ರಾತ್ರಿ 12ಕ್ಕೆ ಹೋಗಿ ಬೆಳಗ್ಗೆ 5ಕ್ಕೆ ಎದ್ದು ಬರೋದು ಗ್ರಾಮ ವಾಸ್ತವ್ಯ

ಹಿಂದಿನ ಗ್ರಾಮ ವಾಸ್ತವ್ಯದ ಯಾವ ಬೇಡಿಕೆ ಈಡೇರಿಸಿದ್ದೀರಿ?

Team Udayavani, Jun 12, 2019, 9:54 AM IST

2

ಕಲಬುರಗಿ: ಐವಾನ್‌ ಇ-ಶಾಹಿ ಅತಿಥಿಗೃಹದಲ್ಲಿ ಮಂಗಳವಾರ ಮಾಜಿ ಸಿಎಂ ಜಗದೀಶ ಶೆಟ್ಟರ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಲಬುರಗಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಎನ್ನೋದು ಬರೀ ನಾಟಕ. ಹಿಂದಿನ ಬಿಜೆಪಿ-ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲೇ ಇದನ್ನು ನೋಡಿದ್ದೇವೆ. ರಾತ್ರಿ 12ಗಂಟೆಗೆ ಗ್ರಾಮಕ್ಕೆ ಹೋಗಿ ಬೆಳಗಿನ ಜಾವ 5ಗಂಟೆಗೆ ಎದ್ದು ಬರೋದು ಕುಮಾರಸ್ವಾಮಿ ಗ್ರಾಮವಾಸ್ತವ್ಯ ಎಂದು ಬಿಜೆಪಿ ನಾಯಕ, ಮಾಜಿ ಸಿಎಂ ಜಗದೀಶ ಶೆಟ್ಟರ್‌ ಲೇವಡಿ ಮಾಡಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ತೀವ್ರ ಬರಗಾಲ ಇದ್ದರೂ ಮಂಡ್ಯ, ಹಾಸನ, ಬೆಂಗಳೂರು ಬಿಟ್ಟು ಸಿಎಂ ಎಚ್‌ಡಿಕೆ ಹೊರಬಂದಿಲ್ಲ. ಬರೀ ವಿಡಿಯೋ ಕಾನ್ಫರೆನ್ಸ್‌ ಮೂಲಕ ಅಧಿಕಾರಿಗಳೊಂದಿಗೆ ಸಂವಾದ ನಡೆಸೋದು ಆಡಳಿತವಲ್ಲ. ಈಗ ಗ್ರಾಮ ವಾಸ್ತವ್ಯದ ಹೆಸರಲ್ಲಿ ನಾಟಕವಾಡೋಕೆ ಹೋಗಬೇಡಿ. ಈ ಹಿಂದೆ ಗ್ರಾಮ ವಾಸ್ತವ್ಯ ಮಾಡಿದಾಗ ಯಾವ ಭರವಸೆ ನೀಡಲಾಗಿತ್ತು. ಯಾವುದನ್ನು ಈಡೇರಿಸಲಾಗಿದೆ ಎನ್ನುವ ಬಗ್ಗೆ ಶ್ವೇತ ಪತ್ರ ಹೊರಡಿಸಲಿ ಎಂದು ಸವಾಲೆಸೆದರು.

ಕಂಪನಿಗಳೊಂದಿಗೆ ಡೀಲಿಂಗ್‌, ರೈತರಿಗೆ ಮೋಸ ಮಾಡೋದು ಸಮ್ಮಿಶ್ರ ಸರ್ಕಾರದ ಕೆಲಸವಾಗಿದೆ. ಚುನಾವಣೆಗೂ ಮುನ್ನ ರೈತರ ಖಾತೆಗೆ ಹಾಕಿದ ಸಾಲ ಮನ್ನಾ ಹಣ ಈಗ ರಿಫಂಡ್‌ ಆಗಿದೆ. ಇದು ಮೋಸದ ಕೃತ್ಯ ಆಗಿದ್ದು ಹೇಗೆ ಎನ್ನುವ ಬಗ್ಗೆ ಸಿಎಂ ಸ್ಪಷ್ಟ ಉತ್ತರ ಕೊಡಬೇಕು. ಸೂಕ್ತ ತನಿಖೆ ನಡೆಸಬೇಕು. ಜಿಂದಾಲ್ ಕಂಪನಿಗೆ ಕಡಿಮೆ ದರಕ್ಕೆ ಭೂಮಿ ಕೊಡುವ ಒಪ್ಪಂದದ ದಾಖಲೆಗಳನ್ನು ಬಹಿರಂಗ ಪಡಿಸಬೇಕೆಂದು ಒತ್ತಾಯಿಸಿದರು.

ಜನಾದೇಶ ಬಿಜೆಪಿ ಪರವಾಗಿದ್ದರೂ ಕಾಂಗ್ರೆಸ್‌ನವರು ಅಧಿಕಾರದ ಲಾಲಸೆಗಾಗಿ 37 ಸ್ಥಾನ ಗೆದ್ದವರೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. ಒಬ್ಬರಿಗೊಬ್ಬರು ಬೆನ್ನಿಗೆ ಚೂರಿ ಹಾಕಿಕೊಳ್ಳುತ್ತಾ ಸರ್ಕಾರ ನಡೆಸುತ್ತಿದ್ದಾರೆ. ಆರೋಪ-ಪ್ರತ್ಯಾರೋಪದಲ್ಲಿ ಜೆಡಿಎಸ್‌-ಕಾಂಗ್ರೆಸ್‌ನವರು ತೊಡಗಿದ್ದಾರೆ. ಸಿದ್ದರಾಮಯ್ಯ ವಿರುದ್ಧ ದೇವೇಗೌಡರು ರಾಹುಲ್ ಗಾಂಧಿಗೆ ದೂರು ಕೊಟ್ಟಿದ್ದಾರೆ. ಸಂಪುಟ ವಿಸ್ತರಣೆ ಸಮಯದಲ್ಲಿ ಮೂವರಿಗೆ ಸಚಿವ ಸ್ಥಾನ ಕೊಟ್ಟು ಸಮಾಧಾನ ಪಡಿಸಿದರೆ, ಆರು ಜನ ಶಾಸಕರು ಅಸಮಾಧಾನ ಹೊರ ಹಾಕಲಿದ್ದಾರೆ. ಪರಸ್ಪರ ಕಚ್ಚಾಡಿಕೊಂಡು ಸಮ್ಮಿಶ್ರ ಸರ್ಕಾರ ತಾನೇ ಬಿದ್ದು ಹೋಗುತ್ತದೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಕೊಚ್ಚಿಕೊಂಡು ಹೋಗಿದೆ. ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ ಅವರಂತ ನಾಯಕರೇ ಹೀನಾಯವಾಗಿ ಸೋತಿದ್ದಾರೆ. ಕಾಂಗ್ರೆಸ್‌ ಪಕ್ಷವನ್ನು ಜನತೆ ವಿಸರ್ಜಿಸುವ ಮುನ್ನವೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕಾಂಗ್ರೆಸ್‌ ಪಕ್ಷವನ್ನು ವಿಸರ್ಜಿಸಿ ಗೌರವ ಕಾಪಾಡಿಕೊಳ್ಳಬೇಕೆಂದು ಹೇಳಿದರು.

ಬಿಜೆಪಿ ನಗರಾಧ್ಯಕ್ಷ, ಎಂಎಲ್ಸಿ ಬಿ.ಜಿ.ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಶಾಸಕರಾದ ಸುಭಾಷ ಗುತ್ತೇದಾರ, ದತ್ತಾತ್ರೇಯ ಪಾಟೀಲ ರೇವೂರ, ಡಾ| ಅವಿನಾಶ ಜಾಧವ, ಮಾಜಿ ಎಂಎಲ್ಸಿಗಳಾದ ಶಶೀಲ ನಮೋಶಿ, ಅಮರನಾಥ ಪಾಟೀಲ, ಬಸವರಾಜ ಇಂಗಿನ್‌ ಇದ್ದರು.

ಧೈರ್ಯವಿದ್ದರೆ ಖರ್ಗೆಯನ್ನೇ ಅಧ್ಯಕ್ಷರನ್ನಾಗಿಸಿ
ಕಾಂಗ್ರೆಸ್‌ ನೆಹರೂ, ಗಾಂಧಿ ಕುಟುಂಬದ ಪಕ್ಷವಾದರೆ, ಜೆಡಿಎಸ್‌ ದೇವೇಗೌಡರ ಅಪ್ಪ-ಮಕ್ಕಳ ಪಕ್ಷ. ಅಲ್ಲಿ ಹೊರಗಿನವರಿಗೆ ಅವಕಾಶವೇ ಸಿಗುವುದಿಲ್ಲ. ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನ ತೊರೆದು 15 ದಿನ ಕಳೆದರೂ ಅದನ್ನು ಸ್ವೀಕರಿಸುವ ಶಕ್ತಿ ಕಾಂಗ್ರೆಸ್‌ನಲ್ಲಿ ಇಲ್ಲ. ಧೈರ್ಯವಿದ್ದರೆ ಡಾ| ಮಲ್ಲಿಕಾರ್ಜುನ ಖರ್ಗೆ ಅಥವಾ ಬೇರೆ ಯಾರನ್ನಾದರೂ ಕಾಂಗ್ರೆಸ್‌ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಿ ನೋಡೋಣ ಎಂದು ಜಗದೀಶ ಶೆಟ್ಟರ್‌ ಸವಾಲು ಹಾಕಿದರು. ಲೋಕಸಭೆ ಚುನಾವಣೆ ಮತ್ತು ಚಿಂಚೋಳಿ ಉಪಚುನಾವಣೆ ವೇಳೆ ನೀಡಿದ ಭರವಸೆಗಳನ್ನು ಈಡೇರಿಸುವುದಕ್ಕೆ ಬಿಜೆಪಿ ಬದ್ಧವಾಗಿದೆ. ಕಲಬುರಗಿ ರೈಲ್ವೆ ವಿಭಾಗ ಆರಂಭ ಸೇರಿದಂತೆ ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿಗಳ ಆರಂಭಕ್ಕೆ ಒತ್ತು ಕೊಡುವಂತೆ ಕೇಂದ್ರ ಸಚಿವ ಸುರೇಶ ಅಂಗಡಿ ಅವರಿಗೆ ಹೇಳಿದ್ದೇವೆ. ಅದೇ ರೀತಿ ಚಿಂಚೋಳಿಯಲ್ಲಿ ಸಕ್ಕರೆ ಕಾರ್ಖಾನೆ ಆರಂಭ ಮತ್ತು ಕೋಲಿ ಸಮಾಜವನ್ನು ಎಸ್‌ಟಿಗೆ ಸೇರಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.