೆದುಕೊಂಡು ಹೋಗಲಾಗುತ್ತಿದ್ದು, ಇದು ಅಪಘಾತಕ್ಕೆ ಆಹ್ವಾನಿಸಿದಂತಿದೆ. ಇವುಗಳನ್ನು ನಿಯಂತ್ರಿಸುವುದಲ್ಲದೆ ಸಾರ್ವಜನಿಕರನ್ನು ಕರೆದುಕೊಂಡು ಒಯ್ಯುವ ಇಂತಹ ವಾಹನಗಳನ್ನು ಜಪ್ತಿ ಮಾಡಿಕೊಂಡು ವಾಹನ ಮಾಲೀಕರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಆರ್‌.ವೆಂಕಟೇಶ ಕುಮಾರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಇಂತಹ ಪ್ರಕರಣದಲ್ಲಿ ಚಾಲಕನ ಚಾಲನಾ ಪರವಾನಗಿ ಅಮಾನತ್ತಿನಲ್ಲಿರಿಸಬೇಕು ಹಾಗೂ ವಾಹನದ ಪರವಾನಗಿ ರದ್ದತಿಗೂ ಕ್ರಮ ಜರುಗಿಸಬೇಕು. ಇದಲ್ಲದೆ ಜಿಲ್ಲೆಯ ತಾಲೂಕು ಹಾಗೂ ಗ್ರಾಮೀಣ ಭಾಗದಲ್ಲಿ ಟಂಟಂ, ಟೆಂಪು, ಜೀಪ್‌, ಕ್ರೂಸರ್‌ ವಾಹನಗಳಲ್ಲಿ ನಿಗದಿತ ಆಸನಕ್ಕಿಂತ ಹೆಚ್ಚಿನ ಜನರನ್ನು ಕೂರಿಸಿಕೊಂಡು ಪ್ರಯಾಣ ಮಾಡುತ್ತಿದ್ದಲ್ಲಿ ಅಂತಹವರ ಮೇಲೆಯೂ ಆರ್‌ಟಿಒ ಹಾಗೂ ಪೊಲೀಸ್‌ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಕಲಬುರಗಿ ನಗರ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕು, ಹೋಬಳಿ ಹಾಗೂ ಗ್ರಾಮಗಳಲ್ಲಿ ರಸ್ತೆ ಅಪಘಾತ ತಪ್ಪಿಸಲು ಅಲ್ಲಲ್ಲಿ ರೋಡ್‌ ಹಂಪ್ಸ್‌ ನಿರ್ಮಿಸಿ, ರಸ್ತೆ ಮಧ್ಯದಲ್ಲಿರುವ ಗುಂಡಿಗಳನ್ನು ಮುಚ್ಚಿರಿ. ರಸ್ತೆ ಸುರಕ್ಷತೆಯ ಅರಿವು ಮೂಡಿಸುವ ರೇಡಿಯಂ ಸ್ಟಿಕರ್‌ಗಳ ಸಂಕೇತ ಚಿಹ್ನೆಗಳನ್ನು ಹೆಚ್ಚಿನ ಜನಸಂದಣಿ ಇರುವ ಜಂಕ್ಷನಗಳಲ್ಲಿ ಅಳವಡಿಸಬೇಕು ಎಂದು ಹೇಳಿದರು.

ಕ್ರಿಯಾ ಯೋಜನೆ ಸಲ್ಲಿಸಿ: ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ರಸ್ತೆ ಅಪಘಾತಗಳ ನಿಯಂತ್ರಣ ಕ್ರಮ ಕೈಗೊಳ್ಳಬೇಕಾಗಿದೆ. ಈ ಕುರಿತು ಜಿಲ್ಲಾಮಟ್ಟದ ಕ್ರಿಯಾ ಯೋಜನೆಯನ್ನು ಸಾರಿಗೆ ಆಯುಕ್ತರಿಗೆ ಸಲ್ಲಿಸಬೇಕಾಗಿರುವ ಹಿನ್ನೆಲೆಯಲ್ಲಿ ಪೊಲೀಸ್‌, ಕಾರ್ಮಿಕ, ಲೋಕೋಪಯೋಗಿ, ಈ.ಕ.ರ.ಸಾ.ಸಂಸ್ಥೆ, ಪಂಚಾಯತ್‌ ರಾಜ್‌ ಇಂಜಿನೀಯರಿಂಗ್‌ ಹಾಗೂ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಆಯೋಜಿಸುವ ಕಾರ್ಯಕ್ರಮಗಳ ಕ್ರಿಯಾ ಯೋಜನೆಯನ್ನು ಆರ್‌ಟಿಒ ಕಚೇರಿಗೆ ಕೂಡಲೆ ಸಲ್ಲಿಸಬೇಕು. ಇದರೊಂದಿಗೆ ಬ್ಲ್ಯಾಕ್‌ ಸ್ಪಾಟ್ ಸ್ಥಳಗಳ ಬಗ್ಗೆಯೂ ಮಾಹಿತಿ ನೀಡಬೇಕು ಎಂದರು.

ಡಿಮಾಂಡ್‌ ಸರ್ವೇ ಕೈಗೊಳ್ಳಿ: ಜಿಲ್ಲೆಯ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಬೇಡಿಕೆ ಅನುಗುಣವಾಗಿ ಬಸ್‌ ಸಂಚಾರ ಪೂರೈಸಲು ಪ್ರಸ್ತುತ ಆ ಪ್ರದೇಶದ ವ್ಯಾಪ್ತಿಯಲ್ಲಿ ಖಾಸಗಿ ವಾಹನಗಳ ಓಡಾಟ ಹಾಗೂ ನಿತ್ಯ ಜನರ ಸಂಚಾರದ ಬಗ್ಗೆ ಕೂಲಂಕುಷವಾಗಿ ಸರ್ವೇ ಮಾಡಿ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಡಿ.ಸಿ. ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್‌ ಅಧೀಕ್ಷಕ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಮಾತನಾಡಿ, ಜಿಲ್ಲೆಯ ಹಲವು ಕಡೆ ಬ್ಲ್ತ್ರ್ಯಾಕ್‌ ಸ್ಪಾಟ್ ಸ್ಥಳಗಳನ್ನು ಗುರುತಿಸಲು ಪೊಲೀಸ್‌ ಹಾಗೂ ಲೋಕೋಪಯೋಗಿ ಇಲಾಖೆಯವರು ಮರು ಜಂಟಿ ಸಮೀಕ್ಷೆ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ವಾಹನ ಚಾಲನಾ ಪರವಾನಗಿ ಇಲ್ಲದೆ ವಾಹನ ಚಲಾಯಿಸುವವರ ಸಂಖ್ಯೆ ಹೆಚ್ಚಿದ್ದು, ಆರ್‌ಟಿಒ ಅಧಿಕಾರಿಗಳು ಈ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದರು.

ಸಭೆಯಲ್ಲಿ ಉಪ ಸಾರಿಗೆ ಆಯುಕ್ತೆ ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಂ.ಶೋಭಾ, ಸಹಾಯಕ ಆರ್‌.ಟಿ.ಓ ಅಧಿಕಾರಿ ಕೆ.ದಾಮೋದರ, ಜಿಪಂ ಉಪ ಕಾರ್ಯದರ್ಶಿ ಅಶೋಕ ದುಡಗುಂಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಮಾಧವರಾವ ಕೆ.ಪಾಟೀಲ, ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಅಭಿಯಂತರ ಶಿವಣಗೌಡ ಪಾಟೀಲ, ಕಾರ್ಮಿಕ ಅಧಿಕಾರಿ ಶ್ರೀಹರಿ, ಸಂಚಾರಿ ಪಿ.ಐ. ಮಹಾದೇವ ಸೇರಿದಂತೆ ಅಧಿಕಾರಿಗಳು ಇದ್ದರು.

ಶಾಲೆಗಳು ಸ್ಕೂಲ್ ಬಸ್‌ ಪೂರೈಸಲಿ: ಕಲಬುರಗಿ ನಗರದಲ್ಲಿ ಶಾಲಾ ಮಕ್ಕಳನ್ನು ಆಟೋದಲ್ಲಿ ಮಿತಿ ಮೀರಿ ಕೂರಿಸಿಕೊಂಡು ಪ್ರಯಾಣ ಮಾಡಲಾಗುತ್ತಿದ್ದು, ಅಪಘಾತ ತಪ್ಪಿಸಲು ಇದರ ನಿಯಂತ್ರಣ ಅಗತ್ಯ. ಆಟೋದಲ್ಲಿ ಮಕ್ಕಳ ಪ್ರಯಾಣ ತಪ್ಪಿಸಲು ಶಾಲಾ ಆಡಳಿತ ಮಂಡಳಿಗಳೆ ಮಕ್ಕಳಿಗಾಗಿ ಶಾಲಾ ಬಸ್‌, ವ್ಯಾನ್‌ ಪೂರೈಸಬೇಕು. ಈ ಸಂಬಂಧ ಶಾಲಾ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಅವರಿಗೆ ಮನವರಿಕೆ ಮಾಡಿ ಎಂದು ಡಿಡಿಪಿಐ ಶಾಂತಗೌಡ ಪಾಟೀಲ್ ಅವರಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, ಪ್ರತಿ ಶಾಲೆಯಲ್ಲಿ ರಸ್ತೆ ಸಂಚಾರ ಸುರಕ್ಷತಾ ಕ್ರಮಗಳ ಸಂಕೇತಗಳ ರೇಖಾಚಿತ್ರ ಬಿಡಿಸಲು ಸಹ ಕ್ರಮವಹಿಸಬೇಕು ಎಂದರು.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.