ಬಿಜೆಪಿ ಪಡೆಗೆ ಡಬ್ಬಲ್ ಧ‌ಮಾಕ

ಕಲಬುರಗಿ ಲೋಕಸಭಾ-ಚಿಂಚೋಳಿ ವಿಧಾನಸಭಾ ಗೆಲುವು•ಪಟಾಕಿ ಸಿಡಿಸಿ ಬಿಜೆಪಿಗರ ಸಂಭ್ರಮ

Team Udayavani, May 24, 2019, 10:06 AM IST

24-May-3

ಕಲಬುರಗಿ: ನಗರದ ಗುಲಬರ್ಗಾ ವಿಶ್ವವಿದ್ಯಾಲಯದ ಮುಂದೆ ಬಿಜೆಪಿ ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಕುಣಿದು ಕುಪ್ಪಳಿಸಿ ಸಂಭ್ರಮಾಚರಣೆ ನಡೆಸಿದರು.

ಕಲಬುರಗಿ: ತೀವ್ರ ಕುತೂಹಲ ಮೂಡಿಸಿದ ಲೋಕಸಭಾ ಚುನಾವಣೆ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ತೆರೆ ಬಿದ್ದಿದೆ. ಬುಧವಾರ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದಂತೆ ಜಿಲ್ಲಾದ್ಯಂತ ಬಿಜೆಪಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದ್ದರೆ, ಕಾಂಗ್ರೆಸ್‌ನಲ್ಲಿ ಮೌನ ಆವರಿಸಿದೆ.

ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಿಜೆಪಿ ಅಭ್ಯರ್ಥಿ ಡಾ| ಉಮೇಶ ಜಾಧವ್‌ ಮಣಿಸುವ ಮೂಲಕ ಗೆಲುವಿನ ಕೇಕೆ ಹಾಕಿದ್ದಾರೆ. ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಸುಭಾಷ ರಾಠೊಡ ವಿರುದ್ಧ ಉಮೇಶ ಜಾಧವ ಪುತ್ರರಾದ ಬಿಜೆಪಿ ಅಭ್ಯರ್ಥಿ ಅವಿನಾಶ ಜಾಧವ್‌ ಜಯಭೇರಿ ಬಾರಿಸಿದ್ದಾರೆ. ಒಂದೇ ದಿನ ಬಿಜೆಪಿ ಡಬ್ಬಲ್ ಗೆಲುವು ಸಾಧಿಸಿದ್ದರಿಂದ ಇಡೀ ಬಿಜೆಪಿಯಲ್ಲಿ ಹೊಸ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

ಬುಧವಾರ ಮತ ಎಣಿಕೆ ಕಾರ್ಯ ನಡೆಯುತ್ತಿದ್ದ ನಗರದ ಗುಲಬರ್ಗಾ ವಿಶ್ವವಿದ್ಯಾಲಯದ ಮುಂದೆ ಬೆಳಿಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್‌ನ ಉಭಯ ಪಕ್ಷಗಳ ಕಾರ್ಯಕರ್ತರು ನೆರೆದಿದ್ದರು. ಬಿಜೆಪಿ ಅಭ್ಯರ್ಥಿ ಉಮೇಶ ಜಾಧವ್‌, ಅವಿನಾಶ ಜಾಧವ್‌ ಮುನ್ನಡೆ ಸಾಧಿಸುತ್ತಿದಂತೆ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸ ತೊಡಗಿದರು.

ಉಮೇಶ ಜಾಧವ್‌, ಅವಿನಾಶ ಜಾಧವ್‌ ಗೆಲುವಿನತ್ತ ದಾಪುಗಾಲು ಹಾಕುತ್ತಿದಂತೆ ಕಾರ್ಯಕರ್ತರು, ಮುಖಂಡರಲ್ಲಿ ಸಂಭ್ರಮ ಮತ್ತಷ್ಟು ಹಿಮ್ಮಡಿಗೊಂಡಿತ್ತು. ಜತೆಗೆ ಬಿಜೆಪಿ ಕಾರ್ಯಕರ್ತರ ಸಂಖ್ಯೆಯಲ್ಲಿ ಹೆಚ್ಚಾಗ ತೊಡಗಿತು. ಚಿಂಚೋಳಿ ಮಾತ್ರವಲ್ಲದೇ ಖರ್ಗೆ ಸೋಲನ್ನು ಊಹಿಸಿದ ಕಾಂಗ್ರೆಸ್‌ ಕಾರ್ಯಕರ್ತರು ತೀವ್ರ ನಿರಾಶೆ ಅನುಭವಿಸಿದರು.

ಮೊಳಗಿದ ಜಯ ಘೋಷ: ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತಿದ್ದಂತೆ ಪ್ರಧಾನಿ ಮೋದಿ, ಉಮೇಶ ಜಾಧವ್‌ ಪರ ಬಿಜೆಪಿ ಕಾರ್ಯಕರ್ತರು ಜಯ ಘೋಷ ಮೊಳಗಿಸಿದರು. ಪಟಾಕಿ ಸಿಡಿಸಿ, ಬಣ್ಣ ಬಳಿದುಕೊಂಡು ಕಾರ್ಯಕರ್ತರು ಕುಣಿದು ಕುಪ್ಪಳಿಸಿದರು. ಪರಸ್ಪರ ಸಿಹಿ ಹಂಚಿಕೊಂಡು ಶಿಳ್ಳೆ, ಕೇಕೆ ಹಾಕಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.

ಕಾಂಗ್ರೆಸ್‌ನಲ್ಲಿ ಮೌನ: ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಗಳಿಸಿದ ಮಲ್ಲಿಕಾರ್ಜುನ ಖರ್ಗೆ ಮೊದಲ ಬಾರಿಗೆ ಸೋಲು ಕಂಡಿದ್ದರಿಂದ ಕಾಂಗ್ರೆಸ್‌ನಲ್ಲಿ ಮೌನ ಮನೆ ಮಾಡಿದೆ. ಚುನಾವಣಾ ಫಲಿತಾಂಶದ ನಿಖರವಾಗುತ್ತಿದ್ದಂತೆ ಕಾಂಗ್ರೆಸ್‌ ಕಚೇರಿಯಲ್ಲಿ ನೂರಾರು ಕಾರ್ಯಕರ್ತರು, ಮುಖಂಡರು ಸೇರಿದ್ದರು.

ಬೆಳಿಗ್ಗೆಯಿಂದ ಮನೆಯಲ್ಲಿದ್ದ ಮಲ್ಲಿಕಾರ್ಜುನ ಖರ್ಗೆ ಕೂಡ ಕಾಂಗ್ರೆಸ್‌ ಕಚೇರಿಗೆ ಬಂದರು. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಸಹಜ. ನನ್ನ ಸೋಲಿನ ಬಗ್ಗೆ ಕಾರ್ಯಕರ್ತರು ದೃತಿಗೇಡುವುದು ಬೇಡ. ಮುಂದೆ ಕೂಡ ಹೋರಾಟ ಮಾಡಿ ಪಕ್ಷವನ್ನು ಗಟ್ಟಿಗೊಳಿಸೋಣ ಎಂದು ಕರೆ ಕೊಟ್ಟರು. ಹಿರಿಯ ಮುಖಂಡರಾದ ಕೆ.ಬಿ. ಶಾಣಪ್ಪ, ಮಾರುತಿರಾವ ಮಾಲೆ, ಮಾಜಿ ಸಚಿವ ಡಾ| ಶರಣ ಪ್ರಕಾಶ ಪಾಟೀಲ, ಸಚಿವ ಪ್ರಿಯಾಂಕ್‌ ಖರ್ಗೆ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.