ಕಾಂಗ್ರೆಸ್‌-ಬಿಜೆಪಿಗೆ ಎಸ್‌ಯುಸಿಐ ಎದುರಾಳಿ: ಆರ್‌ಕೆ


Team Udayavani, Apr 6, 2019, 2:37 PM IST

06-April-20

ವಾಡಿ: ಲೋಕಸಭೆ ಚುನಾವಣೆ ನಿಮಿತ್ತ ಪಟ್ಟಣದ ಎಸ್‌ಯುಸಿಐ ಕಮ್ಯುನಿಸ್ಟ್‌ ಪಕ್ಷದ ಕಾರ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಕಾಮ್ರೇಡ್‌ ವೀರಭದ್ರಪ್ಪ ಆರ್‌.ಕೆ. ಮಾತನಾಡಿದರು.

ವಾಡಿ: ಕಲಬುರಗಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿಗೆ ಎಸ್‌ಯುಸಿಐ ಕಮ್ಯುನಿಸ್ಟ್‌ ಪಕ್ಷ ಪ್ರಬಲ
ಎದುರಾಳಿಯಾಗಿದೆ ಎಂದು ಸೋಷಲಿಸ್ಟ್‌ ಯುನಿಟಿ ಸೆಂಟರ್‌ ಆಫ್‌ ಇಂಡಿಯಾ (ಎಸ್‌ ಯುಸಿಐ) ಕಮ್ಯುನಿಸ್ಟ್‌ ಪಕ್ಷದ ಜಿಲ್ಲಾ ಸಮಿತಿ
ಸದಸ್ಯ ಕಾಮ್ರೇಡ್‌ ವೀರಭದ್ರಪ್ಪ ಆರ್‌.ಕೆ. ಹೇಳಿದರು.

ಪಟ್ಟಣದ ಎಸ್‌ಯುಸಿಐ (ಸಿ) ಪಕ್ಷದ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕರ್ತರ ಸಭೆ ಉದ್ದೇಶಿಸಿ ಅವರು
ಮಾತನಾಡಿದರು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಬಿಜೆಪಿಯ ಕೋಮುವಾದಿ ಆಡಳಿತಕ್ಕೆ ಕಾಂಗ್ರೆಸ್‌
ಪರ್ಯಾಯ ಎಂಬಂತೆ ಬಿಂಬಿಸಲಾಗುತ್ತಿದೆ. ದೇಶವನ್ನು ಆರು ದಶಕಗಳ ಕಾಲ ಆಳಿದ ಕಾಂಗ್ರೆಸ್‌ ಪಕ್ಷವೇ ಇಂದಿನ ಸಮಸ್ಯೆಗಳಿಗೆ
ಮೂಲ ಕಾರಣ ಎನ್ನುವ ಸತ್ಯವನ್ನು ವ್ಯವಸ್ಥಿತವಾಗಿ ಮರೆಮಾಚಲಾಗುತ್ತಿದೆ ಎಂದರು.

ಹಿಂದಿನ ಯುಪಿಎ ಆಡಳಿತದಲ್ಲಾದ ಭ್ರಷ್ಟಾಚಾರದ ಹಗರಣಗಳನ್ನು ಮರೆಯಲು ಸಾಧ್ಯವಿಲ್ಲ. ಕಾಂಗ್ರೆಸ್‌ ನೈಜವಾಗಿ
ಜನತಾಂತ್ರಿಕ-ಉದಾರವಾದಿ ಧೋರಣೆ ಪಕ್ಷವಲ್ಲ. ದೇಶದಲ್ಲಿ ತುರ್ತು ಪರಸ್ಥಿತಿ ಜಾರಿಗೊಳಿಸಿದ್ದು ಇದೇ ಕಾಂಗ್ರೆಸ್‌ ಪಕ್ಷ.
ಜನರ ಹಕ್ಕನ್ನು ದಮನಗೊಳಿಸುವ ಅನೇಕ ಕಾಯ್ದೆಗಳನ್ನು ಕಾಂಗ್ರೆಸ್‌ ಜಾರಿಗೆ ಎಂದಿದೆ ಎಂದು ದೂರಿದರು.

ಅಚ್ಚೇ ದಿನ್‌ ತರುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಬಿಜೆಪಿ ಸರಕಾರ, ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ವಾಗ್ಧಾನ ಮಾಡಿತ್ತು. ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿಯಿಂದಾಗಿ ಮಿಲಿಯಾಂತರ ಉದ್ಯೋಗಗಳು ನಾಶವಾಗಿವೆ. ಸಣ್ಣ ಉದ್ಯಮಗಳು ದಿವಾಳಿಯಾಗಿವೆ. ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಾನೂ ತಿನ್ನಲ್ಲ, ತಿನ್ನೋದಕ್ಕೂ ಬಿಡಲ್ಲ ಎಂದ ಮೋದಿ ಪಕ್ಷ ಅಧಿಕಾರದಲ್ಲಿ ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ದೊಡ್ಡ ಅವ್ಯವಹಾರ ನಡೆಸಿದೆ. ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ
ತೆರಿಗೆಯಿಂದ ಲಕ್ಷಾಂತರ ಕೋಟಿ ರೂ. ಲೂಟಿ ಹೊಡೆದಿದೆ. ಇಂತಹ ಭ್ರಷ್ಟ ಪಕ್ಷಗಳು ಮತ್ತೆ ಅಧಿಕಾರಕ್ಕೆ ಬರದಂತೆ ತಡೆಯಬೇಕು ಎಂದು ಹೇಳಿದರು.

ಎಸ್‌ಯುಸಿಐ (ಕಮ್ಯುನಿಸ್ಟ್‌) ಪಕ್ಷದ ಮುಖಂಡರಾದ ಮಲ್ಲಿನಾಥ ಹುಂಡೇಕಲ್‌, ರಾಘವೇಂದ್ರ ಅಲ್ಲಿಪುರ, ಶರಣು ವಿ.ಕೆ, ಗೌತಮ ಪರತೂರಕರ, ಶರಣು ಹೇರೂರ, ಗುಂಡಣ್ಣ ಎಂ.ಕೆ, ವಿಠ್ಠಲ ರಾಠೊಡ, ಮಲ್ಲಣ್ಣ ದಂಡಬಾ, ಯೇಶಪ್ಪ ಕೇದಾರ, ಶ್ರೀಶರಣ
ಹೊಸಮನಿ, ರಾಜು ಒಡೆಯರಾಜ, ನಂದೀಶ ಪೋದ್ದಾರ, ಅರುಣಕುಮಾರ ಹಿರೆಬೆಣ್ಣೂರ, ಅವಿನಾಶ ಒಡೆರಾಜ, ವೆಂಕಟೇಶ ಮತ್ತಿತರರು ಪಾಲ್ಗೊಂಡಿದ್ದರು.

ರಾಜ್ಯ ಸೇರಿದಂತೆ ದೇಶದ ಒಟ್ಟು 20 ರಾಜ್ಯಗಳ 119 ಸ್ಥಾನಗಳಲ್ಲಿ
ಎಸ್‌ಯುಸಿಐ ಪಕ್ಷದ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಲಬುರಗಿಯಿಂದ ಸ್ಪರ್ಧಿಸಿರುವ ನಮ್ಮ ಅಭ್ಯರ್ಥಿ ಎಸ್‌.ಎಂ.
ಶರ್ಮಾ ಗೆಲುವಿಗಾಗಿ ಕಾರ್ಯರ್ತರು ಪ್ರಚಾರ ಕಣಕ್ಕೆ ನುಗ್ಗಬೇಕು.
ಎಸ್‌ಯುಸಿಐ ಪಕ್ಷ ಜಿಲ್ಲೆಯಾದ್ಯಂತ ಕಟ್ಟಿರುವ ಜನಪರ ಹೋರಾಟಗಳನ್ನು ಜನತೆಗೆ ಮನವರಿಕೆ ಮಾಡಬೇಕು. .ವೀರಭದ್ರಪ್ಪ ಆರ್‌.ಕೆ.,
ಎಸ್‌ಯುಸಿಐ ಸದಸ್ಯ

ಟಾಪ್ ನ್ಯೂಸ್

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.