ಶಿಕ್ಷಕರ ಬಡ್ತಿ: ಅಧಿಕಾರಿಗಳ ಎಡವಟ್ಟು


Team Udayavani, Oct 4, 2019, 11:10 AM IST

3-Sepctember-32

ಕಲಬುರಗಿ: ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿ ಆಯುಕ್ತಾಲಯ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಹುದ್ದೆ ಬಡ್ತಿ ವಿಷಯದಲ್ಲಿ ಅಧಿಕಾರಿಗಳ ಎಡವಟ್ಟು ಬಯಲಾಗಿದೆ.

ಸಿಇಟಿ ರ್‍ಯಾಂಕಿಂಗ್‌ನಲ್ಲಿ ಪಡೆದಿದ್ದಕ್ಕಿಂತ ಹೆಚ್ಚಿನ ಅಂಕವನ್ನು ಅಧಿಕಾರಿಗಳೇ ನೀಡಿದ್ದಾರೆ. ಕಲಬುರಗಿ, ರಾಯಚೂರು, ಬೀದರ, ಯಾದಗಿರಿ, ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳ ಒಟ್ಟು 357 ಮುಖ್ಯ ಶಿಕ್ಷಕರು ಮತ್ತು ತತ್ಸಮಾನ ವೃಂದದ ಹುದ್ದೆಗಳಿಗೆ ಮುಂಬಡ್ತಿಗೆ ಅರ್ಹತೆ ಹೊಂದಿರುವ ಶಿಕ್ಷಕರಿಗೆ ಸ್ಥಳ ನಿಯುಕ್ತಿ ಕೌನ್ಸೆಲಿಂಗ್‌ ಪ್ರಕ್ರಿಯೆ ಗುರುವಾರ ನಡೆಯಿತು. ಆದರೆ, ಮೆರಿಟ್‌ ಅಂಕಗಳಲ್ಲಿ ಲೋಪ-ದೋಷಗಳಾಗಿವೆ. ಕಡಿಮೆ ಮೆರಿಟ್‌ ಹೊಂದಿದವರಿಗೆ ಹೆಚ್ಚಿನ ಅಂಕ ತೋರಿಸಿ ಮುಂಬಡ್ತಿ ನೀಡಲಾಗುತ್ತಿದೆ. ಇದನ್ನು ಸರಿಪಡಿಸಬೇಕೆಂದು ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ಕೆಲ ಶಿಕ್ಷಕರು ಕೌನ್ಸೆಲಿಂಗ್‌ ಪ್ರಕ್ರಿಯೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಮುಂಬಡ್ತಿ ಪಟ್ಟಿಯಲ್ಲಿರುವ ಒಂಭತ್ತು ಜನ ಶಿಕ್ಷಕರ 2003-04ರ ಸಿಇಟಿ ರ್‍ಯಾಂಕಿಂಗ್‌ ಅಂಕಕ್ಕೂ ಮತ್ತು ಬಡ್ತಿ ಮೆರಿಟ್‌ಗೂ ತಾಳೆ ಆಗುತ್ತಿಲ್ಲ. ಸಿಇಟಿ ರ್‍ಯಾಂಕಿಂಗ್‌ನಲ್ಲಿ 57.79ರಷ್ಟು ಅಂಕ ಪಡೆದಿದ್ದರೆ, ಮೆರಿಟ್‌ ಪಟ್ಟಿಯಲ್ಲಿ ಶೇ.80 ಎಂದು ತೋರಿಸಲಾಗಿದೆ.

ಅದೇ ರೀತಿ ಉಳಿದ ಶಿಕ್ಷಕರ ರ್‍ಯಾಂಕಿಂಗ್‌ ಅಂಕಗಳು ತಪ್ಪಾಗಿವೆ. ಇದರಿಂದ ನೈಜವಾಗಿ ಬಡ್ತಿಗೆ ಅರ್ಹತೆ ಹೊಂದಿರುವ ಶಿಕ್ಷಕರಿಗೆ ಮೋಸವಾಗಿದೆ ಎಂದು ನೊಂದ ಶಿಕ್ಷಕರು ದೂರಿದರು. ಎರಡು ತಿಂಗಳ ಹಿಂದೆಯೇ ಬಡ್ತಿ ಪಟ್ಟಿಯಲ್ಲಿನ ಲೋಪಗಳನ್ನು ಗಮನಿಸಿ ಸರಿ ಪಡಿಸಬೇಕು. ಅರ್ಹ ಶಿಕ್ಷಕರ ಹೆಸರನ್ನು ಪಟ್ಟಿಯಲ್ಲಿ ಸೇರಿಸಬೇಕೆಂದು ಡಿಡಿಪಿಐ ಅವರಿಗೆ ಒತ್ತಾಯಿಸಲಾಗಿತ್ತು.

ಸರಿಪಡಿಸದೆ ಅದೇ ಪಟ್ಟಿ ಮುಂದಿಟ್ಟುಕೊಂಡು ಬಡ್ತಿಗೆ ಕೌನ್ಸೆಲಿಂಗ್‌ ನಡೆಸುತ್ತಿರುವುದು ಸರಿಯಲ್ಲ. ಇದಕ್ಕೆಲ್ಲ ಸ್ಥಳೀಯ ಡಿಡಿಪಿಐಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಕೆಲ ಶಿಕ್ಷಕರ ಸಿಇಟಿ ರ್‍ಯಾಂಕಿಂಗ್‌ ಅಂಕಗಳು ನಮಗೆ ಗೊತ್ತಿರುವುದರಿಂದ ಮುಂಬಡ್ತಿಯ ಲೋಪ-ದೋಷಗಳು ಬೆಳಕಿಗೆ ಬಂದಿವೆ ಎಂದು ರಾಯಚೂರಿನ ಶಿಕ್ಷಕರು ತಮ್ಮ ಆಳಲು ತೋಡಿಕೊಂಡರು.

ಹೆಚ್ಚಿನ ಅಂಕ ಕೊಟ್ರಾ!: ಆಶ್ಚರ್ಯವೆಂದರೆ ಶಿಕ್ಷಕರ ಜೇಷ್ಠತಾ ಪಟ್ಟಿಯಲ್ಲಿ ಶಿಕ್ಷಕರೊಬ್ಬರಿಗೆ ಸಿಇಟಿ ರ್‍ಯಾಂಕಿಂಗ್‌ನ ಮೂಲ ಅಂಕಕ್ಕಿಂತ ಹೆಚ್ಚಿನ ಅಂಕ ಕೊಟ್ಟಿರುವುದು ಅಧಿಕಾರಿಗಳ ಎಡವಟ್ಟಿಗೆ ಹಿಡಿದ ಕೈಗನ್ನಡಿಯಾಗಿದೆ. ಸಿಇಟಿ ರ್‍ಯಾಂಕಿಂಗ್‌ನಲ್ಲಿ 61.39 ಅಂಕಗಳಿವೆ. ಆದರೆ, ಜೇಷ್ಠತಾ ಪಟ್ಟಿಯಲ್ಲಿ 65 ಅಂಕಗಳನ್ನು ತೋರಿಸಲಾಗಿದೆ. ನನಗೆ ಹೆಚ್ಚಿನ ಅಂಕ ಬೇಡ. ನಾನು ಪಡೆದ ಅಂಕ ಕೊಡಿ ಸಾಕು ಎಂದು ಆ ಶಿಕ್ಷಕ ಐದು ತಿಂಗಳ ಹಿಂದೆ ಬಿಇಒಗೆ ಮನವಿ ಸಲ್ಲಿಸಿದ್ದರೂ, ಅದು ಸರಿಯಾಗಿಲ್ಲ. ವಿಷಯವನ್ನು ಗುರುವಾರ ಆಯುಕ್ತರ ಗಮನಕ್ಕೆ ತರಲಾಗಿದ್ದು, ಅಧಿಕಾರಿಗಳ ಚಮತ್ಕಾರ ಕಂಡು ಆಯುಕ್ತರು ನಕ್ಕು ಸುಮ್ಮನಾದರು. ಅಧಿಕಾರಿಗಳು ಮಾಡಿದ ತಪ್ಪು ನನ್ನ ಕೆಲಸಕ್ಕೆ ತೊಂದರೆಯಾಗಲಿದೆ ಎಂದಾಗ, ಲೋಪ ಸರಿಪಡಿಸಲಾಗುವುದು ಎಂದು ಆಯುಕ್ತರು ಭರವಸೆ ನೀಡಿದ್ದಾರೆ ಎಂದು ಶಿಕ್ಷಕರು ತಿಳಿಸಿದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.