ಮೋದಿ ದೊಡ್ಡ ಕಳ್ಳ-ಕೆಸಿಆರ್ ಸಣ್ಣ ಕಳ್ಳ: ವಿಜಯಶಾಂತಿ
ಮಲ್ಲಿಕಾರ್ಜುನ ಖರ್ಗೆ ಪರ ಮತ ಯಾಚನೆ
Team Udayavani, Apr 20, 2019, 12:24 PM IST
ಸೇಡಂ: ಮುಧೋಳ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ನಟಿ ವಿಜಯಶಾಂತಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೃಹತ್ ಮಾಲೆ ಹಾಕಿ ಸನ್ಮಾನಿಸಲಾಯಿತು.
ಸೇಡಂ: ಪ್ರಧಾನಿ ನರೇಂದ್ರ ಮೋದಿಯೊಬ್ಬ ಕ್ರಿಮಿನಲ್, ಮಾಯದ ಮಾತಾಡುವ ಮೂಲಕ ಜನರನ್ನು ವಂಚಿಸುತ್ತಿದ್ದಾರೆ. ತೆಲಂಗಾಣದ ಮುಖ್ಯಮಂತ್ರಿ ಕೆಸಿಆರ್ ಮತ್ತು ಮೋದಿ ಒಂದೇ ನಾಣ್ಯದ ಎರಡು ಮುಖಗಳು. ಪ್ರಧಾನಿ ಮೋದಿ ದೊಡ್ಡ ಕಳ್ಳ, ಕೆಸಿಆರ್ ಸಣ್ಣ ಕಳ್ಳ ಎಂದು ತೆಲುಗಿನ ಖ್ಯಾತ ನಟಿ, ಕಾಂಗ್ರೆಸ್ ನಾಯಕಿ ವಿಜಯಶಾಂತಿ ಟೀಕಿಸಿದರು.
ತಾಲೂಕಿನ ಮುಧೋಳ ಗ್ರಾಮದಲ್ಲಿ ಕಾಂಗ್ರೆಸ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ| ಮಲ್ಲಿಕಾರ್ಜುನ ಖರ್ಗೆ ಪರ ಹಮ್ಮಿಕೊಂಡ ಪ್ರಚಾರ ಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದ ಅವರು, ಮೋದಿ ಬಂಡವಾಳಶಾಹಿ ಅದಾನಿ ಮತ್ತು ಅಂಬಾನಿ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ಆಪಾದಿಸಿದರು. ಅಚ್ಛೇ ದಿನ್ ಹೆಸರಲ್ಲಿ ರೈತರು, ಕಾರ್ಮಿಕರು, ಬಡವರನ್ನು ವಂಚಿಸಲಾಗುತ್ತಿದೆ.
ಕೇವಲ ನೀರವ ಮೋದಿ, ಲಲಿತ ಮೋದಿ, ಮೆಹುಲ್ ಚೌಕ್ತಿ ಅಂತವರು ದೇಶವನ್ನು ಲೂಟಿ ಮಾಡುತ್ತಿದ್ದರೂ ಮೋದಿ ಸುಮ್ಮನಿದ್ದಾರೆ.
ಜಿಎಸ್ಟಿಯಿಂದ ತಾತ, ಮುತ್ತಾತನ ಕಾಲದಲ್ಲಿನ ಚಿನ್ನಾಭರಣಕ್ಕೂ ಲೆಕ್ಕ ತೋರಿಸುವ ಪರಿಸ್ಥಿತಿ ಬಂದಿದೆ. ಮುಂದೊಂದು ದಿನ ತಿನ್ನುವ ಅನ್ನಕ್ಕೂ ಲೆಕ್ಕ ಕೇಳಬಹುದು ಎಂದರು.
ಜನರ ದಾರಿ ತಪ್ಪಿಸುತ್ತಿರುವ ಮಾಧ್ಯಮ: ಪ್ರಧಾನಿ ಮೋದಿ ಕೈಯಲ್ಲಿರುವ ದೇಶದ ಕೆಲವು ಮಾಧ್ಯಮಗಳು ಜನರ ದಾರಿ ತಪ್ಪಿಸುತ್ತಿವೆ. ಸತ್ಯ ಮರೆಮಾಚಲಾಗುತ್ತಿದೆ. ಯಾವೊಂದು ಚಾನಲ್
ಗಳು ಮೋದಿ ವಿರುದ್ಧ ಮಾತನಾಡಿದರೆ, ಚಾನಲ್ನ ಪರವಾನಗಿಯನ್ನೇ ರದ್ದು ಮಾಡುವಷ್ಟು ಶಕ್ತಿಯನ್ನು ಮೋದಿ ಹೊಂದಿದ್ದಾರೆ.
ಈಗ ಸೋಷಿಯಲ್ ಮೀಡಿಯಾಗಳು ಸತ್ಯವನ್ನು ತೋರಿಸುತ್ತಿವೆ ಎಂದರು. ಡಾ| ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವ ಡಾ| ಶರಣಪ್ರಕಾಶ ಪಾಟೀಲ, ಮಾಜಿ ಸಚಿವ ಬಾಬುರಾವ ಚವ್ಹಾಣ, ಮಾಜಿ ವಿಧಾನಪರಿಷತ್ ಸದಸ್ಯ ಕೆ.ಬಿ. ಶಾಣಪ್ಪ, ಮುಕ್ರಂಖಾನ್, ಮಹಾಂತಪ್ಪ ಸಂಗಾವಿ, ಪ್ರತಿಭಾ ಪಾಟೀಲ, ಸುನೀತಾ ತಳವಾರ, ಧೂಳಪ್ಪ, ವೆಂಕಟರೆಡ್ಡಿ, ಜಗನ್ನಾಥ ಗೋಟೂರ, ರವಿ, ಹಾಜಿ ನಾಡೇಪಲ್ಲಿ, ದಾಮೋದರರೆಡ್ಡಿ, ಕುಸುಮಾ, ತೆಲಂಗಾಣ ಕಾಂಗ್ರೆಸ್ ನಾಯಕಿ ಶಾರದಾ ಇದ್ದರು.
ಕಾಲೇಜೇ ಜೂಜು ಅಡ್ಡೆ
ಗುಂಡೇಪಲ್ಲಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಪದವಿ ಕಾಲೇಜು
ಸ್ಥಳದಲ್ಲಿ ಶಾಸಕ ರಾಜಕುಮಾರ ಪಾಟೀಲ ಜೂಜು ಅಡ್ಡೆ ಪ್ರಾರಂಭಿಸಲು ತಯಾರಿ ನಡೆಸುತ್ತಿದ್ದಾರೆ. ಅಣ್ಣ-ತಮ್ಮ ಸೇರಿ ಅಭಿವೃದ್ಧಿ ಕಾಮಗಾರಿಗಳ ಹೆಸರಲ್ಲಿ ಪರ್ಸಂಟೇಜ್ ಪಡೆಯುತ್ತಿದ್ದಾರೆ.
ಡಾ| ಶರಣಪ್ರಕಾಶ ಪಾಟೀಲ,
ಮಾಜಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
MUST WATCH
ಹೊಸ ಸೇರ್ಪಡೆ
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ