ಜಾತಿ ಕತ್ತರಿ; ಧರ್ಮ ಸೂಜಿ’

ಮತ್ತೆ ಕಲ್ಯಾಣ' ಅಭಿಯಾನ•ವಿದ್ಯಾರ್ಥಿಗಳೊಂದಿಗೆ ಸಂವಾದ•ನಗರದಲ್ಲಿ 'ಸಾಮರಸ್ಯ ನಡಿಗೆ'

Team Udayavani, Aug 30, 2019, 10:02 AM IST

30-Agust-1

ಕಲಬುರಗಿ: ನಗರದಲ್ಲಿ 'ಮತ್ತೆ ಕಲ್ಯಾಣ' ಅಭಿಯಾನದ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮವನ್ನು ಸಾಣೇಹಳ್ಳಿಯ ಶ್ರೀಮಠದ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಉದ್ಘಾಟಿಸಿದರು.

ಕಲಬುರಗಿ: ಸಮಾಜವನ್ನು ಧರ್ಮ ಸೂಜಿಯಂತೆ ಜೋಡಿಸುವ ಕೆಲಸ ಮಾಡುತ್ತದೆ. ಜಾತಿ ಸಮಾಜವನ್ನು ಕತ್ತರಿಸುತ್ತಾ ಹೋಗುತ್ತದೆ. ಆದ್ದರಿಂದ ಧರ್ಮವನ್ನು ಪ್ರೀತಿಸಿ ಸಮಾಜವನ್ನು ಸೂಜಿಯಂತೆ ಜೋಡಿಸುವ ಕೆಲಸ ಮಾಡಬೇಕಾಗಿದೆ. ಇದಕ್ಕಾಗಿ ನಾವೆಲ್ಲರೂ ಮಾನವ ಧರ್ಮವನ್ನು ಪಾಲಿಸಬೇಕೆಂದು ಸಾಣೇಹಳ್ಳಿಯ ಶ್ರೀಮಠದ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಹೇಳಿದರು.

ನಗರದ ಎಸ್‌.ಎಂ. ಪಂಡಿತ ರಂಗ ಮಂದಿರದಲ್ಲಿ ಗುರುವಾರ ‘ಮತ್ತೆ ಕಲ್ಯಾಣ’ ಅಭಿಯಾನದ ಅಂಗವಾಗಿ ‘ಸಹಮತ ವೇದಿಕೆ’ ವತಿಯಿಂದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು, ವಿಚಾರವಾದಿ ಪ್ರೊ| ಆರ್‌.ಕೆ.ಹುಡುಗಿ, ಮನೋತಜ್ಞ ಡಾ| ಆರ್‌.ವೆಂಕಟರೆಡ್ಡಿ, ಚಿಂತಕ ವಿಶ್ವರಾಧ್ಯ ಸತ್ಯಂಪೇಟೆ ಅವರು ಸಂವಾದ ನಡೆಸಿದರು.

ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಸ್ವಾಮಿಗಳು, ಬಸವಾದಿ ಶರಣ ಪ್ರಕಾರ ದೇವರೆಂದರೆ ಮನುಷ್ಯ. ಅರಿವು, ಆಚಾರ ಯಾರಿಗೆ ಇರುತ್ತದೋ ಅವರೆಲ್ಲರೂ ದೇವರೇ. ಹೀಗಾಗಿ ಶರಣರು ಕಟ್ಟಿದ್ದು ಮಠ, ಮಂದಿರಗಳನ್ನಲ್ಲ. ಮನುಷ್ಯರ ಮನಸು ಹಾಗೂ ಹೃದಯಗಳನ್ನು ಕಟ್ಟಿದರು. ಭಕ್ತರ ಮನೆಗಳೆಲ್ಲವೂ ಮಠಗಳೆಂದು ಶರಣರು ಹೇಳಿದ್ದಾರೆ. ನಮ್ಮೆಲ್ಲ ಮಠಗಳು ಮನೆಗಳಾದರೆ ಮಠಗಳೇ ಇರುವುದಿಲ್ಲ ಎಂದರು.

ಕಲ್ಲು, ಮಣ್ಣು, ಕಟ್ಟಿಗೆಗಳೆಲ್ಲ ದೇವರಲ್ಲ. ಮಾಟ-ಮಂತ್ರಗಳು ನಡೆಯುವುದು ತಪ್ಪು ಕಲ್ಪನೆ. ಶರಣರ ದೃಷ್ಟಿಯಲ್ಲಿ ದಾನದ ಕಲ್ಪನೆಯೂ ಇಲ್ಲ. ಬರೀ ದಾಸೋಹದ ಪರಿಕಲ್ಪನೆ ಇದೆ. ಶರಣರು ಹೇಳಿದಂತೆ ಮನುಷ್ಯನ ಅಂತರಂಗ ಮತ್ತು ಬಹಿರಂಗವಾಗಿ ಶುದ್ಧವಾಗಿರಬೇಕು ಎಂದು ಹೇಳಿದರು.

ಬಸವ ಸಮಿತಿ ಅಧ್ಯಕ್ಷೆ ವಿಲಾಸವತಿ ಖೂಬಾ, ಶರಣು ಪಪ್ಪ, ಸುನಿಲ್ ಹುಡಗಿ, ರವೀಂದ್ರ ಶಾಬಾದಿ, ಪ್ರೊ| ಕುಪೇಂದ್ರ ಪಾಟೀಲ, ಆರ್‌.ಜಿ. ಶೆಟಗಾರ, ವಿಜಯಕುಮಾರ ತೇಗಲತಿಪ್ಪಿ, ಮಾಲತಿ ರೇಷ್ಮಿ, ಮಾರುತಿ ಗೋಖಲೆ, ರೇಣುಕಾ ಡಾಂಗೆ, ಪ್ರಭುಲಿಂಗ ಮಹಾಗಾಂವಕರ್‌, ಶಿವರಂಜನ್‌ ಸತ್ಯಂಪೇಟೆ, ಮಲ್ಲಿಕಾರ್ಜುನ, ವೀರಭದ್ರ, ಸಂಗೀತಾ ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ನಂತರ ಸಾಯಂಕಾಲ ಸರ್ವ ಧರ್ಮಿಯರೊಂದಿಗೆ ‘ಸಾಮರಸ್ಯ ನಡಿಗೆ’ ನಡೆಯಿತು. ನೂರಾರು ಜನ ಬಸವ ತತ್ವ ಅನುಯಾಯಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.