ಜನ ಮೆಚ್ಚಿದ ಮಂತ್ರಿಯಾಗಿದ್ದರು ಸುಷ್ಮಾ
•ರಾಷ್ಟ್ರಕ್ಕೆ-ಬಿಜೆಪಿಗೆ ತುಂಬಲಾಗದ ನಷ್ಟ •ಭಾರತದ ದಿಟ್ಟ ಮಹಿಳೆ ಕರ್ತವ್ಯ ನಿಷ್ಠೆ ಶ್ಲಾಘನೀಯ
Team Udayavani, Aug 8, 2019, 9:50 AM IST
ಕಲಬುರಗಿ: ಸೂಪರ್ ಮಾರ್ಕೆಟ್ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುಷ್ಮಾ ಸ್ವರಾಜ್ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕಲಬುರಗಿ: ಕೇಂದ್ರದ ಮಾಜಿ ಸಚಿವೆ ಹಾಗೂ ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ನಿಧನದ ಹಿನ್ನೆಲೆಯಲ್ಲಿ ಬುಧವಾರ ನಗರದ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶ್ರದ್ಧಾಂಜಲಿ ಕಾರ್ಯಕ್ರಮಗಳನ್ನು ನಡೆಸಲಾಯಿತು.
ನಗರದ ಸೂಪರ್ ಮಾರ್ಕೆಟ್ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುಷ್ಮಾ ಸ್ವರಾಜ್ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಕಂಬನಿ ಮಿಡಿಯಲಾಯಿತು.
ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಮಾತನಾಡಿ, ಸುಷ್ಮಾ ಸ್ವರಾಜ್ ಅವರು 2014ರಿಂದ 19ರ ಅವಧಿಯಲ್ಲಿ ವಿದೇಶಾಂಗ ಖಾತೆಯ ಸಚಿವರಾಗಿ ಸಾಕಷ್ಟು ಕೆಲಸ ಮಾಡಿ ತಮ್ಮದೇಯಾದ ಛಾಪು ಮೂಡಿಸಿದ್ದರು. ಒಟ್ಟಾರೆ ಅವರು ಜನರ ಮೆಚ್ಚಿನ ಮಂತ್ರಿಯಾಗಿದ್ದರು ಎಂದು ಹೇಳಿದರು.
ಬಿಜೆಪಿಯ ಧೀಮಂತ ನಾಯಕಿಯಾದ ಸುಷ್ಮಾ ಸ್ವರಾಜ್ ಸರಳ, ಸಜ್ಜನಿಕೆಯ ಅಪಾರ ಹೆಸರು ಮಾಡಿದ್ದರು. ಸಣ್ಣ ವಯಸ್ಸಿನಲ್ಲೇ ಸಚಿವೆಯಾಗಿ ಅಗ್ರಗಣ್ಯ ನಾಯಕರೊಂದಿಗೆ ಕೆಲಸ ಮಾಡಿದ್ದರು. ಅವರ ಅಗಲಿಕೆ ಪಕ್ಷ ಮತ್ತು ರಾಷ್ಟ್ರಕ್ಕೆ ತುಂಬಲರಾದ ನಷ್ಟವಾಗಿದೆ ಎಂದು ಮುಖಂಡರು ಸಂತಾಪ ಸೂಚಿಸಿದರು.
ಮುಖಂಡರಾದ ಚಂದು ಪಾಟೀಲ, ಉಮೇಶ ಪಾಟೀಲ, ಶಿವಾನಂದ ಪಾಟೀಲ ಅಷ್ಟಗಿ, ರಾಜು ವಾಡೇಕರ, ಶರಣಬಸಪ್ಪ ಕಾಡಾದಿ, ಶಿವಯೋಗಿ ನಾಗನಳ್ಳಿ, ಸಿದ್ದಾಜಿ ಪಾಟೀಲ, ಅನಿಲ್ ಜಾಧವ, ವೀರಣ್ಣ ಹೊನ್ನಳ್ಳಿ , ಸಂಗಮೇಶ ರಾಜೋಳೆ, ಶಾಂತು ಧುಧನಿ, ಹಾಗೂ ಮಹಿಳಾ ಮೋರ್ಚಾ ಘಟಕದ ನಗರಾಧ್ಯಕ್ಷೆ ವಿಜಯಲಕ್ಷ್ಮೀ ಬಿ. ಗೊಬ್ಬೂರಕರ್ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!