ಶೇಕಡಾವಾರು ಮತ‌ ಯಾರಿಗೆ ಲಾಭ?

•ಬಿಜೆಪಿ ಮತ ಹೆಚ್ಚಳ ಪರಂಪರೆ ಮುಂದುವರಿಯುವುದೇ?•ಗಮನ ಸೆಳೆದ ಅಫಜಲಪುರ ಕ್ಷೇತ್ರ

Team Udayavani, Apr 26, 2019, 9:53 AM IST

26-April-1

ಕಲಬುರಗಿ: ಲೋಕಸಭೆ ಚುನಾವಣೆ ಮುಗಿದಿದೆ. ಈಗೇನಿದ್ದರೂ ಶೇಕಡಾವಾರು ಮತದಾನ ಹಾಗೂ ಇನ್ನಿತರ ಅಂಶಗಳ ಆಧಾರದ ಆತ್ಮಾವಲೋಕನ, ಚರ್ಚೆ ನಡೆದಿದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಅಫಜಲಪುರ ವಿಧಾನಸಭೆ ಕ್ಷೇತ್ರ ಬಹು ಮುಖ್ಯ ಪಾತ್ರ ಪಡೆದಿದೆ. ಏಕೆಂದರೆ ಕಳೆದ ಹಲವಾರು ಚುನಾವಣೆಗಳಿಂದ ಬಿಜೆಪಿಯೇ ಮೇಲುಗೈ ಸಾಧಿಸುತ್ತಾ ಬಂದಿದೆ.

ಹಿಂದಿನ ಅಂದರೆ 2009 ಹಾಗೂ 2014, ಅಲ್ಲದೇ ಹಿಂದಿನ ಲೋಕಸಭೆ ಚುನಾವಣೆಗಳಲ್ಲದೇ ಹಿಂದಿನ ಚುನಾವಣೆಯಲ್ಲೂ ಬಿಜೆಪಿ ಕಾಂಗ್ರೆಸ್‌ಗಿಂತ ಹೆಚ್ಚಿಗೆ ಮತ ಪಡೆದಿದೆ. 2009ರಲ್ಲಿ ಬಿಜೆಪಿ ಕಾಂಗ್ರೆಸ್‌ಗಿಂತ 13400 ಹಾಗೂ 2014ರಲ್ಲಿ 4125 ಮತಗಳು ಹೆಚ್ಚಿಗೆ ಬಂದಿದ್ದವು. ಅದೇ ರೀತಿ 2009ರಲ್ಲಿ ಶೇ. 48.31, 2014ರಲ್ಲಿ ಶೇ. 56.89 ಮತ್ತು ಪ್ರಸ್ತುತ ಶೇ. 62.54 ಮತದಾನವಾಗಿದೆ. ಹಿಂದಿನ ಚುನಾವಣೆಗಿಂತ ಶೇ. ಆರು ಪ್ರಮಾಣದಷ್ಟು ಹೆಚ್ಚಳವಾಗಿರುವುದು ಯಾರಿಗೆ ಅನುಕೂಲ ಎನ್ನುವ ಕುರಿತು ಈಗ ಕ್ಷೇತ್ರದಾದ್ಯಂತ ಚರ್ಚೆ ನಡೆದಿದೆ.

ಹೆಚ್ಚಿಗೆ ಮತದಾನ ಆಗಿರುವುದು ಬಿಜೆಪಿಗೆ ಅನುಕೂಲ ಎನ್ನುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ. ಆದರೆ ಕಾಂಗ್ರೆಸ್‌ ಪಕ್ಷದವರು ಕನಿಷ್ಠ ಐದು ಸಾವಿರ ಮತಗಳಾದರೂ ಲೀಡ್‌ ಆಗುತ್ತದೆ ಎನ್ನುತ್ತಾರೆ. ಬಿಜೆಪಿಯವರು ಈ ಹಿಂದಿನ ಚುನಾವಣೆಗಳಲ್ಲಿ ಗಳಿಸಿದ ಮತಗಳಿಗಿಂತ ಕನಿಷ್ಠ ನೂರಾದರೂ ಈ ಸಲ ಲೀಡ್‌ ಪಡೆಯವುದು ನಿಶ್ಚಿತ ಎನ್ನುತ್ತಿದ್ದಾರೆ. ಅಂದರೆ 15ರಿಂದ 18 ಸಾವಿರ ಲೀಡ್‌ ಬರಬಹುದು ಎನ್ನುತ್ತಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಾಲೀಕಯ್ಯ ಗುತ್ತೇದಾರ ಹಾಗೂ ಎಂ.ವೈ. ಪಾಟೀಲ ಜೆಡಿಎಸ್‌ದಿಂದ ಶಾಸಕರಾದ ಸಂದರ್ಭದಲ್ಲೂ ಬಿಜೆಪಿಯೇ ಲೀಡ್‌ ಪಡೆಯುತ್ತಾ ಬಂದಿದೆ.

ಅಫಜಲಪುರ ಪಟ್ಟಣದಲ್ಲಿ ಯಾವಾಗಲೂ ಪ್ರಸ್ತುತ ಕ್ಷೇತ್ರದ ಶಾಸಕರಾದ ಎಂ.ವೈ. ಪಾಟೀಲ ಅವರಿಗೆ ಯಾವಾಗಲೂ ಲೀಡ್‌ ಬಂದಿವೆ. ಆದರೆ ಇದೇ ಪ್ರಥಮ ಸಲ ಬಿಜೆಪಿಗೆ ಲೀಡ್‌ ಆಗಲಿದೆ ಎನ್ನಲಾಗುತ್ತಿದೆ. ಹೀಗಾಗಿ ಕಲಬುರಗಿ ಜಿಲ್ಲೆಯಾದ್ಯಂತ ಅಫಜಲಪುರ ಕ್ಷೇತ್ರದಲ್ಲಿ ಯಾವ ಪಕ್ಷಕ್ಕೆ ಎಷ್ಟು ಮತಗಳು ಬರುತ್ತವೆ ಎನ್ನುವುದು ಗಮನ ಸೆಳೆದಿದೆ.

ಅಫಜಲಪುರ ವಿಧಾನಸಭೆ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಯಾವಾಗಲೂ ಬಿಜೆಪಿಗೆ ಲೀಡ್‌ ಆಗುತ್ತಾ ಬಂದಿದೆ. ಈ ಸಲ ಕಾಂಗ್ರೆಸ್‌ಗೆ ಲೀಡ್‌ ಬರಬಹುದೆಂದು ನಿರೀಕ್ಷಿಸಲಾಗಿದೆ. ಆದರೆ ಹಿಂದಿನ ಫಲಿತಾಂಶ ಹಾಗೂ ಈಗಿನ ತಾಲೂಕಿನ ಮತದಾರರ ಒಲವು ನೋಡಿದರೆ ಈ ಸಲವೂ ಬಿಜೆಪಿಗೆ ಸ್ವಲ್ಪ ಲೀಡ್‌ ಬರಬಹುದು ಎಂದು ಅಂದಾಜಿಸಲಾಗಿದೆ.
•ಮಹಾಂತೇಶ ಪಾಟೀಲ ಸೊನ್ನ,
ಅಫಜಲಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ

ಅಫಜಲಪುರದಲ್ಲಿ ಬಿಜೆಪಿ ಭಾರಿ ಲೀಡ್‌ ಪಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ, ನಿತೀನ ಗುತ್ತೇದಾರ ಹಾಗೂ ಪಕ್ಷದ ಇತರ ಮುಖಂಡರ ಮತ್ತು ಕಾರ್ಯಕರ್ತರೂ ಸಂಘಟನಾತ್ಮಕವಾಗಿ ಕೆಲಸ ಮಾಡಿರುವುದು ಜತೆಗೆ ಪ್ರಧಾನಿ ನರೇಂದ್ರ ಮೋದಿ ಹವಾ ಲೀಡ್‌ನ್ನು ಈಗ ಮತ್ತಷ್ಟು ದಾಖಲೆ ನಿರ್ಮಿಸಲಿದೆ. ಇದೇ ಲೀಡ್‌ ಐತಿಹಾಸಿಕ ಗೆಲುವಿಗೆ ಕಾರಣವಾಗಲಿದೆ ಎನ್ನುವ ವಿಶ್ವಾಸ ಹೊಂದಲಾಗಿದೆ.
•ಸೂರ್ಯಕಾಂತ ನಾಕೇದಾರ,
ಅಧ್ಯಕ್ಷರು, ಬಿಜೆಪಿ ಅಫಜಲಪುರ ತಾಲೂಕು ಘಟಕ

ಅಫಜಲಪುರದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಧರ್ಮ ಪಾಲಿಸಲಾಗಿದೆ. ಕ್ಷೇತ್ರದ ಶಾಸಕರಾದ ಎಂ.ವೈ. ಪಾಟೀಲ ಅವರೊಂದಿಗೆ ಕ್ಷೇತ್ರದಾದ್ಯಂತ ಸುತ್ತಾಡಿ ಮತದಾರರಿಗೆ ಸರ್ಕಾರ ಸಾಧನೆಗಳನ್ನು ಮನವರಿಕೆ ಮಾಡಲಾಗಿದೆ. ಕಾಂಗ್ರೆಸ್‌ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಅಭಿವೃದ್ಧಿ ಕಾರ್ಯಗಳನ್ನು ತಿಳಿ ಹೇಳಲಾಗಿದೆಯಾದರೂ ಜನರ ಒಲವು ಬಿಜೆಪಿ ಕಡೆ ತೋರಿರುವುದು ಚುನಾವಣೆ ನಂತರ ತಮ್ಮ ಅರಿವಿಗೆ ಬಂದಿದೆ.
ರಾಜಕುಮಾರ ಬಡದಾಳ,
ಜೆಡಿಎಸ್‌ ತಾಲೂಕಾಧ್ಯಕ್ಷರು, ಅಫಜಲಪುರ

ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.