ರಾಯಣ್ಣ ದೇಶದ ಮೊದಲ ಬಲಿದಾನ

•ಸ್ವಾತಂತ್ರ್ಯದ ಕಿಡಿ ಹೊತ್ತಿಸಿದ್ದು ಚನ್ನಮ್ಮ-ರಾಯಣ್ಣ•ದೇಶದ ಆರ್ಥಿಕತೆಯಲ್ಲಿ ಹಾಲುಮತ‌ ಪಾತ್ರ ಮಹತ್ವದ್ದು

Team Udayavani, Aug 19, 2019, 12:55 PM IST

19-Agust-21

ಕಲಬುರಗಿ: ವೀರಶೈವ ಕಲ್ಯಾಣ ಮಂಟಪ ಆವರಣದಲ್ಲಿ ರವಿವಾರ ಹಮ್ಮಿಕೊಂಡಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಕಾರ್ಯಕ್ರಮಕ್ಕೆ ಶಾಸಕ ಎಂ.ವೈ. ಪಾಟೀಲ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು.

ಕಲಬುರಗಿ: ಬ್ರಿಟಿಷರ ವಿರುದ್ಧ ಹೋರಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ಮೊದಲು ಬಲಿದಾನವಾಗಿದ್ದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಎಂದು ಅಫಜಲಪುರ ಶಾಸಕ ಎಂ.ವೈ. ಪಾಟೀಲ ಹೇಳಿದರು.

ನಗರದ ವೀರಶೈವ ಕಲ್ಯಾಣ ಮಂಟಪದ ಆವರಣದಲ್ಲಿ ರವಿವಾರ ರಾಯಣ್ಣೋತ್ಸವ ಸಮಿತಿ ಹಮ್ಮಿಕೊಂಡಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 221ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಚಾರಿತ್ರಿಕ ಪುರುಷ ಎಂದು ಬಣ್ಣಿಸಿದರು.

ರಾಯಣ್ಣ ದೇಶಭಕ್ತಿ, ನಿಷ್ಠೆ, ನಂಬಿಕೆಯುಳ್ಳ ಮಹಾನ್‌ ವ್ಯಕ್ತಿಯಾಗಿದ್ದ. ರಾಯಣ್ಣ ಇಲ್ಲದೇ ಕಿತ್ತೂರಿನ ಇತಿಹಾಸ ಬರೆಯಲು ಆಗುವುದಿಲ್ಲ. ದೇಶದಲ್ಲಿ ಸ್ವಾತಂತ್ರ್ಯದ ಕಿಡಿ ಹೊತ್ತಿಸಿದ್ದು ಕಿತ್ತೂರು ರಾಣಿ ಚನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು. ರಾಯಣ್ಣನ ಬಲಿದಾನ ನಂತರದಲ್ಲಿ ಇತರ ಮಹಾಪುರುಷರು ಬಲಿದಾನವಾದರು ಎಂದರು.

ಶ್ರೀಮಂತಿಕೆ ಹಣದಿಂದ ಅಳೆಯಲು ಸಾಧ್ಯವಿಲ್ಲ. ಮನಸ್ಸಿನಿಂದ ಅಳೆಯಬೇಕಾಗುತ್ತದೆ. ಇಂದು ಗೌಡರು, ಉಳ್ಳವರು ಭೂಮಿ ಮಾರಿಕೊಂಡಿದ್ದಾರೆ. ಹಾಲುಮತ ಸಮಾಜದವರು ತಮ್ಮ ಕಾಯಕ ಮುಂದುವರಿಸಿಕೊಂಡು ಸಂಪತ್ತು ಉಳಿಸಿಕೊಂಡಿದ್ದಾರೆ. ದೇಶದ ಆರ್ಥಿಕತೆಯಲ್ಲಿ ಹಾಲುಮತ ಸಮುದಾಯದ ಶ್ರಮದ ಪಾಲಿದೆ ಎಂದರು.

ವಾಗ್ಮಿ ನಿಕೇತ್‌ ರಾಜ್‌ ಮೌರ್ಯ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರಾದ ಮಹಾತ್ಮಾ ಗಾಂಧಿ, ಭಗತ್‌ ಸಿಂಗ್‌, ಸುಭಾಷಚಂದ್ರ ಬೋಸ್‌ ಮೊದಲಾದವರ ಹೆಸರು ಕೇಳಿದಾಕ್ಷಣ ಎಲ್ಲರೂ ಗೊತ್ತು ಎನ್ನುತ್ತೇವೆ. ಆದರೆ, ಬ್ರಿಟಿಷರಿಂದ ಎರಡು ಬಾರಿ ಗಲ್ಲಿಗೆ ಗುರಿಯಾದ ಸಂಗೊಳ್ಳಿ ರಾಯಣ್ಣ ಹೆಸರು ನಮ್ಮ ಪಕ್ಕದ ಮಹಾರಾಷ್ಟ್ರ, ತೆಲಂಗಾಣದ ಜನತೆಗೂ ಗೊತ್ತಿಲ್ಲ. ರಾಯಣ್ಣನನ್ನು ಜಾತಿಗೆ ಸೀಮಿತಗೊಳಿಸಬಾರದು. ರಾಯಣ್ಣ ದೊಡ್ಡವರಾಗಿದ್ದು ಜಾತಿಯಿಂದ ಅಲ್ಲ, ಕ್ರಾಂತಿಯಿಂದ ಎಂದರು.

ವಿಧಾನ ಪರಿಷತ್‌ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ವಾಗ್ಮಿ ಶಿಲ್ಪಾ ಕದರಗೊಂಡ, ಪೊಲೀಸ್‌ ಅಧಿಕಾರಿ ಎಸ್‌.ಎಸ್‌. ಹುಲ್ಲೂರ ಮಾತನಾಡಿದರು.

ವೀರಗೋಟ ಕನಕ ಗುರುಪೀಠದ ಸಿದ್ಧರಾಮಾನಂದ ಪುರಿ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿಪಂ ಸದಸ್ಯ ದೀಲಿಪ ಆರ್‌.ಪಾಟೀಲ, ರಾಯಣ್ಣೋತ್ಸವ ಸಮಿತಿ ಅಧ್ಯಕ್ಷ ಪ್ರಕಾಶ ಕುರನಳ್ಳಿ, ಹಾಲುಮತದ ಸಮಾಜದ ಮುಖಂಡರಾದ ಡಾ| ಬಾಬು ಪೂಜಾರಿ, ಶಿವಶರಣ ಹದಗಲ್, ರವಿಗೊಂಡ ಕಟ್ಟಿಮನಿ, ನಿಂಗಣ್ಣ ಪೂಜಾರಿ, ಪರಮೇಶ್ವ ಆಲಗೂಡ, ರಮೇಶ ಕಂಟೀಕರ್‌, ಚಂದ್ರಶೇಖರ ಸಿರನೂರ, ಸಮಾಧಾನ ಪೂಜಾರಿ, ತಿಪ್ಪಣ್ಣ ಬಳಬಟ್ಟಿ, ಜಗದೇವಪ್ಪ ಮುಗಟಾ, ಬೀರಣ್ಣ ಕಲ್ಲೂರು, ಭೀಮಣ್ಣ ದೊಡ್ಡಮನಿ, ನಿಂಗಣ್ಣ ಪೂಜಾರಿ, ದೇವೇಂದ್ರ ನಾಯಿಕೋಡಿ, ರಾಘವೇಂದ್ರ ತೆಗನೂರ, ಮಹಾಂತೇಶ ಕವಲಗಿ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

ಬಹಿರಂಗ ಸಭೆಗೂ ಮುನ್ನ ಗಂಜ್‌ ಪ್ರದೇಶದ ನಗರೇಶ್ವರ ಶಾಲೆಯಿಂದ ಕಲ್ಯಾಣ ಮಂಟಪದ ಆವರಣದ ವರೆಗೆ ಸಂಗೊಳ್ಳಿ ರಾಯಣ್ಣ ಮೂರ್ತಿ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. ದಾರಿಯುದ್ದಕ್ಕೂ ಡೊಳ್ಳು ಕುಣಿತ, ವಿವಿಧ ವಾದ್ಯಗಳ ಸದ್ದಿಗೆ ರಾಯಣ್ಣನ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು. ರಾಯಣ್ಣ ಭಾವಚಿತ್ರ ಇರುವ ಹಳದಿ ಬಾವುಟ ಹಿಡಿದು ಸಾಗಿದರು. ರಾಯಣ್ಣನ ವೇಷಧಾರಿ ವ್ಯಕ್ತಿಯೊಬ್ಬ ಕುದುರೆ ಮೇಲೆ ಕುಳಿತು ಮೆರವಣಿಗೆಯಲ್ಲಿ ಸಾಗಿದ್ದು ಗಮನ ಸೆಳೆಯಿತು.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.