‘ಕಿಸಾನ್‌’ಗೆ ಎರಡನೇ ಕಂತಿನ ‘ಸಮ್ಮಾನ್‌ ನಿಧಿ’

•ರಾಯಚೂರಲ್ಲಿ ಹೆಚ್ಚು ರೈತರ ಖಾತೆಗೆ ಹಣ ಜಮೆ•ಪ್ರೂಟ್ಸ್‌ ಆನ್‌ಲೈನ್‌ ತಂತ್ರಾಂಶ ಅಭಿವೃದ್ಧಿ

Team Udayavani, Aug 14, 2019, 1:27 PM IST

14-AGUST-26

ರಂಗಪ್ಪ ಗಧಾರ
ಕಲಬುರಗಿ:
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ಎರಡನೇ ಕಂತಿನ ಹಣ ಜಮೆ ಪ್ರಕ್ರಿಯೆ ಆರಂಭವಾಗಿದ್ದು, ಇದುವೆರೆಗೂ ಹೈದ್ರಾಬಾದ್‌-ಕರ್ನಾಟಕ ಭಾಗದ ಆರು ಜಿಲ್ಲೆಗಳ ಪೈಕಿ ರಾಯಚೂರಿನಲ್ಲಿ ಅತಿ ಹೆಚ್ಚು ರೈತರ ಖಾತೆಗೆ ಹಣ ಜಮಾ ಆಗಿದೆ.

ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಕಲಬುರಗಿ ಜಿಲ್ಲೆಯಲ್ಲಿ 2,70,081 ರೈತರು ಹೆಸರು ನೋಂದಾಯಿಸಿದ್ದು, ಇದುವರೆಗೆ ಕೇಂದ್ರ ಸರ್ಕಾರ 1,50,601 ರೈತರನ್ನು ಫಲಾನುಭವಿಗಳೆಂದು ಘೋಷಿಸಿದೆ. ಕಲಬುರಗಿ ಜಿಲ್ಲೆಯಲ್ಲಿ ಮೊದಲ ಕಂತಿನಲ್ಲಿ 97,410 ರೈತರ ಖಾತೆಗೆ ಎರಡು ಸಾವಿರ ರೂ. ಜಮೆ ಆಗಿದೆ. ಎರಡನೇ ಕಂತಿನಲ್ಲಿ ಇದುವರೆಗೆ 5,350 ರೈತರ ಖಾತೆಗೆ ನೇರವಾಗಿ ಹಣ ಜಮೆಯಾಗಿದೆ.

ರಾಯಚೂರು ಜಿಲ್ಲೆಯಲ್ಲಿ 2,08,402 ರೈತರು ಹೆಸರು ನೋಂದಾಯಿಸಿಕೊಂಡಿದ್ದು, 1,39,805 ರೈತರನ್ನು ಫಲಾನುಭವಿಗಳೆಂದು ಕೇಂದ್ರ ಸರ್ಕಾರ ಘೋಷಿಸಿದೆ. ಇದರಲ್ಲಿ ಮೊದಲ ಕಂತಿನ ಎರಡು ಸಾವಿರ ರೂ. 1,17,455 ರೈತರ ಖಾತೆಗೆ ಜಮೆಯಾಗಿದೆ. ಎರಡನೇ ಕಂತಿನಲ್ಲಿ 20,946 ರೈತರಿಗೆ ಕಿಸಾನ್‌ ಸಮ್ಮಾನ್‌ ನಿಧಿ ಜಮೆ ಆಗಿದೆ.

ಅದೇ ರೀತಿ ಬಳ್ಳಾರಿ ಜಿಲ್ಲೆಯಲ್ಲಿ 2,07,419, ಬೀದರ್‌ ಜಿಲ್ಲೆಯಲ್ಲಿ 1,83,062, ಕೊಪ್ಪಳ ಜಿಲ್ಲೆಯಲ್ಲಿ 1,53,073 ಹಾಗೂ ಯಾದಗಿರಿ ಜಿಲ್ಲೆಯಲ್ಲಿ 1,22,993 ರೈತರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರ ಕ್ರಮವಾಗಿ ಬಳ್ಳಾರಿ-1,22,384, ಬೀದರ್‌-1,27,483 ಕೊಪ್ಪಳ-1,19,669 ಮತ್ತು ಯಾದಗಿರಿ ಜಿಲ್ಲೆಯ 79,664 ರೈತರನ್ನು ಫಲಾನುಭವಿಗಳೆಂದು ಕೇಂದ್ರ ಸರ್ಕಾರ ಪ್ರಕಟಿಸಿದೆ.

ಬಳ್ಳಾರಿಯಲ್ಲಿ ಮೊದಲ ಕಂತು 62,018, ಎರಡನೇ ಕಂತು 8,865, ಬೀದರ್‌ ಜಿಲ್ಲೆಯಲ್ಲಿ ಮೊದಲ ಕಂತು 95,041, ಎರಡನೇ ಕಂತು 2,155, ಕೊಪ್ಪಳ ಜಿಲ್ಲೆಯಲ್ಲಿ 1,03,617, ಎರಡನೇ ಕಂತು 12,365 ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಮೊದಲ ಕಂತು 63,914, ಎರಡನೇ ಕಂತಿನಲ್ಲಿ 9,006 ರೈತರ ಖಾತೆಗೆ ನೇರವಾಗಿ ತಲಾ ಎರಡು ಸಾವಿರ ರೂ. ಜಮೆಯಾಗಿದೆ. ಇದರಲ್ಲಿ ಕೆಲ ರೈತರಿಗೆ ಎರಡೂ ಕಂತಿನ ನಾಲ್ಕು ಸಾವಿರ ರೂ. ಪಾವತಿಯಾಗಿದೆ.

ಫಲಾನುಭವಿ ಯಾರು?: ಐದು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ಸಣ್ಣ ಹಾಗೂ ಅತಿ ಸಣ್ಣ ರೈತರು ಕಿಸಾನ್‌ ಸಮ್ಮಾನ್‌ ಯೋಜನೆ ಫಲಾನುಭವಿಗಳಾಗಿದ್ದಾರೆ. ಸಾಂವಿಧಾನಿಕ ಹುದ್ದೆಗಳನ್ನು ಹೊಂದಿದವರು, ಹತ್ತು ಸಾವಿರಕ್ಕಿಂತ ಹೆಚ್ಚು ವೇತನ ಪಡೆಯುವ ಸರ್ಕಾರಿ ನೌಕಕರು, ಪಿಂಚಣಿದಾರರು ಮತ್ತು ಡಾಕ್ಟರ್‌, ಎಂಜಿನಿಯರ್‌, ವಕೀಲರು ಮತ್ತಿತರ ವೃತ್ತಿಪರ ಕುಂಟುಂಬದವರು ಯೋಜನೆ ಫಲಾನುಭವಿಗಳು ಅಲ್ಲ.

ಪ್ರಕ್ರಿಯೆ ಹೇಗೆ?: ರೈತ ಸಂಪರ್ಕ ಕೇಂದ್ರ, ಅಟಲ್ ಜನಸ್ನೇಹಿ ಕಚೇರಿಗಳಿಗೆ ಅರ್ಹ ರೈತರು ಖುದ್ದು ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಅರ್ಜಿ ನಮೂನೆ-ಸಿ ಹಾಗೂ ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ಅರ್ಜಿ ನಮೂನೆ-ಡಿಯನ್ನು ಪಡೆದು ಬ್ಯಾಂಕ್‌ ಖಾತೆ ಸಂಖ್ಯೆ, ಆಧಾರ್‌ ಸಂಖ್ಯೆಯೊಳಗೊಂಡ ಸ್ವ-ವಿವರಗಳನ್ನು ರೈತರು ಸಲ್ಲಿಸಬೇಕು.

ಯೋಜನೆ ತ್ವರಿತವಾಗಿ ಅನುಷ್ಠಾನ ಗೊಳಿಸಲು ಕೃಷಿಯೊಂದಿಗೆ ತೋಟಗಾರಿಕೆ, ಪಶು ಸಂಗೋಪನೆ, ರೇಷ್ಮೆ, ಗ್ರಾಮ ಪಂಚಾಯಿತಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳನ್ನು ಬಳಸಿಕೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರ ಕಿಸಾನ್‌ ಸಮ್ಮಾನ್‌ ಯೋಜನೆಗೆಂದೇ ಫಾರ್ಮರ್‌ ರಿಜಿಸ್ಟ್ರೇಷನ್‌ ಆ್ಯಂಡ್‌ ಯುನಿಫೈಡ್‌ ಬೆನಿಫಿಶರಿ (ಪ್ರೂಟ್ಸ್‌) ಎನ್ನುವ ಆನ್‌ಲೈನ್‌ ತಂತ್ರಾಂಶ (ವೆಬ್‌ಸೈಟ್) ಅಭಿವೃದ್ಧಿ ಪಡಿಸಿದ್ದು, ಅಧಿಕಾರಿಗಳು ಈ ವೆಬ್‌ಸೈಟ್‌ನಲ್ಲಿ ರೈತರ ಮಾಹಿತಿಯನ್ನು ಅಳವಡಿಸುತ್ತಾರೆ. ಅಲ್ಲಿಂದ ನೇರವಾಗಿ ತಹಶೀಲ್ದಾರ್‌ ಪರಿಶೀಲಿಸಿ ಅರ್ಜಿಗೆ ಅನುಮೋದನೆ ನೀಡಿ ರಾಜ್ಯ ಮಟ್ಟಕ್ಕೆ ರವಾನಿಸುತ್ತಾರೆ.

ಕೇಂದ್ರ ಕೃಷಿ ಇಲಾಖೆ ‘ಪಿಎಂ-ಕಿಸಾನ್‌’ ಎನ್ನುವ ವೆಬ್‌ಸೈಟ್ ಅಭಿವೃದ್ಧಿ ಪಡಿಸಿದ್ದು, ಅಲ್ಲಿ ರಾಜ್ಯಗಳಿಂದ ಬರುವ ಫಲಾನುಭವಿ ರೈತರ ಸಂಖ್ಯೆ ಮತ್ತು ಯಾವ ಕಂತಿನಲ್ಲಿ ಎಷ್ಟು ರೈತರಿಗೆ ಹಣ ಜಮೆಯಾಗಿದೆ ಎಂಬುವುದನ್ನು ಪ್ರಕಟಿಸುತ್ತದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.