ತಗ್ಗಿದ ಬಿಸಿಲು: 10 ರಿಂದ ಶಾಲೆ ಆರಂಭ?

ಶಾಲೆ ಪುನಾರಂಭ ಕುರಿತು ಚರ್ಚೆ •ರಜಾ ದಿನ ಸರಿದೂಗಿಸಲು ಯೋಚನೆ

Team Udayavani, Jun 7, 2019, 9:47 AM IST

07-Jun-1

ಕಲಬುರಗಿ: ಜಿಲ್ಲೆಯಲ್ಲಿ ಪ್ರಾಥಮಿಕ ಶಾಲೆಗಳನ್ನು ಜೂ.14ರ ಬದಲಿಗೆ ಜೂ.10ರಂದು ಆರಂಭಿಸುವಂತೆ ಡಿಡಿಪಿಐಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಬರೆದಿರುವ ಪತ್ರ.

ರಂಗಪ್ಪ ಗಧಾರ
ಕಲಬುರಗಿ:
ಜಿಲ್ಲೆಯಲ್ಲಿ ಬಿರು ಬಿಸಿಲಿನಿಂದಾಗಿ ಜೂ.14ಕ್ಕೆ ಮುಂದೂಡಲ್ಪಟ್ಟಿರುವ ಪ್ರಾಥಮಿಕ ಶಾಲೆಗಳ ಪ್ರಾರಂಭೋತ್ಸವವನ್ನು ಜೂ.10ರಂದೇ ಆರಂಭಿಸುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ಕಳೆದ ಮೂರ್‍ನಾಲ್ಕು ದಿನಗಳಿಂದ ಮಳೆ ಸುರಿದು ವಾತಾವರಣ ಸ್ಪಲ್ಪ ಮಟ್ಟಿಗೆ ತಂಪಾಗಿರುವುದರಿಂದ ಇಂತಹದೊಂದು ಚರ್ಚೆ ಶುರುವಾಗಿದೆ.

ರಾಜ್ಯಾದ್ಯಂತ 2019-20ನೇ ಸಾಲಿನ ಶೈಕ್ಷಣಿಕ ವರ್ಷದ ತರಗತಿಗಳು ಮೇ 29ರಿಂದಲೇ ಪ್ರಾರಂಭಗೊಂಡಿವೆ. ಆದರೆ, ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ ಕಾರಣದಿಂದಾಗಿ ಪ್ರಾಥಮಿಕಶಾಲೆಗಳ ಬೇಸಿಗೆ ರಜೆಯನ್ನುಜೂನ್‌ 14ರ ವರೆಗೆ ವಿಸ್ತರಿಸಲಾಗಿದೆ. ಮೇ 29ರಂದು ಪ್ರೌಢ ಶಾಲೆಗಳು ಮಾತ್ರ ಆರಂಭಗೊಂಡಿವೆ.

ಮೇ ತಿಂಗಳಲ್ಲಿ ಗರಿಷ್ಠ 45 ಡಿಗ್ರಿ ಉಷ್ಣಾಂಶ ದಾಖಲಾಗಿತ್ತು. ಆದ್ದರಿಂದ ಬಿಸಿಲಿನ ಪ್ರಖರತೆ ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಅಧಿಕಾರಿಗಳು ಉನ್ನತ ಅಧಿಕಾರಿಗಳ ಗಮನಕ್ಕೆ ತಂದು ಬೇಸಿಗೆ ರಜೆ ವಿಸ್ತರಣೆಗೆ ಮನವಿ ಮಾಡಿದ್ದರು.

ಮಕ್ಕಳ ಹಿತದೃಷ್ಟಿಯಿಂದ ಶಾಲೆಗಳ ಆರಂಭ ಮುಂದೂಡುವಂತೆ ಕೋರಿ ಜಿಲ್ಲಾಧಿಕಾರಿಗಳು ಮೇ 25ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಅಲ್ಲದೇ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವೂ ಶಾಲೆಗಳ ರಜೆ ವಿಸ್ತರಿಸುವಂತೆ ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ ಮೇ 28ರಂದು ಪ್ರಾಥಮಿಕ ಶಾಲೆಗಳ ಪ್ರಾರಂಭೋತ್ಸವ ಮುಂದೂಡಿ ಆದೇಶ ಹೊರಡಿಸಿತ್ತು.

ಎರಡು ವಾರಗಳ ಕಾಲ ಶಾಲಾ ತರಗತಿಗಳ ಆರಂಭದ ಕೊರತೆ ದಿನಗಳನ್ನು ಪ್ರತಿ ಶನಿವಾರ ಪೂರ್ಣದಿನವಾಗಿ ಉಪಯೋಗಿಸಿಕೊಳ್ಳುವುದು ಹಾಗೂ ರಜಾ ಅವಧಿಯಲ್ಲಿ ಸರಿದೂಗಿಸಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿತ್ತು.

ಮಳೆ ತಂದ ತಂಪು: ಕಳೆದ ನಾಲ್ಕು ದಿನಗಳಿಂದ ಜಿಲ್ಲಾದ್ಯಂತ ಮಳೆಯಾದ ಪರಿಣಾಮ ಉಷ್ಣಾಂಶದಲ್ಲಿ ಕಡಿಮೆಯಾಗಿದ್ದು, ಬಿಸಿಲಿನ ಧಗೆಯಲ್ಲಿ ಕೊಂಚ ಕಡಿಮೆಯಾಗಿದೆ. ಶಾಲಾ ಪ್ರಾರಂಭೋತ್ಸವವಾಗಬೇಕಿದ್ದ ಮೇ 29ರಂದು ಗರಿಷ್ಠ 44.7 ಡಿಗ್ರಿ ಸೆಲಿಯಸ್‌ ತಾಪ ಇತ್ತು. ಕನಿಷ್ಠ ಉಷ್ಣಾಂಶ 30.2 ಡಿಗ್ರಿಯಷ್ಟು ದಾಖಲಾಗಿತ್ತು. ಇದೀಗ ಗರಿಷ್ಠ 41 ಡಿಗ್ರಿ ಉಷ್ಣಾಂಶ ಹಾಗೂ ಕನಿಷ್ಠ 27 ಡಿಗ್ರಿ ಸೆಲಿಯಸ್‌ ಉಷ್ಣಾಂಶ ಇದೆ. ಜತೆಗೆ ಮುಂಜಾನೆ ಮತ್ತು ಸಂಜೆ ಸಮಯದಲ್ಲಿ ಸ್ವಲ್ಪ ತಂಪಿನ ವಾತಾವರಣ ಇದೆ.

ಆದ್ದರಿಂದ ಪ್ರಾಥಮಿಕ ಶಾಲೆಗಳ ಪ್ರಾರಂಭೋತ್ಸವವನ್ನು ಜೂ.14ರ ಬದಲಿಗೆ ಮುಂಚಿತವಾಗಿ ಆರಂಭಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಲ್ಲಿ ಕಳೆದಮೂರು ದಿನಗಳಿಂದ ಚಿಂತನೆ ನಡೆಯುತ್ತಿದೆ. ಈ ನಡುವೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸಹ ಜೂ.14ರ ಬದಲು ಜೂನ್‌ 10ರಂದೇ ಶಾಲೆಗಳು ಆರಂಭಿಸುವಂತೆ ಡಿಡಿಪಿಐ ಅವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದೆ.

ಶಿಕ್ಷಕರ ಸಂಘ ಪತ್ರ
ಮೇ 29ಕ್ಕೂ ಮುನ್ನ ದಾಖಲೆ ಪ್ರಮಾಣದಲ್ಲಿ ಉಷ್ಠಾಂಶ ಇತ್ತು. ಇದೀಗ ಮಳೆಯಿಂದಾಗಿ ತಾಪಮಾನದಲ್ಲಿ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ಆದ್ದರಿಂದ ಜೂ.14ರ ಬದಲಿಗೆ ಜೂ.10ರಂದು ಪ್ರಾಥಮಿಕ ಶಾಲೆಗಳನ್ನು ಸಹ ಪ್ರಾರಂಭಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ.
•ಮಲ್ಲಯ್ಯ ಗುತ್ತೇದಾರ,
ಅಧ್ಯಕ್ಷರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ

ಮುಂಚಿತ ಆರಂಭದ ಲಾಭವೇನು?
ಪ್ರಾಥಮಿಕ ಶಾಲೆಗಳ ಪ್ರಾರಂಭೋತ್ಸವವನ್ನು ಜೂ.14ಕ್ಕಿಂತ ಮುಂಚಿತವಾಗಿ ಆರಂಭಿಸುವುದರಿಂದ ತರಗತಿಗಳು ಬೇಗ ಪ್ರಾರಂಭಿಸಿದಂತಾಗುತ್ತದೆ. ಅಲ್ಲದೇ, ತರಗತಿಗಳ ಕೊರತೆ ದಿನಗಳನ್ನು ಇದು ಕಡಿಮೆ ಮಾಡಲಿದೆ. ಶನಿವಾರ ಪೂರ್ಣದಿನ ಮತ್ತು ರಜಾ ಅವಧಿಯಲ್ಲಿ ತರಗತಿಗಳು ನಡೆಸುವುದು ತಪ್ಪಿಸಬಹುದಾಗಿದೆ ಎಂಬ ಲೆಕ್ಕಾಚಾರ ನಡೆಯುತ್ತಿದೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.