ಕಾಂಗ್ರೆಸ್‌ ಕ್ಷೇತ್ರಗಳಲ್ಲಿಕಾಮಗಾರಿ ಸ್ಥಗಿತ

400 ಕೋಟಿ ವೆಚ್ಚದ ಕಾಮಗಾರಿಗಳಿಗೆ ತಡೆಬಿಜೆಪಿ ಸರ್ಕಾರದಿಂದ ಕೆಟ್ಟ ಚಾಳಿ ಮುಂದುವರಿಕೆ

Team Udayavani, Oct 23, 2019, 11:13 AM IST

23-October-1

ಕಲಬುರಗಿ: ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ರಾಜ್ಯ ಸರ್ಕಾರ ತಾರತಮ್ಯ ಧೋರಣೆ ಮುಂದುವರಿಸಿದ್ದು, ಜಿಲ್ಲೆಯಲ್ಲಿ ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಿಗೆ ನೀಡಿದ್ದ 400 ಕೋಟಿ ರೂ.ವೆಚ್ಚದ ವಿವಿಧ ಕಾಮಗಾರಿಗಳನ್ನು ತಡೆಹಿಡಿಯಲಾಗಿದೆ ಎಂದು ಮಾಜಿ ಸಚಿವ ಮತ್ತು ಶಾಸಕ ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಕಾಂಗ್ರೆಸ್‌ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅ ಧಿಕಾರ ಸ್ವೀಕರಿಸುವಾಗ ಮತ್ತು ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಯಾವುದೇ ಶಾಸಕರ ಮಧ್ಯೆ ತಾರತಮ್ಯ, ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದಿದ್ದರು. ಆದರೀಗ ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಲ್ಲಿ ಆರ್ಥಿಕ ಇಲಾಖೆಯಿಂದ ಅನುಮೋದನೆ ಪಡೆದ ಹಾಗೂ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ತಡೆ ನೀಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚಿತ್ತಾಪುರ, ಅಫಜಲಪುರ, ಜೇವರ್ಗಿ, ಕಲಬುರಗಿ ಉತ್ತರ ಮತ ಕ್ಷೇತ್ರಗಳಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯಿತಿ ರಾಜ್‌ ಇಲಾಖೆಯ 172 ಕೋಟಿ ರೂ., ಸಣ್ಣ ನೀರಾವರಿ ಇಲಾಖೆಯ 150 ಕೋಟಿ ರೂ., ಲೋಕೋಪಯೋಗಿ ಇಲಾಖೆಯಲ್ಲಿ 23 ಕೋಟಿ ರೂ. ವೆಚ್ಚದ ಯೋಜನೆಗಳು ಸೇರಿದಂತೆ ಹಲವು ಇಲಾಖೆಗಳ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗಿದೆ. ಇವುಗಳನ್ನು ಯಾವ ಆಧಾರದ ಮೇಲೆ ತಡೆ ಹಿಡಿಯಲಾಗಿದೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ಇದ್ದಾಗ, ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದ ಸಂದರ್ಭದಲ್ಲಿ ಎಂದೂ ಕಾಂಗ್ರೆಸ್‌ ಮತ್ತು ಬಿಜೆಪಿ ಶಾಸಕರ ನಡುವೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಿಲ್ಲ. ಆದರೆ, ಬಿಜೆಪಿ ಸರ್ಕಾರ ಶಾಸಕರ ಕ್ಷೇತ್ರಗಳಿಗೆ ಹಂಚಿಕೆಯಾದ ಅನುದಾನ ನಿಲ್ಲಿಸುವ ಕೆಟ್ಟ ಚಾಳಿ ಬೆಳೆಸಿಕೊಳ್ಳುತ್ತಿದೆ ಎಂದು ಹರಿಹಾಯ್ದರು.

ಈ ಹಿಂದೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಣವನ್ನು ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ವಿವೇಚನಾ ನಿಧಿಯಡಿ ಎಲ್ಲ ಶಾಸಕರಿಗೆ ಅನುದಾನ ಹಂಚಿಕೆ ಮಾಡಲಾಗಿತ್ತು. ನಂತರ ಬಂದ ಬಿಜೆಪಿ ಸರ್ಕಾರ ಕಾಂಗ್ರೆಸ್‌ ಶಾಸಕರಿಗೆ ಹಂಚಿಕೆಯಾದ ಅನುದಾನವನ್ನು ತಮ್ಮ ಶಾಸಕರಿಗೆ ವರ್ಗಾವಣೆ ಮಾಡಿ ಮೋಸ ಮಾಡಿದೆ. ಮುಂದಿನ ದಿನಗಳಲ್ಲಿ ಇದೇ ರೀತಿ ಮುಂದುವರಿದರೆ ಪ್ರತಿಭಟನೆ ಮಾಡಬೇಕಾಗುತ್ತದೆ. ಜತೆಗೆ ಕಾನೂನು ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಕಲಬುರಗಿ ಅನಾಥ: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಮತ್ತು ವಿಭಾಗೀಯ ಕೇಂದ್ರ ಕಲಬುರಗಿ ಜಿಲ್ಲೆಯನ್ನು ಸಂಪೂರ್ಣ ಕಡೆಗಣಿಸುತ್ತಿದೆ. “ಹೈದ್ರಾಬಾದ ಕರ್ನಾಟಕ’ವನ್ನು “ಕಲ್ಯಾಣ ಕರ್ನಾಟಕ’ ಎಂದು ಕೇವಲ ಹೆಸರು ಬದಲಾಯಿಸಿದರೆ ಸಾಲದು ಎಂದು ಕಿಡಿಕಾರಿದರು.

ನಮ್ಮ ಸರ್ಕಾರ ಇದ್ದಾಗ ಕಲಬುರಗಿ ಜಿಲ್ಲೆಗೆ ಇಬ್ಬರು ಸಚಿವರನ್ನು ಕೇಳುತ್ತಿದ್ದೆವು. ಆದರೆ, ಈಗ ಒಬ್ಬರಿಗೂ ಸಚಿವ ಸ್ಥಾನ ಕೊಟ್ಟಿಲ್ಲ. ಸ್ವಂತ ಕಲಬುರಗಿಯೇ ಸಚಿವರಿಲ್ಲದೇ ಅನಾಥವಾಗಿದೆ. ಜಿಲ್ಲೆಯ ಜನತೆ ಯಾರ ಬಳಿ ಸಮಸ್ಯೆ ಹೇಳಿಕೊಳ್ಳಬೇಕು ಎಂದು ಬೇಸರ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಜಿ.ಪಂ ಸದಸ್ಯ ಅರುಣಕುಮಾರ ಪಾಟೀಲ, ಮುಖಂಡ ವಿಜಯಕುಮಾರ ರಾಮಕೃಷ್ಣ ಇದ್ದರು.

ಟಾಪ್ ನ್ಯೂಸ್

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

7-kundapura

Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಶುಕ್ತಿಜಾ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.