ಹತ್ಯೆಗೆ ಕಾರಣವಾಗುತ್ತಿದೆ ತಪ್ಪು ಮಾಹಿತಿ

ಸತ್ಯಾಸತ್ಯತೆ ಪರಿಶೀಲಿಸದೇ ಹರಿದಾಡುತ್ತಿವೆ ಸುದ್ದಿ•ವಾಟ್ಸ್‌ಆ್ಯಪ್‌-ಫೇಸ್‌ಬುಕ್‌ ಸುದ್ದಿ ಪರಿಶೀಲಿಸಿ

Team Udayavani, Sep 1, 2019, 10:05 AM IST

1-September-2

ಕಲಬುರಗಿ: ಶರಣಬಸವ ಶತಮಾನೋತ್ಸವ ಸಭಾಂಗಣದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಹಿರಿಯ ಪತ್ರಕರ್ತೆ ಎಸ್‌.ಭಾಗೇಶ್ರೀ ಮಾತನಾಡಿದರು.

ಕಲಬುರಗಿ: ಸಾಮಾಜಿಕ ಜಾಲತಾಣಗಳ ಮೂಲಕ ಹರಡುತ್ತಿರುವ ಸುಳ್ಳು ಸುದ್ದಿಗಳು ಮತ್ತು ತಪ್ಪು ಮಾಹಿತಿಗಳು ಹತ್ಯೆಯಂತ ಅಹಿತಕರ ಸನ್ನಿವೇಶ ಹುಟ್ಟು ಹಾಕುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ‘ದಿ ಹಿಂದೂ’ ದಿನ ಪತ್ರಿಕೆ ಬೆಂಗಳೂರಿನ ಸ್ಥಾನಿಕ ಸಂಪಾದಕಿ ಎಸ್‌. ಭಾಗೇಶ್ರೀ ಹೇಳಿದರು.

ನಗರದ ಶರಣಬಸವ ಶತಮಾನೋತ್ಸವ ಸಭಾಂಗಣದಲ್ಲಿ ಆಯೋಜಿಸಿರುವ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಶನಿವಾರ ‘ಮುದ್ರಣ ಮತ್ತು ವಿದ್ಯುನ್ಮಾನ ಪತ್ರಕರ್ತರು ಎದುರಿಸುತ್ತಿರುವ ಬದಲಾಗುತ್ತಿರುವ ಪರಿಸ್ಥಿತಿಯಲ್ಲಿ ಉದಯೋನ್ಮುಖ ಸವಾಲುಗಳು’ ಎನ್ನುವ ವಿಷಯ ಕುರಿತು ಅವರು ಮಾತನಾಡಿದರು.

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮಾಧ್ಯಮಗಳು ಮಹತ್ತರ ಹೊಣೆ ಹೊತ್ತಿದ್ದವು. ದೇಶ ಕಟ್ಟುವ ಕಾರ್ಯಕ್ಕೆ ಮಾಧ್ಯಮಗಳು ತಮ್ಮದೇ ಆದ ಕೊಡುಗೆ ನೀಡಿವೆ. ಆದರೆ, 1990ರಿಂದ ಈಚೆಗೆ ಮಾಧ್ಯಮಗಳ ಗತಿಗಳಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಅದರಲ್ಲೂ ಕಳೆದ ಐದಾರು ವರ್ಷಗಳಿಂದ ಮಾಧ್ಯಮಗಳಿಗೆ ದೊಡ್ಡ ಸವಾಲು ಎದುರಾಗಿದೆ. ಅದುವೇ ಡಿಜಿಟಲ್ ಮಾಧ್ಯಮದ ಸುದ್ದಿಗಳು ಎಂದರು.

ಡಿಜಿಟಲೀಕರಣ ಮತ್ತು ಸಾಮಾಜಿಕ ಮಾಧ್ಯಮಗಳು ಸಾರ್ವಜನಿಕರಿಗೆ ತಮ್ಮ ಅಭಿಪ್ರಾಯ, ಆಲೋಚನೆಗಳನ್ನು ಮುಕ್ತವಾಗಿ ವ್ಯಕ್ತಪಡಿಸಲು ಉತ್ತಮ ವೇದಿಕೆ ಕಲ್ಪಿಸುತ್ತಿವೆ. ಆದರೆ, ಫೇಸ್‌ಬುಕ್‌, ವ್ಯಾಟ್ಸ್‌ ಆ್ಯಪ್‌ನಲ್ಲಿ ಹಲವು ಬಗೆಯ ಸುದ್ದಿಗಳು ಹರಿದಾಡುತ್ತಿವೆ. ಇಂತಹ ಸುದ್ದಿಗಳ ಸತ್ಯಾಸತ್ಯತೆ ಪರಿಶೀಲಿಸದೆ ಸುದ್ದಿ ನೀಡುವ ಧಾವಂತದಲ್ಲಿ ಒಬ್ಬರಿಂದ ಮತ್ತೂಬ್ಬರಿಗೆ ಪ್ರಸಾರ ಮಾಡುವ ಪದ್ಧತಿ ಬೆಳೆಯುತ್ತಿರುವುದು ದುರಂತ ಎಂದು ಉದಾಹರಣೆ ಸಮೇತ ಹೇಳಿದರು.

2017-18ರಲ್ಲಿ ದೇಶದ ವಿವಿಧ ಕಡೆಗಳಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎನ್ನುವ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಗೊಂಡಿತ್ತು. ಇದನ್ನೇ ಆಧಾರವಾಗಿ ಇಟ್ಟುಕೊಂಡು ಹರಡಿದ ಸುದ್ದಿಗಳಿಂದ ಬೀದರ್‌ ಸೇರಿದಂತೆ ದೇಶಾದ್ಯಂತ 31 ಜನ ಅಮಾಯಕರ ಹತ್ಯೆಯಾಗಿದೆ ಎಂದು ವಿಶ್ಲೇಷಿಸಿದರು.

ಎಂ.ಎಂ. ಕಲಬುರ್ಗಿ ಹತ್ಯೆ: ಹಿರಿಯ ಸಂಶೋಧಕ ದಿ. ಎಂ.ಎಂ. ಕಲಬುರ್ಗಿ ಅವರು ದೇವರ ಬಗ್ಗೆ ಅವಹೇಳನ ಮಾತುಗಳನ್ನು ಆಡಿರಲಿಲ್ಲ. ಕಾರ್ಯಕ್ರಮವೊಂದರಲ್ಲಿ ಕಲಬುರ್ಗಿ ಅವರು ಭಾಷಣ ಮಾಡುತ್ತಾ ಯು.ಆರ್‌. ಅನಂತಮೂರ್ತಿ ಪ್ರಸ್ತಾಪಿಸಿದ ಘಟನೆ ಉಲ್ಲೇಖೀಸಿ ಮಾತನಾಡಿದ್ದರು. ಆ ಮಾತುಗಳನ್ನು ಕಲಬುರ್ಗಿ ಅವರೇ ಆಡಿದ್ದಾರೆ ಎಂಬಂತೆ ಸುದ್ದಿ ಪ್ರಸಾರವಾಯಿತು. ಇದರಿಂದ ಕೊನೆಗೆ ಅವರೇ ಬಲಿಪಶುವಾದರು. ನಿಜ ಅಂಶವೆಂದರೆ ಆ ಘಟನೆ ನಡೆದ 60 ವರ್ಷಗಳ ಬಳಿಕ ಕಲಬುರ್ಗಿ ಅವರು ಹೇಳಿದ್ದು. ತಮ್ಮ ಮಾತುಗಳ ಬಗ್ಗೆ ಅನೇಕ ಬಾರಿ ಕಲಬುರ್ಗಿ ಸ್ಪಷ್ಟನೆ ಸಹ ಕೊಟ್ಟಿದ್ದರು ಎಂದರು.

ಹೊಸ ಎರಡು ಸಾವಿರ ರೂ. ನೋಟ್‌ಗಳಲ್ಲಿ ಚಿಪ್‌ ಇದೇ ಎನ್ನುವ ಸಂದೇಶ ಹರಿದಾಡಿತು. ಇದನ್ನು ಟಿವಿಗಳು ಸುದ್ದಿ ಮಾಡಿದವು. ನಂತರ ಅದು ಸುಳ್ಳು ಎಂದು ಗೊತ್ತಾಗಿ ಸುದ್ದಿ ಪ್ರಸಾರ ಮಾಡಿದವರು ಕ್ಷಮೆ ಯಾಚಿಸಿದರು. ಆದ್ದರಿಂದ ವ್ಯಾಟ್ಸಆ್ಯಪ್‌ ಮತ್ತು ಫೇಸ್‌ಬುಕ್‌ನಲ್ಲಿ ಹರಿದಾಡುವ ಸುದ್ದಿಗಳು ಸತ್ಯವಲ್ಲ. ಅವುಗಳನ್ನು ಮರು ಪರಿಶೀಲನೆ ಮಾಡುವುದು ಅತ್ಯಗತ್ಯವಾಗಿದೆ ಎಂದರು.

ಶರಣಬಸವ ವಿವಿ ಸಮ ಕುಲಪತಿ ಡಾ| ವಿ.ಡಿ. ಮೈತ್ರಿ, ಕುಲಸಚಿವ ಡಾ| ಅನೀಲಕುಮಾರ ಬಿಡವೆ, ಡೀನ್‌ ಡಾ| ಲಕ್ಷ್ಮೀಮಾಕಾ, ಗುಲಬರ್ಗಾ ವಿಶ್ವವಿದ್ಯಾಲಯ ಕುಲಸಚಿವ ಡಾ| ಸೋಮಶೇಖರ, ಶರಣಬಸವ ವಿವಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಟಿ.ವಿ. ಶಿವಾನಂದನ್‌, ಪತ್ರಕರ್ತ ವಾದಿರಾಜ ವ್ಯಾಸಮುದ್ರ, ಡಾ| ವೀಣಾ ವಿಕ್ರಂ ಸಿದ್ಧರೆಡ್ಡಿ ಹಾಜರಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಪೊಲೀಸರ ಹೆಸರು ಬಳಸಿ ಸಂದೇಶ ಹರಿಬಿಡುವ ಪ್ರವೃತ್ತಿ ಬೆಳೆಯುತ್ತಿದೆ. ಹೀಗಾಗಿ ಮೊಬೈಲ್ನಲ್ಲಿ ಬರುವ ಸಂದೇಶಗಳೆಲ್ಲ ಸತ್ಯ ಎಂದು ತಿಳಿದುಕೊಳ್ಳಬಾರದು. ಸುದ್ದಿ ಮೂಲ ಮತ್ತು ಸುದ್ದಿ ಸತ್ಯಾಸತ್ಯತೆ ಪರಿಶೀಲಿಸುವ ಗುಣ ರೂಢಿಸಿಕೊಳ್ಳಬೇಕು. ಆಗ ಮಾತ್ರವೇ ಸುಳ್ಳು ಸುದ್ದಿಗಳನ್ನು ತಡೆಯಲು ಸಾಧ್ಯ.
ಎಸ್‌. ಭಾಗೇಶ್ರೀ,
ಹಿರಿಯ ಪತ್ರಕರ್ತರು

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.