ಹೈಕದಲ್ಲಿ ಕೆಂಡ ಉಗುಳುತ್ತಿರುವ ಸೂರ್ಯ

45 ಡಿಗ್ರಿ ಸೆಲಿಯಸ್ಸ್ಗೆ ಕಂಗೆಟ್ಟ ಜನ •- 2015ರ ಬಳಿಕ 45 ಡಿಗ್ರಿ ದಾಟಿದ ತಾಪಮಾನ

Team Udayavani, May 30, 2019, 9:39 AM IST

30-May-2

ರಂಗಪ್ಪ ಗಧಾರ
ಕಲಬುರಗಿ:
ಬಿಸಿಲಿಗೆ ಹೆಸರಾಗಿರುವ ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಪ್ರಸಕ್ತ ವರ್ಷ ಸೂರ್ಯ ಕೆಂಡ ಉಗುಳುತ್ತಿದ್ದು, ಸೂರ್ಯನ ಪ್ರತಾಪಕ್ಕೆ ನಾಗರಿಕರು ಕಂಗೆಟ್ಟು ಹೋಗಿದ್ದಾರೆ. ಗರಿಷ್ಠ 45 ಡಿಗ್ರಿ ಸೆಲಿಯಸ್ಸ್ ಉಷ್ಣಾಂಶ ಇದ್ದರೆ, ಕನಿಷ್ಠ ಉಷ್ಣಾಂಶವೇ ಪ್ರತಿ ದಿನ 30 ಡಿಗ್ರಿ ಸೆಲಿಯಸ್ಸ್ ದಾಖಲಾಗುತ್ತಿದೆ.

ಹೈಕ ಪ್ರದೇಶದ ಜನತೆಗೆ ಬಿಸಿಲು ಹೊಸದಲ್ಲ. ಆದರೆ, ಬಿಸಿಲಿನ ಝಳದೊಂದಿಗೆ ಬಿಸಿ ಗಾಳಿ ಬೀಸುತ್ತಿದೆ. ಮುಖಕ್ಕೆ ಗಾಳಿ ತಾಗುತ್ತಿದ್ದಂತೆ ಸುಡುವ ಕೆಂಡವೇ ತೆಗೆದು ಬಾರಿಸಿದಂತೆ ಭಾಸವಾಗುತ್ತದೆ. ಕಲಬುರಗಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೀದರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನಿತ್ಯ 42ರಿಂದ 45 ಡಿಗ್ರಿ ಸೆಲಿಯಸ್ಸ್ ತಾಪಮಾನ ದಾಖಲಾಗುತ್ತಿದೆ.

ಕಲಬುರಗಿಯಲ್ಲಿ ಬೆಳಗ್ಗೆ 8 ಗಂಟೆಯಿಂದಲೇ ಬಿಸಿಲಿನ ತಾಪ ಹೆಚ್ಚುತ್ತಲೇ ಹೋಗುತ್ತದೆ. ಇದರಿಂದ ಮಧ್ಯಾಹ್ನದ ಸಮಯದಲ್ಲಿ ಮನೆಯಿಂದ ಹೊರಗೆ ಕಾಲಿಡಲು ನಾಗರಿಕರು ಹಿಂದೇಟು ಹಾಕುತ್ತಿದ್ದಾರೆ. ಮಾರ್ಚ್‌, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಅತ್ಯಧಿಕ ತಾಪಮಾನ ದಾಖಲಾದರೂ ಮೇ ಅಂತ್ಯದ ವೇಳೆಗೆ ಕಡಿಮೆ ಆಗಬೇಕಿತ್ತು. ಮೇ ಮಾಸದ ಅಂತ್ಯದಲ್ಲೂ 44, 45 ಡಿಗ್ರಿ ಸೆಲಿಯಸ್ಸ್ ಉಷ್ಣಾಂಶ ದಾಖಲಾಗುತ್ತಿದೆ. 2015ರ ಬಳಿಕ ಪ್ರಸಕ್ತ ಮೇನಲ್ಲಿ 45 ಡಿಗ್ರಿ ಸೆಲಿಯಸ್ಸ್ ತಾಪಮಾನ ದಾಖಲಾಗಿದ್ದು, ಬೆಳಗ್ಗೆಯಿಂದ ಸಂಜೆಯವರೆಗೂ ಬಿಸಿಲಿನ ಝಳ ಸಾರ್ವಜನಿಕರನ್ನು ಹಿಂಡಿ ಸಿಪ್ಪೆ ಮಾಡುತ್ತಿದೆ.

ಬಿಸಿಲಿಗೆ ಕಂಗಾಲಾಗಿರುವ ಜನತೆ ತಂಪು ಪಾನೀಯ, ಎಳನೀರಿಗೆ ಮೊರೆ ಹೋಗುತ್ತಿದ್ದಾರೆ ಪುರುಷರು ಮುಖಕ್ಕೆ ಕರ್ಚೀಪು, ಮಹಿಳೆಯರು ವೇಲ್ ಮತ್ತು ಕ್ಯಾಪ್‌ ಧರಿಸಿ ಸೂರ್ಯನಿಂದ ರಕ್ಷಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಮತ್ತೆ ಕೆಲವರು ಬಿಸಿಲಿಗೆ ಸೆಡ್ಡು ಹೊಡೆಯಲು ಸೋಲಾರ್‌ ಫ್ಯಾನ್‌ ಅಳವಡಿಸಿರುವ ಕೂಲ್ ಕ್ಯಾಪ್‌ಗ್ಳನ್ನು ತೊಟ್ಟು ಓಡಾಡುತ್ತಿದ್ದಾರೆ.

ಶಾಲೆಗಳ ರಜೆ ವಿಸ್ತರಣೆ: ರಾಜ್ಯಾದ್ಯಂತ ಮೇ 29ರಿಂದ ಶೈಕ್ಷಣಿಕ ವರ್ಷದ ತರಗತಿಗಳು ಆರಂಭವಾದರೂ ಹೈಕ ಭಾಗದಲ್ಲಿ ಬಿಸಿಲಿನ ತಾಪದಿಂದ ಪ್ರಾಥಮಿಕ ಶಾಲೆಗಳ ರಜೆಯನ್ನು ವಿಸ್ತರಣೆ ಮಾಡಲಾಗಿದೆ. ಮಕ್ಕಳ ಆರೋಗ್ಯದ ಮೇಲೆ ಬಿಸಿಲು ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಮಕ್ಕಳ ಹಿತದೃಷ್ಟಿಯಿಂದ ಜಿಲ್ಲಾಡಳಿತ ಮತ್ತು ಜಿಲ್ಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಡಿದ ಮನವಿ ಮೇರೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರು ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಪ್ರಾಥಮಿಕ ಶಾಲೆಗಳ ಪ್ರಾರಂಭವನ್ನು ಮುಂದೂಡಿ ಆದೇಶ ಹೊರಡಿಸಿದ್ದಾರೆ. ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಜೂ.14ರಿಂದ ಶಾಲೆಗಳು ಆರಂಭವಾಗಲಿವೆ. ರಾಯಚೂರಿನಲ್ಲಿ ಜೂ.5ರಂದು ತರಗತಿ ಪ್ರಾರಂಭಗೊಳ್ಳಲಿವೆ. ಈಗಾಗಲೇ ಪಕ್ಕದ ತೆಲಂಗಾಣದಲ್ಲಿ ಬಿಸಿಲಿನಿಂದಾಗಿ 2 ವಾರ ಶಾಲೆಗಳ ಪ್ರಾರಂಭ ಮುಂದೂಡಿರುವ ಉದಾಹರಣೆ ಇದೆ.

ಕನಿಷ್ಠ ಉಷ್ಣಾಂಶವೂ ಏರಿಕೆ
ಕಲಬುರಗಿ ಜಿಲ್ಲೆಯಲ್ಲಿ 2010ರಲ್ಲಿ 46.1 ಡಿಗ್ರಿ ಸೆಲಿಯಸ್ಸ್ ಉಷ್ಣಾಂಶ ದಾಖಲಾಗಿದ್ದು, ಇದು ಸಾರ್ವಕಾಲಿಕ ಗರಿಷ್ಠ ಉಷ್ಣಾಂಶವಾಗಿದೆ. ಕನಿಷ್ಠ ಉಷ್ಠಾಂಶ ಸಾಮಾನ್ಯವಾಗಿ 20 ಡಿಗ್ರಿಯಿಂದ 26, 28 ಡಿಗ್ರಿ ಸೆಲಿಯಸ್ಸ್ ಇರುತ್ತದೆ. ಪ್ರಸಕ್ತ ವರ್ಷ ಕನಿಷ್ಠ ತಾಪಮಾನದಲ್ಲೂ ಏರಿಕೆಯಾಗಿದ್ದು, 30 ಡಿಗ್ರಿ ಸೆಲಿಯಸ್ಸ್ ದಾಖಲಾಗಿದೆ. ಮೇ 29ರಂದು ಕಲಬುರಗಿಯಲ್ಲಿ 30.2, ರಾಯಚೂರಲ್ಲಿ 28.5, ಕೊಪ್ಪಳದಲ್ಲಿ 25.5, ಬೀದರ್‌ನಲ್ಲಿ 26.0 ಡಿಗ್ರಿ ಸೆಲಿಯಸ್ಸ್ ಕನಿಷ್ಠ ತಾಪಮಾನ ಇತ್ತು. ಅದೇ ರೀತಿ ಗರಿಷ್ಠ ತಾಪಮಾನ ಕಲಬುರಗಿಯಲ್ಲಿ 44.7, ರಾಯಚೂರಿನಲ್ಲಿ 42.5, ಬೀದರ್‌ನಲ್ಲಿ 42 ಹಾಗೂ ಕೊಪ್ಪಳದಲ್ಲಿ 38.5 ಡಿಗ್ರಿ ಸೆಲಿಯಸ್ಸ್ ದಾಖಲಾಗಿತ್ತು. ಕಲಬುರಗಿ ಭಾಗದಲ್ಲಿ ಸದ್ಯಕ್ಕೆ ಮಳೆಯಾಗುವ ಯಾವುದೇ ಮುನ್ಸೂಚನೆ ಇಲ್ಲ. ಇನ್ನೂ ಮೂರ್‍ನಾಲ್ಕು ದಿನ ಇದೇ ತಾಪಮಾನ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.