ಮೋದಿ ಸಾಧನೆ ಪಟ್ಟಿ ಕೊಡಲಿ

ಮಾಲೀಕಯ್ಯ, ಚಿಂಚನಸೂರ, ಜಾಧವ ದ್ರೋಹ ಬಗೆದವರು

Team Udayavani, Apr 18, 2019, 11:04 AM IST

18-April-4

ಕಲಬುರಗಿ: ಕಾಂಗ್ರೆಸ್‌ ಅಭ್ಯರ್ಥಿ ಪರ ಅಫಜಲಪುರದ ನ್ಯಾಷನಲ್‌ ಫಂಕ್ಷನ್‌ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು.

ಕಲಬುರಗಿ: ನಾನು ಮುಖ್ಯಮಂತ್ರಿಯಾಗಿ ಐದು ವರ್ಷ ಅಧಿಕಾರ ನಡೆಸಿದ್ದೇನೆ, ನನ್ನ ಸರ್ಕಾರದ ಸಾಧನೆ ಪಟ್ಟಿ ಕೊಡುತ್ತೇನೆ. ಅದೇ ರೀತಿ ಪ್ರಧಾನಿಯಾಗಿ ಐದು ವರ್ಷದ ಸಾಧನೆ ಪಟ್ಟಿಯನ್ನು ಮೋದಿ ಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲೆಸೆದರು.

ಅಫಜಲಪುರದ ನ್ಯಾಷನಲ್‌ ಫಂಕ್ಷನ್‌ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸತತವಾಗಿ 11 ಬಾರಿ ಡಾ| ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಲಬುರಗಿ ಮತದಾರರು ಗೆಲ್ಲಿಸಿದ್ದು ತಮಾಷೆಯಲ್ಲ. ಖರ್ಗೆ ಅವರ ಅಭಿವೃದ್ಧಿ ಕೆಲಸ ನೋಡಿ ಮತ ಹಾಕಿದ್ದಾರೆಯೇ ಹೊರತು ಬಿಜೆಪಿಗರ ಬಣ್ಣದ ಮಾತಿಗಲ್ಲ. ನರೇಂದ್ರ ಮೋದಿ ಅವರಿಗೆ ಮಲ್ಲಿಕಾರ್ಜುನ ಖರ್ಗೆ ಎಂದರೆ ಭಯ.

ಹೀಗಾಗಿ ಅವರನ್ನು ಸೋಲಿಸಲು ದಿಲ್ಲಿಯಿಂದ ಹಳ್ಳಿ ನಾಯಕರ ತನಕ ಸಂಚು ರೂಪಿಸಿದ್ದಾರೆ. ಆದರೆ ಲೋಕಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಇದ್ದರೆ ಲೋಕಸಭೆಗೆ ಗೌರವ ಇದ್ದಂತೆ ಎಂದರು. ಕಾಂಗ್ರೆಸ್‌ ಪಕ್ಷದಲ್ಲಿದ್ದು ಅ ಧಿಕಾರ ಅನುಭವಿಸಿ
ಉಂಡ ಮನೆಗೆ ದ್ರೋಹ ಬಗೆದ ಮಾಲೀಕಯ್ಯ ಗುತ್ತೇದಾರ, ಬಾಬುರಾವ ಚಿಂಚನಸೂರ ಹಾಗೂ ಉಮೇಶ ಜಾಧವರ ಕೊಡುಗೆ ಕಲಬುರಗಿಗೆ ಏನಿದೆ? ಉಮೇಶ ಜಾಧವ ಗೋಮುಖ ವ್ಯಾಘ್ರ, ತನ್ನನ್ನೇ ತಾನು ಮಾರಿಕೊಂಡವ ಕಲಬುರಗಿ ಬಿಡ್ತಾನಾ? ಹೀಗಾಗಿ ಮಾರಿಕೊಂಡವರಿಗೆ ಮನ್ನಣೆ ಕೊಡುವುದನ್ನು ಬಿಟ್ಟು ಕಣ್ಣಿಗೆ ಕಾಣುವಂತ, ಅಭಿವೃದ್ಧಿ ಕೆಲಸ ಮಾಡಿದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ ಕೊಡಿ ಎಂದು ಮನವಿ ಮಾಡಿದರು.

ಸಂವಿಧಾನ ಬದಲಾಯಿಸುತ್ತೇವೆ, ಮಿಸಲಾತಿ ತೆಗೆಯುತ್ತೇವೆ ಎನ್ನುವ ಬಿಜೆಪಿಗರಿಗೆ ಮತ ಕೇಳುವ ನೈತಿಕತೆ ಇಲ್ಲ, ಅನಂತ ಕುಮಾರ ಹೆಗಡೆ ಒಬ್ಬ ನಾಲಾಯಕ ಆತ ಗ್ರಾ.ಪಂ ಸದಸ್ಯನಾಗಲು
ನಾಲಾಯಕ್‌ ಆಗಿದ್ದಾನೆ. ತೇಜಸ್ವಿ ಸೂರ್ಯ ಅಲ್ಲ ಆತ ಅಮಾವಾಸ್ಯೆಯ ಕತ್ತಲು ಇಂತವರಿಗೆ ಮತ ನೀಡಬೇಡಿ ಎಂದು ಗುಡುಗಿದರು.

ಕಲಬುರಗಿಯಲ್ಲಿ ಉಮೇಶ ಜಾಧವ ಠೇವಣಿ ಕಳೆದುಕೊಳ್ಳುವಂತೆ ಕಲಬುರಗಿಯ ಮತದಾರರು ನಿರ್ಣಯ ಮಾಡಬೇಕು. ಮಲ್ಲಿಕಾರ್ಜುನ ಖರ್ಗೆ ದೇಶದ ಸಂಪತ್ತು. ಮೋದಿ ಸರ್ಕಾರದ ವೈಫಲ್ಯ, ಭ್ರಷ್ಟಾಚಾರ, ಜನ ವಿರೋಧಿ  ನೀತಿಗಳನ್ನು ಖರ್ಗೆ ಸಮರ್ಥವಾಗಿ ಎದುರಿಸಿದ್ದಾರೆ. ಅಂತವರನ್ನು ಕಲಬುರಗಿ ಜನ ಯಾವತ್ತೂ ಮರೆಯೋದಿಲ್ಲ. ಅವರ ಗೆಲುವು ನಿಶ್ಚಿತವಾಗಿದೆ. ಆದರೆ ಅಫಜಲಪುರ ಮತಕ್ಷೇತ್ರದಿಂದ 25 ಸಾವಿರಕ್ಕೂ ಹೆಚ್ಚು ಅಂತರ ನೀಡುವ ಕೆಲಸ ಮಾಡಿ ಎಂದು ಮನವಿ ಮಾಡಿದರು.

ಸಚಿವ ಎಂ.ಸಿ. ಮನಗೂಳಿ, ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ಅಭಿವೃದ್ಧಿ ಕೆಲಸ ನೋಡಿ ಮತ ನೀಡಿ, ಖರ್ಗೆ ಬಳಿ ರಾಜಕೀಯ ಕಲಿತವರೆ ಅವರ ವಿರುದ್ಧ ಸ್ಪರ್ಧೆ ಮಾಡುತ್ತಾರೆಂದರೆ ಇದಕ್ಕಿಂತ ಹಾಸ್ಯಾಸ್ಪದ ಇನ್ನೊಂದಿಲ್ಲ. ಇದು ಮಲ್ಲಿಕಾರ್ಜುನ ಖರ್ಗೆ ವಿರುದ್ಧದ ಚುನಾವಣೆ ಅನ್ನೊದಕ್ಕಿಂತ ಪ್ರಜಾಪ್ರಭುತ್ವದ ಅಳಿವು, ಉಳಿವಿನ ಚುನಾವಣೆಯಾಗಿದೆ ಎಂದರು.

ಶಾಸಕ ಎಂ.ವೈ. ಪಾಟೀಲ ಮಾತನಾಡಿ, ಕಲಬುರಗಿಯನ್ನು ಕರ್ನಾಟಕ ಮಾತ್ರವಲ್ಲ ದೇಶವೇ ಗಮನಿಸುವಂತೆ ಮಲ್ಲಿಕಾರ್ಜುನ ಖರ್ಗೆ ಮಾಡಿದ್ದಾರೆ. ನೂರಾರು ಅಭಿವೃದ್ಧಿ ಕೆಲಸಗಳನ್ನು ಮಾಡಿ ಜನ ಕಲ್ಯಾಣ ಮಾಡಿದ್ದಾರೆ.

ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಗೆಲುವು ನಿಶ್ಚಿತವಾಗಿದ್ದು, ಅಫಜಲಪುರ ಮತಕ್ಷೇತ್ರದಿಂದ 25 ಸಾವಿರಕ್ಕೂ ಹೆಚ್ಚು ಲೀಡ್‌ ಬರುವುದಲ್ಲಿ ಸಂಶಯವಿಲ್ಲ ಎಂದು ಹೇಳಿದರು. ಡಾ| ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಈ ಚುನಾವಣೆ ಕೇವಲ ನನ್ನನ್ನು ಸೋಲಿಸುವ ಹುನ್ನಾರ ಮಾತ್ರವಲ್ಲ, ಸಂವಿಧಾನ, ಪ್ರಜಾಪ್ರಭುತ್ವದ ಅಳಿವು, ಉಳಿವಿನ ಚುನಾವಣೆಯಾಗಿದೆ. ದಿಲ್ಲಿಯಿಂದ ಗಲ್ಲಿ ತನಕ ಪ್ರಜಾಪ್ರಭುತ್ವ ವಿರೋಧಿಗಳೆಲ್ಲ ಒಂದಾಗಿದ್ದಾರೆ. ಅವರಿಂದ ದೇಶಕ್ಕೆ ಗಂಡಾಂತರ ಇದೆ. ಹೀಗಾಗಿ ಪ್ರಜಾಪ್ರಭುತ್ವ ವಿರೋಧಿಗಳಿಗೆ ಮತದಾರ ಪ್ರಭುಗಳು ಬುದ್ಧಿ ಕಲಿಸಬೇಕು. ಕಲಬುರಗಿ ಮತದಾರರ ಆಶೀರ್ವಾದ ಇರುವ ತನಕ ಮೋದಿ ಮತ್ತವರ ಸಂಗಡಿಗರಿಂದ ಹಾಗೂ ಇಲ್ಲಿನ ಕೆಲ ನಾಯಕರಿಂದ ನನ್ನನ್ನು ಸೋಲಿಸಲು ಆಗುವುದಿಲ್ಲ. ಹೀಗಾಗಿ ದಯಮಾಡಿ ಕೋಮುವಾದಿ ಪಕ್ಷದವರಿಗೆ ಈ ಚುನಾವಣೆಯಲ್ಲಿ ಮತದಾರರು ಬುದ್ಧಿ ಕಲಿಸಬೇಕೆಂದು ಮನವಿ ಮಾಡಿದರು.

ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ತಾಲೂಕು ಅಧ್ಯಕ್ಷ ಮಹಾಂತೇಶ ಪಾಟೀಲ, ಶರಣಪ್ಪ ಮಟ್ಟೂರ, ಮುಖಂಡರಾದ ರಾಜೇಂದ್ರಕುಮಾರ ಪಾಟೀಲ, ಚಂದ್ರಕಾಂತ ಪಾಟೀಲ, ರಮೇಶ
ನಾಟಿಕಾರ, ದಿಲೀಪ ಪಾಟೀಲ, ಮಕ್ಬೂಲ್‌ ಪಟೇಲ್‌, ಮತೀನ್‌ ಪಟೇಲ್‌, ಶಾಮರಾವ ಪ್ಯಾಟಿ, ಪಪ್ಪು ಪಟೇಲ್‌, ಅರುಣ ಪಾಟೀಲ,
ಸಂಜು ಪಾಟೀಲ, ಚಂದು ದೇಸಾಯಿ, ಮತೀನ್‌ ಪಟೇಲ್‌, ಸಿದ್ಧಾರ್ಥ ಬಸರಿಗಿಡ, ದೇವೇಂದ್ರಪ್ಪ ಮಟ್ಟೂರ, ರವಿ ಶೆಟ್ಟಿ, ಶರಣು ಕುಂಬಾರ ಇತರರು ಇದ್ದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.