‘ಕೈ’ ಕೊನೆ ತಂತ್ರ-ಆಟಕ್ಕೆ ಮರುಳಾಗಬೇಡಿ

ಕಲಬುರಗಿ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ ಮೋದಿ: ಜಾಧವಕುಡಿವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ

Team Udayavani, Apr 22, 2019, 10:06 AM IST

22-April-1

ಕಲಬುರಗಿ: ನಗರದ ಯರಗೋಳ ಕಲ್ಯಾಣ ಮಂಟಪದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಬಿಜೆಪಿ ರಾಜ್ಯ ಉಸ್ತುವಾರಿ ಪಿ. ಮುರಳೀಧರರಾವ್‌ ಉದ್ಘಾಟಿಸಿದರು.

ಕಲಬುರಗಿ: ಅಭಿವೃದ್ಧಿ ಮಾಡಬೇಕೆಂಬ ಮಹಾದಾಸೆಯೊಂದಿಗೆ ತಮ್ಮೆದುರಿಗೆ ಬಂದು ನಿಲ್ಲಲಾಗಿದೆ. ಈ ಅಗ್ನಿ ಪರೀಕ್ಷೆಯಲ್ಲಿ ಕೈ ಹಿಡಿಯುವಿರೆಂದು ಬಲವಾದ ನಿರೀಕ್ಷೆ ಹೊಂದಲಾಗಿದೆ. ಆದರೆ ಚುನಾವಣೆಯ ಕೊನೆ ಎರಡು ದಿನಗಳಲ್ಲಿ ಕಾಂಗ್ರೆಸ್‌ ಪಕ್ಷದವರು ನಡೆಸುವ ಆಮೀಷ ಹಾಗೂ ತಂತ್ರಗಳಿಗೆ ಒಳಗಾಗದೇ ಮನಸಾಕ್ಷಿಯಾಗಿ ಮತ ಚಲಾಯಿಸುವಂತೆ ಬಿಜೆಪಿ ಲೋಕಸಭಾ ಅಭ್ಯರ್ಥಿ ಡಾ| ಉಮೇಶ ಜಾಧವ ಮನವಿ ಮಾಡಿದರು.

ಪ್ರಚಾರದ ಕೊನೆ ದಿನವಾದ ರವಿವಾರ ನಗರದ ರೇವಣಸಿದ್ದೇಶ್ವರ ಕಾಲೋನಿ ಸೇರಿದಂತೆ ವಿವಿಧೆಡೆ ನಡೆದ ಚುನಾವಣಾ ಪ್ರಚಾರಸಭೆ ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಪಕ್ಷದ ಅಭ್ಯರ್ಥಿಗಳು ತೋಳ್ಬಲ, ಹಣಬಲ ಹಾಗೂ ಅಧಿಕಾರದಿಂದ ಬಲಾಡ್ಯರಾಗಿದ್ದಾರೆ.

ಅವರು ಗೆದ್ದರೆ ಮತ್ತೆ 5 ವರ್ಷ ನಂತರವೇ ತಮ್ಮ ಮುಂದೆ ಬರುತ್ತಾರೆ. ಆದರೆ ತಾವು ಗೆದ್ದರೆ
ಸದಾ ತಮ್ಮೆದುರಿಗೆ ಇರುವೆನು ಎಂಬುದು ಈಗಾಗಲೇ ತಮಗೆ ಮನವರಿಕೆಯಾಗಿದೆ. ಆದ್ದರಿಂದ
ಯೋಚಿಸಿ ನಿರ್ಧಾರ ಕೈಗೊಳ್ಳಿ. ದೇಶದ ಹಿತದೃಷ್ಟಿಯನ್ನು ಸಹ ನೋಡಿ ಎಂದರು.

ಇದೊಂದು ಸಲ ಅವಕಾಶ ನೀಡಿ ನೋಡಿ. ಐದು ವರ್ಷಗಳ ಕಾಲ ಇಷ್ಟು ದಿನಗಳ ಕಾಲ ಆಗದಿರುವ ಕೆಲಸ ಮಾಡಿ ತೋರಿಸುವೆ. ಕುಡಿಯುವ ನೀರಿನ
ಸಮಸ್ಯೆಗೆ ಶಾಶ್ವತ ಪರಿಹಾರ ರೂಪಿಸಲು ದೊಡ್ಡ ಯೋಜನೆ ಹಮ್ಮಿಕೊಳ್ಳಲಾಗುವುದು. ಪ್ರಧಾನಿ ಮೋದಿ ಕಲಬುರಗಿ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ ಕೇಳಿದ ಕಾಮಗಾರಿ ಇಲ್ಲವೇ ಯೋಜನೆಗೆ
ಇಲ್ಲ ಎನ್ನುವುದಿಲ್ಲ ಎಂಬ ಭಾವನೆ ತಮ್ಮಲ್ಲಿ ಹಾಗೂ ಈ ಭಾಗದ ಬಿಜೆಪಿ ನಾಯಕರಲ್ಲಿದೆ. ಹೀಗಾಗಿ ಈ ಭಾಗ ಹೊಸ ದಿಕ್ಕಿನಿಂದ ಸಾಗಲು ಎಲ್ಲ ಜನರ ಬೆಂಬಲದಿಂದಲೇ ಸಾಧ್ಯ ಎಂದು ಡಾ| ಜಾಧವ
ಮಾರ್ಮಿಕವಾಗಿ ನುಡಿದರು.

ನಗರದ ಯರಗೋಳ ಕಲ್ಯಾಣ ಮಂಟಪದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಡಾ| ಉಮೇಶ ಜಾಧವ, ಮೋದಿ ಹೆಸರಿನಲ್ಲಿ ಮತ ಕೇಳಲಾಗುತ್ತಿದೆ ಎನ್ನಲಾಗುತ್ತಿದೆ. ಆದರೆ ಕಾಂಗ್ರೆಸ್‌ನವರು ಯಾರ ಹೆಸರಿನ ಮೇಲೆ ಮತ ಕೇಳುತ್ತಾ ಬಂದಿದ್ದಾರೆ ಎಂಬುದು ಚಿಕ್ಕ ಮಗುವಿಗೂ ಗೊತ್ತು ಎಂದು ಟಾಂಗ್‌ ನೀಡಿದರು. ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್‌ ರೇವೂರ ಮಾತನಾಡಿ, ಕಲಬುರಗಿ ದಕ್ಷಿಣದಲ್ಲಿ ಈ ಹಿಂದೆ ತಮ್ಮ ತಂದೆ-ತಾಯಿ ಹಾಗೂ ತಮಗೆ ಬೆಂಬಲ ನೀಡಿರುವಂತೆ ಡಾ| ಜಾಧವ ಅವರಿಗೆ ಹೆಚ್ಚಿನ ಬೆಂಬಲ ನೀಡಬೇಕೆಂದು ಕೋರಿದರು.

ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌ ಮಾತನಾಡಿ, 2014ರಕ್ಕಿಂತಲೂ ಹೆಚ್ಚಿನ ಸ್ಥಾನ ಬಿಜೆಪಿ ಪಡೆಯುವುದರಿಂದ ನರೇಂದ್ರ ಮೋದಿ ಅವರು ಮತ್ತೂಮ್ಮೆ ಪ್ರಧಾನಿಯಾಗಲಿದ್ದಾರೆ. ಸದೃಢ ಭಾರತ ನಿರ್ಮಾಣಕ್ಕಾಗಿ ಬಿಜೆಪಿಗೆ ಬೆಂಬಲಿಸಿ ಈ ಹಿನ್ನೆಲೆಯಲ್ಲಿ ತಮ್ಮೆಲ್ಲರ ಬೆಂಬಲವೇ ಮುಖ್ಯವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಚಿತ್ರದುರ್ಗ ಅಭ್ಯರ್ಥಿ ಎ. ನಾರಾಯಣಸ್ವಾಮಿ, ಮಾಜಿ ಶಾಸಕ ಶಶೀಲ್‌ ನಮೋಶಿ, ರಾಜು ವಾಡೇಕಾರ ಇದ್ದರು.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.