ಉತ್ತರ ಕ್ಷೇತ್ರದಲ್ಲಿ ಸಂಸದ ಜಾಧವ ಸಂಚಾರ
ಬಡಾವಣೆಗಳ ನಾಗರಿಕರ ಸಮಸ್ಯೆ ಆಲಿಕೆ•ನನೆಗುದಿಗೆ ಬಿದ್ದ ಕಾಮಗಾರಿ ಪೂರ್ಣಕ್ಕೆ ತಾಕೀತು
Team Udayavani, Jun 14, 2019, 9:50 AM IST
ಕಲಬುರಗಿ: ಸಂಸದ ಡಾ| ಉಮೇಶ ಜಾಧವ ಉತ್ತರ ಮತಕ್ಷೇತ್ರಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದರು.
ಕಲಬುರಗಿ: ಸಂಸದ ಡಾ| ಉಮೇಶ ಜಾಧವ ಗುರುವಾರ ಕಲಬುರಗಿ ಮಹಾನಗರದ ಉತ್ತರ ಮತಕ್ಷೇತ್ರದಲ್ಲಿ ಮಿಂಚಿನ ಸಂಚಾರ ಕೈಗೊಂಡು ಪರಿಸ್ಥಿತಿ ಅವಲೋಕಿಸಿದರು.
ಪ್ರಸಿದ್ಧ ಖಾಜಾ ಬಂದೇನವಾಜ್ ದರ್ಗಾ ದರ್ಶನ ಕೈಗೊಳ್ಳುವ ಮೂಲಕ ಕಲಬುರಗಿ ಉತ್ತರ ಮತಕ್ಷೇತ್ರದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿದ ಸಂಸದರು, ನಾಗರಿಕರ ಸಮಸ್ಯೆಗಳನ್ನು ಆಲಿಸಿದರು.
ಕುಡಿಯುವ ನೀರು ಹಾಗೂ ಚರಂಡಿ ಸಮಸ್ಯೆ ಕುರಿತು ಸಾರ್ವಜನಿಕರು ಸಂಸದರ ಎದುರು ಅಳಲು ತೋಡಿಕೊಂಡು. ತುರ್ತಾಗಿ ಸಮಸ್ಯೆಗಳಿಗೆ ಸ್ಪಂದಿಸಲು ಮುಂದಾಗುವುದರ ಜತೆಗೆ ನನೆಗುದಿಗೆ ಬಿದ್ದ ಕಾಮಗಾರಿಗಳನ್ನು ಹದಿನೈದು ದಿನಗಳೊಳಗೆ ಪೂರ್ತಿಗೊಳಿಳಿಸುವಂತೆ ಪಾಲಿಕೆ ಆಯುಕ್ತರಿಗೆ ಸಂಸದರು ತಾಕೀತು ಮಾಡಿದರು.
ಈಗಾಗಲೇ ಇಎಸ್ಐ ಆಸ್ಪತ್ರೆ, ಕೇಂದ್ರೀಯ ವಿವಿಗೆ ಭೇಟಿ ನೀಡಿದ್ದಲ್ಲದೇ ಯಾದಗಿರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿರುವ ಸಂಸದ ಡಾ| ಉಮೇಶ ಜಾಧವ, ಕೇಂದ್ರ ಸಂಪುಟ ರಚನೆ ಮರುದಿನವೇ ರೈಲ್ವೆ ಹಾಗೂ ವಿಮಾನಯಾನ ಸಚಿವರಿಗೆ ಮನವಿ ಸಲ್ಲಿಸಿ, ಬೇಡಿಕೆ ಈಡೇರುವಂತೆ ಆಗ್ರಹಿಸಿದ್ದರು.
ಸಂಸತ್ ಸದಸ್ಯರಾಗಿ ಕೇಂದ್ರ ಸಂಪುಟ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಜಿಲ್ಲೆಯ ಕಾಳಗಿ ತಾಲೂಕಿನ ಮಂಗಲಗಿ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ಕುಟುಂಬಕ್ಕೆ ಸಾಂತ್ವನ ಹೇಳುವ ಮುಖಾಂತರ ಸೇವೆ ಆರಂಭಿಸಿರುವ ಸಂಸದ ಜಾಧವ ಅವರು, ದಿನನಿತ್ಯ ಪ್ರವಾಸ ಕೈಗೊಳ್ಳುತ್ತಲೇ ಇದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕಲಬುರಗಿ ಉತ್ತರ ಮತಕ್ಷೇತ್ರದಲ್ಲಿ ಕಡಿಮೆ ಮತಗಳು ಬಂದಿದ್ದರೂ, ಕ್ಷೇತ್ರದ ಅಭಿವೃದ್ಧಿ ಕಾರ್ಯದ ಬಗ್ಗೆ ಸಂಸದರು ಆಸಕ್ತಿ ಹೊಂದಿರುವುದು ಬಡಾವಣೆ ನಾಗರಿಕರ ಮೆಚ್ಚುಗೆಗೆ ಪಾತ್ರವಾಯಿತು.
ಬಿಜೆಪಿ ಯುವ ಮುಖಂಡ ಚಂದು ಪಾಟೀಲ ಕಲಬುರಗಿ ಉತ್ತರ ಕ್ಷೇತ್ರದಲ್ಲಿನ ಸಮಸ್ಯೆಗಳ ಬಗ್ಗೆ ಸಂಸದರಿಗೆ ವಿವರಿಸಿದರು. ಬಿಜೆಪಿ ಮುಖಂಡ ಜಬ್ಟಾರಸಾಬ್ ಕಾಳಗಿ, ವಾಹಬ್ ಚಿಂಚೋಳಿ, ಪಾಲಿಕೆ ಆಯುಕ್ತೆ ಫೌಜಿಯಾ ತರನ್ನುಮ್ ಹಾಗೂ ಇತರ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಹೇಳಿರುವಂತೆ ಮತದಾರ ಪ್ರಭುಗಳ ಬಳಿ ಬಂದು ಸಮಸ್ಯೆಗಳನ್ನು ಆಲಿಸುತ್ತಿರುವೆ. ಅದೇ ರೀತಿ ಜನತಾ ದರ್ಶನ ಆಯೋಜಿಸಲು ಉದ್ದೇಶಿಸಲಾಗಿದೆ. ಒಟ್ಟಾರೆ ಮುಂದಿನ ದಿನಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸಲು ಸಮಗ್ರ ಕ್ರಿಯಾಯೋಜನೆ ರೂಪಿಸಲು ಮುಂದಾಗಲಾಗುವುದು. ಒಟ್ಟಾರೆ ತಮ್ಮ ಕಾರ್ಯಗಳ ಆದ್ಯತೆ ಜನಸಾಮಾನ್ಯರದ್ದಾಗಿದೆ.
•ಡಾ| ಉಮೇಶ ಜಾಧವ,
ಸಂಸದರು, ಕಲಬುರಗಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ