‘ಕಾಂಗ್ರೆಸ್‌’ ಕೋಟೆಯಲ್ಲಿ ಕಮಲ ಕಮಾಲ್

ಎರಡನೇ ಬಾರಿಗೆ ಕೇಸರಿ ಪಡೆಯ ಕೇಕೆ•ಮಹದೇವಪ್ಪ ವೈ ಅವರಿಂದ ಮಾತ್ರ ಹ್ಯಾಟ್ರಿಕ್‌ ಸಾಧನೆ

Team Udayavani, May 24, 2019, 11:53 AM IST

24-May-13

ಕಲಬುರಗಿ: ನಗರದ ಗುಲಬರ್ಗಾ ವಿಶ್ವವಿದ್ಯಾಲಯದ ಮುಂದೆ ಬಿಜೆಪಿ ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಕುಣಿದು ಕುಪ್ಪಳಿಸಿ ಸಂಭ್ರಮಾಚರಣೆ ನಡೆಸಿದರು.

ಕಲಬುರಗಿ: ಲೋಕಸಭಾ ಚುನಾವಣಾ ಇತಿಹಾಸದಲ್ಲೇ ಕಲಬುರಗಿ ಕ್ಷೇತ್ರದ ಜನತೆ ಐತಿಹಾಸಿಕ ತೀರ್ಪು ಕೊಟ್ಟಿದ್ದಾರೆ. ಸೋಲಿಲ್ಲದ ಸರದಾರ ಖ್ಯಾತಿಯ ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಡಾ| ಉಮೇಶ ಜಾಧವ್‌ ಸೋಲಿನ ರುಚಿ ತೋರಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಕಾಂಗ್ರೆಸ್‌ನ ಭದ್ರಕೋಟೆಯಲ್ಲಿ ಎರಡನೇ ಬಾರಿಗೆ ಕಮಲದ ಬಾವುಟ ಹಾರಿದೆ.

ಕ್ಷೇತ್ರದ ಸಂಕ್ಷಿಪ್ತ ಇತಿಹಾಸ: 1957ರಿಂದ ಇದುವರೆಗೆ ಒಟ್ಟು 18 ಸಾರ್ವತ್ರಿಕ ಚುನಾವಣೆಗಳನ್ನು ಕಲಬುರಗಿ ಕಂಡಿದೆ. 1957ರಿಂದ 1991ರ ವರೆಗೂ ಕಾಂಗ್ರೆಸ್‌ ಅಭ್ಯರ್ಥಿಗಳೇ ಗೆಲುವು ಸಾಧಿಸಿದ್ದರು. 1957, 1962 ಮತ್ತು 1967ರಲ್ಲಿ ಸತತ ಮೂರು ಬಾರಿ ಗೆಲುವು ಕಂಡಿದ್ದ ಮಹದೇವಪ್ಪ ಯಶವಂತರಾಯ ಅವರು ಹ್ಯಾಟ್ರಿಕ್‌ ಸಾಧನೆ ಮಾಡಿದ್ದರು. ಇವರ ದಾಖಲೆಯನ್ನು ಇದುವರೆಗೂ ಯಾರೂ ಸರಿಗಟ್ಟಲು ಅಥವಾ ಮೀರಿಸಲು ಆಗಿಲ್ಲ.

ಕಾಂಗ್ರೆಸ್‌ ಪಾರುಪತ್ಯಕ್ಕೆ ಮೊದಲ ಬಾರಿಗೆ ಜನತಾ ದಳ ತಡೆಯೊಡ್ಡಿತ್ತು. 1996ರ ಚುನಾವಣೆಯಲ್ಲಿ ಜನತಾ ದಳದಿಂದ ಸ್ಪರ್ಧಿಸಿದ್ದ ಖಮರುಲ್ ಇಸ್ಲಾಂ ಜಯಭೇರಿ ಬಾರಿಸಿದ್ದರು. ನಂತರದ 1998ರ ಚುನಾವಣೆಯಲ್ಲಿ ಬಿಜೆಪಿಯ ಬಸವರಾಜ ಪಾಟೀಲ ಸೇಡಂ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಕೇಸರಿ ಬಾವುಟವನ್ನು ಹಾರಿಸಿದ್ದರು.

ಅಂದು ಜೆಡಿಎಸ್‌ನಿಂದ ಖಮರುಲ್ ಇಸ್ಲಾಂ ಮತ್ತು ಕಾಂಗ್ರೆಸ್‌ನಿಂದ ಡಾ| ಬಿ.ಜಿ. ಜವಳಿ ಸ್ಪರ್ಧಿಸಿದ್ದರು. ಖಮರುಲ್ ಇಸ್ಲಾಂ 1.97 ಲಕ್ಷ ಮತ ಪಡೆದರೆ, ಡಾ| ಜವಳಿ 1.40 ಲಕ್ಷ ಮತಗಳನ್ನು ಪಡೆದಿದ್ದರು. ಬಸವರಾಜ ಪಾಟೀಲ ಸೇಡಂ 3.28 ಲಕ್ಷ ಮತಗಳನ್ನು ಪಡೆಯುವ ಮೂಲಕ ಅತ್ಯಧಿಕ 1.31 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಬಸವರಾಜ ಪಾಟೀಲ ಸೇಡಂ ಅವರ ಜಯ ಕ್ಷೇತ್ರದ ಇತಿಹಾಸದಲ್ಲಿ ದಾಖಲಾಗಿದೆ.

1998ರಲ್ಲಿ ಚುನಾವಣೆಯ ಮರು ವರ್ಷವೇ ನಡೆದ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಕಾಂಗ್ರೆಸ್‌ ಕಲಬುರಗಿಯನ್ನು ಮತ್ತೆ ತಕ್ಕೆಗೆ ತೆಗೆದುಕೊಳ್ಳುವಲ್ಲಿ ಸಫಲವಾಗಿತ್ತು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಇಕ್ಬಾಲ್ ಅಹ್ಮದ್‌ ಸರಡಗಿ ಗೆಲುವು ಸಾಧಿಸಿದ್ದರು. ಅಂದಿನಿಂದ 2019ರವರೆಗೂ ಕಾಂಗ್ರೆಸ್‌ ತನ್ನ ಗೆಲುವಿನ ಓಟವನ್ನು ಮುಂದುವರಿಸಿತ್ತು. ಈ ಗೆಲುವಿನ ಓಟಕ್ಕೆ ಬಿಜೆಪಿ ಬ್ರೇಕ್‌ ಹಾಕಿದೆ. ಅದರಲ್ಲೂ 9 ಬಾರಿ ಶಾಸಕರಾಗಿ ಮತ್ತು ಎರಡು ಬಾರಿ ಸಂಸದರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಿಜೆಪಿ ಮಕಾಡೆ ಮಲಗಿಸಿದೆ.

ಮಹದೇವಪ್ಪನವರು ಹ್ಯಾಟ್ರಿಕ್‌ ಗೆಲುವಿನ ನಂತರ ಸಿದ್ದರಾಮರೆಡ್ಡಿ, ಡಾ| ಬಿ.ಜಿ.ಜವಳಿ ಮತ್ತು ಇಕ್ಬಾಲ್ ಅಹ್ಮದ್‌ ಸರಡಗಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಸತತ ಎರಡು ಗೆಲುವು ಸಾಧಿಸಿದ್ದರು. 1974 ಮತ್ತು 1977ರಲ್ಲಿ ಸಿದ್ದರಾಮರೆಡ್ಡಿ, 1989 ಮತ್ತು 1991ರಲ್ಲಿ ಡಾ| ಜವಳಿ ಹಾಗೂ 1999 ಮತ್ತು 2011ರಲ್ಲಿ ಇಕ್ಬಾಲ್ ಅಹ್ಮದ್‌ ಸರಡಗಿ ಜಯ ದಾಖಲಿಸಿದ್ದರು. 2009 ಮತ್ತು 2014ರಲ್ಲಿ ಮಲ್ಲಿಕಾರ್ಜುನ ಖರ್ಗೆ ಗೆಲುವು ಸಾಧಿಸಿದ್ದರು.

ಸೋತ ಪ್ರಮುಖರು: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಘಟಾನುಘಟಿ ನಾಯಕರು ಸೋಲನ್ನು ಕಂಡಿದ್ದಾರೆ. 1971ರ ಸಾರ್ವತ್ರಿಕ ಚುನಾವಣೆಯಲ್ಲಿ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಶರಣಬಸವಪ್ಪ ಅಪ್ಪ ಅವರು ಸ್ಪರ್ಧಿಸಿ ಸೋಲು ಕಂಡಿದ್ದರು. ವೈಜನಾಥ ಪಾಟೀಲರು 1980, 1991ರಲ್ಲಿ ಸೋಲು ಅನುಭವಿಸಿದ್ದರು. 1998ರಲ್ಲಿ ಬಸವರಾಜ ಪಾಟೀಲ ಸೇಡಂ ಗೆಲುವು ಸಾಧಿಸುವ ಮುನ್ನ 1991ರಲ್ಲಿ ಸೋತಿದ್ದರು. ಅಲ್ಲದೇ, 1999 ಹಾಗೂ 2004ರ ಚುನಾವಣೆಯಲ್ಲೂ ಬಸವರಾಜ ಪಾಟೀಲ ಸೇಡಂ ಪರಾಭವಗೊಂಡಿದ್ದರು. ಈಗ ಮಲ್ಲಿಕಾರ್ಜುನ ಖರ್ಗೆ ಕೂಡ ಸೋತ ಗಣ್ಯರ ಸಾಲಿಗೆ ಸೇರ್ಪಡೆಯಾಗಿದ್ದಾರೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.