ಮಹಾದೇವಿಯಕ್ಕ ಸ್ತ್ರೀಕುಲಕ್ಕೆ ಮುಕುಟ ಮಣಿ

•12ನೇ ಶತಮಾನದ ಕ್ರಾಂತಿ ಇಂದಿನ ಮಹಿಳೆಯರ ಬದುಕಿಗೆ ಬೆಳಕು

Team Udayavani, Aug 11, 2019, 12:29 PM IST

11-Agust-21

ಕಲಬುರಗಿ: ಅನುಭವ ಮಂಟಪದಲ್ಲಿ 12ನೇ ಮಹಾದೇವಿಯಕ್ಕಗಳ ಸಮ್ಮೇಳನವನ್ನು ಮಧುರಾ ಅಶೋಕ ಉದ್ಘಾಟಿಸಿದರು. ಮಾತೋಶ್ರೀ ದಾಕ್ಷಾಯಿಣಿ ಅಪ್ಪ, ಡಾ| ವಿಲಾಸವತಿ ಖೂಬಾ, ಡಾ| ಜಯಶ್ರೀ ದಂಡೆ ಇದ್ದರು.

ಕಲಬುರಗಿ: ಮಾನವ ಕುಲಕ್ಕೆ, ಅದರಲ್ಲೂ ಸ್ತ್ರೀ ಕುಲಕ್ಕೆ ಮಹಾದೇವಿಯಕ್ಕ ಮುಕುಟ ಮಣಿಯಾಗಿದ್ದಾರೆ ಎಂದು ಶರಣಬಸವ ವಿದ್ಯಾವರ್ಧಕ ಸಂಘದ ಚೇರಮನ್‌ರಾದ 12ನೇ ಮಹಾದೇವಿಯಕ್ಕಗಳ ಸಮ್ಮೇಳನದ ಸರ್ವಾಧ್ಯಕ್ಷೆ ಮಾತೋಶ್ರೀ ದಾಕ್ಷಾಯಿಣಿ ಶರಣಬಸವಪ್ಪ ಅಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ಇಲ್ಲಿನ ಜಯನಗರದ ಅನುಭವ ಮಂಟಪದಲ್ಲಿ ಬಸವ ಸಮಿತಿ ಅಕ್ಕನ ಬಳಗ ವತಿಯಿಂದ ಹಮ್ಮಿಕೊಂಡಿರುವ ಎರಡು ದಿನಗಳ 12ನೇ ಮಹಾದೇವಿಯಕ್ಕಗಳ ಸಮ್ಮೇಳನ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

12ನೇ ಶತಮಾನದಲ್ಲಿ ಬಸವವಾದಿ ಶರಣರು ಮಾಡಿದ ಕ್ರಾಂತಿ ಫಲವಾಗಿ 21ನೇ ಶತಮಾನದ ಮಹಿಳೆಯರು ಪ್ರಜ್ವಲಿಸುತ್ತಿದ್ದಾರೆ. ಅಂದಿನ ಕ್ರಾಂತಿ, ಇಂದಿನ ಮಹಿಳೆಯರ ಬದುಕಿಗೆ ಬೆಳಕಾಗಿದೆ. ದಿನೇ ದಿನೇ ಸ್ತ್ರೀ ಶಕ್ತಿ ಪ್ರಬಲವಾಗುತ್ತಿದೆ. ಇದಕ್ಕೆ ಮಹಾದೇವಿಯಕ್ಕನ ಆಶೀರ್ವಾದ ಕಾರಣ ಎಂದರು.

ಪ್ರಸ್ತುತ ದಿನದಲ್ಲಿ ಹೆಣ್ಣು ಸಮಾಜಕ್ಕೆ ಕಣ್ಣಾಗಿದ್ದಾಳೆ. ಗಂಡಿಗೆ ಗಂಡಾಗಿ ಆತನ ಹೆಗಲಿಗೆ ಹೆಗಲಾಗಿ ದುಡಿಯುತ್ತಿದ್ದಾಳೆ. ಎಲ್ಲ ಕ್ಷೇತ್ರದಲ್ಲಿ ತನ್ನದೇಯಾದ ಕೊಡುಗೆ ಕೊಡುತ್ತಿದ್ದಾಳೆ. ಸ್ತ್ರೀ ಸಬಲಿಕರಣಕ್ಕಾಗಿ ಅನೇಕ ಮಠ ಮಾನ್ಯಗಳು ನಿರಂತರ ಪ್ರಯತ್ನಿಸುತ್ತಿವೆ ಎಂದರು.

ಬಸವಣ್ಣನವರ ‘ಕಾಯಕ’ ಮತ್ತು ‘ದಾಸೋಹ’ ಎಂಬ ಎರಡು ಸಾಮಾಜಿಕ, ಆರ್ಥಿಕ ತತ್ವಗಳು ಈಗ ಹೆಚ್ಚು ಪ್ರಸಿದ್ಧವಾಗಿದೆ. ಶ್ರೀಮಂತ ಮತ್ತು ಬಡವರ ನಡುವಿನ ಅಂತರ, ಅಸ್ಪೃಶ್ಯತೆ, ತಾರತಮ್ಯದ ಅಂತರದ ವಿರುದ್ಧ ಧ್ವನಿ ಎತ್ತಿದವರು ಬಸವಣ್ಣನವರು. ಅವರನ್ನೂ ಹಿಂಬಾಲಿಸಿದರೂ ಉಳಿದೆಲ್ಲ ಶಿವಶರಣರು, 12ನೇ ಶತಮಾನದ ತತ್ವಗಳು 21ನೇ ಶತಮಾನಕ್ಕೆ ದಾರಿದೀಪವಾಗಿವೆ. ಸ್ವಸ್ಥ ಭಾರತಕ್ಕೆ ಅಡಿಪಾಯವಾಗಿದೆ ಎಂದು ಹೇಳಿದರು.

ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಸಮಾಜ ಸೇವಕಿ ಮಧುರಾ ಅಶೋಕ, ನಗರದ ಪ್ರದೇಶದಲ್ಲಿ ಲಿಂಗ ತಾರತಮ್ಯ ಕಡಿಮೆ ಇದ್ದು, ಮಹಿಳೆಯರು ಸ್ವಾತಂತ್ರ್ಯದಿಂದ ಬದುಕುತ್ತಿದ್ದಾರೆ. ಆದರೆ, ಗ್ರಾಮೀಣ ಭಾಗದಲ್ಲಿ ಮಹಿಳೆಯರ ಶಿಕ್ಷಣ, ಆರೋಗ್ಯ, ವೇತನದ ವಿಚಾರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತಾರತಮ್ಯ ಇದೆ. ಕೂಲಿ ಮಾಡುವ ಗಂಡಾಳಿಗೆ ಹೆಚ್ಚಿನ ವೇತನ ಮತ್ತು ಹೆಣ್ಣಾಳಿಗೆ ಕಡಿಮೆ ವೇತನ ನೀಡುತ್ತಿರುವುದೇ ಲಿಂಗ ತಾರತಮ್ಯಕ್ಕೆ ಸಾಕ್ಷಿ ಎಂದು ಬೇಸರ ವ್ಯಕ್ತಪಡಿಸಿದರು.

ಮಹಿಳೆಯರ ಸಮಸ್ಯೆಗಳು, ಹಕ್ಕುಗಳ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಗ್ರಾಮೀಣ ಭಾಗದಲ್ಲಿ ಸರ್ಕಾರದ ಸೌಲಭ್ಯಗಳನ್ನು ಮಹಿಳೆಯರಿಗೆ ಮುಟ್ಟಿಸಬೇಕಿದೆ. ಸ್ವಯಂ ಆಗಿ ನಿಸ್ವಾರ್ಥದಿಂದ ಸಮಾಜ ಸೇವೆ ಮಾಡಲು ಯಾರಿಗೂ ಭಯ ಪಡುವ ಅಗತ್ಯವಿಲ್ಲ. ಸಮಾಜ ಸೇವೆ ಮಾಡುವ ಮನಸ್ಸಿರಬೇಕಷ್ಟೇ ಎಂದರು.

ಬಸವ ಸಮಿತಿ ಅಕ್ಕನ ಬಳಗ ಅಧ್ಯಕ್ಷೆ ಡಾ| ವಿಲಾಸವತಿ ಖೂಬಾ ಮಾತನಾಡಿ, ಮಹಿಳೆಯರ ಪ್ರತಿಭೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಕಳೆದ 12 ವರ್ಷಗಳಿಂದ ಮಹಾದೇವಿಯಕ್ಕಗಳ ಸಮ್ಮೇಳನವನ್ನು ವಿಜೃಂಭಣೆಯಿಂದ ನಡೆಸಿಕೊಂಡು ಬರಲಾಗುತ್ತಿದೆ. ಶರಣರ ತತ್ವಗಳ ಅಡಿ ಸಮ್ಮೇಳನ ನಡೆಯುತ್ತಿದೆ. ಎರಡು ದಿನಗಳ 160 ಜನ ಮಹಿಳೆಯರು ಭಾಗಿಯಾಗಿತ್ತಾರೆ. ಮಹಿಳೆಯರು ತಾವು ಯಾವುದರಲ್ಲೂ ಕಡಿಮೆ ಇಲ್ಲ ಎನ್ನುವುದನ್ನು ಸಾಬೀತು ಪಡಿಸಬೇಕಿದೆ ಎಂದು ಕರೆ ನೀಡಿದರು.

ಅಕ್ಕನ ಬಳಗದ ಕಾರ್ಯಾಧ್ಯಕ್ಷೆ ಡಾ| ಜಯಶ್ರೀ ದಂಡೆ ಸಮ್ಮೇಳನದ ಸರ್ವಾಧ್ಯಕ್ಷರು ಮತ್ತು ಅತಿಥಿಗಳ ಪರಿಚಯ ಮಾಡಿಕೊಟ್ಟರು. ಶರಣಮ್ಮ ಕಲಬುರಗಿ, ಅನಸೂಯಾ ನಡಕಟ್ಟಿ, ಪ್ರೊ| ಗೌರಮ್ಮ ಗೋಪಶೆಟ್ಟಿ, ಡಾ|ನಿರ್ಮಲಾ ಕೆಳಮನಿ ಹಾಗೂ ಮಹಿಳೆಯರು, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಇದಕ್ಕೂ ಮುನ್ನ ಬೆಳಗ್ಗೆ ಅನುಭವ ಮಂಟಪದಲ್ಲಿ ಬಸವೇಶ್ವರ ಮೂರ್ತಿ ಮಾಲಾರ್ಪಣೆ, ಷಟ್ಸ್ಥಲ ಧ್ವಜಾರೋಹಣವನ್ನು ಮಾಜಿ ಶಾಸಕಿ ಅರುಣಾ ಪಾಟೀಲ ನೆರವೇರಿಸುವರು. ನಂತರದಲ್ಲಿ ಮಹಾದೇವಿಯಕ್ಕಗಳ ಸಮ್ಮೇಳನದ ಅಂಗವಾಗಿ ಶರಣ ಬಸವೇಶ್ವರ ದೇವಸ್ಥಾನ ಆವರಣದಿಂದ ಅನುಭವ ಮಂಟಪದವರೆಗೆ ಅಕ್ಕ ಮಹಾದೇವಿ ಭಾವಚಿತ್ರ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರ ಅದ್ಧೂರಿ ಮೆರವಣಿಗೆ ನಡೆಯಿತು.

ಮಹಿಳೆಯರ ಡೊಳ್ಳು ಕುಣಿತ ಮತ್ತು ಎಲ್ಲರೂ ಇಲಕಲ್ ಸೀರೆ ಉಟ್ಟು ಪಾಲ್ಗೊಂಡಿದ್ದು ವಿಶೇಷ ಮೆರಗು ತಂದಿತ್ತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.