ಇತಿಹಾಸ ಪುಟ ಸೇರಿತು ಜಾಧವ ಗೆಲುವು

ಸ್ಥಳೀಯ ಸಂಸ್ಥೆಗಳಲ್ಲೂ ಚುಕ್ಕಾಣಿ ಹಿಡಿಯಿರಿ•ಹೈ.ಕದಲ್ಲಿ ಆಗಲಿದೆ ಕೈ-ಜೆಡಿಎಸ್‌ ಸರ್ವನಾಶ

Team Udayavani, Jun 9, 2019, 9:42 AM IST

09-June-2

ಕಲಬುರಗಿ: ವೀರಶೈವ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಕಲಬುರಗಿ ಸಂಸದ ಡಾ| ಉಮೇಶ ಜಾಧವ, ಬೀದರ ಸಂಸದ ಭಗವಂತ ಖೂಬಾ ಅವರನ್ನು ಸನ್ಮಾನಿಸಲಾಯಿತು.

ಕಲಬುರಗಿ: ಕಳೆದ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಹಾಗೂ ಬೀದರ್‌ ಕ್ಷೇತ್ರದಲ್ಲಿ ಬಿಜೆಪಿ ಐತಿಹಾಸಿಕವಾಗಿ ಗೆಲ್ಲಲು ಪಕ್ಷದ ನಾಯಕರ ಒಗ್ಗಟ್ಟು ಹಾಗೂ ಕಾರ್ಯಕರ್ತರ ಶ್ರಮವೇ ಕಾರಣ ಎಂದು ಬಿಜೆಪಿ ಮುಖಂಡರಾದ ಎನ್‌. ರವಿಕುಮಾರ, ಮಾಲೀಕಯ್ಯ ಗುತ್ತೇದಾರ, ಬಾಬುರಾವ ಚಿಂಚನಸೂರ, ಡಾ| ಎ.ಬಿ. ಮಲಕರೆಡ್ಡಿ, ಕಲಬುರಗಿ ಸಂಸದ ಡಾ| ಉಮೇಶ ಜಾಧವ, ಬೀದರ ಸಂಸದ ಭಗವಂತ ಖೂಬಾ ಹೇಳಿದರು.

ಬಿಜೆಪಿ ಗ್ರಾಮಾಂತರ ಜಿಲ್ಲಾ ಮತ್ತು ನಗರ ಜಿಲ್ಲಾ ಘಟಕದ ವತಿಯಿಂದ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಬಿಜೆಪಿಯ ನೂತನ ಸಂಸದರಾದ ಡಾ| ಉಮೇಶ ಜಾಧವ, ಭಗವಂತ ಖೂಬಾ ಮತ್ತು ಚಿಂಚೋಳಿ ಶಾಸಕ ಡಾ| ಅವಿನಾಶ ಜಾಧವ ಅವರಿಗೆೆ ಅಭಿನಂದನಾ ಸಮಾರಂಭದಲ್ಲಿ ನಾಯಕರು ಮಾತನಾಡಿ ಗೆಲುವಿಗೆ ತಮ್ಮದೇಯಾದ ವ್ಯಾಖ್ಯಾನ ಮಾಡಿದರು.

ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ ಮಾತನಾಡಿ, ಚುನಾವಣೆ ಗೆದ್ದಾಗಿದೆ. ಕಾಂಗ್ರೆಸ್‌ನವರಿಗೆ ತಕ್ಕ ಪಾಠ ಕಲಿಸಿದ್ದೇವೆ. ಇನ್ನೂ ಮುಂದೆ ಯಾರನ್ನು ನೋಯಿಸುವಂತೆ ಮಾತನಾಡಬೇಡಿ. ಮುಂದಿನ ಚುನಾವಣೆ ಗುರಿ ಇಟ್ಟುಕೊಂಡು ಕೆಲಸ ಮಾಡಲು ಆರಂಭಿಸಿ. ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ಜತೆಗೆ ಹೈಕ ಭಾಗದ ಎಲ್ಲ ಎಪಿಎಂಸಿ, ಪುರಸಭೆ, ನಗರಸಭೆ, ತಾಪಂ, ಜಿಪಂ ಹೀಗೆ ಎಲ್ಲದರಲ್ಲಿಯೂ ಅಧಿಕಾರ ಚುಕ್ಕಾಣಿ ಹಿಡಿಯುವ ಮೂಲಕ ಬಿಜೆಪಿ ನಂಬರ್‌ ಒನ್‌ ಪಕ್ಷವಾಗುವುದರ ಜತೆಗೆ ಬಲಿಷ್ಠ ಪಕ್ಷವಾಗುವಂತೆ ಮಾಡಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು.

ಸನ್ಮಾನಗಳು ಅಹಂಕಾರ ತರುತ್ತವೆ. ಹೀಗಾಗಿ ಅದರ ಗುಂಗಿನಲ್ಲಿ ಮುಳುಗಬೇಡಿ. ಜನರ ಭಾವನೆ ಅರಿತು ಕೆಲಸ ಮಾಡುವ ಮೂಲಕ ಜನಮನ ಗೆಲ್ಲಿ. ಅವರ ವಿಶ್ವಾಸವನ್ನು ಗೆಲ್ಲಿಸಿ ಎಂದು ಕಿವಿಮಾತು ಹೇಳಿದರು.

ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಮಾತನಾಡಿ, ಖರ್ಗೆ ಸೋಲನ್ನು ಶೋಲೆ ಸಿನೆಮಾದ ದೃಶ್ಯದ ವಿವರಣೆಯೊಂದಿಗೆ ವ್ಯಾಖ್ಯಾನ ನೀಡಿದರು. ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಅವರ ತಂದೆಗೆ ಎಲೆಕ್ಷನ್‌ ಚಿಂತೆ ಬಿಡಿ ಎಂದು ಅಪ್ಪನಿಗೆ ತನ್ನ ಕ್ಷೇತ್ರದಲ್ಲಿಯೇ ಲೀಡ್‌ ಕೊಡಲಿಲ್ಲ. ಗಬ್ಬರ್‌ಸಿಂಗ್‌ನ ದತ್ತು ಪುತ್ರ ಡಾ| ಶರಣಪ್ರಕಾಶ ಪಾಟೀಲ ವೇಗದ ಓಟಕ್ಕೆ ನಮ್ಮ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಬ್ರೇಕ್‌ ಹಾಕಿದರು ಎಂದು ಹೇಳಿದರು. ಇನ್ನೂ ವಾಲ್ಮೀಕಿ ಅಂದ್ರೆ ಸಾಕು ಪ್ರಿಯಾಂಕ್‌ಗೆ ನಿದ್ರೆ ಬರುತ್ತಿಲ್ಲವಂತೆ. ಒಂದು ಲಕ್ಷ ಮತಗಳಿಂದ ಸೋಲಿಲ್ಲದ ಸರದಾರನನ್ನು ಸೋಲಿಸಿದ ಡಾ| ಜಾಧವ ಗೆಲುವು ಇತಿಹಾಸದ ಪುಟ ಸೇರುವಂತೆ ಮಾಡಿದಿರಿ. ಮುಂದಿನ ದಿನಗಳಲ್ಲಿ ಹೈ ಕ ಭಾಗದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸರ್ವನಾಶ ಆಗಲಿದೆ ಹೇಳಿದರು.

ಮಾಜಿ ಸಚಿವರಾದ ಬಾಬುರಾವ ಚಿಂಚನಸೂರ, ಡಾ| ಎ.ಬಿ. ಮಲಕರೆಡ್ಡಿ, ಬಿಜೆಪಿ ನಗರ ಜಿಲ್ಲಾಧ್ಯಕ್ಷ ಬಿ.ಜಿ. ಪಾಟೀಲ, ಗ್ರಾಮಾಂತರ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ, ಶಾಸಕರಾದ ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಮತ್ತಿಮಡು, ದತ್ತಾತ್ರೇಯ ಪಾಟೀಲ ರೇವೂರ, ಸುಭಾಷ ಗುತ್ತೇದಾರ ಮಾಜಿ ಶಾಸಕ ವಾಲ್ಮೀಕಿ ನಾಯಕ ಸೇರಿದಂತೆ ಬಿಜೆಪಿ ಮುಖಂಡರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅಭಿನಂದನಾ ಸಮಾರಂಭದಲ್ಲಿ ಗುಲ್ಬರ್ಗ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಕಾರಣರಾದ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಕಾರ್ಯಕರ್ತರಿಗೆ ಪುಷ್ಪವೃಷ್ಟಿ ಮಾಡುವ ಮೂಲಕ ಅಭಿನಂದಿಸಲಾಯಿತು. ಮಾಜಿ ಸಚಿವ ಡಾ| ಎ.ಬಿ. ಮಾಲಕರಡ್ಡಿ, ಬಿಜೆಪಿ ನಗರ ಜಿಲ್ಲಾಧ್ಯಕ್ಷ, ಎಂಎಲ್ಸಿ ಬಿ.ಜಿ. ಪಾಟೀಲ, ಗ್ರಾಮಾಂತರ ಜಿಲ್ಲಾಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ, ಶಾಸಕರಾದ ರಾಜಕುಮಾರ ಪಾಟೀಲ ತೇಲ್ಕೂರ, ಬಸವರಾಜ ಮತ್ತಿಮಡು, ದತ್ತಾತ್ರೇಯ ಪಾಟೀಲ ರೇವೂರ, ಸುಭಾಷ ಗುತ್ತೇದಾರ, ಮಾಜಿ ಶಾಸಕರಾದ ವಾಲ್ಮೀಕಿ ನಾಯಕ, ಅಮರನಾಥ ಪಾಟೀಲ, ವಿಶ್ವನಾಥ ಪಾಟೀಲ ಹೆಬ್ಟಾಳ, ಶಶೀಲ್ ನಮೋಶಿ, ಮುಖಂಡರಾದ ಚಂದು ಪಾಟೀಲ, ವಿದ್ಯಾಸಾಗರ ಕುಲಕರ್ಣಿ, ಸುಭಾಷ ಬಿರಾದಾರ, ಬಸವರಾಜ ಇಂಗಿನ್‌, ಉಮಾಕಾಂತ ನಿಗ್ಗುಡಗಿ, ಶಶಿಕಲಾ ಟೆಂಗಳಿ,ಸಾವಿತ್ರಿ ಕುಳಗೇರಿ, ರವಿ ಬಿರಾದಾರ, ಅಂಬಾರಾಯ ಅಷ್ಟಗಿ, ಶರಣಪ್ಪ ತಳವಾರ, ಸಿದ್ಧಾಜಿ ಪಾಟೀಲ, ಶರಣು ಸಜ್ಜನಶೆಟ್ಟಿ, ವಿಠ್ಠಲ್ ಜಾಧವ, ರವಿಚಂದ್ರ ಕಾಂತಿಕರ್‌, ಅವ್ವಣ್ಣ ಮ್ಯಾಕೇರಿ, ಭೀಮಣ್ಣ ಬಿಲ್ಲವ್‌, ದಯಾಘನ್‌ ಧಾರವಾಡಕರ್‌, ಜಗನ್ನಾಥ ಮಾಲಿಪಾಟೀಲ ಅವರಾದ, ಡಾ| ಇಂದಿರಾ ಶಕ್ತಿ, ಧರ್ಮಣ್ಣ ಇಟಗಾ ಮುಂತಾದವರಿದ್ದರು.

ನಿಖೀಲ್ ಗೆ ಬತ್ತಿ ಇಟ್ಟ ಮಂಡ್ಯ ಜನತೆ
ಲೋಕಸಭೆ ಚುನಾವಣೆ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿ ಗಾಣಗಾಪುರಕ್ಕೆ ಬಂದಿದ್ದಾಗ, ಅಲ್ಲಿನ ಪೂಜಾರಿ ನಿಖೀಲ್ ಎಲ್ಲಿದಿಯಪ್ಪಾ ಎಂದಾಗ ಸಿಎಂ ತಬ್ಬಿಬ್ಬು ಆಗಿದ್ದರು. ತಮ್ಮ ಮಗನ ಹೆಸರು ನಿಖೀಲ್ ಪೂಜೆಗೆ ಬತ್ತಿ ತರಲು ಹೋಗಿದ್ದಾನೆ ಎಂದರು. ಅಷ್ಟರಲ್ಲಿ ಮಂಡ್ಯ ಜನ ನಿಖೀಲ್ಗೆ ಬತ್ತಿ ಇಟ್ಟು ಬಿಟ್ಟಿದ್ದರು ಎಂದು ಮಾಲೀಕಯ್ಯ ಗುತ್ತೇದಾರ ಹೇಳಿದಾಗ ನಗೆಗಡಲಲ್ಲಿ ಸಭೆ ತೇಲಾಡಿತು.

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.