ಟಿಪ್ಪು ಜಯಂತಿ ರದ್ದತಿಗೆ ಆಕ್ರೋಶ
ಧೈರ್ಯವಿದ್ದರೆ ಉಳಿದ ಜಯಂತಿ ರದ್ದುಪಡಿಸಿ•ಆದೇಶ ಹಿಂಪಡೆಯಿರಿ
Team Udayavani, Aug 3, 2019, 9:55 AM IST
ಕಲಬುರಗಿ: ಟಿಪ್ಪು ಸುಲ್ತಾನ್ ಜಯಂತಿ ರದ್ದು ಆದೇಶ ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸಿ ಸರ್ವ ಪಕ್ಷಗಳು ಹಾಗೂ ರಾಜಕೀಯೇತರ ಸಂಘಟನೆಗಳ ಒಕ್ಕೂಟದ ವತಿಯಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಟಿಪ್ಪು ಸುಲ್ತಾನ್ ಜಯಂತಿಯನ್ನು ರದ್ದುಪಡಿಸಿರುವುದನ್ನು ವಿರೋಧಿಸಿ ಸರ್ವ ಪಕ್ಷಗಳು ಹಾಗೂ ರಾಜಕೀಯೇತರ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಎದುರು ಮುಸ್ಲಿಂ ಸಮುದಾಯದ ನೂರಾರು ಜನರು ಪ್ರತಿಭಟನೆ ನಡೆಸಿ ಟಿಪ್ಪು ಸುಲ್ತಾನ್ ಜಯಂತಿ ರದ್ಧತಿ ಆದೇಶವನ್ನು ಹಿಂಪಡೆಯಬೇಕೆಂದು ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಟಿಪ್ಪು ಸುಲ್ತಾನ್ ಕೇವಲ ಕರ್ನಾಟಕಕ್ಕೆ ಅಲ್ಲ. ದೇಶದಲ್ಲಿಯೇ ಉತ್ತಮ ಆಡಳಿತಗಾರ. ಆಡಳಿತದಲ್ಲಿನ ಧೈರ್ಯ ಹಾಗೂ ಅಭಿವೃದ್ಧಿ ಕಾರ್ಯಗಳು ದೇಶದ ಇತಿಹಾಸದಲ್ಲಿ ಪ್ರಮುಖವಾಗಿವೆ. ಟಿಪ್ಪು ಸುಲ್ತಾನ್ ಕೇವಲ ಒಬ್ಬ ರಾಜನಾಗಿ ಅಲ್ಲ ತಾಂತ್ರಿಕ ಕ್ಷೇತ್ರ, ನೀರಾವರಿ ಕ್ಷೇತ್ರ ಹಾಗೂ ಕೃಷಿ ಮತ್ತು ಕನ್ನಡ ಭಾಷೆ ಅಭಿವೃದ್ಧಿಯೊಂದಿಗೆ ಸಮಾಜ ಸುಧಾರಕ ಎಂದು ಖ್ಯಾತಿ ಪಡೆದವರು ಎಂದರು.
ಟಿಪ್ಪು ಸಾಮ್ರಾಜ್ಯ ಭಾವಕ್ಯತೆಯ ಸಂಕೇತವಾಗಿತ್ತು. ಅವರಿಗೆ ಕನ್ನಡದ ಕಲಿ, ನಾಡ ಪ್ರೇಮಿ, ಮೈಸೂರು ಹುಲಿ ಮುಂತಾದ ಬಿರುದುಗಳಿವೆ. ಅಂತಹ ಮಹಾನ್ ನಾಯಕನ ಜಯಂತಿ ರದ್ದುಪಡಿಸಿದ್ದು ಖಂಡನೀಯವಾಗಿದೆ. ಸರ್ಕಾರದ ನಿರ್ಧಾರದ ವಿರುದ್ಧ ನಿರಂತರವಾಗಿ ಹೋರಾಟ ಮಾಡಲಾಗುವುದು ಎಂದು ಪ್ರತಿಭಟನಾಕರರು ಎಚ್ಚರಿಸಿದರು.
ವಕೀಲ ಸೈಯದ್ ಮಜರ ಹುಸೇನ್, ಎಸ್ಡಿಪಿಐ ಜಿಲ್ಲಾಧ್ಯಕ್ಷ ಮೊಹ್ಮದ್ ಮೊಹಸೀನ್, ಅಸಗರ್ ಚುಲಬುಲ್, ಸೈಯದ್ ಹಬೀಬ್ ಸರಮಸ್ತ್, ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಉಸ್ತಾದ್, ವಾಹೇಜ್ ಬಾಬಾ, ಶೇಖ್ ಇಜಾಜ್ ಅಲಿ, ಮೌಲಾನಾ ಇಬ್ರಾಹಿಂ, ಮಂಜುನಾಥ್ ನಾಲವಾರಕರ ಹಾಗೂ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ