ಹೈ.ಕ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿ

ಸಂಸದರಿಗೆ ಪ್ರಬಲ ಖಾತೆ ನೀಡಿ •ನಿರೀಕ್ಷೆ ಹುಸಿಯಾಗಿಸಬೇಡಿ

Team Udayavani, May 29, 2019, 11:08 AM IST

Udayavani Kannada Newspaper

ಕಲಬುರಗಿ: ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವಿನಿಂದ ಎರಡನೇ ಅವಧಿಗೆ ಆಯ್ಕೆಯಾದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದುಳಿದ ಹೈದ್ರಾಬಾದ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಬೇಕೆಂದು ಹೈ.ಕ ಜನಪರ ಸಂಘರ್ಷ ಸಮಿತಿ ಅಧ್ಯಕ್ಷ ಲಕ್ಷ್ಮಣ ದಸ್ತಿ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೈ.ಕ ಭಾಗದ ಐದೂ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಪ್ರಧಾನಿ ಮೋದಿ ತಮ್ಮ ಸಂಪುಟದಲ್ಲಿ ಈ ಭಾಗದ ಸಂಸದರಿಗೆ ಪ್ರಬಲ ಖಾತೆ ನೀಡಬೇಕು. ನನೆಗುದಿಗೆ ಬಿದ್ದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಮತ್ತಷ್ಟು ಅಭಿವೃದ್ಧಿ ಹೊಸ ಯೋಜನೆಗಳನ್ನು ಜಾರಿಗೊಳಿಸಿ ಕಾಲಮಿತಿಯೊಳಗೆ ಅನುಷ್ಠಾನಕ್ಕೆ ತರಬೇಕೆಂದು ಆಗ್ರಹಿಸಿದರು.

ಈ ಹಿಂದೆ ಮೋದಿ ಸರ್ಕಾರದಿಂದ ಹೈದ್ರಾಬಾದ ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕೆಲಸಗಳಾಗಲಿಲ್ಲ. ಅಂತಹ ಧೋರಣೆ ಮರುಕಳಿಸದಂತೆ ಈ ಭಾಗದ ಸಂಸದರು ಬದ್ಧತೆ ಪ್ರದರ್ಶಿಸಬೇಕು. ಕಲಬುರಗಿ ರೈಲ್ವೆ ವಿಭಾಗೀಯ ಕಚೇರಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಬೇಕು. ಇನ್ನಿತರ ರೈಲ್ವೆ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಹೊಸ ರೈಲ್ವೆ ಮಾರ್ಗಗಳಿಗೆ ಸಲ್ಲಿಸಿರುವ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಬೇಕು ಎಂದರು.

ಬೀದರ, ಕಲಬುರಗಿ ಮಾರ್ಗದಿಂದ ದೆಹಲಿ, ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳಿಗೆ ಹಾಗೂ ಹೈದ್ರಾಬಾದ ಕರ್ನಾಟಕದ ಎಲ್ಲ ಜಿಲ್ಲಾ ಕೇಂದ್ರಗಳಿಗೂ ಹೋಗಿ ಬರಲು ಹೊಸ ರೈಲುಗಳನ್ನು ಆರಂಭಿಸಬೇಕು. 371ನೇ (ಜೆ) ಕಲಂ ತಿದ್ದುಪಡಿ ಮಸೂದೆಯಡಿ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್‌ ಘೋಷಿಸಬೇಕೆಂದು ಒತ್ತಾಯಿಸಿದರು.

ಉದ್ಯೋಗ ಸೃಷ್ಟಿಸಿ ಎಂಎಸ್‌ಕೆ ಮಿಲ್ ಮಾದರಿಯಲ್ಲಿ ಕನಿಷ್ಠ 10,000 ಉದ್ಯೋಗಗಳನ್ನು ಒದಗಿಸುವ ಬೃಹತ್‌ ಕಾರ್ಖಾನೆ ಆರಂಭಿಸಬೇಕು. ಇಎಸ್‌ಐ ಆಸ್ಪತ್ರೆಯನ್ನು ಏಮ್ಸ್‌ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕು. ಸೌರಶಕ್ತಿ ಮತ್ತು ಇಲ್ಲಿನ ಸಂಪನ್ಮೂಲಗಳನ್ನು ಬಳಸಿಕೊಂಡು ಬೃಹತ್‌ ಉದ್ಯಮಗಳನ್ನು ಆರಂಭಿಸಬೇಕು ಎಂದರು.

ಡಾ| ಮಾಜಿದ್‌ ಡಾಗಿ, ಶಿವಲಿಂಗಪ್ಪ ಬಂಡಕ, ಮನೀಷ್‌ ಜಾಜು, ಎಚ್.ಎಂ.ಹಾಜಿ, ಅಸ್ಲಂ ಚೌಂಗೆ, ವಿಶಾಲದೇವ ಧನ್ನೇಕರ್‌, ಶಿವಕುಮಾರ ಬಿರಾದಾರ ಇದ್ದರು.

ಹೈದ್ರಾಬಾದ ಕರ್ನಾಟಕ ಭಾಗದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಅಧಿಕವಾಗುತ್ತದೆ. ಆದ್ದರಿಂದ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಕಲಬುರಗಿ ವಿಮಾನಯಾನ ಸೇವೆ ಶೀಘ್ರವೇ ಆರಂಭಿಸಬೇಕು. ನನೆಗುದಿಗೆ ಬಿದ್ದಿರುವ ನಿಮ್ಜ್ ಕಾಲ ಮಿತಿಯಲ್ಲಿ ಅನುಷ್ಠಾನಗೊಳಿಸಬೇಕು. ನಗರದ ಎರಡನೇ ರಿಂಗ್‌ ರಸ್ತೆ ಕಾಮಗಾರಿಯನ್ನು ಸಮರೋಪಾದಿಯಲ್ಲಿ ಪೂರ್ಣಗೊಳಿಸಬೇಕು. ಕಳೆದ ಬಾರಿಯಂತೆ ಮತ್ತೆ ನಿರ್ಲಕ್ಷಿಸಿದರೆ ಕೇಂದ್ರ ಸರ್ಕಾರದ ವಿರುದ್ಧ ನಿರಂತರ ಹೋರಾಟ ನಡೆಸಬೇಕಾಗುತ್ತದೆ.
ಲಕ್ಷ್ಮಣ ದಸ್ತಿ,
ಅಧ್ಯಕ್ಷರು, ಹೈ.ಕ ಜನಪರ ಸಂಘರ್ಷ ಸಮಿತಿ

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.