ಚುನಾವಣೆ ಕಾವಲ್ಲಿ ನೀರಿನ ಸಮಸ್ಯೆ ಗೌಣ

ಬತ್ತಿರುವ ಬಾವಿ ಬಳಿ ಅಲೆದಾಡುತ್ತಿರುವ ಜನತೆ ಮಹಾನಗರಕ್ಕೆ ಟ್ಯಾಂಕರ್‌ ನೀರು ಸರಬರಾಜು

Team Udayavani, Apr 13, 2019, 10:29 AM IST

13-April-2

ಕಲಬುರಗಿ: ಮಹಾನಗರದಲ್ಲಿ ಮಧ್ಯಾಹ್ನ ರಣ-ರಣ ಬಿಸಿಲಿನ ನಡುವೆ ಬಂದಿದ್ದ ಟ್ಯಾಂಕರ್‌ಗೆ ಮುಗಿಬಿದ್ದ ಜನತೆ.

ಕಲಬುರಗಿ: ಪ್ರಸಕ್ತವಾಗಿ ಮುಂಗಾರು-ಹಿಂಗಾರು0 ಎರಡೂ ಕಾಲದ ಮಳೆ ಸಂಪೂರ್ಣ ಕೈ ಕೊಟ್ಟ ಪರಿಣಾಮ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಹಿಂದೆಂದೂ ಕಂಡರಿಯದಷ್ಟು ಉಲ್ಬಣಗೊಂಡಿದ್ದರೂ ಲೋಕಸಭೆ ಚುನಾವಣೆ ಕಾವಿನಲ್ಲಿ ಗೌಣವಾಗಿ ಕಾಣಿಸುತ್ತಿದೆ.

ಕಲಬುರಗಿ ಮಹಾನಗರಕ್ಕೆ ಈ ಹಿಂದೆ ಒಮ್ಮೆಯೂ 12ರಿಂದ 15 ದಿನಕ್ಕೊಮ್ಮೆ ಕುಡಿಯುವ ನೀರು ಪೂರೈಕೆಯಾಗಿಲ್ಲ. ಬಹಳ ತಡವೆಂದರೆ ವಾರಕ್ಕೊಮ್ಮೆಯಾದರೂ ನೀರು ಪೂರೈಕೆಯಾಗಿದೆ. ಮಹಾನಗರದಲ್ಲಿ ಈ ಮುಂಚೆ ನಗರದ ಹೊರ ಭಾಗದ ಕೆಲ ಪ್ರದೇಶಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗಿತ್ತು. ಆದರೆ ಈಗ ಮಹಾನಗರಾದ್ಯಂತ ಟ್ಯಾಂಕರ್‌ ಮೂಲಕ ನೀರು ಸರಬರಾಜು ಎನ್ನುವುದಾದರೆ ಕುಡಿಯುವ ನೀರಿನ ಪರಿಸ್ಥಿತಿ ಭೀಕರತೆ ನಿರೂಪಿಸುತ್ತದೆ.

ಹಳ್ಳಿಗಳಲ್ಲಿ ಜನರು, ಅದರಲ್ಲೂ ಮಹಿಳೆಯರು ಹೊಲ ಗದ್ದೆಗಳಲ್ಲಿನ ಬತ್ತಿ ಹೋಗುತ್ತಿರುವ ಬಾವಿಯತ್ತ ಅಲೆದಾಡಿ ನೀರು ತರುತ್ತಿದ್ದಾರೆ. ಆಗೊಮ್ಮೆ-ಈಗೊಮ್ಮೆ ಬರುವ ಟ್ಯಾಂಕರ್‌ಗಳಿಗೆ ಜನ ಮುಗಿ ಬೀಳುತ್ತಿದ್ದು, ಯಾರ ಕೈ ಜೋರು ಇರುತ್ತದೆಯೋ ಅವರಿಗೆ ನೀರು ಎನ್ನುವಂತಾಗಿದೆ. ತೋಟಗಳ ಬಾವಿಗಳಲ್ಲಿ ಇರುವ ನೀರನ್ನು ಮಾಲೀಕರು ತಮ್ಮ ಬೆಳೆಗಳಿಗೆ ಬೀಡದೇ ಜನರ ಉಪಯೋಗಕ್ಕೆ ಮೀಸಲಿಟ್ಟರೆ, ಕೆಲವು ಕಡೆ ನೀರಿಲ್ಲದಿದ್ದರೆ ತೋಟಗಾರಿಕೆ ಬೆಳೆಗಳೆಲ್ಲ ಒಣಗಿ ಹೋಗಿವೆ. ಕೆಲವು ವಸತಿ ಪ್ರದೇಶಗಳಲ್ಲಂತೂ ಬೆಳಗಿನ ಜಾವ ಮೂರ್‍ನಾಲ್ಕು ಕಿ.ಮೀ ನಡೆದು ನೀರು ತರಲಾಗುತ್ತಿದೆ.

ಚುನಾವಣೆ ಕಾವು: 43 ಡಿಗ್ರಿ ಸೆಲ್ಸಿಯಸ್‌ ಬಿಸಿಲಿಗಿಂತ ಲೋಕಸಭೆ ಚುನಾವಣೆ ಕಾವೇ ಜೋರಾಗಿದೆ. ಕುಡಿಯುವ ನೀರಿನ ಸಮಸ್ಯೆ ತಾಂಡವವಾಡುತ್ತಿದ್ದರೂ ಅದರ ಕಡೆ ಲಕ್ಷ್ಯ ವಹಿಸದಿರುವ ಮಟ್ಟಿಗೆ ಲೋಕಸಭಾ ಚುನಾವಣೆ ಜೋರಾಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕ್ಯಾರೇ ಎನ್ನದ ಪರಿಣಾಮ ಚುನಾವಣೆ ವಿಷಯದ್ದೇ ಚರ್ಚೆ ವ್ಯಾಪಕಗೊಂಡು ಕುಡಿಯುವ ನೀರಿನ ಸಮಸ್ಯೆ ಗೌಣವಾಗುತ್ತಿದೆ.

ಚುನಾವಣಾ ಅಭ್ಯರ್ಥಿಗಳಿಗೆ ಹಾಗೂ ಪ್ರಚಾರ ಮಾಡುವ ವಿವಿಧ ಪಕ್ಷಗಳ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಖಾಲಿ ಕೊಡಗಳ ದರ್ಶನವಾಗುತ್ತಿದ್ದರೂ ಯಾರೂ ಸ್ಪಂದಿಸುತ್ತಿಲ್ಲ. ಕೆಲ ಮುಖಂಡರು ಚುನಾವಣೆ ಮುಗಿಯಲಿ ನಂತರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುತ್ತದೆ ಎಂಬುದಾಗಿ ಹೇಳುತ್ತಿರುವ ಪರಿಣಾಮ, ಮಹಿಳೆಯರು ಹಾಗೂ ಗ್ರಾಮಸ್ಥರು ಸುಮ್ಮನಾಗಿದ್ದಾರೆ ಎನ್ನಲಾಗುತ್ತಿದೆ.

87 ಹಳ್ಳಿಗಳಿಗೆ ಟ್ಯಾಂಕರ್‌ ನೀರು
ಕಲಬುರಗಿ ಜಿಲ್ಲೆಯಲ್ಲಿ 87 ಹಳ್ಳಿಗಳಿಗೆ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ. ಅಫಜಲಪುರ ತಾಲೂಕಿನಲ್ಲಿ 18 ಹಳ್ಳಿಗಳು, ಆಳಂದ ತಾಲೂಕಿನಲ್ಲಿ 31, ಚಿಂಚೋಳಿ ತಾಲೂಕಿನಲ್ಲಿ 10, ಚಿತ್ತಾಪುರ ತಾಲೂಕಿನಲ್ಲಿ
06, ಕಲಬುರಗಿ ತಾಲೂಕಿನಲ್ಲಿ 04, ಜೇವರ್ಗಿ ತಾಲೂಕಿನಲ್ಲಿ 17 ಹಳ್ಳಿಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಅದೇ ರೀತಿ ಕಲಬುರಗಿ ಮಹಾನಗರದಲ್ಲಿ 25 ಬಡಾವಣೆಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.